Homeಮುಖಪುಟಅದಾನಿ ಆಳ್ವಿಕೆ: ಹಿಮಾಚಲ ಪ್ರದೇಶದ ಸೇಬು ಬೆಳೆಗಾರರು ತತ್ತರ!

ಅದಾನಿ ಆಳ್ವಿಕೆ: ಹಿಮಾಚಲ ಪ್ರದೇಶದ ಸೇಬು ಬೆಳೆಗಾರರು ತತ್ತರ!

ಕಾರ್ಪೊರೇಟ್‌ ಶಕ್ತಿಗಳು ಕೃಷಿ ಮೇಲೆ ಹಿಡಿತ ಸಾಧಿಸಲು ಆರಂಭಿಸಿದ್ದು, ಹಿಮಾಚಲ ಪ್ರದೇಶದ ಸೇಬು ಬೆಳೆಗಾರರು ತೊಂದರೆಗೆ ಸಿಲುಕಿದ್ದಾರೆ.

- Advertisement -
- Advertisement -

ಮೂರು ರೈತ ವಿರೋಧಿ ಕೃಷಿ ಕಾಯ್ದೆಗಳ ವಿರುದ್ಧ ರೈತರು ಹೋರಾಟ ಮುಂದುವರಿಸಿದ್ದಾರೆ. ಈ ಕಾಯ್ದೆಗಳ ಪರಿಣಾಮ ಈಗಾಗಲೇ ಬೀರಲಾರಂಭಿಸಿದೆ. ಕಾರ್ಪೊರೇಟ್‌ ಶಕ್ತಿಗಳು ಕೃಷಿ ಮೇಲೆ ಹಿಡಿತ ಸಾಧಿಸಲು ಆರಂಭಿಸಿದ್ದು, ಹಿಮಾಚಲ ಪ್ರದೇಶದ ಸೇಬು ಬೆಳೆಗಾರರು ತೊಂದರೆಗೆ ಸಿಲುಕಿದ್ದಾರೆ.

ಬಂಡವಾಳಶಾಹಿಗಳ ಬದಲು ಸರ್ಕಾರವೇ ಕೋಲ್ಡ್ ಸ್ಟೋರೇಜ್‌ ಸ್ಥಾಪಿಸಬೇಕು ಎಂದು ಸೇಬು ಬೆಳೆಗಾರರು ಒತ್ತಾಯಿಸುತ್ತಿದ್ದಾರೆ. ಮುಕ್ತ ಆರ್ಥಿಕ ನೀತಿಯಿಂದ ರೈತರಿಗೆ ಅನುಕೂಲವಾಗುತ್ತದೆ ಎಂದು ಸರ್ಕಾರ ಹೇಳುತ್ತಿದ್ದರೆ, ಮತ್ತೊಂದೆಡೆ ಹಿಮಾಚಲ ಪ್ರದೇಶದ ಪ್ರಮುಖ ಬೆಳೆಯಾದ ಸೇಬುವಿನ ಮೇಲೆ ದುಷ್ಪರಿಣಾಮ ಬೀರಲಾರಂಭಿಸಿದೆ.

ಈ ಗುಡ್ಡಗಾಡು ರಾಜ್ಯದಲ್ಲಿ ಮುಕ್ತ ಮಾರುಕಟ್ಟೆ ಮಾದರಿಯಲ್ಲಿ ಸುಮಾರು ಐದು ಸಾವಿರ ಕೋಟಿ ರೂ. ಸೇಬು ವ್ಯವಹಾರ ನಡೆಯುತ್ತಿದೆ. ಆದರೆ ಸೇಬು ಮಾರುಕಟ್ಟೆಗೆ ಅದಾನಿ ಗ್ರೂಪ್‌ ಕಾಲಿಟ್ಟ ಮೇಲೆ ದೊಡ್ಡ ಮಟ್ಟದ ಹಿನ್ನೆಡೆಯಾಗಿದೆ. ಒಂದು ಕೆ.ಜಿ. ಎ ಗ್ರೇಡ್‌ ಪ್ರೀಮಿಯಮ್‌ ಸೇಬಿಗೆ ಕಳೆದ ವರ್ಷ 88 ರೂ.ಗಳನ್ನು ಪಡೆಯುತ್ತಿದ್ದ ರೈತರು, ಈಗ 72 ರೂಪಾಯಿ ಪಡೆಯುವಂತಾಗಿದೆ.

ವಿವಾದಾತ್ಮಕ ಕೃಷಿ ಕಾಯ್ದೆಗಳ ಮೂಲಕ ಕೃಷಿ ಮಾರುಕಟ್ಟೆಯ ಮೇಲೆ ಬಂಡವಾಳಶಾಹಿಗಳ ಏಕಸ್ವಾಮ್ಯತ್ವಕ್ಕೆ ಕೇಂದ್ರ ಸರ್ಕಾರ ಅವಕಾಶ ನೀಡಿದ್ದರಿಂದ ಪಂಜಾಬ್‌ ಮತ್ತು ಹರಿಯಾಣದಲ್ಲಿ ಅದಾನಿ ಆಸ್ತಿಗಳಿಗೆ ರೈತರು ಮುತ್ತಿಗೆ ಹಾಕಿದ್ದಾರೆ. ಈಗ ಹಿಮಾಚಲ ಪ್ರದೇಶದ ಸೇಬು ಬೆಳೆಗಾರರು, “ಅದಾನಿಯವರ ಕಾರ್ಯವೈಖರಿ ಹಾನಿಕಾರಕವಾಗಿದೆ” ಎನ್ನುತ್ತಿದ್ದಾರೆ.

ರೋಹ್ರು ಮೂಲದ ‘ಹಿಮಾಲಯನ್‌ ಸಮುದಾಯಕ್ಕಾಗಿ ತೋಟಗಾರಿಕೆ ಮತ್ತು ಕೃಷಿ ಅಭಿವೃದ್ಧಿ’ ಸರ್ಕಾರೇತರ ಸಂಸ್ಥೆಯ ಅಧ್ಯಕ್ಷ ಡಿಂಪ್ಲೆ ಪಂಜ್ಟ ಅವರು ‘ದಿ ವೈರ್‌’ ಜಾಲತಾಣಕ್ಕೆ ಪ್ರತಿಕ್ರಿಯಿಸಿದ್ದು, “2011ರಲ್ಲಿ ಅದಾನಿ ಕಂಪನಿಯವರು ಎ ಗ್ರೇಡ್‌ ಗುಣಮಟ್ಟದ ಸೇಬಿಗೆ 65 ರೂಪಾಯಿಗಳನ್ನು ನೀಡುತ್ತಿದ್ದರು. ಒಂದು ದಶಕದ ನಂತರದಲ್ಲಿ ಅವರು 7 ರೂ.ಗಿಂತ ಹೆಚ್ಚು ನೀಡುತ್ತಿಲ್ಲ” ಎಂದಿದ್ದಾರೆ.

“ನಾವು ಅಷ್ಟಕ್ಕೆ ಮಾತ್ರ ಅರ್ಹರಾಗಿದ್ದೇವೆ. ದಿನದಿಂದ ದಿನಕ್ಕೆ ಉತ್ಪಾದನಾ ವೆಚ್ಚದಿಂದ ರೈತರು ಕುಗ್ಗುತ್ತಿರುವಾಗ ಸರ್ಕಾರದ ಸಹಕಾರದಿಂದ ಬಂದ ಕಂಪೆನಿಯು, ನಿರಂತರವಾಗಿ ಖರೀದಿ ಬೆಲೆಯನ್ನು ಕಡಿಮೆ ಮಾಡುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ ಪಂಜ್ಟ.

“ಪ್ಯಾಕೇಜಿಂಗ್‌ ವೆಚ್ಚವನ್ನೂ ಸೇರಿದಂತೆ ಒಂದು ಬಾಕ್ಸ್‌ಗೆ 250 ರೂ.ಗಳು ಉತ್ಪಾದನಾ ವೆಚ್ಚ ರೈತರಿಗೆ ತಗುಲುತ್ತಿತ್ತು. ಈಗ ಉತ್ಪಾದನಾ ವೆಚ್ಚ 600 ರೂ.ಗಳಾಗಿದೆ. ಆದರೆ ಹಿಂತಿರುಗುವ ಹಣ ಮಾತ್ರ ದಶಕದ ಹಿಂದೆ ಇದ್ದಷ್ಟೇ ಈಗಲೂ ಇದೆ” ಎನ್ನುತ್ತಾರೆ ಅವರು.

ಮತ್ತೊಂದು ಸಮಸ್ಯೆಯೇನೆಂದರೆ ಅದಾನಿ ಗುಂಪಿನವರು ಒಂದು ಸೀಸನ್‌ನಲ್ಲಿ ಒಂಬತ್ತು ಅಥವಾ ಹತ್ತು ಲಕ್ಷ ಬಾಕ್ಸ್‌‌ (ಒಂದು ಬಾಕ್ಸ್‌ನಲ್ಲಿ 25 ಕೆ.ಜಿ. ಸೇಬುಗಳು ಇರುತ್ತವೆ) ಕೊಳ್ಳುತ್ತಾರಷ್ಟೇ. ಇದು ರಾಜ್ಯದ ಒಟ್ಟು ಸೇಬು ಉತ್ಪಾದನೆಯಲ್ಲಿ ಶೇ. 3-4ರಷ್ಟು ಉತ್ಪನ್ನವನ್ನೂ ಮೀರುವುದಿಲ್ಲ. ಅದಾನಿ ಕಂಪನಿಯು ಮಾರುಕಟ್ಟೆಯನ್ನೂ ಅಸ್ಥಿರಗೊಳಿಸುತ್ತಿದೆ ಎಂದು ಆತಂಕ ವ್ಯಕ್ತಪಡಿಸುತ್ತಾರೆ ಪಂಜ್ಟ.

ಕೃಪೆ: ದಿ ವೈರ್‌‍


ಇದನ್ನೂ ಓದಿ: ಗುಜರಾತ್‌ನಲ್ಲಿ ಹೆರಾಯಿನ್ ವಶ: ಮೋದಿ ಮಿತ್ರ ಅದಾನಿಯ ಪಾತ್ರದ ಬಗ್ಗೆ ತನಿಖೆ ಏಕಿಲ್ಲ?- ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...