Homeಕರ್ನಾಟಕ ‘ಮೇಘ ಸಂದೇಶವೇ ನಮ್ಮ ಇಮೇಲ್’. ಎನ್.ಐ.ಎ ಪ್ರಗ್ಯಾ ಮೇಲಿನ ಕೇಸ್ ಕೈಬಿಟ್ಟಿದ್ದು ಹೀಗೆ

 ‘ಮೇಘ ಸಂದೇಶವೇ ನಮ್ಮ ಇಮೇಲ್’. ಎನ್.ಐ.ಎ ಪ್ರಗ್ಯಾ ಮೇಲಿನ ಕೇಸ್ ಕೈಬಿಟ್ಟಿದ್ದು ಹೀಗೆ

ಠಕ್ಕರ್: ಭೋಪಾಲದಲ್ಲಿ ವಿಷಾನಿಲದೊಂದಿಗೆ ಮುಖಾಮುಖಿ

- Advertisement -
- Advertisement -

| ಮಲ್ಲಿ |

‘ಉಜ್ಜೋಣ ಉಜ್ಜೋಣ ಅಂಬಾ ಬೆನ್ನು ಉಜ್ಜೋಣ’

ಪ್ರಗ್ಯಾ ಮನೆ ಸಮೀಪ ಹೋದಂತೆ ಒಂಥರಾ ವಿಷಾನಿಲದ ವಾಸನೆ…. ತೀರಾ ಸಮೀಪವೇ ಹೋದಾಗ ಸೆಗಣಿ ವಾಸನೆ.. ಹಾಂ, ಇದು ಪ್ರಗ್ಯಾ ಮನೆಯೇ ಎಂದು ಪಕ್ಕಾ ಆಗುತ್ತಿದ್ದಂತೆ, ಅಂಗಳದಲ್ಲಿ ಅಂಬಾ ಬೆನ್ನು ಉಜ್ಜುತ್ತ ನಿಂತಿದ್ದ ಪ್ರಗ್ಯಾ ಕಂಡೇಬಿಟ್ಟರು.

ಅಕ್ಕೋ, ಕರ್ನಾಟಕದಿಂದ ಬಂದೀನಿ… ಲೂಜಾವರ ಸ್ವಾಮೀಜಿ ತಮ್ಮ ಇಂಟರ್‍ವ್ಯೂ ಮಾಡಾಕೆ ಕಳಿಸಿದ್ದಾರೆ.
‘ಓಹ್, ಮೊನ್ನೆನೇ ಅವರ ವ್ಯಾಟ್ಸಪ್ ಬಂದಿತ್ತು, ನಿನ್ನೆ ಇಮೇಲ್ ಕೂಡ ಕಳಿಸಿದ್ದರು… ಬಾರಪ್ಪ ಬಾ’ ಎಂದು ಗೋವಿನ ಹಿಂಭಾಗದ ತುದಿಯಿಂದ ಮುಂದಕ್ಕೆ ಉಜ್ಜತೊಡಗಿದರು.
‘ಅಲ್ಲ ಅಕ್ಕವ್ವ, ನೀವೇನೋ ವ್ಯಾಟ್ಸಪ್, ‘ಮೇಲ್’ ಬಳಸಬಹುದು. ಆದರೆ, ಲೂಜಾವರರು ಬಳಸ್ತಾರಾ?’
‘ಅವ್ರು, ನಾನು ಎಲ್ಲ 1988ರಿಂದಾನೇ ಬಳಸ್ತಾ ಇದೀವಿ…’
‘ಮೋದಿ ಹಂಗೆ ಹೇಳಿದ್ದಕ್ಕೆ ಜನ ನಗ್ತಾ ಅವ್ರೆ ಅಕ್ಕಾ’
‘ದಡ್ಡರು ನೀವೆಲ್ಲ…. ನಮ್ಮ ‘ಮೇಲು’ ಅಂದ್ರೆ ಅದು ಮೇಘ ಸಂದೇಶ… ಮೋಡದ ಮೂಲಕವೇ ಸಂದೇಶ ರವಾನಿಸಿಕೊಳ್ತೀವಿ…ಅದನ್ನು ಬೇರೆಯವರು ನೋಡಾಕಾಗಲ್ಲ…ಮೋಡಗಳ ರಕ್ಷಣೆಯಲ್ಲಿ ಅದು ಹರಿದು ನಮ್ಮವರನ್ನ ತಲುಪುತ್ತೆ’
‘ಅದಿರ್ಲಿ ಅಕ್ಕಾ, ‘ಮೇಲು’ ಬಂದು ಇನ್‍ಬಾಕ್ಸ್‍ಗೆ ಬೀಳ್ತಾವೆ. ಆದ್ರೆ ನಿಮ್ಮ ಮೇಘ ಸಂದೇಶ ಎಲ್ಲಿ ಬೀಳತ್ತೆ? ನಿಮ್ಗೆ, ಲೂಜಾವರರಿಗೆ ಬಕ್ಕಣ (ಕಿಸೆ, ಪಾಕೆಟ್) ಬೇರೆ ಇಲ್ವಲ್ಲ?’
‘ಮೂರ್ಖ. ಆ ಸಂದೇಶಗಳು ಸೀದಾ ಆತ್ಮವನ್ನ ತಲುಪ್ತಾವೆ’
‘ಹಂಗಾದ್ರೆ ನಿಂಗೆ ಶಿಕ್ಷೆ ಆಗಲ್ಲಕ್ಕ… ತನಿಖೆ ಮಾಡೋರಿಗೆ ನಿಮ್ಮ ಮೇಘ ಸಂದೇಶ ಸಿಗೋದೇ ಇಲ್ವಲ್ಲ?’
‘ಇದು ಆಫ್ ದಿ ರೆಕಾರ್ಡ್ ಇರಲಿ..’

‘ಅಕ್ಕಾ ಹಿಂಗ ಉಜುತ್ತೀರಲ್ಲ ಆಕಳ ಬೆನ್ನನ್ನ… ಬಿಪಿ ಕಂಟ್ರೋಲ್‍ಗೆ ಬರೋದು ಆಕಳದ್ದೋ, ನಿಮ್ದೋ ಅಕ್ಕಾ’
‘ಪೆದ್ದ, ಗೋಮಾತೆಗೆ ಬಿಪಿ, ಶುಗರ್ ಬರಲ್ಲ’
‘ನಾ ಬಂದಾಗಿಂದ ನೋಡತಿನಿ, ಉಜ್ತಾನೇ ಇದ್ದೀರಿ… ಸೋಲೋ ಭಯದಲ್ಲಿ ಬಿಪಿ ಏರುಪೇರಾಗಿದೆಯಾ?
‘ಓವರ್ ಆಯ್ತು… ಶಾಪ ಕೊಡ್ಲಾ?’
‘ಬೇಡಕ್ಕೋ, ಸಾರಿ….ಅಕ್ಕಾ ಅಕ್ಕಾ, ಕ್ಯಾನ್ಸರ್ ಔಷಧಿ ಬೀಳ್ತಾ ಇದೆ…. ಒಂದು ಬಾಟಲ್ ಕೊಡಕ್ಕ’
(ಆಕಳು ಒಂದು ಕೊಡದಷ್ಟು ಸೂಸು ಮಾಡಿತು…)
‘ಹೇಯ್, ನಿಂಗೆ ಬೇಕಾದ್ರೆ ಅಲ್ಲಿ ಕರ್ನಾಟಕದಲ್ಲಿ ಸಿಗುತ್ತೆ… ರಾಮ್ದೇವ್ ನನ್ನ ಫಾರ್ಮುಲಾ ಇಟ್ಗೊಂಡು, ಗೋಮೂತ್ರಗಳ ಪಾಕೆಟ್ ಮಾಡಿ ‘ಹೇತಂಜಲಿ’ಯಲ್ಲಿ ಮಾರ್ತಾನೆ…’

‘ಅಕ್ಕಾ ಈ ರೇಡಾರ್ ಬಗ್ಗೆ ನಿಂಗೇನಾದ್ರೂ ಗೊತ್ತಾ ಅಕ್ಕ?’
‘ಚಿಕ್ಕಪ್ಪಯ್ಯ ಹೇಳಿದ್ದನ್ನ ಜೋಕ್ ಮಾಡ್ತೀದಿಯಾ? ಆಫ್ ದಿ ರೆಕಾರ್ಡ್ ಕೇಳು: ನಮ್ಮನ್ನೆಲ್ಲ ಜೈಲಿಗೆ ಹಾಕಿದ್ರಾ… ಅಮಿತಣ್ಣಂಗೂ ಜೈಲು ಕಾದಿತ್ತಾ? ಚಿಕ್ಕಪ್ಪ ಮೋಡ ಸೃಷ್ಟಿಸಿಬಿಟ್ಟ… ಎನ್‍ಐಎ ಕಣ್ಣಿನ ಪೊರೆಗೆ ಈ ಮೋಡ ಅಮರಿಕೊಂಡವು… ಅಸೀಮಾನಂದ ಕಾಕಾ ಅದಕ್ಕೇ ರಿಲೀಸ್ ಆಗಲಿಲ್ವಾ… ನಮ್ಮ ಚಿಕ್ಕಪ್ಪ ಹೇಳಿದ್ದು ನಿಮ್ಗೆ ಅರ್ಥ ಆಗಲ್ಲ…’
(ಪ್ರಗ್ಯಕ್ಕ ಎದೆ ಮೇಲೆ ಕೈ ಇಟ್ಟುಕೊಂಡು ಕಣ್ಣು ಮುಚ್ಚಿಕೊಂಡರು….ಆಕಳು ಅಂಬಾ ಅಂದಿತು…)
‘ಏನಾಯ್ತಕ್ಕಾ, ಎದೆನೋವಾ?’
‘ನೋ ನೋ… ಆತ್ಮಕ್ಕೆ ಮೇಘ ಸಂದೇಶವೊಂದು ಬಂದಿದೆ, ಚಿಕ್ಕಪ್ಪಯ್ಯನ ಕಡೆಯಿಂದ’
‘ಆಯ್ತಕ್ಕ ಇನ್‍ಬಾಕ್ಸ್…. ಸಾರಿ… ಆತ್ಮವ ತೆರೆದು ಮೇಲು ನೋಡು… ಬರ್ಲಾ ಅಕ್ಕಾ…ಒಂದೇ ಒಂದು ಸಲ ಉಜ್ಜಲಾ?’
(ಟೊಣಪನೊಬ್ಬ ಬಂದು ಏ ಎಂದು ಗದರಿಸಿದ)
‘ಉಜ್ಜಲಿ ಬಿಡು…. ಗೋಮಾತೆ ಇರೋದೇ ಉಜ್ಜಲು, ಬಿಪಿ ಕಂಟ್ರೋಲ್ ಮಾಡಿಕೊಳ್ಳಲು…’
ನಮ್ಮ ಠಕ್ಕಣ್ಣ ಆಕಳಿನ ಬೆನ್ನು ಉಜ್ಜುವಾಗ ಮತ್ತೆ ವಿಷಾನಿಲದ ವಾಸನೆ… ಭಯ ಬಿದ್ದವನೇ ಅಲ್ಲಿಂದ ಪರಾರಿಯಾಗಿ ಬಂದಿದ್ದಾನೆ…

ದೇಶದೊಳಗಿನ ‘ಬಾಂಬು’ ಪ್ರಗ್ಯಾ ಎಂಬ ಸಾಧ್ವಿಯೂ… ಸುರಕ್ಷತೆ ಬಗ್ಗೆ ಕುಟ್ಟುತ್ತಲೇ ಇರುವ ಮೋದಿಯೂ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...