Homeಕರ್ನಾಟಕ ‘ಮೇಘ ಸಂದೇಶವೇ ನಮ್ಮ ಇಮೇಲ್’. ಎನ್.ಐ.ಎ ಪ್ರಗ್ಯಾ ಮೇಲಿನ ಕೇಸ್ ಕೈಬಿಟ್ಟಿದ್ದು ಹೀಗೆ

 ‘ಮೇಘ ಸಂದೇಶವೇ ನಮ್ಮ ಇಮೇಲ್’. ಎನ್.ಐ.ಎ ಪ್ರಗ್ಯಾ ಮೇಲಿನ ಕೇಸ್ ಕೈಬಿಟ್ಟಿದ್ದು ಹೀಗೆ

ಠಕ್ಕರ್: ಭೋಪಾಲದಲ್ಲಿ ವಿಷಾನಿಲದೊಂದಿಗೆ ಮುಖಾಮುಖಿ

- Advertisement -
- Advertisement -

| ಮಲ್ಲಿ |

‘ಉಜ್ಜೋಣ ಉಜ್ಜೋಣ ಅಂಬಾ ಬೆನ್ನು ಉಜ್ಜೋಣ’

ಪ್ರಗ್ಯಾ ಮನೆ ಸಮೀಪ ಹೋದಂತೆ ಒಂಥರಾ ವಿಷಾನಿಲದ ವಾಸನೆ…. ತೀರಾ ಸಮೀಪವೇ ಹೋದಾಗ ಸೆಗಣಿ ವಾಸನೆ.. ಹಾಂ, ಇದು ಪ್ರಗ್ಯಾ ಮನೆಯೇ ಎಂದು ಪಕ್ಕಾ ಆಗುತ್ತಿದ್ದಂತೆ, ಅಂಗಳದಲ್ಲಿ ಅಂಬಾ ಬೆನ್ನು ಉಜ್ಜುತ್ತ ನಿಂತಿದ್ದ ಪ್ರಗ್ಯಾ ಕಂಡೇಬಿಟ್ಟರು.

ಅಕ್ಕೋ, ಕರ್ನಾಟಕದಿಂದ ಬಂದೀನಿ… ಲೂಜಾವರ ಸ್ವಾಮೀಜಿ ತಮ್ಮ ಇಂಟರ್‍ವ್ಯೂ ಮಾಡಾಕೆ ಕಳಿಸಿದ್ದಾರೆ.
‘ಓಹ್, ಮೊನ್ನೆನೇ ಅವರ ವ್ಯಾಟ್ಸಪ್ ಬಂದಿತ್ತು, ನಿನ್ನೆ ಇಮೇಲ್ ಕೂಡ ಕಳಿಸಿದ್ದರು… ಬಾರಪ್ಪ ಬಾ’ ಎಂದು ಗೋವಿನ ಹಿಂಭಾಗದ ತುದಿಯಿಂದ ಮುಂದಕ್ಕೆ ಉಜ್ಜತೊಡಗಿದರು.
‘ಅಲ್ಲ ಅಕ್ಕವ್ವ, ನೀವೇನೋ ವ್ಯಾಟ್ಸಪ್, ‘ಮೇಲ್’ ಬಳಸಬಹುದು. ಆದರೆ, ಲೂಜಾವರರು ಬಳಸ್ತಾರಾ?’
‘ಅವ್ರು, ನಾನು ಎಲ್ಲ 1988ರಿಂದಾನೇ ಬಳಸ್ತಾ ಇದೀವಿ…’
‘ಮೋದಿ ಹಂಗೆ ಹೇಳಿದ್ದಕ್ಕೆ ಜನ ನಗ್ತಾ ಅವ್ರೆ ಅಕ್ಕಾ’
‘ದಡ್ಡರು ನೀವೆಲ್ಲ…. ನಮ್ಮ ‘ಮೇಲು’ ಅಂದ್ರೆ ಅದು ಮೇಘ ಸಂದೇಶ… ಮೋಡದ ಮೂಲಕವೇ ಸಂದೇಶ ರವಾನಿಸಿಕೊಳ್ತೀವಿ…ಅದನ್ನು ಬೇರೆಯವರು ನೋಡಾಕಾಗಲ್ಲ…ಮೋಡಗಳ ರಕ್ಷಣೆಯಲ್ಲಿ ಅದು ಹರಿದು ನಮ್ಮವರನ್ನ ತಲುಪುತ್ತೆ’
‘ಅದಿರ್ಲಿ ಅಕ್ಕಾ, ‘ಮೇಲು’ ಬಂದು ಇನ್‍ಬಾಕ್ಸ್‍ಗೆ ಬೀಳ್ತಾವೆ. ಆದ್ರೆ ನಿಮ್ಮ ಮೇಘ ಸಂದೇಶ ಎಲ್ಲಿ ಬೀಳತ್ತೆ? ನಿಮ್ಗೆ, ಲೂಜಾವರರಿಗೆ ಬಕ್ಕಣ (ಕಿಸೆ, ಪಾಕೆಟ್) ಬೇರೆ ಇಲ್ವಲ್ಲ?’
‘ಮೂರ್ಖ. ಆ ಸಂದೇಶಗಳು ಸೀದಾ ಆತ್ಮವನ್ನ ತಲುಪ್ತಾವೆ’
‘ಹಂಗಾದ್ರೆ ನಿಂಗೆ ಶಿಕ್ಷೆ ಆಗಲ್ಲಕ್ಕ… ತನಿಖೆ ಮಾಡೋರಿಗೆ ನಿಮ್ಮ ಮೇಘ ಸಂದೇಶ ಸಿಗೋದೇ ಇಲ್ವಲ್ಲ?’
‘ಇದು ಆಫ್ ದಿ ರೆಕಾರ್ಡ್ ಇರಲಿ..’

‘ಅಕ್ಕಾ ಹಿಂಗ ಉಜುತ್ತೀರಲ್ಲ ಆಕಳ ಬೆನ್ನನ್ನ… ಬಿಪಿ ಕಂಟ್ರೋಲ್‍ಗೆ ಬರೋದು ಆಕಳದ್ದೋ, ನಿಮ್ದೋ ಅಕ್ಕಾ’
‘ಪೆದ್ದ, ಗೋಮಾತೆಗೆ ಬಿಪಿ, ಶುಗರ್ ಬರಲ್ಲ’
‘ನಾ ಬಂದಾಗಿಂದ ನೋಡತಿನಿ, ಉಜ್ತಾನೇ ಇದ್ದೀರಿ… ಸೋಲೋ ಭಯದಲ್ಲಿ ಬಿಪಿ ಏರುಪೇರಾಗಿದೆಯಾ?
‘ಓವರ್ ಆಯ್ತು… ಶಾಪ ಕೊಡ್ಲಾ?’
‘ಬೇಡಕ್ಕೋ, ಸಾರಿ….ಅಕ್ಕಾ ಅಕ್ಕಾ, ಕ್ಯಾನ್ಸರ್ ಔಷಧಿ ಬೀಳ್ತಾ ಇದೆ…. ಒಂದು ಬಾಟಲ್ ಕೊಡಕ್ಕ’
(ಆಕಳು ಒಂದು ಕೊಡದಷ್ಟು ಸೂಸು ಮಾಡಿತು…)
‘ಹೇಯ್, ನಿಂಗೆ ಬೇಕಾದ್ರೆ ಅಲ್ಲಿ ಕರ್ನಾಟಕದಲ್ಲಿ ಸಿಗುತ್ತೆ… ರಾಮ್ದೇವ್ ನನ್ನ ಫಾರ್ಮುಲಾ ಇಟ್ಗೊಂಡು, ಗೋಮೂತ್ರಗಳ ಪಾಕೆಟ್ ಮಾಡಿ ‘ಹೇತಂಜಲಿ’ಯಲ್ಲಿ ಮಾರ್ತಾನೆ…’

‘ಅಕ್ಕಾ ಈ ರೇಡಾರ್ ಬಗ್ಗೆ ನಿಂಗೇನಾದ್ರೂ ಗೊತ್ತಾ ಅಕ್ಕ?’
‘ಚಿಕ್ಕಪ್ಪಯ್ಯ ಹೇಳಿದ್ದನ್ನ ಜೋಕ್ ಮಾಡ್ತೀದಿಯಾ? ಆಫ್ ದಿ ರೆಕಾರ್ಡ್ ಕೇಳು: ನಮ್ಮನ್ನೆಲ್ಲ ಜೈಲಿಗೆ ಹಾಕಿದ್ರಾ… ಅಮಿತಣ್ಣಂಗೂ ಜೈಲು ಕಾದಿತ್ತಾ? ಚಿಕ್ಕಪ್ಪ ಮೋಡ ಸೃಷ್ಟಿಸಿಬಿಟ್ಟ… ಎನ್‍ಐಎ ಕಣ್ಣಿನ ಪೊರೆಗೆ ಈ ಮೋಡ ಅಮರಿಕೊಂಡವು… ಅಸೀಮಾನಂದ ಕಾಕಾ ಅದಕ್ಕೇ ರಿಲೀಸ್ ಆಗಲಿಲ್ವಾ… ನಮ್ಮ ಚಿಕ್ಕಪ್ಪ ಹೇಳಿದ್ದು ನಿಮ್ಗೆ ಅರ್ಥ ಆಗಲ್ಲ…’
(ಪ್ರಗ್ಯಕ್ಕ ಎದೆ ಮೇಲೆ ಕೈ ಇಟ್ಟುಕೊಂಡು ಕಣ್ಣು ಮುಚ್ಚಿಕೊಂಡರು….ಆಕಳು ಅಂಬಾ ಅಂದಿತು…)
‘ಏನಾಯ್ತಕ್ಕಾ, ಎದೆನೋವಾ?’
‘ನೋ ನೋ… ಆತ್ಮಕ್ಕೆ ಮೇಘ ಸಂದೇಶವೊಂದು ಬಂದಿದೆ, ಚಿಕ್ಕಪ್ಪಯ್ಯನ ಕಡೆಯಿಂದ’
‘ಆಯ್ತಕ್ಕ ಇನ್‍ಬಾಕ್ಸ್…. ಸಾರಿ… ಆತ್ಮವ ತೆರೆದು ಮೇಲು ನೋಡು… ಬರ್ಲಾ ಅಕ್ಕಾ…ಒಂದೇ ಒಂದು ಸಲ ಉಜ್ಜಲಾ?’
(ಟೊಣಪನೊಬ್ಬ ಬಂದು ಏ ಎಂದು ಗದರಿಸಿದ)
‘ಉಜ್ಜಲಿ ಬಿಡು…. ಗೋಮಾತೆ ಇರೋದೇ ಉಜ್ಜಲು, ಬಿಪಿ ಕಂಟ್ರೋಲ್ ಮಾಡಿಕೊಳ್ಳಲು…’
ನಮ್ಮ ಠಕ್ಕಣ್ಣ ಆಕಳಿನ ಬೆನ್ನು ಉಜ್ಜುವಾಗ ಮತ್ತೆ ವಿಷಾನಿಲದ ವಾಸನೆ… ಭಯ ಬಿದ್ದವನೇ ಅಲ್ಲಿಂದ ಪರಾರಿಯಾಗಿ ಬಂದಿದ್ದಾನೆ…

ದೇಶದೊಳಗಿನ ‘ಬಾಂಬು’ ಪ್ರಗ್ಯಾ ಎಂಬ ಸಾಧ್ವಿಯೂ… ಸುರಕ್ಷತೆ ಬಗ್ಗೆ ಕುಟ್ಟುತ್ತಲೇ ಇರುವ ಮೋದಿಯೂ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....