Homeಕರ್ನಾಟಕ ‘ಮೇಘ ಸಂದೇಶವೇ ನಮ್ಮ ಇಮೇಲ್’. ಎನ್.ಐ.ಎ ಪ್ರಗ್ಯಾ ಮೇಲಿನ ಕೇಸ್ ಕೈಬಿಟ್ಟಿದ್ದು ಹೀಗೆ

 ‘ಮೇಘ ಸಂದೇಶವೇ ನಮ್ಮ ಇಮೇಲ್’. ಎನ್.ಐ.ಎ ಪ್ರಗ್ಯಾ ಮೇಲಿನ ಕೇಸ್ ಕೈಬಿಟ್ಟಿದ್ದು ಹೀಗೆ

ಠಕ್ಕರ್: ಭೋಪಾಲದಲ್ಲಿ ವಿಷಾನಿಲದೊಂದಿಗೆ ಮುಖಾಮುಖಿ

- Advertisement -
- Advertisement -

| ಮಲ್ಲಿ |

‘ಉಜ್ಜೋಣ ಉಜ್ಜೋಣ ಅಂಬಾ ಬೆನ್ನು ಉಜ್ಜೋಣ’

ಪ್ರಗ್ಯಾ ಮನೆ ಸಮೀಪ ಹೋದಂತೆ ಒಂಥರಾ ವಿಷಾನಿಲದ ವಾಸನೆ…. ತೀರಾ ಸಮೀಪವೇ ಹೋದಾಗ ಸೆಗಣಿ ವಾಸನೆ.. ಹಾಂ, ಇದು ಪ್ರಗ್ಯಾ ಮನೆಯೇ ಎಂದು ಪಕ್ಕಾ ಆಗುತ್ತಿದ್ದಂತೆ, ಅಂಗಳದಲ್ಲಿ ಅಂಬಾ ಬೆನ್ನು ಉಜ್ಜುತ್ತ ನಿಂತಿದ್ದ ಪ್ರಗ್ಯಾ ಕಂಡೇಬಿಟ್ಟರು.

ಅಕ್ಕೋ, ಕರ್ನಾಟಕದಿಂದ ಬಂದೀನಿ… ಲೂಜಾವರ ಸ್ವಾಮೀಜಿ ತಮ್ಮ ಇಂಟರ್‍ವ್ಯೂ ಮಾಡಾಕೆ ಕಳಿಸಿದ್ದಾರೆ.
‘ಓಹ್, ಮೊನ್ನೆನೇ ಅವರ ವ್ಯಾಟ್ಸಪ್ ಬಂದಿತ್ತು, ನಿನ್ನೆ ಇಮೇಲ್ ಕೂಡ ಕಳಿಸಿದ್ದರು… ಬಾರಪ್ಪ ಬಾ’ ಎಂದು ಗೋವಿನ ಹಿಂಭಾಗದ ತುದಿಯಿಂದ ಮುಂದಕ್ಕೆ ಉಜ್ಜತೊಡಗಿದರು.
‘ಅಲ್ಲ ಅಕ್ಕವ್ವ, ನೀವೇನೋ ವ್ಯಾಟ್ಸಪ್, ‘ಮೇಲ್’ ಬಳಸಬಹುದು. ಆದರೆ, ಲೂಜಾವರರು ಬಳಸ್ತಾರಾ?’
‘ಅವ್ರು, ನಾನು ಎಲ್ಲ 1988ರಿಂದಾನೇ ಬಳಸ್ತಾ ಇದೀವಿ…’
‘ಮೋದಿ ಹಂಗೆ ಹೇಳಿದ್ದಕ್ಕೆ ಜನ ನಗ್ತಾ ಅವ್ರೆ ಅಕ್ಕಾ’
‘ದಡ್ಡರು ನೀವೆಲ್ಲ…. ನಮ್ಮ ‘ಮೇಲು’ ಅಂದ್ರೆ ಅದು ಮೇಘ ಸಂದೇಶ… ಮೋಡದ ಮೂಲಕವೇ ಸಂದೇಶ ರವಾನಿಸಿಕೊಳ್ತೀವಿ…ಅದನ್ನು ಬೇರೆಯವರು ನೋಡಾಕಾಗಲ್ಲ…ಮೋಡಗಳ ರಕ್ಷಣೆಯಲ್ಲಿ ಅದು ಹರಿದು ನಮ್ಮವರನ್ನ ತಲುಪುತ್ತೆ’
‘ಅದಿರ್ಲಿ ಅಕ್ಕಾ, ‘ಮೇಲು’ ಬಂದು ಇನ್‍ಬಾಕ್ಸ್‍ಗೆ ಬೀಳ್ತಾವೆ. ಆದ್ರೆ ನಿಮ್ಮ ಮೇಘ ಸಂದೇಶ ಎಲ್ಲಿ ಬೀಳತ್ತೆ? ನಿಮ್ಗೆ, ಲೂಜಾವರರಿಗೆ ಬಕ್ಕಣ (ಕಿಸೆ, ಪಾಕೆಟ್) ಬೇರೆ ಇಲ್ವಲ್ಲ?’
‘ಮೂರ್ಖ. ಆ ಸಂದೇಶಗಳು ಸೀದಾ ಆತ್ಮವನ್ನ ತಲುಪ್ತಾವೆ’
‘ಹಂಗಾದ್ರೆ ನಿಂಗೆ ಶಿಕ್ಷೆ ಆಗಲ್ಲಕ್ಕ… ತನಿಖೆ ಮಾಡೋರಿಗೆ ನಿಮ್ಮ ಮೇಘ ಸಂದೇಶ ಸಿಗೋದೇ ಇಲ್ವಲ್ಲ?’
‘ಇದು ಆಫ್ ದಿ ರೆಕಾರ್ಡ್ ಇರಲಿ..’

‘ಅಕ್ಕಾ ಹಿಂಗ ಉಜುತ್ತೀರಲ್ಲ ಆಕಳ ಬೆನ್ನನ್ನ… ಬಿಪಿ ಕಂಟ್ರೋಲ್‍ಗೆ ಬರೋದು ಆಕಳದ್ದೋ, ನಿಮ್ದೋ ಅಕ್ಕಾ’
‘ಪೆದ್ದ, ಗೋಮಾತೆಗೆ ಬಿಪಿ, ಶುಗರ್ ಬರಲ್ಲ’
‘ನಾ ಬಂದಾಗಿಂದ ನೋಡತಿನಿ, ಉಜ್ತಾನೇ ಇದ್ದೀರಿ… ಸೋಲೋ ಭಯದಲ್ಲಿ ಬಿಪಿ ಏರುಪೇರಾಗಿದೆಯಾ?
‘ಓವರ್ ಆಯ್ತು… ಶಾಪ ಕೊಡ್ಲಾ?’
‘ಬೇಡಕ್ಕೋ, ಸಾರಿ….ಅಕ್ಕಾ ಅಕ್ಕಾ, ಕ್ಯಾನ್ಸರ್ ಔಷಧಿ ಬೀಳ್ತಾ ಇದೆ…. ಒಂದು ಬಾಟಲ್ ಕೊಡಕ್ಕ’
(ಆಕಳು ಒಂದು ಕೊಡದಷ್ಟು ಸೂಸು ಮಾಡಿತು…)
‘ಹೇಯ್, ನಿಂಗೆ ಬೇಕಾದ್ರೆ ಅಲ್ಲಿ ಕರ್ನಾಟಕದಲ್ಲಿ ಸಿಗುತ್ತೆ… ರಾಮ್ದೇವ್ ನನ್ನ ಫಾರ್ಮುಲಾ ಇಟ್ಗೊಂಡು, ಗೋಮೂತ್ರಗಳ ಪಾಕೆಟ್ ಮಾಡಿ ‘ಹೇತಂಜಲಿ’ಯಲ್ಲಿ ಮಾರ್ತಾನೆ…’

‘ಅಕ್ಕಾ ಈ ರೇಡಾರ್ ಬಗ್ಗೆ ನಿಂಗೇನಾದ್ರೂ ಗೊತ್ತಾ ಅಕ್ಕ?’
‘ಚಿಕ್ಕಪ್ಪಯ್ಯ ಹೇಳಿದ್ದನ್ನ ಜೋಕ್ ಮಾಡ್ತೀದಿಯಾ? ಆಫ್ ದಿ ರೆಕಾರ್ಡ್ ಕೇಳು: ನಮ್ಮನ್ನೆಲ್ಲ ಜೈಲಿಗೆ ಹಾಕಿದ್ರಾ… ಅಮಿತಣ್ಣಂಗೂ ಜೈಲು ಕಾದಿತ್ತಾ? ಚಿಕ್ಕಪ್ಪ ಮೋಡ ಸೃಷ್ಟಿಸಿಬಿಟ್ಟ… ಎನ್‍ಐಎ ಕಣ್ಣಿನ ಪೊರೆಗೆ ಈ ಮೋಡ ಅಮರಿಕೊಂಡವು… ಅಸೀಮಾನಂದ ಕಾಕಾ ಅದಕ್ಕೇ ರಿಲೀಸ್ ಆಗಲಿಲ್ವಾ… ನಮ್ಮ ಚಿಕ್ಕಪ್ಪ ಹೇಳಿದ್ದು ನಿಮ್ಗೆ ಅರ್ಥ ಆಗಲ್ಲ…’
(ಪ್ರಗ್ಯಕ್ಕ ಎದೆ ಮೇಲೆ ಕೈ ಇಟ್ಟುಕೊಂಡು ಕಣ್ಣು ಮುಚ್ಚಿಕೊಂಡರು….ಆಕಳು ಅಂಬಾ ಅಂದಿತು…)
‘ಏನಾಯ್ತಕ್ಕಾ, ಎದೆನೋವಾ?’
‘ನೋ ನೋ… ಆತ್ಮಕ್ಕೆ ಮೇಘ ಸಂದೇಶವೊಂದು ಬಂದಿದೆ, ಚಿಕ್ಕಪ್ಪಯ್ಯನ ಕಡೆಯಿಂದ’
‘ಆಯ್ತಕ್ಕ ಇನ್‍ಬಾಕ್ಸ್…. ಸಾರಿ… ಆತ್ಮವ ತೆರೆದು ಮೇಲು ನೋಡು… ಬರ್ಲಾ ಅಕ್ಕಾ…ಒಂದೇ ಒಂದು ಸಲ ಉಜ್ಜಲಾ?’
(ಟೊಣಪನೊಬ್ಬ ಬಂದು ಏ ಎಂದು ಗದರಿಸಿದ)
‘ಉಜ್ಜಲಿ ಬಿಡು…. ಗೋಮಾತೆ ಇರೋದೇ ಉಜ್ಜಲು, ಬಿಪಿ ಕಂಟ್ರೋಲ್ ಮಾಡಿಕೊಳ್ಳಲು…’
ನಮ್ಮ ಠಕ್ಕಣ್ಣ ಆಕಳಿನ ಬೆನ್ನು ಉಜ್ಜುವಾಗ ಮತ್ತೆ ವಿಷಾನಿಲದ ವಾಸನೆ… ಭಯ ಬಿದ್ದವನೇ ಅಲ್ಲಿಂದ ಪರಾರಿಯಾಗಿ ಬಂದಿದ್ದಾನೆ…

ದೇಶದೊಳಗಿನ ‘ಬಾಂಬು’ ಪ್ರಗ್ಯಾ ಎಂಬ ಸಾಧ್ವಿಯೂ… ಸುರಕ್ಷತೆ ಬಗ್ಗೆ ಕುಟ್ಟುತ್ತಲೇ ಇರುವ ಮೋದಿಯೂ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ

ಲಕ್ಷ ಕಂಠ ಗೀತಾ ಪಾರಾಯಣ (ಸುಮಾರು 5 ಲಕ್ಷ ಜನರಿಂದ ಭಗವದ್ಗೀತೆ ಪಾರಾಯಣ) ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಬಡ ಮುಸ್ಲಿಂ ವ್ಯಾಪಾರಿಗೆ ಥಳಿಸಿದ ಘಟನೆ ಭಾನುವಾರ (ಡಿಸೆಂಬರ್ 7) ಕೋಲ್ಕತ್ತಾದ ಬ್ರಿಗೇಡ್...

ಪರಿಶಿಷ್ಟ ಜಾತಿ ಪಟ್ಟಿಗೆ ಜಮ್ಮು-ಕಾಶ್ಮೀರದ ವಾಲ್ಮೀಕಿ ಸಮುದಾಯ: ಒಕ್ಕೂಟ ಸರ್ಕಾರ

ಜಮ್ಮು ಮತ್ತು ಕಾಶ್ಮೀರದ ವಾಲ್ಮೀಕಿ ಸಮುದಾಯವನ್ನು ಈಗ ಅಧಿಕೃತವಾಗಿ ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಲಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಬುಧವಾರ ಸಂಸತ್ತಿಗೆ ತಿಳಿಸಿದೆ. ಇತ್ತೀಚಿನ ವರ್ಷಗಳಲ್ಲಿ ಪ್ರಕ್ರಿಯೆಗೊಳಿಸಲಾದ...

ತಿರುಪತಿ ದೇಣಿಗೆ ಕಳ್ಳತನ ಪ್ರಕರಣ: ಕಾನೂನು ಕ್ರಮ ತೆಗೆದುಕೊಳ್ಳವಂತೆ ‘ಸಿಐಡಿ-ಎಸಿಬಿ’ಗೆ ಹೈಕೋರ್ಟ್ ನಿರ್ದೇಶನ

ತಿರುಮಲ ತಿರುಪತಿ ದೇವಸ್ಥಾನದ ಪರಕಮಣಿ (ದೇಣಿಗೆ ಪೆಟ್ಟಿಗೆ) ಕಳ್ಳತನ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಂಧ್ರಪ್ರದೇಶ ಹೈಕೋರ್ಟ್ ರಾಜ್ಯದ ಅಪರಾಧ ತನಿಖಾ ಇಲಾಖೆ (ಸಿಐಡಿ) ಮತ್ತು ಭ್ರಷ್ಟಾಚಾರ ನಿಗ್ರಹ ದಳ...

ದಲಿತರ ಮನೆಯಲ್ಲಿ ಊಟ ಮಾಡಿದ ಆರ್‌ಎಸ್‌ಎಸ್‌ ಕಾರ್ಯಕರ್ತನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಗ್ರಾಮೀಣ ಭಾರತದ ಕೆಲವು ಭಾಗಗಳಲ್ಲಿ ಜಾತಿ ಪೂರ್ವಾಗ್ರಹಗಳು ಎಷ್ಟು ಆಳವಾಗಿ ಉಳಿದಿವೆ ಎಂಬುದನ್ನು ನೆನಪಿಸುವ ರೀತಿಯಲ್ಲಿ, ಮಧ್ಯಪ್ರದೇಶದ ರೈಸೇನ್ ಜಿಲ್ಲೆಯ ಹಳ್ಳಿಯೊಂದರಿಂದ ಸಾಮಾಜಿಕ ಬಹಿಷ್ಕಾರ ಮತ್ತು ಅಸ್ಪೃಶ್ಯತೆಯ ಪ್ರಕರಣ ಬೆಳಕಿಗೆ ಬಂದಿದೆ. ಆರ್‌ಎಸ್‌ಎಸ್...

ಅಸ್ಸಾಮಿ ಗಾಯಕನ ಬಂಧನ ಬಗ್ಗೆ ಟೈಮ್ಸ್ ನೌ ನವಭಾರತ್‌ ಪೂರ್ವಾಗ್ರಹ ಪೀಡಿತ ವರದಿ : ವಾರದೊಳಗೆ ತೆಗೆದು ಹಾಕಲು ಎನ್‌ಬಿಡಿಎಸ್‌ಎ ಆದೇಶ

ಸೆಪ್ಟೆಂಬರ್ 2024ರಲ್ಲಿ ಅಸ್ಸಾಮಿ ಗಾಯಕ ಅಲ್ತಾಫ್ ಹುಸೇನ್ ಬಂಧನದ ಬಗ್ಗೆ ಪ್ರಸಾರವಾದ ಕಾರ್ಯಕ್ರಮದ ಭಾಗಗಳನ್ನು ತೆಗೆದುಹಾಕುವಂತೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರವು (ಎನ್‌ಬಿಡಿಎಸ್‌ಎ) ಟೈಮ್ಸ್ ನೌ ನವಭಾರತ್‌ಗೆ ನಿರ್ದೇಶನ ನೀಡಿದೆ. ಡಿಸೆಂಬರ್...

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...