Homeಮುಖಪುಟಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೆ ನಿರ್ಬಂಧ ವಿಧಿಸಿದ ಆಂಧ್ರ ಸರ್ಕಾರ

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೆ ನಿರ್ಬಂಧ ವಿಧಿಸಿದ ಆಂಧ್ರ ಸರ್ಕಾರ

- Advertisement -
- Advertisement -

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಂಧ್ರ ಪ್ರದೇಶದ ಅಂಗನವಾಡಿ ಕಾರ್ಯಕರ್ತೆಯರು ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರ 26ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಮುಂದಿನ ಆರು ತಿಂಗಳ ಕಾಲ ಮುಷ್ಕರ ನಡೆಸದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆಗಳನ್ನು ಆಂಧ್ರ ಪ್ರದೇಶದ ಅಗತ್ಯ ಸೇವೆಗಳ ನಿರ್ವಹಣೆ ಕಾಯಿದೆ (ESMA) 1971ರ ಅಡಿಯಲ್ಲಿ ಅಗತ್ಯ ಸೇವೆ ಎಂದು ಸರ್ಕಾರ ಘೋಷಿಸಿದೆ. ಮಹಿಳಾ, ಮಕ್ಕಳು, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯಿಂದ ಮುಷ್ಕರ ನಿರ್ಬಂಧಿಸಿ ಜನವರಿ 6 ರಂದು ಆದೇಶ ಹೊರಡಿಸಲಾಗಿದೆ.

ಅತ್ಯಗತ್ಯ ಎಂದು ಪರಿಗಣಿಸಿರುವ ಸೇವೆಯ ಸಿಬ್ಬಂದಿ ಮುಷ್ಕರ ಹೂಡಿದರೆ ಅದನ್ನು ನಿಷೇಧಿಸಲು ಸರ್ಕಾರಕ್ಕೆ ಅವಕಾಶವಿದೆ. ಇದನ್ನೇ ಅಸ್ತ್ರವಾಗಿಸಿಕೊಂಡ ಸರ್ಕಾರ, ಅಂಗನವಾಡಿ ಕೆಲಸವನ್ನು ಅಗತ್ಯ ಸೇವೆಗಳ ಪಟ್ಟಿಗೆ ಸೇರಿಸಿ ಹೋರಾಟಗಾರ ಬಾಯಿ ಮುಚ್ಚಿಸಿದೆ.

ಆಂಧ್ರ ಪ್ರದೇಶದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸುಮಾರು ಒಂದು ತಿಂಗಳಿನಿಂದ ಮುಷ್ಕರ ನಡೆಸುತ್ತಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರಸ್ತುತ ಮಾಸಿಕ 11,500 ರೂ., ಸಹಾಯಕಿಯರಿಗೆ 7,000 ರೂ. ವೇತನವಿದೆ. ಇದನ್ನು ಕನಿಷ್ಠ 26,000 ರೂ.ಗೆ ಹೆಚ್ಚಿಸಬೇಕು. ಸರ್ಕಾರಿ ನೌಕರರಿಗೆ ಲಭ್ಯವಿರುವ ಗ್ರಾಚ್ಯುಟಿ ಮತ್ತು ವಿಮೆಯಂತಹ ಪ್ರಯೋಜನಗಳನ್ನು ನಮಗೂ ವಿಸ್ತರಿಸಬೇಕು. ಕೆಲಸವನ್ನು ಕ್ರಮಬದ್ಧಗೊಳಿಸಬೇಕು. ಅಂಗನವಾಡಿ ಕೇಂದ್ರಗಳ ಬಾಕಿ ಬಾಡಿಗೆ ಪಾವತಿಸಬೇಕು ಎಂದು ಮುಷ್ಕರ ನಿರತ ಅಂಗನವಾಡಿ ಕಾರ್ಯಕರ್ತೆಯರು ಆಗ್ರಹಿಸಿದ್ದಾರೆ.

ಪ್ರತಿಭಟನಾ ನಿರತರ ತಕ್ಷಣದ ಬೇಡಿಕೆಗಳನ್ನು ಈಡೇರಿಸಲು ಮುಷ್ಕರ ಪ್ರಾರಂಭಗೊಂಡು ಹತ್ತು ದಿನಗಳ ನಂತರ ರಾಜ್ಯ ಸರ್ಕಾರ 80 ಕೋಟಿ ರೂಪಾಯಿಗಳ ಹಣವನ್ನು ಬಿಡುಗಡೆ ಮಾಡಿದೆ. ಪ್ರತಿ ಎರಡು ತಿಂಗಳಿಗೊಮ್ಮೆ ನೌಕರರ ಪ್ರಯಾಣ ಭತ್ಯೆ ಮತ್ತು ತುಟ್ಟಿ ಭತ್ಯೆ ಪಡೆಯಲು ಅವಕಾಶ ಕಲ್ಪಿಸುವ ಆದೇಶವನ್ನೂ ಹೊರಡಿಸಿದೆ.

ಸರ್ಕಾರಿ ಉದ್ಯೋಗದ ಗರಿಷ್ಠ ವಯೋಮಿತಿಯನ್ನು 62 ವರ್ಷಕ್ಕೆ ಹೆಚ್ಚಿಸಿದೆ ಮತ್ತು 62 ವರ್ಷಗಳನ್ನು ಪೂರ್ಣಗೊಳಿಸಿದ ಅಂಗನವಾಡಿ ಕಾರ್ಯಕರ್ತೆಯರಿಗೆ ರೂ. 1 ಲಕ್ಷ ಮತ್ತು ಸಹಾಯಕಿಯರಿಗೆ ರೂ. 40,000 ಬೋನಸ್ ನೀಡುವುದಾಗಿ ಘೋಷಿಸಿದೆ. ಆದರೆ, ಅಂಗನವಾಡಿ ಕಾರ್ಯಕರ್ತೆಯರು ಇದನ್ನು ‘ಪ್ರಚಾರದ ತಂತ್ರ’ ಎಂದು ಎಂದು ಕರೆದಿದ್ದಾರೆ.

ಜನವರಿ ಮಧ್ಯದಲ್ಲಿ ಸಂಕ್ರಾಂತಿಯೊಳಗೆ ಸರ್ಕಾರ ತಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಷ್ಕರವನ್ನು ತೀವ್ರಗೊಳಿಸಲು ಯೋಜಿಸಲಾಗಿದೆ ಎಂದು ಅಂಗನವಾಡಿ ಕಾರ್ಯಕರ್ತೆಯರು ಹೇಳಿದ್ದಾರೆ. ರಾಜ್ಯಾದ್ಯಂತ ಹಲವು ಅಂಗನವಾಡಿ ಕಾರ್ಯಕರ್ತೆಯರನ್ನು ಪೊಲೀಸರು ವಶಕ್ಕೆ ಪಡೆದಿದ್ದರಿಂದ ಪ್ರತಿಭಟನಾ ನಿರತರ ಆಕ್ರೋಶ ಹೆಚ್ಚಾಗಿದೆ.

ಮುಷ್ಕರದಿಂದಾಗಿ ಅಂಗನವಾಡಿ ಕೇಂದ್ರಗಳಲ್ಲಿ ಸುಮಾರು 7.5 ಲಕ್ಷ ಇದ್ದ ಮಕ್ಕಳ ದೈನಂದಿನ ಹಾಜರಾತಿ ಗಮನಾರ್ಹವಾಗಿ ಕೇವಲ ಎರಡು ಲಕ್ಷಕ್ಕೆ ಕುಸಿದಿದೆ. ತಿಂಗಳಿಗೆ ಸುಮಾರು 45 ಸಾವಿರದಷ್ಟು ದಾಖಲಾಗುತ್ತಿದ್ದ
ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರ ಸಂಖ್ಯೆಯೂ ಗಣನೀಯವಾಗಿ ಕಡಿಮೆಯಾಗಿದೆ.
0 ರಿಂದ 6 ವರ್ಷ ವಯಸ್ಸಿನ ಅಪೌಷ್ಟಿಕ ಮಕ್ಕಳ ಬೆಳವಣಿಗೆಯ ಮೇಲ್ವಿಚಾರಣೆ, ಪ್ರತಿರಕ್ಷಣೆ, ಆರೋಗ್ಯ ತಪಾಸಣೆ ಮತ್ತು ರೆಫರಲ್ ಕಾರ್ಯಗಳಂತಹ ಅಗತ್ಯ ಸೇವೆಗಳ ಮೇಲೆ ಮುಷ್ಕರ ಪ್ರತಿಕೂಲ ಪರಿಣಾಮ ಬೀರಿದೆ ಎಂದು ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ಜ.17ರಿಂದ ಲಾರಿ ಚಾಲಕರ ಅನಿರ್ದಿಷ್ಟಾವಧಿ ಮುಷ್ಕರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...