Homeಕರ್ನಾಟಕಎಲ್ಲಿಯಾದರೂ ಕಂಡರೆ ‘ಕಿತ್ತೋದ ಸಿ.ಟಿ. ರವಿ’ ಎಂದು ಘೋಷಣೆ ಕೂಗಿ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ...

ಎಲ್ಲಿಯಾದರೂ ಕಂಡರೆ ‘ಕಿತ್ತೋದ ಸಿ.ಟಿ. ರವಿ’ ಎಂದು ಘೋಷಣೆ ಕೂಗಿ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಕರೆ

- Advertisement -
- Advertisement -

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಿರುದ್ಧ ರಾಜ್ಯದ ವೀರಶೈವ ಲಿಂಗಾಯತ ಸಮುದಾಯದವರು ಗರಂ ಆಗಿದ್ದಾರೆ. ರಾಜ್ಯ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯು ಆಕ್ರೋಶ ವ್ಯಕ್ತಪಡಿಸಿ ಪ್ರಕಟಣೆ ಹೊರಡಿಸಿದ್ದಾರೆ. ಸಿ.ಟಿ. ರವಿ ವಿರುದ್ಧ ಏಕವಚನದಲ್ಲೇ ಎಚ್ಚರಿಕೆ ನೀಡಲಾಗಿದೆ.

”ಚುನಾವಣೆ ಪ್ರಚಾರದಲ್ಲಿ ಸಿ.ಟಿ. ರವಿ ಎಲ್ಲಿಯಾದರೂ ಕಂಡು ಬಂದರೆ ಮುತ್ತಿಗೆ ಹಾಕಬೇಕು. ‘ಕಿತ್ತೋದ ಸಿ.ಟಿ. ರವಿ’ ಎಂದು ಘೋಷಣೆ ಕೂಗಬೇಕು” ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಕರೆಕೊಟ್ಟಿದೆ.

ಕೆಲದಿನಗಳಿಂದ ಸಿ.ಟಿ. ರವಿ ಅವರು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರ ಹೇಳಿಕೆಗೆ ತಿರುಗೇಟು ನೀಡುತ್ತಿರುವುದು ವೀರಶೈವ ಲಿಂಗಾಯತ ಸಮುದಾಯದ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಇತ್ತೀಚೆಗೆ ವಿಜಯಪುರದಲ್ಲಿ ಮಾತನಾಡಿದ ಸಿ.ಟಿ ರವಿ, ಬಿಜೆಪಿಯಲ್ಲಿ ಟಿಕೆಟ್ ನೀಡುವ ಮಾನದಂಡದ ಬಗ್ಗೆ ಪ್ರಸ್ತಾಪ ಮಾಡಿದ್ದರು. ”ನಮ್ಮ ಪಕ್ಷದಲ್ಲಿ ಟಿಕೆಟ್ ಯಾರಿಗೆ ನೀಡಬೇಕು ಎನ್ನುವ ವಿಚಾರ ಕುಟುಂಬದಲ್ಲಿ ತೀರ್ಮಾನವಾಗಲ್ಲ. ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಧಾರ ಆಗುತ್ತೆ. ಸಮೀಕ್ಷೆಯ ಆಧಾರದ ಮೇಲೆ ಗೆಲ್ಲುವ ಮಾನದಂಡದ ಆಧರಿಸಿ ಟಿಕೆಟ್ ನೀಡುವ ಕುರಿತು ನಿರ್ಧರಿಸಲಾಗುತ್ತದೆ. ಆದರೆ ಕುಟುಂಬದಲ್ಲಿ ಸಮೀಕ್ಷೆ ನಡೆಯುವುದಿಲ್ಲ, ನಮ್ಮ ಪಕ್ಷದಲ್ಲಿ ಕಿಚನ್‌ನಲ್ಲಿ ತೀರ್ಮಾನ ತೆಗೆದುಕೊಳ್ಳಲ್ಲ. ನಾಯಕರ ಮಕ್ಕಳೆಂದ ಕಾರಣಕ್ಕೆ ಅವರಿಗೆ ಟಿಕೆಟ್ ಕೊಡಬೇಕಾ? ಎಂದು ಪ್ರಶ್ನೆ ಮಾಡಿದ್ದರು. ಅಷ್ಟೇ ಅಲ್ಲದೇ ವಿಜಯೇಂದ್ರ ಟಿಕೆಟ್ ನಿರ್ಧಾರವನ್ನು ಸಂಸದೀಯ ಮಂಡಳಿ ತೆಗೆದುಕೊಳ್ಳುತ್ತದೆ ಎಂದು ಹೇಳುವ ಮೂಲಕ ಹಿರಿಯ ನಾಯಕ ಯಡಿಯೂರಪ್ಪ ಅವರ ಆಟ ಇನ್ನೂ ಮುಂದೆ ನಡೆಯುವುದಿಲ್ಲ ಎನ್ನುವ ಸಂದೇಶವನ್ನು ಸಿಟಿ ರವಿ ನೀಡಿದ್ದರು.

ಸಿ.ಟಿ. ರವಿ ಅವರ ಈ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ, ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ”ಸಿ.ಟಿ. ರವಿ ಎಲ್ಲಿಯಾದರೂ ಚುನಾವಣೆ ಪ್ರಚಾರದಲ್ಲಿ ಕಂಡು ಬಂದರೆ ಮುತ್ತಿಗೆ ಹಾಕಬೇಕು. ‘ಕಿತ್ತೋದ ಸಿ.ಟಿ. ರವಿ’ ಎಂದು ಘೋಷಣೆ ಕೂಗಬೇಕು” ಎಂದು ಕರೆಕೊಟ್ಟಿದೆ.

ಇದನ್ನೂ ಓದಿ: ಬಿಜೆಪಿ ಟಿಕೆಟ್ ಹಂಚಿಕೆ ವಿಚಾರ: ಸಿ.ಟಿ ರವಿ-ವಿಜಯೇಂದ್ರ ನಡುವೆ ವಾಕ್ಸಮರ

ಪ್ರಕಟಣೆಯಲ್ಲಿ ಏನಿದೆ?

”ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ವೀರಶೈವ ಲಿಂಗಾಯತರಿಂದ ನೆನಪಿರಲಿ ಸಿ ಟಿ ರವಿ ‘ವೀರಶೈವ ಲಿಂಗಾಯತರಿಗೆ ಪ್ರಾಮುಖ್ಯ ಕೊಡಬೇಕಿಲ್ಲ” ಎನ್ನುವ ಸಿಟಿ ರವಿ ಅವರ ಪತ್ರಿಕೆ ಹೇಳಿಕೆ ವಿರುದ್ಧವಾಗಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಪ್ರಕಟಣೆ ಹೊರಡಿಸಿದ್ದು, ”ಸಿ.ಟಿ ರವಿ ಚುನಾವಣೆ ಪ್ರಚಾರದಲ್ಲಿ ಕಂಡು ಬಂದರೆ ಮುತ್ತಿಗೆ ಹಾಕುವುದು ಅಷ್ಟೇ ಅಲ್ಲ ‘ಕಿತ್ತೊದ ಸಿ, ಟಿ, ರವಿ’ ಅಂತ ಘೋಷಣೆ ಕೂಗಬೇಕು ಎಂದು ಕರೆ ಕೊಟ್ಟಿದೆ. ಕಳೆದ 50 ವರ್ಷಗಳಿಂದ ಇಂತಹ ಕಿತ್ತೊದ ಸಿ ಟಿ ರವಿ ಅಂತಹವರು ತುಂಬಾ ಜನಗಳನ್ನು ವೀರಶೈವ ಲಿಂಗಾಯತ ಸಮಾಜ ನೋಡಿದೆ. ನಮ್ಮ ಸಮಾಜ ಎಷ್ಟೇ ಒಡೆದರು. ಚುನಾವಣೆಯಲ್ಲಿ ಒಂದಾಗಿ ತಕ್ಕ ಪಾಠ ಕಲಿಸುತ್ತಿರುವುದು ನೆನಪಿಲ್ಲವೆ” ಎಂದು ಕೇಳಿದೆ.

”ವೀರಶೈವ ಲಿಂಗಾಯತ ಸಮಾಜ ತುಂಬಾ ಸೂಕ್ಷ್ಮ ಸಮಾಜ ಯಾರನ್ನು ಕೆಣಕಲು ಹೋಗಲ್ಲ, ಕಾಯಕವೇ ಕೈಲಾಸ ಎಂದು ತಿಳಿದು ತಮ್ಮ ಜೀವನ ನಡೆಸುತ್ತಿದೆ. ನಿನ್ನ ತರಹ ಜೀವನ ಮಾಡಲು ನಮಗೆ ಬರುವುದಿಲ್ಲ, ಒಂದು ಸಲ ಸಿಡಿದರೆ ನಿನ್ನಂತಹ ಸಾವಿರಾರು ವ್ಯಕ್ತಿಗಳನ್ನು ಮೂಗಿಸಿ ಹಾಕುವುದು ನಮಗೆ ಗೊತ್ತು” ಎಂದು ಎಚ್ಚರಿಕೆ ನೀಡಿದೆ.

”ಸಿಟಿ, ರವಿಯವರೆ, ವೀರಶೈವ ಲಿಂಗಾಯತ ಸಮಾಜದ ಬಗ್ಗೆ ಮಾತನಾಡಿಲಿಕ್ಕೆ ನಿನಗೆ ಏನು ನೈತಿಕತೆ ಇದೆ?” ಪ್ರಶ್ನೆ ಮಾಡಿದೆ.

”ಇಂತಹವರನ್ನು ಬಿಜೆಪಿ ಪಕ್ಷ ತಕ್ಷಣವೇ ಉಚ್ಚಾಟನೆ ಮಾಡಬೇಕು. ವೀರಶೈವ ಲಿಂಗಾಯತ ಸಮಾಜಕ್ಕೆ ಕ್ಷಮೆ ಕೇಳಬೇಕು. ಇಲ್ಲದೆ ಹೋದರೆ ಒಂದು ವಾರದಲ್ಲಿ ನಿಮ್ಮ ಮನೆಗೆ ಬಂದು ಹೋರಾಟ ಮಾಡುತ್ತವೆ. ಮಾನಸಿಕ ಅಸ್ವಸ್ತ ಸಿ, ಟಿ, ರವಿಯವರಿಗೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಎಚ್ಚರಿಕೆ ನೀಡುತ್ತಿದ್ದೆವೆ” ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಪಠ್ಯ ನ ಚಿತ್ರವಾಗಿರಬಹುದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...