Homeಮುಖಪುಟಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೆ ನಿರ್ಬಂಧ ವಿಧಿಸಿದ ಆಂಧ್ರ ಸರ್ಕಾರ

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೆ ನಿರ್ಬಂಧ ವಿಧಿಸಿದ ಆಂಧ್ರ ಸರ್ಕಾರ

- Advertisement -
- Advertisement -

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಂಧ್ರ ಪ್ರದೇಶದ ಅಂಗನವಾಡಿ ಕಾರ್ಯಕರ್ತೆಯರು ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರ 26ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಮುಂದಿನ ಆರು ತಿಂಗಳ ಕಾಲ ಮುಷ್ಕರ ನಡೆಸದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆಗಳನ್ನು ಆಂಧ್ರ ಪ್ರದೇಶದ ಅಗತ್ಯ ಸೇವೆಗಳ ನಿರ್ವಹಣೆ ಕಾಯಿದೆ (ESMA) 1971ರ ಅಡಿಯಲ್ಲಿ ಅಗತ್ಯ ಸೇವೆ ಎಂದು ಸರ್ಕಾರ ಘೋಷಿಸಿದೆ. ಮಹಿಳಾ, ಮಕ್ಕಳು, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯಿಂದ ಮುಷ್ಕರ ನಿರ್ಬಂಧಿಸಿ ಜನವರಿ 6 ರಂದು ಆದೇಶ ಹೊರಡಿಸಲಾಗಿದೆ.

ಅತ್ಯಗತ್ಯ ಎಂದು ಪರಿಗಣಿಸಿರುವ ಸೇವೆಯ ಸಿಬ್ಬಂದಿ ಮುಷ್ಕರ ಹೂಡಿದರೆ ಅದನ್ನು ನಿಷೇಧಿಸಲು ಸರ್ಕಾರಕ್ಕೆ ಅವಕಾಶವಿದೆ. ಇದನ್ನೇ ಅಸ್ತ್ರವಾಗಿಸಿಕೊಂಡ ಸರ್ಕಾರ, ಅಂಗನವಾಡಿ ಕೆಲಸವನ್ನು ಅಗತ್ಯ ಸೇವೆಗಳ ಪಟ್ಟಿಗೆ ಸೇರಿಸಿ ಹೋರಾಟಗಾರ ಬಾಯಿ ಮುಚ್ಚಿಸಿದೆ.

ಆಂಧ್ರ ಪ್ರದೇಶದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸುಮಾರು ಒಂದು ತಿಂಗಳಿನಿಂದ ಮುಷ್ಕರ ನಡೆಸುತ್ತಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರಸ್ತುತ ಮಾಸಿಕ 11,500 ರೂ., ಸಹಾಯಕಿಯರಿಗೆ 7,000 ರೂ. ವೇತನವಿದೆ. ಇದನ್ನು ಕನಿಷ್ಠ 26,000 ರೂ.ಗೆ ಹೆಚ್ಚಿಸಬೇಕು. ಸರ್ಕಾರಿ ನೌಕರರಿಗೆ ಲಭ್ಯವಿರುವ ಗ್ರಾಚ್ಯುಟಿ ಮತ್ತು ವಿಮೆಯಂತಹ ಪ್ರಯೋಜನಗಳನ್ನು ನಮಗೂ ವಿಸ್ತರಿಸಬೇಕು. ಕೆಲಸವನ್ನು ಕ್ರಮಬದ್ಧಗೊಳಿಸಬೇಕು. ಅಂಗನವಾಡಿ ಕೇಂದ್ರಗಳ ಬಾಕಿ ಬಾಡಿಗೆ ಪಾವತಿಸಬೇಕು ಎಂದು ಮುಷ್ಕರ ನಿರತ ಅಂಗನವಾಡಿ ಕಾರ್ಯಕರ್ತೆಯರು ಆಗ್ರಹಿಸಿದ್ದಾರೆ.

ಪ್ರತಿಭಟನಾ ನಿರತರ ತಕ್ಷಣದ ಬೇಡಿಕೆಗಳನ್ನು ಈಡೇರಿಸಲು ಮುಷ್ಕರ ಪ್ರಾರಂಭಗೊಂಡು ಹತ್ತು ದಿನಗಳ ನಂತರ ರಾಜ್ಯ ಸರ್ಕಾರ 80 ಕೋಟಿ ರೂಪಾಯಿಗಳ ಹಣವನ್ನು ಬಿಡುಗಡೆ ಮಾಡಿದೆ. ಪ್ರತಿ ಎರಡು ತಿಂಗಳಿಗೊಮ್ಮೆ ನೌಕರರ ಪ್ರಯಾಣ ಭತ್ಯೆ ಮತ್ತು ತುಟ್ಟಿ ಭತ್ಯೆ ಪಡೆಯಲು ಅವಕಾಶ ಕಲ್ಪಿಸುವ ಆದೇಶವನ್ನೂ ಹೊರಡಿಸಿದೆ.

ಸರ್ಕಾರಿ ಉದ್ಯೋಗದ ಗರಿಷ್ಠ ವಯೋಮಿತಿಯನ್ನು 62 ವರ್ಷಕ್ಕೆ ಹೆಚ್ಚಿಸಿದೆ ಮತ್ತು 62 ವರ್ಷಗಳನ್ನು ಪೂರ್ಣಗೊಳಿಸಿದ ಅಂಗನವಾಡಿ ಕಾರ್ಯಕರ್ತೆಯರಿಗೆ ರೂ. 1 ಲಕ್ಷ ಮತ್ತು ಸಹಾಯಕಿಯರಿಗೆ ರೂ. 40,000 ಬೋನಸ್ ನೀಡುವುದಾಗಿ ಘೋಷಿಸಿದೆ. ಆದರೆ, ಅಂಗನವಾಡಿ ಕಾರ್ಯಕರ್ತೆಯರು ಇದನ್ನು ‘ಪ್ರಚಾರದ ತಂತ್ರ’ ಎಂದು ಎಂದು ಕರೆದಿದ್ದಾರೆ.

ಜನವರಿ ಮಧ್ಯದಲ್ಲಿ ಸಂಕ್ರಾಂತಿಯೊಳಗೆ ಸರ್ಕಾರ ತಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಷ್ಕರವನ್ನು ತೀವ್ರಗೊಳಿಸಲು ಯೋಜಿಸಲಾಗಿದೆ ಎಂದು ಅಂಗನವಾಡಿ ಕಾರ್ಯಕರ್ತೆಯರು ಹೇಳಿದ್ದಾರೆ. ರಾಜ್ಯಾದ್ಯಂತ ಹಲವು ಅಂಗನವಾಡಿ ಕಾರ್ಯಕರ್ತೆಯರನ್ನು ಪೊಲೀಸರು ವಶಕ್ಕೆ ಪಡೆದಿದ್ದರಿಂದ ಪ್ರತಿಭಟನಾ ನಿರತರ ಆಕ್ರೋಶ ಹೆಚ್ಚಾಗಿದೆ.

ಮುಷ್ಕರದಿಂದಾಗಿ ಅಂಗನವಾಡಿ ಕೇಂದ್ರಗಳಲ್ಲಿ ಸುಮಾರು 7.5 ಲಕ್ಷ ಇದ್ದ ಮಕ್ಕಳ ದೈನಂದಿನ ಹಾಜರಾತಿ ಗಮನಾರ್ಹವಾಗಿ ಕೇವಲ ಎರಡು ಲಕ್ಷಕ್ಕೆ ಕುಸಿದಿದೆ. ತಿಂಗಳಿಗೆ ಸುಮಾರು 45 ಸಾವಿರದಷ್ಟು ದಾಖಲಾಗುತ್ತಿದ್ದ
ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರ ಸಂಖ್ಯೆಯೂ ಗಣನೀಯವಾಗಿ ಕಡಿಮೆಯಾಗಿದೆ.
0 ರಿಂದ 6 ವರ್ಷ ವಯಸ್ಸಿನ ಅಪೌಷ್ಟಿಕ ಮಕ್ಕಳ ಬೆಳವಣಿಗೆಯ ಮೇಲ್ವಿಚಾರಣೆ, ಪ್ರತಿರಕ್ಷಣೆ, ಆರೋಗ್ಯ ತಪಾಸಣೆ ಮತ್ತು ರೆಫರಲ್ ಕಾರ್ಯಗಳಂತಹ ಅಗತ್ಯ ಸೇವೆಗಳ ಮೇಲೆ ಮುಷ್ಕರ ಪ್ರತಿಕೂಲ ಪರಿಣಾಮ ಬೀರಿದೆ ಎಂದು ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ಜ.17ರಿಂದ ಲಾರಿ ಚಾಲಕರ ಅನಿರ್ದಿಷ್ಟಾವಧಿ ಮುಷ್ಕರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...