Homeಮುಖಪುಟಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೆ ನಿರ್ಬಂಧ ವಿಧಿಸಿದ ಆಂಧ್ರ ಸರ್ಕಾರ

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೆ ನಿರ್ಬಂಧ ವಿಧಿಸಿದ ಆಂಧ್ರ ಸರ್ಕಾರ

- Advertisement -
- Advertisement -

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಂಧ್ರ ಪ್ರದೇಶದ ಅಂಗನವಾಡಿ ಕಾರ್ಯಕರ್ತೆಯರು ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರ 26ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಮುಂದಿನ ಆರು ತಿಂಗಳ ಕಾಲ ಮುಷ್ಕರ ನಡೆಸದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆಗಳನ್ನು ಆಂಧ್ರ ಪ್ರದೇಶದ ಅಗತ್ಯ ಸೇವೆಗಳ ನಿರ್ವಹಣೆ ಕಾಯಿದೆ (ESMA) 1971ರ ಅಡಿಯಲ್ಲಿ ಅಗತ್ಯ ಸೇವೆ ಎಂದು ಸರ್ಕಾರ ಘೋಷಿಸಿದೆ. ಮಹಿಳಾ, ಮಕ್ಕಳು, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯಿಂದ ಮುಷ್ಕರ ನಿರ್ಬಂಧಿಸಿ ಜನವರಿ 6 ರಂದು ಆದೇಶ ಹೊರಡಿಸಲಾಗಿದೆ.

ಅತ್ಯಗತ್ಯ ಎಂದು ಪರಿಗಣಿಸಿರುವ ಸೇವೆಯ ಸಿಬ್ಬಂದಿ ಮುಷ್ಕರ ಹೂಡಿದರೆ ಅದನ್ನು ನಿಷೇಧಿಸಲು ಸರ್ಕಾರಕ್ಕೆ ಅವಕಾಶವಿದೆ. ಇದನ್ನೇ ಅಸ್ತ್ರವಾಗಿಸಿಕೊಂಡ ಸರ್ಕಾರ, ಅಂಗನವಾಡಿ ಕೆಲಸವನ್ನು ಅಗತ್ಯ ಸೇವೆಗಳ ಪಟ್ಟಿಗೆ ಸೇರಿಸಿ ಹೋರಾಟಗಾರ ಬಾಯಿ ಮುಚ್ಚಿಸಿದೆ.

ಆಂಧ್ರ ಪ್ರದೇಶದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸುಮಾರು ಒಂದು ತಿಂಗಳಿನಿಂದ ಮುಷ್ಕರ ನಡೆಸುತ್ತಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರಸ್ತುತ ಮಾಸಿಕ 11,500 ರೂ., ಸಹಾಯಕಿಯರಿಗೆ 7,000 ರೂ. ವೇತನವಿದೆ. ಇದನ್ನು ಕನಿಷ್ಠ 26,000 ರೂ.ಗೆ ಹೆಚ್ಚಿಸಬೇಕು. ಸರ್ಕಾರಿ ನೌಕರರಿಗೆ ಲಭ್ಯವಿರುವ ಗ್ರಾಚ್ಯುಟಿ ಮತ್ತು ವಿಮೆಯಂತಹ ಪ್ರಯೋಜನಗಳನ್ನು ನಮಗೂ ವಿಸ್ತರಿಸಬೇಕು. ಕೆಲಸವನ್ನು ಕ್ರಮಬದ್ಧಗೊಳಿಸಬೇಕು. ಅಂಗನವಾಡಿ ಕೇಂದ್ರಗಳ ಬಾಕಿ ಬಾಡಿಗೆ ಪಾವತಿಸಬೇಕು ಎಂದು ಮುಷ್ಕರ ನಿರತ ಅಂಗನವಾಡಿ ಕಾರ್ಯಕರ್ತೆಯರು ಆಗ್ರಹಿಸಿದ್ದಾರೆ.

ಪ್ರತಿಭಟನಾ ನಿರತರ ತಕ್ಷಣದ ಬೇಡಿಕೆಗಳನ್ನು ಈಡೇರಿಸಲು ಮುಷ್ಕರ ಪ್ರಾರಂಭಗೊಂಡು ಹತ್ತು ದಿನಗಳ ನಂತರ ರಾಜ್ಯ ಸರ್ಕಾರ 80 ಕೋಟಿ ರೂಪಾಯಿಗಳ ಹಣವನ್ನು ಬಿಡುಗಡೆ ಮಾಡಿದೆ. ಪ್ರತಿ ಎರಡು ತಿಂಗಳಿಗೊಮ್ಮೆ ನೌಕರರ ಪ್ರಯಾಣ ಭತ್ಯೆ ಮತ್ತು ತುಟ್ಟಿ ಭತ್ಯೆ ಪಡೆಯಲು ಅವಕಾಶ ಕಲ್ಪಿಸುವ ಆದೇಶವನ್ನೂ ಹೊರಡಿಸಿದೆ.

ಸರ್ಕಾರಿ ಉದ್ಯೋಗದ ಗರಿಷ್ಠ ವಯೋಮಿತಿಯನ್ನು 62 ವರ್ಷಕ್ಕೆ ಹೆಚ್ಚಿಸಿದೆ ಮತ್ತು 62 ವರ್ಷಗಳನ್ನು ಪೂರ್ಣಗೊಳಿಸಿದ ಅಂಗನವಾಡಿ ಕಾರ್ಯಕರ್ತೆಯರಿಗೆ ರೂ. 1 ಲಕ್ಷ ಮತ್ತು ಸಹಾಯಕಿಯರಿಗೆ ರೂ. 40,000 ಬೋನಸ್ ನೀಡುವುದಾಗಿ ಘೋಷಿಸಿದೆ. ಆದರೆ, ಅಂಗನವಾಡಿ ಕಾರ್ಯಕರ್ತೆಯರು ಇದನ್ನು ‘ಪ್ರಚಾರದ ತಂತ್ರ’ ಎಂದು ಎಂದು ಕರೆದಿದ್ದಾರೆ.

ಜನವರಿ ಮಧ್ಯದಲ್ಲಿ ಸಂಕ್ರಾಂತಿಯೊಳಗೆ ಸರ್ಕಾರ ತಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಷ್ಕರವನ್ನು ತೀವ್ರಗೊಳಿಸಲು ಯೋಜಿಸಲಾಗಿದೆ ಎಂದು ಅಂಗನವಾಡಿ ಕಾರ್ಯಕರ್ತೆಯರು ಹೇಳಿದ್ದಾರೆ. ರಾಜ್ಯಾದ್ಯಂತ ಹಲವು ಅಂಗನವಾಡಿ ಕಾರ್ಯಕರ್ತೆಯರನ್ನು ಪೊಲೀಸರು ವಶಕ್ಕೆ ಪಡೆದಿದ್ದರಿಂದ ಪ್ರತಿಭಟನಾ ನಿರತರ ಆಕ್ರೋಶ ಹೆಚ್ಚಾಗಿದೆ.

ಮುಷ್ಕರದಿಂದಾಗಿ ಅಂಗನವಾಡಿ ಕೇಂದ್ರಗಳಲ್ಲಿ ಸುಮಾರು 7.5 ಲಕ್ಷ ಇದ್ದ ಮಕ್ಕಳ ದೈನಂದಿನ ಹಾಜರಾತಿ ಗಮನಾರ್ಹವಾಗಿ ಕೇವಲ ಎರಡು ಲಕ್ಷಕ್ಕೆ ಕುಸಿದಿದೆ. ತಿಂಗಳಿಗೆ ಸುಮಾರು 45 ಸಾವಿರದಷ್ಟು ದಾಖಲಾಗುತ್ತಿದ್ದ
ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರ ಸಂಖ್ಯೆಯೂ ಗಣನೀಯವಾಗಿ ಕಡಿಮೆಯಾಗಿದೆ.
0 ರಿಂದ 6 ವರ್ಷ ವಯಸ್ಸಿನ ಅಪೌಷ್ಟಿಕ ಮಕ್ಕಳ ಬೆಳವಣಿಗೆಯ ಮೇಲ್ವಿಚಾರಣೆ, ಪ್ರತಿರಕ್ಷಣೆ, ಆರೋಗ್ಯ ತಪಾಸಣೆ ಮತ್ತು ರೆಫರಲ್ ಕಾರ್ಯಗಳಂತಹ ಅಗತ್ಯ ಸೇವೆಗಳ ಮೇಲೆ ಮುಷ್ಕರ ಪ್ರತಿಕೂಲ ಪರಿಣಾಮ ಬೀರಿದೆ ಎಂದು ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ಜ.17ರಿಂದ ಲಾರಿ ಚಾಲಕರ ಅನಿರ್ದಿಷ್ಟಾವಧಿ ಮುಷ್ಕರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...