HomeUncategorizedಜಗನ್ ಸರ್ಕಾರದ ವಿರುದ್ಧ ಸಹೋದರಿ ಶರ್ಮಿಳಾ 'ಸೆಕ್ರೆಟರಿಯೇಟ್ ಚಲೋ': ವಶಕ್ಕೆ ಪಡೆದ ಪೊಲೀಸರು

ಜಗನ್ ಸರ್ಕಾರದ ವಿರುದ್ಧ ಸಹೋದರಿ ಶರ್ಮಿಳಾ ‘ಸೆಕ್ರೆಟರಿಯೇಟ್ ಚಲೋ’: ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

‘ಸೆಕ್ರೆಟರಿಯೇಟ್‌ ಚಲೋ’ ನಡೆಸುತ್ತಿದ್ದ ಆಂಧ್ರ ಪ್ರದೇಶ ರಾಜ್ಯ ಕಾಂಗ್ರೆಸ್ ಘಟಕ(ಎಪಿಸಿಸಿ) ದ ಅಧ್ಯಕ್ಷೆ ವೈ.ಎಸ್ ಶರ್ಮಿಳಾ ಅವರನ್ನು ವಿಜಯವಾಡ ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ. ಮೆರವಣಿಗೆಗೆ ಅನುಮತಿ ಇರಲಿಲ್ಲ. ಈ ಕಾರಣಕ್ಕೆ ವೈ.ಎಸ್‌ ಶರ್ಮಿಳಾ, ಎಪಿಸಿಸಿ ಮುಖ್ಯಸ್ಥ ಜಿ ರುದ್ರರಾಜು ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳಾ ಪೇದೆಗಳು ಶರ್ಮಿಳಾ ಅವರನ್ನು ಬಲವಂತವಾಗಿ ಎಳೆದೊಯ್ದು ಪೊಲೀಸ್ ವಾಹನಕ್ಕೆ ಹತ್ತಿಸಿದ್ದು, ಈ ವೇಳೆ ಅವರ ಕೈಗಳಿಗೆ ಸ್ವಲ್ಪ ಗಾಯಗಳಾಗಿವೆ ಎಂದು ವರದಿಗಳು ಹೇಳಿವೆ. ರಾಜ್ಯದ ನಿರುದ್ಯೋಗಿ ಯುವಕರ ಸಮಸ್ಯೆಗಳನ್ನು ಪರಿಹರಿಸುವಂತೆ ಶರ್ಮಿಳಾ ಅವರು ಗುರುವಾರ ಬೆಳಗ್ಗೆ ವಿಜಯವಾಡದಲ್ಲಿ’ಚಲೋ ಸೆಕ್ರೆಟರಿಯೇಟ್’ ಪ್ರತಿಭಟನಾ ಮೆರವಣಿಗೆ ಆರಂಭಿಸಿದ್ದರು. ಮೆರವಣಿಗೆ ನಗರದ ಏಲೂರು ರಸ್ತೆಗೆ ಬರುತ್ತಿದ್ದಂತೆ ಪೊಲೀಸರು ತಡೆದಿದ್ದಾರೆ. ಪೊಲೀಸರು ವಶಕ್ಕೆ ಪಡೆಯುವ ಮೊದಲು ಸುಮಾರು ಎರಡು ಗಂಟೆಗಳ ಕಾಲ ಶರ್ಮಿಳಾ ಮತ್ತು ಅವರ ಬೆಂಬಲಿಗರು ರಸ್ತೆಯಲ್ಲೇ ನಿಂತಿದ್ದರು.

“ಸಿಎಂ ಮತ್ತು ಅವರ ಸರ್ಕಾರ ನಮ್ಮ ಪ್ರತಿಭಟನೆಯಿಂದ ಹೆದರಿಕೊಂಡಿದೆ. ನಾನು ಸೆಕ್ರೆಟರಿಯೇಟ್‌ಗೆ ಹೋಗಿ ಯುವಕರಲ್ಲಿ ಹೆಚ್ಚುತ್ತಿರುವ ನಿರುದ್ಯೋಗದ ಬಗ್ಗೆ ಮಾತನಾಡಲು ಬಯಸುತ್ತೇನೆ. ಒಬ್ಬ ಮಹಿಳಾ ರಾಜಕಾರಣಿಯನ್ನು ಸರ್ಕಾರ ನಡೆಸಿಕೊಳ್ಳುತ್ತಿರುವ ರೀತಿ ಖಂಡನೀಯ. ನಾನು ರಾಜಶೇಖರ ರೆಡ್ಡಿ ಅವರ ಮಗಳು, ಹೆದರುವವಲಲ್ಲ. ನನ್ನ ಹೋರಾಟ ಮುಂದುವರಿಸುತ್ತೇನೆ” ಎಂದು ವಿಜಯವಾಡದ ಮಂಗಳಗಿರಿ ಪೊಲೀಸ್ ಠಾಣೆಯ ಮುಂದೆ ಶರ್ಮಿಳಾ ಹೇಳಿದ್ದಾರೆ.

ಇಂದು ಸೆಕ್ರೆಟರಿಯೇಟ್‌ ಚಲೋ ನಡೆಸುವುದಾಗಿ ಶರ್ಮಿಳಾ ಘೋಷಿಸಿದ ಬಳಿಕ ಅವರನ್ನು ಪೊಲೀಸರು ಗೃಹ ಬಂಧನಲ್ಲಿಡುವ ಭೀತಿಯಿತ್ತು. ಈ ಹಿನ್ನೆಲೆ, ಶರ್ಮಿಳಾ ನಿನ್ನೆ(ಬುಧವಾರ) ಕಾಂಗ್ರೆಸ್ ಕಚೇರಿಯಲ್ಲೇ ರಾತ್ರಿ ಕಳೆದಿದ್ದಾರೆ. ಪೊಲೀಸರು ವಶಕ್ಕೆ ಪಡೆಯುವ ಭೀತಿಯಲ್ಲಿ ಬುಧವಾರ ಸಂಜೆ ಕಾಂಗ್ರೆಸ್ ಸಂಸದ ಕೆವಿಪಿ ರಾಮಚಂದ್ರ ರಾವ್ ಅವರ ಮನೆಗೆ ಭೇಟಿ ನೀಡುವುದನ್ನೂ ಶರ್ಮಿಳಾ ರದ್ದುಪಡಿಸಿದ್ದರು.

ಇಂದು (ಗುರುವಾರ) ಬೆಳಗ್ಗೆ ಪೊಲೀಸರು ಕಾಂಗ್ರೆಸ್ ಕಚೇರಿಯನ್ನು ಸುತ್ತುವರಿದಿದ್ದರಿಂದ, ಶರ್ಮಿಳಾ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಜೊತೆ ಅಲ್ಲೇ ಧರಣಿ ಕುಳಿತು ಘೋಷಣೆಗಳನ್ನು ಕೂಗಿದರು. ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಚುನಾವಣಾ ಪ್ರಚಾರದ ವೇಳೆ ನೀಡಿದ ಭರವಸೆಯಂತೆ 23,000 ಹುದ್ದೆಗಳನ್ನು ಭರ್ತಿ ಮಾಡಲು ಆದೇಶ ಹೊರಡಿಸಬೇಕು ಎಂದು ಶರ್ಮಿಳಾ ಒತ್ತಾಯಿಸಿದರು.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಶರ್ಮಿಳಾ, “ಚುನಾವಣೆಗೆ ಎರಡು ತಿಂಗಳಿಗಿಂತ ಕಡಿಮೆ ಸಮಯವಿದೆ. ಈಗ 6,000 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ. ಮೆಗಾ ಡಿಎಸ್ಸಿ (ನೇಮಕಾತಿಗಾಗಿ ಜಿಲ್ಲಾ ಆಯ್ಕೆ ಸಮಿತಿ) ನಡೆಸುವ ಬದಲು ಅವರು ದಗಾ (ವಂಚನೆ) ಡಿಎಸ್ಸಿ ಮಾಡುತ್ತಿದ್ದಾರೆ. ವೈಎಸ್‌ಆರ್‌ಸಿಪಿ ಆಡಳಿತವು ಸರ್ವಾಧಿಕಾರದಂತಿದೆ. ಇದನ್ನು ಪ್ರತಿಭಟಿಸುವವರನ್ನು ಗೃಹ ಬಂಧನದಲ್ಲಿ ಇರಿಸಲಾಗುತ್ತಿದೆ ಎಂದು ಕಿಡಿಕಾರಿದರು.

“ಸಾವಿರಾರು ಪೊಲೀಸರು ನಮ್ಮನ್ನು ಸುತ್ತುವರಿದಿದ್ದಾರೆ. ನಮ್ಮ ಸುತ್ತಲೂ ಕಬ್ಬಿಣದ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ನಮ್ಮನ್ನು ಒತ್ತೆಯಾಳಾಗಿ ಇರಿಸಲಾಗಿದೆ. ನಿರುದ್ಯೋಗಿಗಳ ಪರ ನಿಂತರೆ ಬಂಧಿಸಲಾಗುತ್ತಿದೆ. ನೀವು ನಮ್ಮನ್ನು ತಡೆಯಲು ಬಯಸುವ ಸರ್ವಾಧಿಕಾರಿಗಳು. ಇದಕ್ಕೆ ನಿಮ್ಮ ನಡೆಗಳೇ ಸಾಕ್ಷಿ” ಎಂದು ಶರ್ಮಿಳಾ ಗುಡುಗಿದರು. ಕಾಂಗ್ರೆಸ್ ನಾಯಕರು ಮತ್ತು ಜನರು ಪ್ರತಿಭಟನೆ ನಡೆಸದಂತೆ ವೈಎಸ್‌ಆರ್‌ಸಿಪಿ ಸರ್ಕಾರ ಮತ್ತು ಪೊಲೀಸರು ತಡೆಯುವುದು ‘ಅಸಂವಿಧಾನಿಕ’ ಎಂದರು.

ದಿವಂಗತ ವೈಎಸ್ ರಾಜಶೇಖರ್ ರೆಡ್ಡಿ ಅವರ ಪುತ್ರಿ ಮತ್ತು ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ಶರ್ಮಿಳಾ ಅವರು ಜನವರಿ 16 ರಂದು ಆಂಧ್ರ ಪ್ರದೇಶ ಕಾಂಗ್ರೆಸ್ ಸಮಿತಿ (ಎಪಿಸಿಸಿ) ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ರಾಜ್ಯದ ಆರ್ಥಿಕ ಬಿಕ್ಕಟ್ಟು, ನಿರುದ್ಯೋಗ ಹಾಗೂ ಕಾನೂನು ಸುವ್ಯಸ್ಥೆಯ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ತನ್ನ ಸಹೋದರನ ಸರ್ಕಾರದ ವಿರುದ್ದ ಶರ್ಮಿಳಾ ಸಮರ ಸಾರಿದ್ದಾರೆ. ಕಾಂಗ್ರೆಸ್ ಸೇರಿದ ಬಳಿಕ ಮೊದಲ ಬಾರಿಗೆ ಸೆಕ್ರೆಟರಿಯೇಟ್‌ ಚಲೋ ಎಂಬ ಹೆಸರಿನಲ್ಲಿ ದೊಡ್ಡ ಮಟ್ಟದ ಹೋರಾಟ ರೂಪಿಸಿದ್ದಾರೆ.

ಇದನ್ನೂ ಓದಿ: ಗೃಹ ಬಂಧನ ಭೀತಿ: ಕಾಂಗ್ರೆಸ್ ಕಚೇರಿಯಲ್ಲೇ ರಾತ್ರಿ ಕಳೆದ ವೈಎಸ್‌ ಶರ್ಮಿಳಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...