Homeಮುಖಪುಟಅದಾನಿ ಆಳ್ವಿಕೆ: ಹಿಮಾಚಲ ಪ್ರದೇಶದ ಸೇಬು ಬೆಳೆಗಾರರು ತತ್ತರ!

ಅದಾನಿ ಆಳ್ವಿಕೆ: ಹಿಮಾಚಲ ಪ್ರದೇಶದ ಸೇಬು ಬೆಳೆಗಾರರು ತತ್ತರ!

ಕಾರ್ಪೊರೇಟ್‌ ಶಕ್ತಿಗಳು ಕೃಷಿ ಮೇಲೆ ಹಿಡಿತ ಸಾಧಿಸಲು ಆರಂಭಿಸಿದ್ದು, ಹಿಮಾಚಲ ಪ್ರದೇಶದ ಸೇಬು ಬೆಳೆಗಾರರು ತೊಂದರೆಗೆ ಸಿಲುಕಿದ್ದಾರೆ.

- Advertisement -
- Advertisement -

ಮೂರು ರೈತ ವಿರೋಧಿ ಕೃಷಿ ಕಾಯ್ದೆಗಳ ವಿರುದ್ಧ ರೈತರು ಹೋರಾಟ ಮುಂದುವರಿಸಿದ್ದಾರೆ. ಈ ಕಾಯ್ದೆಗಳ ಪರಿಣಾಮ ಈಗಾಗಲೇ ಬೀರಲಾರಂಭಿಸಿದೆ. ಕಾರ್ಪೊರೇಟ್‌ ಶಕ್ತಿಗಳು ಕೃಷಿ ಮೇಲೆ ಹಿಡಿತ ಸಾಧಿಸಲು ಆರಂಭಿಸಿದ್ದು, ಹಿಮಾಚಲ ಪ್ರದೇಶದ ಸೇಬು ಬೆಳೆಗಾರರು ತೊಂದರೆಗೆ ಸಿಲುಕಿದ್ದಾರೆ.

ಬಂಡವಾಳಶಾಹಿಗಳ ಬದಲು ಸರ್ಕಾರವೇ ಕೋಲ್ಡ್ ಸ್ಟೋರೇಜ್‌ ಸ್ಥಾಪಿಸಬೇಕು ಎಂದು ಸೇಬು ಬೆಳೆಗಾರರು ಒತ್ತಾಯಿಸುತ್ತಿದ್ದಾರೆ. ಮುಕ್ತ ಆರ್ಥಿಕ ನೀತಿಯಿಂದ ರೈತರಿಗೆ ಅನುಕೂಲವಾಗುತ್ತದೆ ಎಂದು ಸರ್ಕಾರ ಹೇಳುತ್ತಿದ್ದರೆ, ಮತ್ತೊಂದೆಡೆ ಹಿಮಾಚಲ ಪ್ರದೇಶದ ಪ್ರಮುಖ ಬೆಳೆಯಾದ ಸೇಬುವಿನ ಮೇಲೆ ದುಷ್ಪರಿಣಾಮ ಬೀರಲಾರಂಭಿಸಿದೆ.

ಈ ಗುಡ್ಡಗಾಡು ರಾಜ್ಯದಲ್ಲಿ ಮುಕ್ತ ಮಾರುಕಟ್ಟೆ ಮಾದರಿಯಲ್ಲಿ ಸುಮಾರು ಐದು ಸಾವಿರ ಕೋಟಿ ರೂ. ಸೇಬು ವ್ಯವಹಾರ ನಡೆಯುತ್ತಿದೆ. ಆದರೆ ಸೇಬು ಮಾರುಕಟ್ಟೆಗೆ ಅದಾನಿ ಗ್ರೂಪ್‌ ಕಾಲಿಟ್ಟ ಮೇಲೆ ದೊಡ್ಡ ಮಟ್ಟದ ಹಿನ್ನೆಡೆಯಾಗಿದೆ. ಒಂದು ಕೆ.ಜಿ. ಎ ಗ್ರೇಡ್‌ ಪ್ರೀಮಿಯಮ್‌ ಸೇಬಿಗೆ ಕಳೆದ ವರ್ಷ 88 ರೂ.ಗಳನ್ನು ಪಡೆಯುತ್ತಿದ್ದ ರೈತರು, ಈಗ 72 ರೂಪಾಯಿ ಪಡೆಯುವಂತಾಗಿದೆ.

ವಿವಾದಾತ್ಮಕ ಕೃಷಿ ಕಾಯ್ದೆಗಳ ಮೂಲಕ ಕೃಷಿ ಮಾರುಕಟ್ಟೆಯ ಮೇಲೆ ಬಂಡವಾಳಶಾಹಿಗಳ ಏಕಸ್ವಾಮ್ಯತ್ವಕ್ಕೆ ಕೇಂದ್ರ ಸರ್ಕಾರ ಅವಕಾಶ ನೀಡಿದ್ದರಿಂದ ಪಂಜಾಬ್‌ ಮತ್ತು ಹರಿಯಾಣದಲ್ಲಿ ಅದಾನಿ ಆಸ್ತಿಗಳಿಗೆ ರೈತರು ಮುತ್ತಿಗೆ ಹಾಕಿದ್ದಾರೆ. ಈಗ ಹಿಮಾಚಲ ಪ್ರದೇಶದ ಸೇಬು ಬೆಳೆಗಾರರು, “ಅದಾನಿಯವರ ಕಾರ್ಯವೈಖರಿ ಹಾನಿಕಾರಕವಾಗಿದೆ” ಎನ್ನುತ್ತಿದ್ದಾರೆ.

ರೋಹ್ರು ಮೂಲದ ‘ಹಿಮಾಲಯನ್‌ ಸಮುದಾಯಕ್ಕಾಗಿ ತೋಟಗಾರಿಕೆ ಮತ್ತು ಕೃಷಿ ಅಭಿವೃದ್ಧಿ’ ಸರ್ಕಾರೇತರ ಸಂಸ್ಥೆಯ ಅಧ್ಯಕ್ಷ ಡಿಂಪ್ಲೆ ಪಂಜ್ಟ ಅವರು ‘ದಿ ವೈರ್‌’ ಜಾಲತಾಣಕ್ಕೆ ಪ್ರತಿಕ್ರಿಯಿಸಿದ್ದು, “2011ರಲ್ಲಿ ಅದಾನಿ ಕಂಪನಿಯವರು ಎ ಗ್ರೇಡ್‌ ಗುಣಮಟ್ಟದ ಸೇಬಿಗೆ 65 ರೂಪಾಯಿಗಳನ್ನು ನೀಡುತ್ತಿದ್ದರು. ಒಂದು ದಶಕದ ನಂತರದಲ್ಲಿ ಅವರು 7 ರೂ.ಗಿಂತ ಹೆಚ್ಚು ನೀಡುತ್ತಿಲ್ಲ” ಎಂದಿದ್ದಾರೆ.

“ನಾವು ಅಷ್ಟಕ್ಕೆ ಮಾತ್ರ ಅರ್ಹರಾಗಿದ್ದೇವೆ. ದಿನದಿಂದ ದಿನಕ್ಕೆ ಉತ್ಪಾದನಾ ವೆಚ್ಚದಿಂದ ರೈತರು ಕುಗ್ಗುತ್ತಿರುವಾಗ ಸರ್ಕಾರದ ಸಹಕಾರದಿಂದ ಬಂದ ಕಂಪೆನಿಯು, ನಿರಂತರವಾಗಿ ಖರೀದಿ ಬೆಲೆಯನ್ನು ಕಡಿಮೆ ಮಾಡುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ ಪಂಜ್ಟ.

“ಪ್ಯಾಕೇಜಿಂಗ್‌ ವೆಚ್ಚವನ್ನೂ ಸೇರಿದಂತೆ ಒಂದು ಬಾಕ್ಸ್‌ಗೆ 250 ರೂ.ಗಳು ಉತ್ಪಾದನಾ ವೆಚ್ಚ ರೈತರಿಗೆ ತಗುಲುತ್ತಿತ್ತು. ಈಗ ಉತ್ಪಾದನಾ ವೆಚ್ಚ 600 ರೂ.ಗಳಾಗಿದೆ. ಆದರೆ ಹಿಂತಿರುಗುವ ಹಣ ಮಾತ್ರ ದಶಕದ ಹಿಂದೆ ಇದ್ದಷ್ಟೇ ಈಗಲೂ ಇದೆ” ಎನ್ನುತ್ತಾರೆ ಅವರು.

ಮತ್ತೊಂದು ಸಮಸ್ಯೆಯೇನೆಂದರೆ ಅದಾನಿ ಗುಂಪಿನವರು ಒಂದು ಸೀಸನ್‌ನಲ್ಲಿ ಒಂಬತ್ತು ಅಥವಾ ಹತ್ತು ಲಕ್ಷ ಬಾಕ್ಸ್‌‌ (ಒಂದು ಬಾಕ್ಸ್‌ನಲ್ಲಿ 25 ಕೆ.ಜಿ. ಸೇಬುಗಳು ಇರುತ್ತವೆ) ಕೊಳ್ಳುತ್ತಾರಷ್ಟೇ. ಇದು ರಾಜ್ಯದ ಒಟ್ಟು ಸೇಬು ಉತ್ಪಾದನೆಯಲ್ಲಿ ಶೇ. 3-4ರಷ್ಟು ಉತ್ಪನ್ನವನ್ನೂ ಮೀರುವುದಿಲ್ಲ. ಅದಾನಿ ಕಂಪನಿಯು ಮಾರುಕಟ್ಟೆಯನ್ನೂ ಅಸ್ಥಿರಗೊಳಿಸುತ್ತಿದೆ ಎಂದು ಆತಂಕ ವ್ಯಕ್ತಪಡಿಸುತ್ತಾರೆ ಪಂಜ್ಟ.

ಕೃಪೆ: ದಿ ವೈರ್‌‍


ಇದನ್ನೂ ಓದಿ: ಗುಜರಾತ್‌ನಲ್ಲಿ ಹೆರಾಯಿನ್ ವಶ: ಮೋದಿ ಮಿತ್ರ ಅದಾನಿಯ ಪಾತ್ರದ ಬಗ್ಗೆ ತನಿಖೆ ಏಕಿಲ್ಲ?- ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...