Homeಮುಖಪುಟಅದಾನಿ ಆಳ್ವಿಕೆ: ಹಿಮಾಚಲ ಪ್ರದೇಶದ ಸೇಬು ಬೆಳೆಗಾರರು ತತ್ತರ!

ಅದಾನಿ ಆಳ್ವಿಕೆ: ಹಿಮಾಚಲ ಪ್ರದೇಶದ ಸೇಬು ಬೆಳೆಗಾರರು ತತ್ತರ!

ಕಾರ್ಪೊರೇಟ್‌ ಶಕ್ತಿಗಳು ಕೃಷಿ ಮೇಲೆ ಹಿಡಿತ ಸಾಧಿಸಲು ಆರಂಭಿಸಿದ್ದು, ಹಿಮಾಚಲ ಪ್ರದೇಶದ ಸೇಬು ಬೆಳೆಗಾರರು ತೊಂದರೆಗೆ ಸಿಲುಕಿದ್ದಾರೆ.

- Advertisement -
- Advertisement -

ಮೂರು ರೈತ ವಿರೋಧಿ ಕೃಷಿ ಕಾಯ್ದೆಗಳ ವಿರುದ್ಧ ರೈತರು ಹೋರಾಟ ಮುಂದುವರಿಸಿದ್ದಾರೆ. ಈ ಕಾಯ್ದೆಗಳ ಪರಿಣಾಮ ಈಗಾಗಲೇ ಬೀರಲಾರಂಭಿಸಿದೆ. ಕಾರ್ಪೊರೇಟ್‌ ಶಕ್ತಿಗಳು ಕೃಷಿ ಮೇಲೆ ಹಿಡಿತ ಸಾಧಿಸಲು ಆರಂಭಿಸಿದ್ದು, ಹಿಮಾಚಲ ಪ್ರದೇಶದ ಸೇಬು ಬೆಳೆಗಾರರು ತೊಂದರೆಗೆ ಸಿಲುಕಿದ್ದಾರೆ.

ಬಂಡವಾಳಶಾಹಿಗಳ ಬದಲು ಸರ್ಕಾರವೇ ಕೋಲ್ಡ್ ಸ್ಟೋರೇಜ್‌ ಸ್ಥಾಪಿಸಬೇಕು ಎಂದು ಸೇಬು ಬೆಳೆಗಾರರು ಒತ್ತಾಯಿಸುತ್ತಿದ್ದಾರೆ. ಮುಕ್ತ ಆರ್ಥಿಕ ನೀತಿಯಿಂದ ರೈತರಿಗೆ ಅನುಕೂಲವಾಗುತ್ತದೆ ಎಂದು ಸರ್ಕಾರ ಹೇಳುತ್ತಿದ್ದರೆ, ಮತ್ತೊಂದೆಡೆ ಹಿಮಾಚಲ ಪ್ರದೇಶದ ಪ್ರಮುಖ ಬೆಳೆಯಾದ ಸೇಬುವಿನ ಮೇಲೆ ದುಷ್ಪರಿಣಾಮ ಬೀರಲಾರಂಭಿಸಿದೆ.

ಈ ಗುಡ್ಡಗಾಡು ರಾಜ್ಯದಲ್ಲಿ ಮುಕ್ತ ಮಾರುಕಟ್ಟೆ ಮಾದರಿಯಲ್ಲಿ ಸುಮಾರು ಐದು ಸಾವಿರ ಕೋಟಿ ರೂ. ಸೇಬು ವ್ಯವಹಾರ ನಡೆಯುತ್ತಿದೆ. ಆದರೆ ಸೇಬು ಮಾರುಕಟ್ಟೆಗೆ ಅದಾನಿ ಗ್ರೂಪ್‌ ಕಾಲಿಟ್ಟ ಮೇಲೆ ದೊಡ್ಡ ಮಟ್ಟದ ಹಿನ್ನೆಡೆಯಾಗಿದೆ. ಒಂದು ಕೆ.ಜಿ. ಎ ಗ್ರೇಡ್‌ ಪ್ರೀಮಿಯಮ್‌ ಸೇಬಿಗೆ ಕಳೆದ ವರ್ಷ 88 ರೂ.ಗಳನ್ನು ಪಡೆಯುತ್ತಿದ್ದ ರೈತರು, ಈಗ 72 ರೂಪಾಯಿ ಪಡೆಯುವಂತಾಗಿದೆ.

ವಿವಾದಾತ್ಮಕ ಕೃಷಿ ಕಾಯ್ದೆಗಳ ಮೂಲಕ ಕೃಷಿ ಮಾರುಕಟ್ಟೆಯ ಮೇಲೆ ಬಂಡವಾಳಶಾಹಿಗಳ ಏಕಸ್ವಾಮ್ಯತ್ವಕ್ಕೆ ಕೇಂದ್ರ ಸರ್ಕಾರ ಅವಕಾಶ ನೀಡಿದ್ದರಿಂದ ಪಂಜಾಬ್‌ ಮತ್ತು ಹರಿಯಾಣದಲ್ಲಿ ಅದಾನಿ ಆಸ್ತಿಗಳಿಗೆ ರೈತರು ಮುತ್ತಿಗೆ ಹಾಕಿದ್ದಾರೆ. ಈಗ ಹಿಮಾಚಲ ಪ್ರದೇಶದ ಸೇಬು ಬೆಳೆಗಾರರು, “ಅದಾನಿಯವರ ಕಾರ್ಯವೈಖರಿ ಹಾನಿಕಾರಕವಾಗಿದೆ” ಎನ್ನುತ್ತಿದ್ದಾರೆ.

ರೋಹ್ರು ಮೂಲದ ‘ಹಿಮಾಲಯನ್‌ ಸಮುದಾಯಕ್ಕಾಗಿ ತೋಟಗಾರಿಕೆ ಮತ್ತು ಕೃಷಿ ಅಭಿವೃದ್ಧಿ’ ಸರ್ಕಾರೇತರ ಸಂಸ್ಥೆಯ ಅಧ್ಯಕ್ಷ ಡಿಂಪ್ಲೆ ಪಂಜ್ಟ ಅವರು ‘ದಿ ವೈರ್‌’ ಜಾಲತಾಣಕ್ಕೆ ಪ್ರತಿಕ್ರಿಯಿಸಿದ್ದು, “2011ರಲ್ಲಿ ಅದಾನಿ ಕಂಪನಿಯವರು ಎ ಗ್ರೇಡ್‌ ಗುಣಮಟ್ಟದ ಸೇಬಿಗೆ 65 ರೂಪಾಯಿಗಳನ್ನು ನೀಡುತ್ತಿದ್ದರು. ಒಂದು ದಶಕದ ನಂತರದಲ್ಲಿ ಅವರು 7 ರೂ.ಗಿಂತ ಹೆಚ್ಚು ನೀಡುತ್ತಿಲ್ಲ” ಎಂದಿದ್ದಾರೆ.

“ನಾವು ಅಷ್ಟಕ್ಕೆ ಮಾತ್ರ ಅರ್ಹರಾಗಿದ್ದೇವೆ. ದಿನದಿಂದ ದಿನಕ್ಕೆ ಉತ್ಪಾದನಾ ವೆಚ್ಚದಿಂದ ರೈತರು ಕುಗ್ಗುತ್ತಿರುವಾಗ ಸರ್ಕಾರದ ಸಹಕಾರದಿಂದ ಬಂದ ಕಂಪೆನಿಯು, ನಿರಂತರವಾಗಿ ಖರೀದಿ ಬೆಲೆಯನ್ನು ಕಡಿಮೆ ಮಾಡುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ ಪಂಜ್ಟ.

“ಪ್ಯಾಕೇಜಿಂಗ್‌ ವೆಚ್ಚವನ್ನೂ ಸೇರಿದಂತೆ ಒಂದು ಬಾಕ್ಸ್‌ಗೆ 250 ರೂ.ಗಳು ಉತ್ಪಾದನಾ ವೆಚ್ಚ ರೈತರಿಗೆ ತಗುಲುತ್ತಿತ್ತು. ಈಗ ಉತ್ಪಾದನಾ ವೆಚ್ಚ 600 ರೂ.ಗಳಾಗಿದೆ. ಆದರೆ ಹಿಂತಿರುಗುವ ಹಣ ಮಾತ್ರ ದಶಕದ ಹಿಂದೆ ಇದ್ದಷ್ಟೇ ಈಗಲೂ ಇದೆ” ಎನ್ನುತ್ತಾರೆ ಅವರು.

ಮತ್ತೊಂದು ಸಮಸ್ಯೆಯೇನೆಂದರೆ ಅದಾನಿ ಗುಂಪಿನವರು ಒಂದು ಸೀಸನ್‌ನಲ್ಲಿ ಒಂಬತ್ತು ಅಥವಾ ಹತ್ತು ಲಕ್ಷ ಬಾಕ್ಸ್‌‌ (ಒಂದು ಬಾಕ್ಸ್‌ನಲ್ಲಿ 25 ಕೆ.ಜಿ. ಸೇಬುಗಳು ಇರುತ್ತವೆ) ಕೊಳ್ಳುತ್ತಾರಷ್ಟೇ. ಇದು ರಾಜ್ಯದ ಒಟ್ಟು ಸೇಬು ಉತ್ಪಾದನೆಯಲ್ಲಿ ಶೇ. 3-4ರಷ್ಟು ಉತ್ಪನ್ನವನ್ನೂ ಮೀರುವುದಿಲ್ಲ. ಅದಾನಿ ಕಂಪನಿಯು ಮಾರುಕಟ್ಟೆಯನ್ನೂ ಅಸ್ಥಿರಗೊಳಿಸುತ್ತಿದೆ ಎಂದು ಆತಂಕ ವ್ಯಕ್ತಪಡಿಸುತ್ತಾರೆ ಪಂಜ್ಟ.

ಕೃಪೆ: ದಿ ವೈರ್‌‍


ಇದನ್ನೂ ಓದಿ: ಗುಜರಾತ್‌ನಲ್ಲಿ ಹೆರಾಯಿನ್ ವಶ: ಮೋದಿ ಮಿತ್ರ ಅದಾನಿಯ ಪಾತ್ರದ ಬಗ್ಗೆ ತನಿಖೆ ಏಕಿಲ್ಲ?- ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...