Homeಕರ್ನಾಟಕನೌಕರರ ಮುಷ್ಕರ ನೆಪವೊಡ್ಡಿ ಬಿಎಂಟಿಸಿ ಖಾಸಗೀಕರಣಗೊಳಿಸುವ ಹುನ್ನಾರ-ಆಪ್ ಆರೋಪ

ನೌಕರರ ಮುಷ್ಕರ ನೆಪವೊಡ್ಡಿ ಬಿಎಂಟಿಸಿ ಖಾಸಗೀಕರಣಗೊಳಿಸುವ ಹುನ್ನಾರ-ಆಪ್ ಆರೋಪ

- Advertisement -
- Advertisement -

ಸಾರಿಗೆ ನೌಕರರ ಮುಷ್ಕರವನ್ನು ನೆಪವಾಗಿಟ್ಟುಕೊಂಡು ಬಿಎಂಟಿಸಿ ಖಾಸಗೀಕರಣಗೊಳಿಸುವ ಹುನ್ನಾರಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಉಪಾಧ್ಯಕ್ಷ ಬಿ.ಟಿ.ನಾಗಣ್ಣ ಆತಂಕ ವ್ಯಕ್ತಪಡಿಸಿದ್ದಾರೆ.

ಏಪ್ರಿಲ್ 7ರಂದು ಸಾರಿಗೆ ನೌಕರರು ತಮ್ಮ 9  ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರವನ್ನು ನಡೆಸಲು ಕರೆ ನೀಡಿದ್ದಾರೆ. ಇದರಿಂದಾಗಿ  ಸಾರ್ವಜನಿಕರಿಗೆ ಆಗುವ ಅನಾನುಕೂಲಗಳನ್ನು ತಡೆಗಟ್ಟುವ  ನೆಪವೊಡ್ಡಿ ಸರ್ಕಾರವು ಬಿಎಂಟಿಸಿಯ ಅನೇಕ ಲಾಭದಾಯಕ ಮಾರ್ಗಗಳನ್ನು ಖಾಸಗಿಯವರಿಗೆ ಹಂಚಲು ಈಗಾಗಲೇ ಅರ್ಜಿಗಳನ್ನು ಆಹ್ವಾನಿಸಿದೆ. ಇದು ನಿಜಕ್ಕೂ ಅತ್ಯಂತ  ಕಳವಳಕಾರಿಯಾದ ಸಂಗತಿ ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಉಪಾಧ್ಯಕ್ಷ ಬಿ.ಟಿ.ನಾಗಣ್ಣ ಆರೋಪಿಸಿದ್ದಾರೆ.

ಸಾರಿಗೆ ಕಾರ್ಮಿಕ ಸಂಘಗಳು ಈಗಾಗಲೇ ಸರ್ಕಾರಕ್ಕೆ ಮುಷ್ಕರದ ನೋಟಿಸ್ ನೀಡಿದ್ದರೂ, ಅವರನ್ನು ಕರೆಸಿ ಮಾತನಾಡದೆ ಸರ್ಕಾರವು  ಬೆಂಗಳೂರು ಮಹಾನಗರ ಸಾರಿಗೆಯ (ಬಿಎಂಟಿಸಿ) ಲಾಭದಾಯಕ ಮಾರ್ಗಗಳನ್ನು ಖಾಸಗಿಯವರಿಗೆ ಮಾರಲು ಅರ್ಜಿಗಳನ್ನು ಕರೆದಿರುವುದು ಸಂಸ್ಥೆಯನ್ನು ಖಾಸಗೀಕರಣಗೊಳಿಸುವ ಹುನ್ನಾರ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ಸರ್ಕಾರದ ಮುಖ್ಯಮಂತ್ರಿಗಳು ಸೇರಿ ಪ್ರಭಾವಿ ಮಂತ್ರಿಗಳು ಈ  ಹುನ್ನಾರಕ್ಕೆ ಕೈ ಹಾಕಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ ಎಂದಿದ್ದಾರೆ.

ವ್ಯತಿರಿಕ್ತವಾಗಿ ಕರ್ನಾಟಕ ರಾಜ್ಯ ಸರ್ಕಾರವು ಸರ್ಕಾರಿ ಸಾರಿಗೆ ಸಂಸ್ಥೆಗಳಲ್ಲಿ ಲಾಭವನ್ನು ಮಾಡುವ ಉದ್ದೇಶದಿಂದ  ಖಾಸಗಿಯವರಿಗೆ ಒಪ್ಪಿಸುತ್ತಿರುವುದು ನಿಜಕ್ಕೂ ಸಂವಿಧಾನ – ಪ್ರಜಾಪ್ರಭುತ್ವ ವಿರೋಧಿ ನಡೆ. ಸರ್ಕಾರದ ಈ ರೀತಿಯ  ನಿಲುವುಗಳಿಂದಾಗಿಪರಿಸರ ಮಾಲಿನ್ಯ, ಸಂಚಾರಿ ನಿರ್ವಹಣೆ ಇನ್ನಿತರ ಯಾವುದೇ ಸಾರ್ಥಕ ಉದ್ದೇಶಗಳು ಈಡೇರುವುದಿಲ್ಲ. ನೂರಾರು ಕೋಟಿ ರೂಪಾಯಿಗಳ  ವ್ಯವಸ್ಥಿತ , ಬೃಹತ್ ಭ್ರಷ್ಟಾಚಾರ ಇದಾಗಿದೆ  ಎಂದು ಆಪ್ ನಾಯಕರು ಟೀಕಿಸಿದ್ದಾರೆ.

ಸಾರಿಗೆ ಇಲಾಖೆಗೆ ಬಿಎಂಟಿಸಿ ನಿರ್ವಹಣೆಯನ್ನು ಮಾಡಲಾಗದಿದ್ದಲ್ಲಿ ಖಾಸಗೀಕರಣಗೊಳಿಸುವ ಬದಲು ಥಾಣೆ ,ಹೊಸ ಮುಂಬೈ , ಬಾಂಬೆ ಮುನ್ಸಿಪಲ್ ಕಾರ್ಪೊರೇಶನ್‌ಗಳು ಈಗಾಗಲೇ ಆ ನಗರಗಳ ಸಾರಿಗೆ ವ್ಯವಸ್ಥೆಯನ್ನು ನಿರ್ವಹಿಸುತ್ತಿವೆ. ಇದೇ ಮಾದರಿಯಲ್ಲಿ ಬೆಂಗಳೂರಿನಲ್ಲಿಯೂ ಬಿಬಿಎಂಪಿಗೆ ಸಾರಿಗೆ ನಿರ್ವಹಣೆ ಜವಾಬ್ದಾರಿಯನ್ನು  ಒಪ್ಪಿಸುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬಿಎಂಟಿಸಿ ಖಾಸಗೀಕರಣಗೊಳಿಸುವ ಬಗ್ಗೆ ಸಹಮತ ವ್ಯಕ್ತಪಡಿಸಿ ಸಂಸದ ತೇಜಸ್ವಿ ಸೂರ್ಯ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಹಲವು ಟ್ರೋಲ್‌ಗಳಿಗೆ ಆಹಾರವಾಗಿದೆ.


ಇದನ್ನೂ ಓದಿ: ‘ಆಕೆ’ ವಿಜಯ್ ಮಲ್ಯನೋ ಇಲ್ಲ ನೀರವ್ ಮೋದಿಯೋ? – ಸಿಡಿ ಪ್ರಕರಣದ ಕುರಿತು ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...