Homeಮುಖಪುಟಕ್ಷಮೆ ಕೇಳುವುದಿಲ್ಲ, ಅದು ನನ್ನ ಆತ್ಮಸಾಕ್ಷಿಯ ನಿಂದನೆಯಾಗುತ್ತದೆ: ಪ್ರಶಾಂತ್ ಭೂಷಣ್

ಕ್ಷಮೆ ಕೇಳುವುದಿಲ್ಲ, ಅದು ನನ್ನ ಆತ್ಮಸಾಕ್ಷಿಯ ನಿಂದನೆಯಾಗುತ್ತದೆ: ಪ್ರಶಾಂತ್ ಭೂಷಣ್

ಯಾವುದೇ ಕ್ಷಮೆಯಾಚನೆಯು ನ್ಯಾಯಾಲಯವು ಹೇಳಿದಂತೆ ಕೇವಲ ಪ್ರಚೋದನೆಯಾಗಿರಬಾರದು. ಅದು ಪ್ರಾಮಾಣಿಕವಾಗಿರಬೇಕು" ಎಂದು ಭೂಷಣ್ ಹೇಳಿದ್ದಾರೆ.

- Advertisement -
- Advertisement -

ಸುಪ್ರೀಂ ಕೋರ್ಟ್ ಮತ್ತು ಸಿಜೆಐನ ಕಾರ್ಯವೈಖರಿಗೆ ಸಂಬಂಧಿಸಿದ ಟ್ವೀಟ್‌ಗಳ ವಿಚಾರಕ್ಕೆ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ತಾನು ಕ್ಷಮೆ ಕೇಳುವುದಿಲ್ಲ ಎಂದು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಪುನರುಚ್ಚರಿಸಿದ್ದಾರೆ. ಕ್ಷಮೆ ಕೇಳುವುದು ತನ್ನ ಆತ್ಮಸಾಕ್ಷಿಯ ನಿಂದನೆಯಾಗುತ್ತದೆ ಎಂದು ಪ್ರಶಾಂತ್ ಭೂಷಣ್ ಸಾರಿದ್ದಾರೆ.

ಈ ಕುರಿತು ಸುಪ್ರೀಂ ಕೋರ್ಟ್‌ಗೆ ಪೂರಕ ಅಫಿಡವಿಟ್ ಸಲ್ಲಿಸಿರುವ ಅವರು, “ತನ್ನ ಹೇಳಿಕೆಗಳು ನ್ಯಾಯಾಲಯದ “ರಚನಾತ್ಮಕ ವಿಮರ್ಶೆ”ಯಾಗಿದೆ. ಆದ್ದರಿಂದ ಅದನ್ನು ಹಿಂತೆಗೆದುಕೊಳ್ಳುವುದು ‘ಅಪ್ರಾಮಾಣಿಕ ಕ್ಷಮೆಯಾಚನೆ’ಯಾಗುತ್ತದೆ” ಎಂದಿದ್ದಾರೆ.

ನ್ಯಾಯಾಲಯದ ಒಬ್ಬ ಪ್ರತಿನಿಧಿಯಾಗಿ ನ್ಯಾಯಾಂಗ ಸಂಸ್ಥೆಯು ತನ್ನ ಅಸಲಿ ಕಾರ್ಯದಿಂದ ವಿಮುಖವಾಗುತ್ತಿದೆ ಎಂದು ತಿಳಿದಾಗ ಅದರ ಬಗ್ಗೆ ಮಾತನಾಡುವುದು ನನ್ನ ಕರ್ತವ್ಯ ಎಂದು ಅವರು ಒತ್ತಿ ಹೇಳಿದ್ದಾರೆ.

“ನಾನು ಒಳ್ಳೆಯ ಅಭಿಪ್ರಾಯ ವ್ಯಕ್ತಪಡಿಸಿದ್ದೇನೆ ಎಂದು ನಂಬಿದ್ದೇನೆ. ಸುಪ್ರೀಂ ಕೋರ್ಟ್ ಅಥವಾ ಯಾವುದೇ ನಿರ್ದಿಷ್ಟ ಮುಖ್ಯ ನ್ಯಾಯಾಧೀಶರನ್ನು ಕೆಣಕುವಂತೆ ನನ್ನ ಹೇಳಿಕೆಗಳನ್ನು ನೀಡಿಲ್ಲ” ಎಂದು ಅವರು ಹೇಳಿದ್ದಾರೆ.

“ನನ್ನ ಟ್ವೀಟ್‌ಗಳು ನನ್ನ ನಂಬಿಕೆಯನ್ನು ಪ್ರತಿನಿಧಿಸುತ್ತವೆ. ಷರತ್ತುಬದ್ಧ ಅಥವಾ ಬೇಷರತ್ತಾದ ಕ್ಷಮೆಯು ಈ ನಂಬಿಕೆಗಳಿಗೆ ಅಪ್ರಾಮಾಣಿಕ ಎಂದು ಭಾವಿಸುತ್ತೆನೆ. ಯಾವುದೇ ಕ್ಷಮೆಯಾಚನೆಯು ನ್ಯಾಯಾಲಯವು ಹೇಳಿದಂತೆ ಕೇವಲ ಪ್ರಚೋದನೆಯಾಗಿರಬಾರದು. ಅದು ಪ್ರಾಮಾಣಿಕವಾಗಿರಬೇಕು” ಎಂದು ಭೂಷಣ್ ಹೇಳಿದ್ದಾರೆ.

“ಸುಪ್ರೀಂ ಕೋರ್ಟ್ ಮೂಲಭೂತ ಹಕ್ಕುಗಳ ರಕ್ಷಣೆಯ ಕಾವಲು ಸಂಸ್ಥೆ. ಇದು ನಿಜಕ್ಕೂ ಸಾಂವಿಧಾನಿಕ ಪ್ರಜಾಪ್ರಭುತ್ವದ ಭರವಸೆಯ ಕೊನೆಯ ಭದ್ರಕೋಟೆ ಎಂದು ನಾನು ನಂಬುತ್ತೇನೆ. ಇದನ್ನು ಪ್ರಜಾಪ್ರಭುತ್ವ ಜಗತ್ತಿನ ಅತ್ಯಂತ ಶಕ್ತಿಶಾಲಿ ನ್ಯಾಯಾಲಯ ಎಂದು ಕರೆಯಲಾಗುತ್ತದೆ. ಸಾಮಾನ್ಯವಾಗಿ ಜಗತ್ತಿನಾದ್ಯಂತ ನ್ಯಾಯಾಲಯಗಳಿಗೆ ಇದು ಒಂದು ಉದಾಹರಣೆಯಾಗಿದೆ. ಇಂದು ಈ ಸಂಕಷ್ಟದ ಕಾಲದಲ್ಲಿ, ಭಾರತದ ಜನರ ಆಶಯಗಳು ಈ ನ್ಯಾಯಾಲಯದಲ್ಲಿ ಅಭಿವ್ಯಕ್ತವಾಗುವುದನ್ನು ಖಾತ್ರಿಪಡಿಸಿಕೊಳ್ಳಬೇಕೇ ಹೊರತು ಅಧಿಕಾರದ ಅನಿಯಂತ್ರಿತ ನಿಯಮವನ್ನಲ್ಲ” ಎಂದು ಅವರು ಹೇಳಿದ್ದಾರೆ.

ನ್ಯಾಯಪೀಠ ಈ ಹಿಂದೆ ಭೂಷಣ್‌ಗೆ ಕೆಲವು ದಿನಗಳ ಸಮಯ ತೆಗೆದುಕೊಂಡು ಹೇಳಿಕೆಯನ್ನು ಮರುಪರಿಶೀಲಿಸುವಂತೆ ಕೇಳಿಕೊಂಡಿತ್ತು. ಆಗಸ್ಟ್ 25ಕ್ಕೆ ವಿಚಾರಣೆಯನ್ನು ಮುಂದೂಡಿದೆ.


ಇದನ್ನೂ ಓದಿ: ಪ್ರಶಾಂತ್ ಭೂಷಣ್ ಮೇಲಿನ ಸುಪ್ರೀಂಕೋರ್ಟ್ ಕ್ರಮ ಅಸಂವಿಧಾನಿಕ: ನ್ಯಾಯಮೂರ್ತಿ ಕರ್ಣನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...