Homeಮುಖಪುಟಎಎಪಿ ನಾಯಕನನ್ನು ನಿಂದಿಸಿ, ನಂತರ ಕ್ಷಮೆ ಕೇಳಿದ ಬಿಜೆಪಿ ನಾಯಕ!

ಎಎಪಿ ನಾಯಕನನ್ನು ನಿಂದಿಸಿ, ನಂತರ ಕ್ಷಮೆ ಕೇಳಿದ ಬಿಜೆಪಿ ನಾಯಕ!

- Advertisement -
- Advertisement -

ಎಎಪಿ ಶಾಸಕ ಋತುರಾಜ್ ಝಾ ಅವರ ಉಪನಾಮದ ಬಗ್ಗೆ ವಿವಾದಾತ್ಮಕ ಉಲ್ಲೇಖ ಮಾಡಿದ್ದಕ್ಕಾಗಿ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲ್ಲಾ ಶುಕ್ರವಾರ ಕ್ಷಮೆಯಾಚಿಸಿದ್ದಾರೆ. ಈ ಮೂಲಕ ಬಿಜೆಪಿ ಈ ವಿವಾದವನ್ನು ತಣ್ಣಗೆ ಮಾಡಲು ಪ್ರಯತ್ನಿಸಿದೆ. ಎಎಪಿ ನಾಯಕನನ್ನು ನಿಂದಿಸಿ

ಬುಧವಾರ ದೂರದರ್ಶನ ಸುದ್ದಿ ವಾಹಿನಿಯ ಚರ್ಚೆಯ ಸಂದರ್ಭದಲ್ಲಿ ನಡೆದ ಬಿರುಸಿನ ಚರ್ಚೆಯಲ್ಲಿ, ಬಿಜೆಪಿ ನಾಯಕ ಪೂನವಾಲ್ಲಾ ಅವರು ಎಎಪಿ ನಾಯಕ ಋತುರಾಜ್ ಅವರನ್ನು ಟೀಕಿಸಲು ಅವರ ಉಪನಾಮವನ್ನು ಬಳಸಿದ್ದರು. ಅವರ ಈ ಹೇಳಿಕೆಯನ್ನು ಆಮ್ ಆದ್ಮಿ ಪಕ್ಷ (ಎಎಪಿ) ನಿಂದನೀಯ ಎಂದು ಟೀಕಿಸಿತ್ತು.

ಈ ಹೇಳಿಕೆಗೆಳ ಬಗ್ಗೆ ಪತ್ರಿಕ್ರಿಯಿಸಿರುವ ಪೂನಾವಾಲ್ಲಾ, “ನನ್ನ ಎಲ್ಲಾ ಪೂರ್ವಾಂಚಲಿ ಸಹೋದರ ಸಹೋದರಿಯರಿಗೆ ನಾನು ಕೈಜೋಡಿಸಿ ಕ್ಷಮೆಯಾಚಿಸುತ್ತೇನೆ. ನನ್ನ ಮಾತುಗಳು ಅವರಿಗೆ ನೋವುಂಟು ಮಾಡಿವೆ. ನಾನು ಯಾವುದೇ ಸಮರ್ಥನೆಯನ್ನು ನೀಡಲು ಬಯಸುವುದಿಲ್ಲ” ಎಂದು ಪೂನವಾಲ್ಲಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ. ಎಎಪಿ ನಾಯಕನನ್ನು ನಿಂದಿಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಉತ್ತರ ಪ್ರದೇಶ ಮತ್ತು ಬಿಹಾರದ ಶ್ರಮಜೀವಿ ಜನರ ಬಗ್ಗೆ ತಮಗೆ ಅಪಾರ ಗೌರವವಿದೆ ಎಂದು ಪೂನಾವಾಲ್ಲಾ ಅವರು ವಿಡಿಯೊದಲ್ಲಿ ಹೇಳಿದ್ದಾರೆ.

ಋತುರಾಜ್ ಝಾ ಅವರನ್ನು ಟೀಕಿಸಲು ಪೂನಾವಾಲ್ಲಾ ಅವರು ಉಪನಾಮವನ್ನು ಬಳಸಿದ್ದರು. ಅವರ ಈ ಕೃತ್ಯದ ವಿರುದ್ಧ ಎಎಪಿ ಮಾತ್ರವಲ್ಲದೆ, ಬಿಜೆಪಿಯ ಮಿತ್ರ ಪಕ್ಷವಾದ ಜನತಾದಳ (ಯುನೈಟೆಡ್) ಕೂಡ ಆಕ್ರೋಶ ವ್ಯಕ್ತಪಡಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.

ದೆಹಲಿ ರಾಜಕೀಯ ವಲಯದಲ್ಲಿ, ‘ಪೂರ್ವಾಂಚಲ್’ ಎಂಬುದು ಪೂರ್ವ ಉತ್ತರ ಪ್ರದೇಶ ಮತ್ತು ಬಿಹಾರವನ್ನು ಒಟ್ಟಾಗಿ ಉಲ್ಲೇಖಿಸುವ ಪದವಾಗಿದೆ. ಈ ಪ್ರದೇಶದ ಮತದಾರರು ರಾಷ್ಟ್ರ ರಾಜಧಾನಿ ದೆಹಲಿಯ ನಿರ್ಣಾಯಕ ಮತದಾರರಾಗಿದ್ದು, ಅಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದಾರೆ. ಚುನಾವಣಾ ದೃಷ್ಟಿಯಿಂದ ಈ ಸಮುದಾಯವು ಹೆಚ್ಚು ಪ್ರಭಾವಶಾಲಿಯಾಗಿದೆ.

ದೆಹಲಿಯಲ್ಲಿ ಫೆಬ್ರವರಿ 5 ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಫೆಬ್ರವರಿ 8 ರಂದು ಮತಗಳ ಎಣಿಕೆ ನಡೆಯಲಿದೆ. ಈ ಸ್ಪರ್ಧೆಯನ್ನು 2015 ರಿಂದ ರಾಜಧಾನಿಯಲ್ಲಿ ಅಧಿಕಾರದಲ್ಲಿರುವ ಎಎಪಿ ಮತ್ತು ಬಿಜೆಪಿ ನಡುವೆ ನೇರ ಹೋರಾಟವೆಂದು ಪರಿಗಣಿಸಲಾಗುತ್ತಿದೆ. ಈ ನಡುವೆ ಕಾಂಗ್ರೆಸ್, 2013 ರವರೆಗೆ 15 ವರ್ಷಗಳ ಕಾಲ ನಿರಂತರವಾಗಿ ಆಳಿದ ನಗರವನ್ನು ಮರಳಿ ಪಡೆಯಲು ಶ್ರಮಿಸುತ್ತಿದೆ.

ಇದನ್ನೂಓದಿ:  ಹೇಮಾ ಸಮಿತಿ ವರದಿ ಸಂಬಂಧ 40 ಎಫ್‌ಐಆರ್ ದಾಖಲು : ಹೈಕೋರ್ಟ್‌ಗೆ ತಿಳಿಸಿದ ಕೇರಳ ಸರ್ಕಾರ

ಹೇಮಾ ಸಮಿತಿ ವರದಿ ಸಂಬಂಧ 40 ಎಫ್‌ಐಆರ್ ದಾಖಲು : ಹೈಕೋರ್ಟ್‌ಗೆ ತಿಳಿಸಿದ ಕೇರಳ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...