Homeಮುಖಪುಟಅದಾನಿ ಆಳ್ವಿಕೆ: ಹಿಮಾಚಲ ಪ್ರದೇಶದ ಸೇಬು ಬೆಳೆಗಾರರು ತತ್ತರ!

ಅದಾನಿ ಆಳ್ವಿಕೆ: ಹಿಮಾಚಲ ಪ್ರದೇಶದ ಸೇಬು ಬೆಳೆಗಾರರು ತತ್ತರ!

ಕಾರ್ಪೊರೇಟ್‌ ಶಕ್ತಿಗಳು ಕೃಷಿ ಮೇಲೆ ಹಿಡಿತ ಸಾಧಿಸಲು ಆರಂಭಿಸಿದ್ದು, ಹಿಮಾಚಲ ಪ್ರದೇಶದ ಸೇಬು ಬೆಳೆಗಾರರು ತೊಂದರೆಗೆ ಸಿಲುಕಿದ್ದಾರೆ.

- Advertisement -
- Advertisement -

ಮೂರು ರೈತ ವಿರೋಧಿ ಕೃಷಿ ಕಾಯ್ದೆಗಳ ವಿರುದ್ಧ ರೈತರು ಹೋರಾಟ ಮುಂದುವರಿಸಿದ್ದಾರೆ. ಈ ಕಾಯ್ದೆಗಳ ಪರಿಣಾಮ ಈಗಾಗಲೇ ಬೀರಲಾರಂಭಿಸಿದೆ. ಕಾರ್ಪೊರೇಟ್‌ ಶಕ್ತಿಗಳು ಕೃಷಿ ಮೇಲೆ ಹಿಡಿತ ಸಾಧಿಸಲು ಆರಂಭಿಸಿದ್ದು, ಹಿಮಾಚಲ ಪ್ರದೇಶದ ಸೇಬು ಬೆಳೆಗಾರರು ತೊಂದರೆಗೆ ಸಿಲುಕಿದ್ದಾರೆ.

ಬಂಡವಾಳಶಾಹಿಗಳ ಬದಲು ಸರ್ಕಾರವೇ ಕೋಲ್ಡ್ ಸ್ಟೋರೇಜ್‌ ಸ್ಥಾಪಿಸಬೇಕು ಎಂದು ಸೇಬು ಬೆಳೆಗಾರರು ಒತ್ತಾಯಿಸುತ್ತಿದ್ದಾರೆ. ಮುಕ್ತ ಆರ್ಥಿಕ ನೀತಿಯಿಂದ ರೈತರಿಗೆ ಅನುಕೂಲವಾಗುತ್ತದೆ ಎಂದು ಸರ್ಕಾರ ಹೇಳುತ್ತಿದ್ದರೆ, ಮತ್ತೊಂದೆಡೆ ಹಿಮಾಚಲ ಪ್ರದೇಶದ ಪ್ರಮುಖ ಬೆಳೆಯಾದ ಸೇಬುವಿನ ಮೇಲೆ ದುಷ್ಪರಿಣಾಮ ಬೀರಲಾರಂಭಿಸಿದೆ.

ಈ ಗುಡ್ಡಗಾಡು ರಾಜ್ಯದಲ್ಲಿ ಮುಕ್ತ ಮಾರುಕಟ್ಟೆ ಮಾದರಿಯಲ್ಲಿ ಸುಮಾರು ಐದು ಸಾವಿರ ಕೋಟಿ ರೂ. ಸೇಬು ವ್ಯವಹಾರ ನಡೆಯುತ್ತಿದೆ. ಆದರೆ ಸೇಬು ಮಾರುಕಟ್ಟೆಗೆ ಅದಾನಿ ಗ್ರೂಪ್‌ ಕಾಲಿಟ್ಟ ಮೇಲೆ ದೊಡ್ಡ ಮಟ್ಟದ ಹಿನ್ನೆಡೆಯಾಗಿದೆ. ಒಂದು ಕೆ.ಜಿ. ಎ ಗ್ರೇಡ್‌ ಪ್ರೀಮಿಯಮ್‌ ಸೇಬಿಗೆ ಕಳೆದ ವರ್ಷ 88 ರೂ.ಗಳನ್ನು ಪಡೆಯುತ್ತಿದ್ದ ರೈತರು, ಈಗ 72 ರೂಪಾಯಿ ಪಡೆಯುವಂತಾಗಿದೆ.

ವಿವಾದಾತ್ಮಕ ಕೃಷಿ ಕಾಯ್ದೆಗಳ ಮೂಲಕ ಕೃಷಿ ಮಾರುಕಟ್ಟೆಯ ಮೇಲೆ ಬಂಡವಾಳಶಾಹಿಗಳ ಏಕಸ್ವಾಮ್ಯತ್ವಕ್ಕೆ ಕೇಂದ್ರ ಸರ್ಕಾರ ಅವಕಾಶ ನೀಡಿದ್ದರಿಂದ ಪಂಜಾಬ್‌ ಮತ್ತು ಹರಿಯಾಣದಲ್ಲಿ ಅದಾನಿ ಆಸ್ತಿಗಳಿಗೆ ರೈತರು ಮುತ್ತಿಗೆ ಹಾಕಿದ್ದಾರೆ. ಈಗ ಹಿಮಾಚಲ ಪ್ರದೇಶದ ಸೇಬು ಬೆಳೆಗಾರರು, “ಅದಾನಿಯವರ ಕಾರ್ಯವೈಖರಿ ಹಾನಿಕಾರಕವಾಗಿದೆ” ಎನ್ನುತ್ತಿದ್ದಾರೆ.

ರೋಹ್ರು ಮೂಲದ ‘ಹಿಮಾಲಯನ್‌ ಸಮುದಾಯಕ್ಕಾಗಿ ತೋಟಗಾರಿಕೆ ಮತ್ತು ಕೃಷಿ ಅಭಿವೃದ್ಧಿ’ ಸರ್ಕಾರೇತರ ಸಂಸ್ಥೆಯ ಅಧ್ಯಕ್ಷ ಡಿಂಪ್ಲೆ ಪಂಜ್ಟ ಅವರು ‘ದಿ ವೈರ್‌’ ಜಾಲತಾಣಕ್ಕೆ ಪ್ರತಿಕ್ರಿಯಿಸಿದ್ದು, “2011ರಲ್ಲಿ ಅದಾನಿ ಕಂಪನಿಯವರು ಎ ಗ್ರೇಡ್‌ ಗುಣಮಟ್ಟದ ಸೇಬಿಗೆ 65 ರೂಪಾಯಿಗಳನ್ನು ನೀಡುತ್ತಿದ್ದರು. ಒಂದು ದಶಕದ ನಂತರದಲ್ಲಿ ಅವರು 7 ರೂ.ಗಿಂತ ಹೆಚ್ಚು ನೀಡುತ್ತಿಲ್ಲ” ಎಂದಿದ್ದಾರೆ.

“ನಾವು ಅಷ್ಟಕ್ಕೆ ಮಾತ್ರ ಅರ್ಹರಾಗಿದ್ದೇವೆ. ದಿನದಿಂದ ದಿನಕ್ಕೆ ಉತ್ಪಾದನಾ ವೆಚ್ಚದಿಂದ ರೈತರು ಕುಗ್ಗುತ್ತಿರುವಾಗ ಸರ್ಕಾರದ ಸಹಕಾರದಿಂದ ಬಂದ ಕಂಪೆನಿಯು, ನಿರಂತರವಾಗಿ ಖರೀದಿ ಬೆಲೆಯನ್ನು ಕಡಿಮೆ ಮಾಡುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ ಪಂಜ್ಟ.

“ಪ್ಯಾಕೇಜಿಂಗ್‌ ವೆಚ್ಚವನ್ನೂ ಸೇರಿದಂತೆ ಒಂದು ಬಾಕ್ಸ್‌ಗೆ 250 ರೂ.ಗಳು ಉತ್ಪಾದನಾ ವೆಚ್ಚ ರೈತರಿಗೆ ತಗುಲುತ್ತಿತ್ತು. ಈಗ ಉತ್ಪಾದನಾ ವೆಚ್ಚ 600 ರೂ.ಗಳಾಗಿದೆ. ಆದರೆ ಹಿಂತಿರುಗುವ ಹಣ ಮಾತ್ರ ದಶಕದ ಹಿಂದೆ ಇದ್ದಷ್ಟೇ ಈಗಲೂ ಇದೆ” ಎನ್ನುತ್ತಾರೆ ಅವರು.

ಮತ್ತೊಂದು ಸಮಸ್ಯೆಯೇನೆಂದರೆ ಅದಾನಿ ಗುಂಪಿನವರು ಒಂದು ಸೀಸನ್‌ನಲ್ಲಿ ಒಂಬತ್ತು ಅಥವಾ ಹತ್ತು ಲಕ್ಷ ಬಾಕ್ಸ್‌‌ (ಒಂದು ಬಾಕ್ಸ್‌ನಲ್ಲಿ 25 ಕೆ.ಜಿ. ಸೇಬುಗಳು ಇರುತ್ತವೆ) ಕೊಳ್ಳುತ್ತಾರಷ್ಟೇ. ಇದು ರಾಜ್ಯದ ಒಟ್ಟು ಸೇಬು ಉತ್ಪಾದನೆಯಲ್ಲಿ ಶೇ. 3-4ರಷ್ಟು ಉತ್ಪನ್ನವನ್ನೂ ಮೀರುವುದಿಲ್ಲ. ಅದಾನಿ ಕಂಪನಿಯು ಮಾರುಕಟ್ಟೆಯನ್ನೂ ಅಸ್ಥಿರಗೊಳಿಸುತ್ತಿದೆ ಎಂದು ಆತಂಕ ವ್ಯಕ್ತಪಡಿಸುತ್ತಾರೆ ಪಂಜ್ಟ.

ಕೃಪೆ: ದಿ ವೈರ್‌‍


ಇದನ್ನೂ ಓದಿ: ಗುಜರಾತ್‌ನಲ್ಲಿ ಹೆರಾಯಿನ್ ವಶ: ಮೋದಿ ಮಿತ್ರ ಅದಾನಿಯ ಪಾತ್ರದ ಬಗ್ಗೆ ತನಿಖೆ ಏಕಿಲ್ಲ?- ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...