Homeಕರ್ನಾಟಕ ‘ಮೇಘ ಸಂದೇಶವೇ ನಮ್ಮ ಇಮೇಲ್’. ಎನ್.ಐ.ಎ ಪ್ರಗ್ಯಾ ಮೇಲಿನ ಕೇಸ್ ಕೈಬಿಟ್ಟಿದ್ದು ಹೀಗೆ

 ‘ಮೇಘ ಸಂದೇಶವೇ ನಮ್ಮ ಇಮೇಲ್’. ಎನ್.ಐ.ಎ ಪ್ರಗ್ಯಾ ಮೇಲಿನ ಕೇಸ್ ಕೈಬಿಟ್ಟಿದ್ದು ಹೀಗೆ

ಠಕ್ಕರ್: ಭೋಪಾಲದಲ್ಲಿ ವಿಷಾನಿಲದೊಂದಿಗೆ ಮುಖಾಮುಖಿ

- Advertisement -
- Advertisement -

| ಮಲ್ಲಿ |

‘ಉಜ್ಜೋಣ ಉಜ್ಜೋಣ ಅಂಬಾ ಬೆನ್ನು ಉಜ್ಜೋಣ’

ಪ್ರಗ್ಯಾ ಮನೆ ಸಮೀಪ ಹೋದಂತೆ ಒಂಥರಾ ವಿಷಾನಿಲದ ವಾಸನೆ…. ತೀರಾ ಸಮೀಪವೇ ಹೋದಾಗ ಸೆಗಣಿ ವಾಸನೆ.. ಹಾಂ, ಇದು ಪ್ರಗ್ಯಾ ಮನೆಯೇ ಎಂದು ಪಕ್ಕಾ ಆಗುತ್ತಿದ್ದಂತೆ, ಅಂಗಳದಲ್ಲಿ ಅಂಬಾ ಬೆನ್ನು ಉಜ್ಜುತ್ತ ನಿಂತಿದ್ದ ಪ್ರಗ್ಯಾ ಕಂಡೇಬಿಟ್ಟರು.

ಅಕ್ಕೋ, ಕರ್ನಾಟಕದಿಂದ ಬಂದೀನಿ… ಲೂಜಾವರ ಸ್ವಾಮೀಜಿ ತಮ್ಮ ಇಂಟರ್‍ವ್ಯೂ ಮಾಡಾಕೆ ಕಳಿಸಿದ್ದಾರೆ.
‘ಓಹ್, ಮೊನ್ನೆನೇ ಅವರ ವ್ಯಾಟ್ಸಪ್ ಬಂದಿತ್ತು, ನಿನ್ನೆ ಇಮೇಲ್ ಕೂಡ ಕಳಿಸಿದ್ದರು… ಬಾರಪ್ಪ ಬಾ’ ಎಂದು ಗೋವಿನ ಹಿಂಭಾಗದ ತುದಿಯಿಂದ ಮುಂದಕ್ಕೆ ಉಜ್ಜತೊಡಗಿದರು.
‘ಅಲ್ಲ ಅಕ್ಕವ್ವ, ನೀವೇನೋ ವ್ಯಾಟ್ಸಪ್, ‘ಮೇಲ್’ ಬಳಸಬಹುದು. ಆದರೆ, ಲೂಜಾವರರು ಬಳಸ್ತಾರಾ?’
‘ಅವ್ರು, ನಾನು ಎಲ್ಲ 1988ರಿಂದಾನೇ ಬಳಸ್ತಾ ಇದೀವಿ…’
‘ಮೋದಿ ಹಂಗೆ ಹೇಳಿದ್ದಕ್ಕೆ ಜನ ನಗ್ತಾ ಅವ್ರೆ ಅಕ್ಕಾ’
‘ದಡ್ಡರು ನೀವೆಲ್ಲ…. ನಮ್ಮ ‘ಮೇಲು’ ಅಂದ್ರೆ ಅದು ಮೇಘ ಸಂದೇಶ… ಮೋಡದ ಮೂಲಕವೇ ಸಂದೇಶ ರವಾನಿಸಿಕೊಳ್ತೀವಿ…ಅದನ್ನು ಬೇರೆಯವರು ನೋಡಾಕಾಗಲ್ಲ…ಮೋಡಗಳ ರಕ್ಷಣೆಯಲ್ಲಿ ಅದು ಹರಿದು ನಮ್ಮವರನ್ನ ತಲುಪುತ್ತೆ’
‘ಅದಿರ್ಲಿ ಅಕ್ಕಾ, ‘ಮೇಲು’ ಬಂದು ಇನ್‍ಬಾಕ್ಸ್‍ಗೆ ಬೀಳ್ತಾವೆ. ಆದ್ರೆ ನಿಮ್ಮ ಮೇಘ ಸಂದೇಶ ಎಲ್ಲಿ ಬೀಳತ್ತೆ? ನಿಮ್ಗೆ, ಲೂಜಾವರರಿಗೆ ಬಕ್ಕಣ (ಕಿಸೆ, ಪಾಕೆಟ್) ಬೇರೆ ಇಲ್ವಲ್ಲ?’
‘ಮೂರ್ಖ. ಆ ಸಂದೇಶಗಳು ಸೀದಾ ಆತ್ಮವನ್ನ ತಲುಪ್ತಾವೆ’
‘ಹಂಗಾದ್ರೆ ನಿಂಗೆ ಶಿಕ್ಷೆ ಆಗಲ್ಲಕ್ಕ… ತನಿಖೆ ಮಾಡೋರಿಗೆ ನಿಮ್ಮ ಮೇಘ ಸಂದೇಶ ಸಿಗೋದೇ ಇಲ್ವಲ್ಲ?’
‘ಇದು ಆಫ್ ದಿ ರೆಕಾರ್ಡ್ ಇರಲಿ..’

‘ಅಕ್ಕಾ ಹಿಂಗ ಉಜುತ್ತೀರಲ್ಲ ಆಕಳ ಬೆನ್ನನ್ನ… ಬಿಪಿ ಕಂಟ್ರೋಲ್‍ಗೆ ಬರೋದು ಆಕಳದ್ದೋ, ನಿಮ್ದೋ ಅಕ್ಕಾ’
‘ಪೆದ್ದ, ಗೋಮಾತೆಗೆ ಬಿಪಿ, ಶುಗರ್ ಬರಲ್ಲ’
‘ನಾ ಬಂದಾಗಿಂದ ನೋಡತಿನಿ, ಉಜ್ತಾನೇ ಇದ್ದೀರಿ… ಸೋಲೋ ಭಯದಲ್ಲಿ ಬಿಪಿ ಏರುಪೇರಾಗಿದೆಯಾ?
‘ಓವರ್ ಆಯ್ತು… ಶಾಪ ಕೊಡ್ಲಾ?’
‘ಬೇಡಕ್ಕೋ, ಸಾರಿ….ಅಕ್ಕಾ ಅಕ್ಕಾ, ಕ್ಯಾನ್ಸರ್ ಔಷಧಿ ಬೀಳ್ತಾ ಇದೆ…. ಒಂದು ಬಾಟಲ್ ಕೊಡಕ್ಕ’
(ಆಕಳು ಒಂದು ಕೊಡದಷ್ಟು ಸೂಸು ಮಾಡಿತು…)
‘ಹೇಯ್, ನಿಂಗೆ ಬೇಕಾದ್ರೆ ಅಲ್ಲಿ ಕರ್ನಾಟಕದಲ್ಲಿ ಸಿಗುತ್ತೆ… ರಾಮ್ದೇವ್ ನನ್ನ ಫಾರ್ಮುಲಾ ಇಟ್ಗೊಂಡು, ಗೋಮೂತ್ರಗಳ ಪಾಕೆಟ್ ಮಾಡಿ ‘ಹೇತಂಜಲಿ’ಯಲ್ಲಿ ಮಾರ್ತಾನೆ…’

‘ಅಕ್ಕಾ ಈ ರೇಡಾರ್ ಬಗ್ಗೆ ನಿಂಗೇನಾದ್ರೂ ಗೊತ್ತಾ ಅಕ್ಕ?’
‘ಚಿಕ್ಕಪ್ಪಯ್ಯ ಹೇಳಿದ್ದನ್ನ ಜೋಕ್ ಮಾಡ್ತೀದಿಯಾ? ಆಫ್ ದಿ ರೆಕಾರ್ಡ್ ಕೇಳು: ನಮ್ಮನ್ನೆಲ್ಲ ಜೈಲಿಗೆ ಹಾಕಿದ್ರಾ… ಅಮಿತಣ್ಣಂಗೂ ಜೈಲು ಕಾದಿತ್ತಾ? ಚಿಕ್ಕಪ್ಪ ಮೋಡ ಸೃಷ್ಟಿಸಿಬಿಟ್ಟ… ಎನ್‍ಐಎ ಕಣ್ಣಿನ ಪೊರೆಗೆ ಈ ಮೋಡ ಅಮರಿಕೊಂಡವು… ಅಸೀಮಾನಂದ ಕಾಕಾ ಅದಕ್ಕೇ ರಿಲೀಸ್ ಆಗಲಿಲ್ವಾ… ನಮ್ಮ ಚಿಕ್ಕಪ್ಪ ಹೇಳಿದ್ದು ನಿಮ್ಗೆ ಅರ್ಥ ಆಗಲ್ಲ…’
(ಪ್ರಗ್ಯಕ್ಕ ಎದೆ ಮೇಲೆ ಕೈ ಇಟ್ಟುಕೊಂಡು ಕಣ್ಣು ಮುಚ್ಚಿಕೊಂಡರು….ಆಕಳು ಅಂಬಾ ಅಂದಿತು…)
‘ಏನಾಯ್ತಕ್ಕಾ, ಎದೆನೋವಾ?’
‘ನೋ ನೋ… ಆತ್ಮಕ್ಕೆ ಮೇಘ ಸಂದೇಶವೊಂದು ಬಂದಿದೆ, ಚಿಕ್ಕಪ್ಪಯ್ಯನ ಕಡೆಯಿಂದ’
‘ಆಯ್ತಕ್ಕ ಇನ್‍ಬಾಕ್ಸ್…. ಸಾರಿ… ಆತ್ಮವ ತೆರೆದು ಮೇಲು ನೋಡು… ಬರ್ಲಾ ಅಕ್ಕಾ…ಒಂದೇ ಒಂದು ಸಲ ಉಜ್ಜಲಾ?’
(ಟೊಣಪನೊಬ್ಬ ಬಂದು ಏ ಎಂದು ಗದರಿಸಿದ)
‘ಉಜ್ಜಲಿ ಬಿಡು…. ಗೋಮಾತೆ ಇರೋದೇ ಉಜ್ಜಲು, ಬಿಪಿ ಕಂಟ್ರೋಲ್ ಮಾಡಿಕೊಳ್ಳಲು…’
ನಮ್ಮ ಠಕ್ಕಣ್ಣ ಆಕಳಿನ ಬೆನ್ನು ಉಜ್ಜುವಾಗ ಮತ್ತೆ ವಿಷಾನಿಲದ ವಾಸನೆ… ಭಯ ಬಿದ್ದವನೇ ಅಲ್ಲಿಂದ ಪರಾರಿಯಾಗಿ ಬಂದಿದ್ದಾನೆ…

ದೇಶದೊಳಗಿನ ‘ಬಾಂಬು’ ಪ್ರಗ್ಯಾ ಎಂಬ ಸಾಧ್ವಿಯೂ… ಸುರಕ್ಷತೆ ಬಗ್ಗೆ ಕುಟ್ಟುತ್ತಲೇ ಇರುವ ಮೋದಿಯೂ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...