Homeಮುಖಪುಟಅದಾನಿ ಆಳ್ವಿಕೆ: ಹಿಮಾಚಲ ಪ್ರದೇಶದ ಸೇಬು ಬೆಳೆಗಾರರು ತತ್ತರ!

ಅದಾನಿ ಆಳ್ವಿಕೆ: ಹಿಮಾಚಲ ಪ್ರದೇಶದ ಸೇಬು ಬೆಳೆಗಾರರು ತತ್ತರ!

ಕಾರ್ಪೊರೇಟ್‌ ಶಕ್ತಿಗಳು ಕೃಷಿ ಮೇಲೆ ಹಿಡಿತ ಸಾಧಿಸಲು ಆರಂಭಿಸಿದ್ದು, ಹಿಮಾಚಲ ಪ್ರದೇಶದ ಸೇಬು ಬೆಳೆಗಾರರು ತೊಂದರೆಗೆ ಸಿಲುಕಿದ್ದಾರೆ.

- Advertisement -
- Advertisement -

ಮೂರು ರೈತ ವಿರೋಧಿ ಕೃಷಿ ಕಾಯ್ದೆಗಳ ವಿರುದ್ಧ ರೈತರು ಹೋರಾಟ ಮುಂದುವರಿಸಿದ್ದಾರೆ. ಈ ಕಾಯ್ದೆಗಳ ಪರಿಣಾಮ ಈಗಾಗಲೇ ಬೀರಲಾರಂಭಿಸಿದೆ. ಕಾರ್ಪೊರೇಟ್‌ ಶಕ್ತಿಗಳು ಕೃಷಿ ಮೇಲೆ ಹಿಡಿತ ಸಾಧಿಸಲು ಆರಂಭಿಸಿದ್ದು, ಹಿಮಾಚಲ ಪ್ರದೇಶದ ಸೇಬು ಬೆಳೆಗಾರರು ತೊಂದರೆಗೆ ಸಿಲುಕಿದ್ದಾರೆ.

ಬಂಡವಾಳಶಾಹಿಗಳ ಬದಲು ಸರ್ಕಾರವೇ ಕೋಲ್ಡ್ ಸ್ಟೋರೇಜ್‌ ಸ್ಥಾಪಿಸಬೇಕು ಎಂದು ಸೇಬು ಬೆಳೆಗಾರರು ಒತ್ತಾಯಿಸುತ್ತಿದ್ದಾರೆ. ಮುಕ್ತ ಆರ್ಥಿಕ ನೀತಿಯಿಂದ ರೈತರಿಗೆ ಅನುಕೂಲವಾಗುತ್ತದೆ ಎಂದು ಸರ್ಕಾರ ಹೇಳುತ್ತಿದ್ದರೆ, ಮತ್ತೊಂದೆಡೆ ಹಿಮಾಚಲ ಪ್ರದೇಶದ ಪ್ರಮುಖ ಬೆಳೆಯಾದ ಸೇಬುವಿನ ಮೇಲೆ ದುಷ್ಪರಿಣಾಮ ಬೀರಲಾರಂಭಿಸಿದೆ.

ಈ ಗುಡ್ಡಗಾಡು ರಾಜ್ಯದಲ್ಲಿ ಮುಕ್ತ ಮಾರುಕಟ್ಟೆ ಮಾದರಿಯಲ್ಲಿ ಸುಮಾರು ಐದು ಸಾವಿರ ಕೋಟಿ ರೂ. ಸೇಬು ವ್ಯವಹಾರ ನಡೆಯುತ್ತಿದೆ. ಆದರೆ ಸೇಬು ಮಾರುಕಟ್ಟೆಗೆ ಅದಾನಿ ಗ್ರೂಪ್‌ ಕಾಲಿಟ್ಟ ಮೇಲೆ ದೊಡ್ಡ ಮಟ್ಟದ ಹಿನ್ನೆಡೆಯಾಗಿದೆ. ಒಂದು ಕೆ.ಜಿ. ಎ ಗ್ರೇಡ್‌ ಪ್ರೀಮಿಯಮ್‌ ಸೇಬಿಗೆ ಕಳೆದ ವರ್ಷ 88 ರೂ.ಗಳನ್ನು ಪಡೆಯುತ್ತಿದ್ದ ರೈತರು, ಈಗ 72 ರೂಪಾಯಿ ಪಡೆಯುವಂತಾಗಿದೆ.

ವಿವಾದಾತ್ಮಕ ಕೃಷಿ ಕಾಯ್ದೆಗಳ ಮೂಲಕ ಕೃಷಿ ಮಾರುಕಟ್ಟೆಯ ಮೇಲೆ ಬಂಡವಾಳಶಾಹಿಗಳ ಏಕಸ್ವಾಮ್ಯತ್ವಕ್ಕೆ ಕೇಂದ್ರ ಸರ್ಕಾರ ಅವಕಾಶ ನೀಡಿದ್ದರಿಂದ ಪಂಜಾಬ್‌ ಮತ್ತು ಹರಿಯಾಣದಲ್ಲಿ ಅದಾನಿ ಆಸ್ತಿಗಳಿಗೆ ರೈತರು ಮುತ್ತಿಗೆ ಹಾಕಿದ್ದಾರೆ. ಈಗ ಹಿಮಾಚಲ ಪ್ರದೇಶದ ಸೇಬು ಬೆಳೆಗಾರರು, “ಅದಾನಿಯವರ ಕಾರ್ಯವೈಖರಿ ಹಾನಿಕಾರಕವಾಗಿದೆ” ಎನ್ನುತ್ತಿದ್ದಾರೆ.

ರೋಹ್ರು ಮೂಲದ ‘ಹಿಮಾಲಯನ್‌ ಸಮುದಾಯಕ್ಕಾಗಿ ತೋಟಗಾರಿಕೆ ಮತ್ತು ಕೃಷಿ ಅಭಿವೃದ್ಧಿ’ ಸರ್ಕಾರೇತರ ಸಂಸ್ಥೆಯ ಅಧ್ಯಕ್ಷ ಡಿಂಪ್ಲೆ ಪಂಜ್ಟ ಅವರು ‘ದಿ ವೈರ್‌’ ಜಾಲತಾಣಕ್ಕೆ ಪ್ರತಿಕ್ರಿಯಿಸಿದ್ದು, “2011ರಲ್ಲಿ ಅದಾನಿ ಕಂಪನಿಯವರು ಎ ಗ್ರೇಡ್‌ ಗುಣಮಟ್ಟದ ಸೇಬಿಗೆ 65 ರೂಪಾಯಿಗಳನ್ನು ನೀಡುತ್ತಿದ್ದರು. ಒಂದು ದಶಕದ ನಂತರದಲ್ಲಿ ಅವರು 7 ರೂ.ಗಿಂತ ಹೆಚ್ಚು ನೀಡುತ್ತಿಲ್ಲ” ಎಂದಿದ್ದಾರೆ.

“ನಾವು ಅಷ್ಟಕ್ಕೆ ಮಾತ್ರ ಅರ್ಹರಾಗಿದ್ದೇವೆ. ದಿನದಿಂದ ದಿನಕ್ಕೆ ಉತ್ಪಾದನಾ ವೆಚ್ಚದಿಂದ ರೈತರು ಕುಗ್ಗುತ್ತಿರುವಾಗ ಸರ್ಕಾರದ ಸಹಕಾರದಿಂದ ಬಂದ ಕಂಪೆನಿಯು, ನಿರಂತರವಾಗಿ ಖರೀದಿ ಬೆಲೆಯನ್ನು ಕಡಿಮೆ ಮಾಡುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ ಪಂಜ್ಟ.

“ಪ್ಯಾಕೇಜಿಂಗ್‌ ವೆಚ್ಚವನ್ನೂ ಸೇರಿದಂತೆ ಒಂದು ಬಾಕ್ಸ್‌ಗೆ 250 ರೂ.ಗಳು ಉತ್ಪಾದನಾ ವೆಚ್ಚ ರೈತರಿಗೆ ತಗುಲುತ್ತಿತ್ತು. ಈಗ ಉತ್ಪಾದನಾ ವೆಚ್ಚ 600 ರೂ.ಗಳಾಗಿದೆ. ಆದರೆ ಹಿಂತಿರುಗುವ ಹಣ ಮಾತ್ರ ದಶಕದ ಹಿಂದೆ ಇದ್ದಷ್ಟೇ ಈಗಲೂ ಇದೆ” ಎನ್ನುತ್ತಾರೆ ಅವರು.

ಮತ್ತೊಂದು ಸಮಸ್ಯೆಯೇನೆಂದರೆ ಅದಾನಿ ಗುಂಪಿನವರು ಒಂದು ಸೀಸನ್‌ನಲ್ಲಿ ಒಂಬತ್ತು ಅಥವಾ ಹತ್ತು ಲಕ್ಷ ಬಾಕ್ಸ್‌‌ (ಒಂದು ಬಾಕ್ಸ್‌ನಲ್ಲಿ 25 ಕೆ.ಜಿ. ಸೇಬುಗಳು ಇರುತ್ತವೆ) ಕೊಳ್ಳುತ್ತಾರಷ್ಟೇ. ಇದು ರಾಜ್ಯದ ಒಟ್ಟು ಸೇಬು ಉತ್ಪಾದನೆಯಲ್ಲಿ ಶೇ. 3-4ರಷ್ಟು ಉತ್ಪನ್ನವನ್ನೂ ಮೀರುವುದಿಲ್ಲ. ಅದಾನಿ ಕಂಪನಿಯು ಮಾರುಕಟ್ಟೆಯನ್ನೂ ಅಸ್ಥಿರಗೊಳಿಸುತ್ತಿದೆ ಎಂದು ಆತಂಕ ವ್ಯಕ್ತಪಡಿಸುತ್ತಾರೆ ಪಂಜ್ಟ.

ಕೃಪೆ: ದಿ ವೈರ್‌‍


ಇದನ್ನೂ ಓದಿ: ಗುಜರಾತ್‌ನಲ್ಲಿ ಹೆರಾಯಿನ್ ವಶ: ಮೋದಿ ಮಿತ್ರ ಅದಾನಿಯ ಪಾತ್ರದ ಬಗ್ಗೆ ತನಿಖೆ ಏಕಿಲ್ಲ?- ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...