HomeUncategorizedಜಗನ್ ಸರ್ಕಾರದ ವಿರುದ್ಧ ಸಹೋದರಿ ಶರ್ಮಿಳಾ 'ಸೆಕ್ರೆಟರಿಯೇಟ್ ಚಲೋ': ವಶಕ್ಕೆ ಪಡೆದ ಪೊಲೀಸರು

ಜಗನ್ ಸರ್ಕಾರದ ವಿರುದ್ಧ ಸಹೋದರಿ ಶರ್ಮಿಳಾ ‘ಸೆಕ್ರೆಟರಿಯೇಟ್ ಚಲೋ’: ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

‘ಸೆಕ್ರೆಟರಿಯೇಟ್‌ ಚಲೋ’ ನಡೆಸುತ್ತಿದ್ದ ಆಂಧ್ರ ಪ್ರದೇಶ ರಾಜ್ಯ ಕಾಂಗ್ರೆಸ್ ಘಟಕ(ಎಪಿಸಿಸಿ) ದ ಅಧ್ಯಕ್ಷೆ ವೈ.ಎಸ್ ಶರ್ಮಿಳಾ ಅವರನ್ನು ವಿಜಯವಾಡ ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ. ಮೆರವಣಿಗೆಗೆ ಅನುಮತಿ ಇರಲಿಲ್ಲ. ಈ ಕಾರಣಕ್ಕೆ ವೈ.ಎಸ್‌ ಶರ್ಮಿಳಾ, ಎಪಿಸಿಸಿ ಮುಖ್ಯಸ್ಥ ಜಿ ರುದ್ರರಾಜು ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳಾ ಪೇದೆಗಳು ಶರ್ಮಿಳಾ ಅವರನ್ನು ಬಲವಂತವಾಗಿ ಎಳೆದೊಯ್ದು ಪೊಲೀಸ್ ವಾಹನಕ್ಕೆ ಹತ್ತಿಸಿದ್ದು, ಈ ವೇಳೆ ಅವರ ಕೈಗಳಿಗೆ ಸ್ವಲ್ಪ ಗಾಯಗಳಾಗಿವೆ ಎಂದು ವರದಿಗಳು ಹೇಳಿವೆ. ರಾಜ್ಯದ ನಿರುದ್ಯೋಗಿ ಯುವಕರ ಸಮಸ್ಯೆಗಳನ್ನು ಪರಿಹರಿಸುವಂತೆ ಶರ್ಮಿಳಾ ಅವರು ಗುರುವಾರ ಬೆಳಗ್ಗೆ ವಿಜಯವಾಡದಲ್ಲಿ’ಚಲೋ ಸೆಕ್ರೆಟರಿಯೇಟ್’ ಪ್ರತಿಭಟನಾ ಮೆರವಣಿಗೆ ಆರಂಭಿಸಿದ್ದರು. ಮೆರವಣಿಗೆ ನಗರದ ಏಲೂರು ರಸ್ತೆಗೆ ಬರುತ್ತಿದ್ದಂತೆ ಪೊಲೀಸರು ತಡೆದಿದ್ದಾರೆ. ಪೊಲೀಸರು ವಶಕ್ಕೆ ಪಡೆಯುವ ಮೊದಲು ಸುಮಾರು ಎರಡು ಗಂಟೆಗಳ ಕಾಲ ಶರ್ಮಿಳಾ ಮತ್ತು ಅವರ ಬೆಂಬಲಿಗರು ರಸ್ತೆಯಲ್ಲೇ ನಿಂತಿದ್ದರು.

“ಸಿಎಂ ಮತ್ತು ಅವರ ಸರ್ಕಾರ ನಮ್ಮ ಪ್ರತಿಭಟನೆಯಿಂದ ಹೆದರಿಕೊಂಡಿದೆ. ನಾನು ಸೆಕ್ರೆಟರಿಯೇಟ್‌ಗೆ ಹೋಗಿ ಯುವಕರಲ್ಲಿ ಹೆಚ್ಚುತ್ತಿರುವ ನಿರುದ್ಯೋಗದ ಬಗ್ಗೆ ಮಾತನಾಡಲು ಬಯಸುತ್ತೇನೆ. ಒಬ್ಬ ಮಹಿಳಾ ರಾಜಕಾರಣಿಯನ್ನು ಸರ್ಕಾರ ನಡೆಸಿಕೊಳ್ಳುತ್ತಿರುವ ರೀತಿ ಖಂಡನೀಯ. ನಾನು ರಾಜಶೇಖರ ರೆಡ್ಡಿ ಅವರ ಮಗಳು, ಹೆದರುವವಲಲ್ಲ. ನನ್ನ ಹೋರಾಟ ಮುಂದುವರಿಸುತ್ತೇನೆ” ಎಂದು ವಿಜಯವಾಡದ ಮಂಗಳಗಿರಿ ಪೊಲೀಸ್ ಠಾಣೆಯ ಮುಂದೆ ಶರ್ಮಿಳಾ ಹೇಳಿದ್ದಾರೆ.

ಇಂದು ಸೆಕ್ರೆಟರಿಯೇಟ್‌ ಚಲೋ ನಡೆಸುವುದಾಗಿ ಶರ್ಮಿಳಾ ಘೋಷಿಸಿದ ಬಳಿಕ ಅವರನ್ನು ಪೊಲೀಸರು ಗೃಹ ಬಂಧನಲ್ಲಿಡುವ ಭೀತಿಯಿತ್ತು. ಈ ಹಿನ್ನೆಲೆ, ಶರ್ಮಿಳಾ ನಿನ್ನೆ(ಬುಧವಾರ) ಕಾಂಗ್ರೆಸ್ ಕಚೇರಿಯಲ್ಲೇ ರಾತ್ರಿ ಕಳೆದಿದ್ದಾರೆ. ಪೊಲೀಸರು ವಶಕ್ಕೆ ಪಡೆಯುವ ಭೀತಿಯಲ್ಲಿ ಬುಧವಾರ ಸಂಜೆ ಕಾಂಗ್ರೆಸ್ ಸಂಸದ ಕೆವಿಪಿ ರಾಮಚಂದ್ರ ರಾವ್ ಅವರ ಮನೆಗೆ ಭೇಟಿ ನೀಡುವುದನ್ನೂ ಶರ್ಮಿಳಾ ರದ್ದುಪಡಿಸಿದ್ದರು.

ಇಂದು (ಗುರುವಾರ) ಬೆಳಗ್ಗೆ ಪೊಲೀಸರು ಕಾಂಗ್ರೆಸ್ ಕಚೇರಿಯನ್ನು ಸುತ್ತುವರಿದಿದ್ದರಿಂದ, ಶರ್ಮಿಳಾ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಜೊತೆ ಅಲ್ಲೇ ಧರಣಿ ಕುಳಿತು ಘೋಷಣೆಗಳನ್ನು ಕೂಗಿದರು. ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಚುನಾವಣಾ ಪ್ರಚಾರದ ವೇಳೆ ನೀಡಿದ ಭರವಸೆಯಂತೆ 23,000 ಹುದ್ದೆಗಳನ್ನು ಭರ್ತಿ ಮಾಡಲು ಆದೇಶ ಹೊರಡಿಸಬೇಕು ಎಂದು ಶರ್ಮಿಳಾ ಒತ್ತಾಯಿಸಿದರು.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಶರ್ಮಿಳಾ, “ಚುನಾವಣೆಗೆ ಎರಡು ತಿಂಗಳಿಗಿಂತ ಕಡಿಮೆ ಸಮಯವಿದೆ. ಈಗ 6,000 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ. ಮೆಗಾ ಡಿಎಸ್ಸಿ (ನೇಮಕಾತಿಗಾಗಿ ಜಿಲ್ಲಾ ಆಯ್ಕೆ ಸಮಿತಿ) ನಡೆಸುವ ಬದಲು ಅವರು ದಗಾ (ವಂಚನೆ) ಡಿಎಸ್ಸಿ ಮಾಡುತ್ತಿದ್ದಾರೆ. ವೈಎಸ್‌ಆರ್‌ಸಿಪಿ ಆಡಳಿತವು ಸರ್ವಾಧಿಕಾರದಂತಿದೆ. ಇದನ್ನು ಪ್ರತಿಭಟಿಸುವವರನ್ನು ಗೃಹ ಬಂಧನದಲ್ಲಿ ಇರಿಸಲಾಗುತ್ತಿದೆ ಎಂದು ಕಿಡಿಕಾರಿದರು.

“ಸಾವಿರಾರು ಪೊಲೀಸರು ನಮ್ಮನ್ನು ಸುತ್ತುವರಿದಿದ್ದಾರೆ. ನಮ್ಮ ಸುತ್ತಲೂ ಕಬ್ಬಿಣದ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ನಮ್ಮನ್ನು ಒತ್ತೆಯಾಳಾಗಿ ಇರಿಸಲಾಗಿದೆ. ನಿರುದ್ಯೋಗಿಗಳ ಪರ ನಿಂತರೆ ಬಂಧಿಸಲಾಗುತ್ತಿದೆ. ನೀವು ನಮ್ಮನ್ನು ತಡೆಯಲು ಬಯಸುವ ಸರ್ವಾಧಿಕಾರಿಗಳು. ಇದಕ್ಕೆ ನಿಮ್ಮ ನಡೆಗಳೇ ಸಾಕ್ಷಿ” ಎಂದು ಶರ್ಮಿಳಾ ಗುಡುಗಿದರು. ಕಾಂಗ್ರೆಸ್ ನಾಯಕರು ಮತ್ತು ಜನರು ಪ್ರತಿಭಟನೆ ನಡೆಸದಂತೆ ವೈಎಸ್‌ಆರ್‌ಸಿಪಿ ಸರ್ಕಾರ ಮತ್ತು ಪೊಲೀಸರು ತಡೆಯುವುದು ‘ಅಸಂವಿಧಾನಿಕ’ ಎಂದರು.

ದಿವಂಗತ ವೈಎಸ್ ರಾಜಶೇಖರ್ ರೆಡ್ಡಿ ಅವರ ಪುತ್ರಿ ಮತ್ತು ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ಶರ್ಮಿಳಾ ಅವರು ಜನವರಿ 16 ರಂದು ಆಂಧ್ರ ಪ್ರದೇಶ ಕಾಂಗ್ರೆಸ್ ಸಮಿತಿ (ಎಪಿಸಿಸಿ) ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ರಾಜ್ಯದ ಆರ್ಥಿಕ ಬಿಕ್ಕಟ್ಟು, ನಿರುದ್ಯೋಗ ಹಾಗೂ ಕಾನೂನು ಸುವ್ಯಸ್ಥೆಯ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ತನ್ನ ಸಹೋದರನ ಸರ್ಕಾರದ ವಿರುದ್ದ ಶರ್ಮಿಳಾ ಸಮರ ಸಾರಿದ್ದಾರೆ. ಕಾಂಗ್ರೆಸ್ ಸೇರಿದ ಬಳಿಕ ಮೊದಲ ಬಾರಿಗೆ ಸೆಕ್ರೆಟರಿಯೇಟ್‌ ಚಲೋ ಎಂಬ ಹೆಸರಿನಲ್ಲಿ ದೊಡ್ಡ ಮಟ್ಟದ ಹೋರಾಟ ರೂಪಿಸಿದ್ದಾರೆ.

ಇದನ್ನೂ ಓದಿ: ಗೃಹ ಬಂಧನ ಭೀತಿ: ಕಾಂಗ್ರೆಸ್ ಕಚೇರಿಯಲ್ಲೇ ರಾತ್ರಿ ಕಳೆದ ವೈಎಸ್‌ ಶರ್ಮಿಳಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...