HomeUncategorizedಜಗನ್ ಸರ್ಕಾರದ ವಿರುದ್ಧ ಸಹೋದರಿ ಶರ್ಮಿಳಾ 'ಸೆಕ್ರೆಟರಿಯೇಟ್ ಚಲೋ': ವಶಕ್ಕೆ ಪಡೆದ ಪೊಲೀಸರು

ಜಗನ್ ಸರ್ಕಾರದ ವಿರುದ್ಧ ಸಹೋದರಿ ಶರ್ಮಿಳಾ ‘ಸೆಕ್ರೆಟರಿಯೇಟ್ ಚಲೋ’: ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

‘ಸೆಕ್ರೆಟರಿಯೇಟ್‌ ಚಲೋ’ ನಡೆಸುತ್ತಿದ್ದ ಆಂಧ್ರ ಪ್ರದೇಶ ರಾಜ್ಯ ಕಾಂಗ್ರೆಸ್ ಘಟಕ(ಎಪಿಸಿಸಿ) ದ ಅಧ್ಯಕ್ಷೆ ವೈ.ಎಸ್ ಶರ್ಮಿಳಾ ಅವರನ್ನು ವಿಜಯವಾಡ ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ. ಮೆರವಣಿಗೆಗೆ ಅನುಮತಿ ಇರಲಿಲ್ಲ. ಈ ಕಾರಣಕ್ಕೆ ವೈ.ಎಸ್‌ ಶರ್ಮಿಳಾ, ಎಪಿಸಿಸಿ ಮುಖ್ಯಸ್ಥ ಜಿ ರುದ್ರರಾಜು ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳಾ ಪೇದೆಗಳು ಶರ್ಮಿಳಾ ಅವರನ್ನು ಬಲವಂತವಾಗಿ ಎಳೆದೊಯ್ದು ಪೊಲೀಸ್ ವಾಹನಕ್ಕೆ ಹತ್ತಿಸಿದ್ದು, ಈ ವೇಳೆ ಅವರ ಕೈಗಳಿಗೆ ಸ್ವಲ್ಪ ಗಾಯಗಳಾಗಿವೆ ಎಂದು ವರದಿಗಳು ಹೇಳಿವೆ. ರಾಜ್ಯದ ನಿರುದ್ಯೋಗಿ ಯುವಕರ ಸಮಸ್ಯೆಗಳನ್ನು ಪರಿಹರಿಸುವಂತೆ ಶರ್ಮಿಳಾ ಅವರು ಗುರುವಾರ ಬೆಳಗ್ಗೆ ವಿಜಯವಾಡದಲ್ಲಿ’ಚಲೋ ಸೆಕ್ರೆಟರಿಯೇಟ್’ ಪ್ರತಿಭಟನಾ ಮೆರವಣಿಗೆ ಆರಂಭಿಸಿದ್ದರು. ಮೆರವಣಿಗೆ ನಗರದ ಏಲೂರು ರಸ್ತೆಗೆ ಬರುತ್ತಿದ್ದಂತೆ ಪೊಲೀಸರು ತಡೆದಿದ್ದಾರೆ. ಪೊಲೀಸರು ವಶಕ್ಕೆ ಪಡೆಯುವ ಮೊದಲು ಸುಮಾರು ಎರಡು ಗಂಟೆಗಳ ಕಾಲ ಶರ್ಮಿಳಾ ಮತ್ತು ಅವರ ಬೆಂಬಲಿಗರು ರಸ್ತೆಯಲ್ಲೇ ನಿಂತಿದ್ದರು.

“ಸಿಎಂ ಮತ್ತು ಅವರ ಸರ್ಕಾರ ನಮ್ಮ ಪ್ರತಿಭಟನೆಯಿಂದ ಹೆದರಿಕೊಂಡಿದೆ. ನಾನು ಸೆಕ್ರೆಟರಿಯೇಟ್‌ಗೆ ಹೋಗಿ ಯುವಕರಲ್ಲಿ ಹೆಚ್ಚುತ್ತಿರುವ ನಿರುದ್ಯೋಗದ ಬಗ್ಗೆ ಮಾತನಾಡಲು ಬಯಸುತ್ತೇನೆ. ಒಬ್ಬ ಮಹಿಳಾ ರಾಜಕಾರಣಿಯನ್ನು ಸರ್ಕಾರ ನಡೆಸಿಕೊಳ್ಳುತ್ತಿರುವ ರೀತಿ ಖಂಡನೀಯ. ನಾನು ರಾಜಶೇಖರ ರೆಡ್ಡಿ ಅವರ ಮಗಳು, ಹೆದರುವವಲಲ್ಲ. ನನ್ನ ಹೋರಾಟ ಮುಂದುವರಿಸುತ್ತೇನೆ” ಎಂದು ವಿಜಯವಾಡದ ಮಂಗಳಗಿರಿ ಪೊಲೀಸ್ ಠಾಣೆಯ ಮುಂದೆ ಶರ್ಮಿಳಾ ಹೇಳಿದ್ದಾರೆ.

ಇಂದು ಸೆಕ್ರೆಟರಿಯೇಟ್‌ ಚಲೋ ನಡೆಸುವುದಾಗಿ ಶರ್ಮಿಳಾ ಘೋಷಿಸಿದ ಬಳಿಕ ಅವರನ್ನು ಪೊಲೀಸರು ಗೃಹ ಬಂಧನಲ್ಲಿಡುವ ಭೀತಿಯಿತ್ತು. ಈ ಹಿನ್ನೆಲೆ, ಶರ್ಮಿಳಾ ನಿನ್ನೆ(ಬುಧವಾರ) ಕಾಂಗ್ರೆಸ್ ಕಚೇರಿಯಲ್ಲೇ ರಾತ್ರಿ ಕಳೆದಿದ್ದಾರೆ. ಪೊಲೀಸರು ವಶಕ್ಕೆ ಪಡೆಯುವ ಭೀತಿಯಲ್ಲಿ ಬುಧವಾರ ಸಂಜೆ ಕಾಂಗ್ರೆಸ್ ಸಂಸದ ಕೆವಿಪಿ ರಾಮಚಂದ್ರ ರಾವ್ ಅವರ ಮನೆಗೆ ಭೇಟಿ ನೀಡುವುದನ್ನೂ ಶರ್ಮಿಳಾ ರದ್ದುಪಡಿಸಿದ್ದರು.

ಇಂದು (ಗುರುವಾರ) ಬೆಳಗ್ಗೆ ಪೊಲೀಸರು ಕಾಂಗ್ರೆಸ್ ಕಚೇರಿಯನ್ನು ಸುತ್ತುವರಿದಿದ್ದರಿಂದ, ಶರ್ಮಿಳಾ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಜೊತೆ ಅಲ್ಲೇ ಧರಣಿ ಕುಳಿತು ಘೋಷಣೆಗಳನ್ನು ಕೂಗಿದರು. ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಚುನಾವಣಾ ಪ್ರಚಾರದ ವೇಳೆ ನೀಡಿದ ಭರವಸೆಯಂತೆ 23,000 ಹುದ್ದೆಗಳನ್ನು ಭರ್ತಿ ಮಾಡಲು ಆದೇಶ ಹೊರಡಿಸಬೇಕು ಎಂದು ಶರ್ಮಿಳಾ ಒತ್ತಾಯಿಸಿದರು.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಶರ್ಮಿಳಾ, “ಚುನಾವಣೆಗೆ ಎರಡು ತಿಂಗಳಿಗಿಂತ ಕಡಿಮೆ ಸಮಯವಿದೆ. ಈಗ 6,000 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ. ಮೆಗಾ ಡಿಎಸ್ಸಿ (ನೇಮಕಾತಿಗಾಗಿ ಜಿಲ್ಲಾ ಆಯ್ಕೆ ಸಮಿತಿ) ನಡೆಸುವ ಬದಲು ಅವರು ದಗಾ (ವಂಚನೆ) ಡಿಎಸ್ಸಿ ಮಾಡುತ್ತಿದ್ದಾರೆ. ವೈಎಸ್‌ಆರ್‌ಸಿಪಿ ಆಡಳಿತವು ಸರ್ವಾಧಿಕಾರದಂತಿದೆ. ಇದನ್ನು ಪ್ರತಿಭಟಿಸುವವರನ್ನು ಗೃಹ ಬಂಧನದಲ್ಲಿ ಇರಿಸಲಾಗುತ್ತಿದೆ ಎಂದು ಕಿಡಿಕಾರಿದರು.

“ಸಾವಿರಾರು ಪೊಲೀಸರು ನಮ್ಮನ್ನು ಸುತ್ತುವರಿದಿದ್ದಾರೆ. ನಮ್ಮ ಸುತ್ತಲೂ ಕಬ್ಬಿಣದ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ನಮ್ಮನ್ನು ಒತ್ತೆಯಾಳಾಗಿ ಇರಿಸಲಾಗಿದೆ. ನಿರುದ್ಯೋಗಿಗಳ ಪರ ನಿಂತರೆ ಬಂಧಿಸಲಾಗುತ್ತಿದೆ. ನೀವು ನಮ್ಮನ್ನು ತಡೆಯಲು ಬಯಸುವ ಸರ್ವಾಧಿಕಾರಿಗಳು. ಇದಕ್ಕೆ ನಿಮ್ಮ ನಡೆಗಳೇ ಸಾಕ್ಷಿ” ಎಂದು ಶರ್ಮಿಳಾ ಗುಡುಗಿದರು. ಕಾಂಗ್ರೆಸ್ ನಾಯಕರು ಮತ್ತು ಜನರು ಪ್ರತಿಭಟನೆ ನಡೆಸದಂತೆ ವೈಎಸ್‌ಆರ್‌ಸಿಪಿ ಸರ್ಕಾರ ಮತ್ತು ಪೊಲೀಸರು ತಡೆಯುವುದು ‘ಅಸಂವಿಧಾನಿಕ’ ಎಂದರು.

ದಿವಂಗತ ವೈಎಸ್ ರಾಜಶೇಖರ್ ರೆಡ್ಡಿ ಅವರ ಪುತ್ರಿ ಮತ್ತು ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ಶರ್ಮಿಳಾ ಅವರು ಜನವರಿ 16 ರಂದು ಆಂಧ್ರ ಪ್ರದೇಶ ಕಾಂಗ್ರೆಸ್ ಸಮಿತಿ (ಎಪಿಸಿಸಿ) ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ರಾಜ್ಯದ ಆರ್ಥಿಕ ಬಿಕ್ಕಟ್ಟು, ನಿರುದ್ಯೋಗ ಹಾಗೂ ಕಾನೂನು ಸುವ್ಯಸ್ಥೆಯ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ತನ್ನ ಸಹೋದರನ ಸರ್ಕಾರದ ವಿರುದ್ದ ಶರ್ಮಿಳಾ ಸಮರ ಸಾರಿದ್ದಾರೆ. ಕಾಂಗ್ರೆಸ್ ಸೇರಿದ ಬಳಿಕ ಮೊದಲ ಬಾರಿಗೆ ಸೆಕ್ರೆಟರಿಯೇಟ್‌ ಚಲೋ ಎಂಬ ಹೆಸರಿನಲ್ಲಿ ದೊಡ್ಡ ಮಟ್ಟದ ಹೋರಾಟ ರೂಪಿಸಿದ್ದಾರೆ.

ಇದನ್ನೂ ಓದಿ: ಗೃಹ ಬಂಧನ ಭೀತಿ: ಕಾಂಗ್ರೆಸ್ ಕಚೇರಿಯಲ್ಲೇ ರಾತ್ರಿ ಕಳೆದ ವೈಎಸ್‌ ಶರ್ಮಿಳಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...