Homeಮುಖಪುಟಅದಾನಿ ಆಳ್ವಿಕೆ: ಹಿಮಾಚಲ ಪ್ರದೇಶದ ಸೇಬು ಬೆಳೆಗಾರರು ತತ್ತರ!

ಅದಾನಿ ಆಳ್ವಿಕೆ: ಹಿಮಾಚಲ ಪ್ರದೇಶದ ಸೇಬು ಬೆಳೆಗಾರರು ತತ್ತರ!

ಕಾರ್ಪೊರೇಟ್‌ ಶಕ್ತಿಗಳು ಕೃಷಿ ಮೇಲೆ ಹಿಡಿತ ಸಾಧಿಸಲು ಆರಂಭಿಸಿದ್ದು, ಹಿಮಾಚಲ ಪ್ರದೇಶದ ಸೇಬು ಬೆಳೆಗಾರರು ತೊಂದರೆಗೆ ಸಿಲುಕಿದ್ದಾರೆ.

- Advertisement -
- Advertisement -

ಮೂರು ರೈತ ವಿರೋಧಿ ಕೃಷಿ ಕಾಯ್ದೆಗಳ ವಿರುದ್ಧ ರೈತರು ಹೋರಾಟ ಮುಂದುವರಿಸಿದ್ದಾರೆ. ಈ ಕಾಯ್ದೆಗಳ ಪರಿಣಾಮ ಈಗಾಗಲೇ ಬೀರಲಾರಂಭಿಸಿದೆ. ಕಾರ್ಪೊರೇಟ್‌ ಶಕ್ತಿಗಳು ಕೃಷಿ ಮೇಲೆ ಹಿಡಿತ ಸಾಧಿಸಲು ಆರಂಭಿಸಿದ್ದು, ಹಿಮಾಚಲ ಪ್ರದೇಶದ ಸೇಬು ಬೆಳೆಗಾರರು ತೊಂದರೆಗೆ ಸಿಲುಕಿದ್ದಾರೆ.

ಬಂಡವಾಳಶಾಹಿಗಳ ಬದಲು ಸರ್ಕಾರವೇ ಕೋಲ್ಡ್ ಸ್ಟೋರೇಜ್‌ ಸ್ಥಾಪಿಸಬೇಕು ಎಂದು ಸೇಬು ಬೆಳೆಗಾರರು ಒತ್ತಾಯಿಸುತ್ತಿದ್ದಾರೆ. ಮುಕ್ತ ಆರ್ಥಿಕ ನೀತಿಯಿಂದ ರೈತರಿಗೆ ಅನುಕೂಲವಾಗುತ್ತದೆ ಎಂದು ಸರ್ಕಾರ ಹೇಳುತ್ತಿದ್ದರೆ, ಮತ್ತೊಂದೆಡೆ ಹಿಮಾಚಲ ಪ್ರದೇಶದ ಪ್ರಮುಖ ಬೆಳೆಯಾದ ಸೇಬುವಿನ ಮೇಲೆ ದುಷ್ಪರಿಣಾಮ ಬೀರಲಾರಂಭಿಸಿದೆ.

ಈ ಗುಡ್ಡಗಾಡು ರಾಜ್ಯದಲ್ಲಿ ಮುಕ್ತ ಮಾರುಕಟ್ಟೆ ಮಾದರಿಯಲ್ಲಿ ಸುಮಾರು ಐದು ಸಾವಿರ ಕೋಟಿ ರೂ. ಸೇಬು ವ್ಯವಹಾರ ನಡೆಯುತ್ತಿದೆ. ಆದರೆ ಸೇಬು ಮಾರುಕಟ್ಟೆಗೆ ಅದಾನಿ ಗ್ರೂಪ್‌ ಕಾಲಿಟ್ಟ ಮೇಲೆ ದೊಡ್ಡ ಮಟ್ಟದ ಹಿನ್ನೆಡೆಯಾಗಿದೆ. ಒಂದು ಕೆ.ಜಿ. ಎ ಗ್ರೇಡ್‌ ಪ್ರೀಮಿಯಮ್‌ ಸೇಬಿಗೆ ಕಳೆದ ವರ್ಷ 88 ರೂ.ಗಳನ್ನು ಪಡೆಯುತ್ತಿದ್ದ ರೈತರು, ಈಗ 72 ರೂಪಾಯಿ ಪಡೆಯುವಂತಾಗಿದೆ.

ವಿವಾದಾತ್ಮಕ ಕೃಷಿ ಕಾಯ್ದೆಗಳ ಮೂಲಕ ಕೃಷಿ ಮಾರುಕಟ್ಟೆಯ ಮೇಲೆ ಬಂಡವಾಳಶಾಹಿಗಳ ಏಕಸ್ವಾಮ್ಯತ್ವಕ್ಕೆ ಕೇಂದ್ರ ಸರ್ಕಾರ ಅವಕಾಶ ನೀಡಿದ್ದರಿಂದ ಪಂಜಾಬ್‌ ಮತ್ತು ಹರಿಯಾಣದಲ್ಲಿ ಅದಾನಿ ಆಸ್ತಿಗಳಿಗೆ ರೈತರು ಮುತ್ತಿಗೆ ಹಾಕಿದ್ದಾರೆ. ಈಗ ಹಿಮಾಚಲ ಪ್ರದೇಶದ ಸೇಬು ಬೆಳೆಗಾರರು, “ಅದಾನಿಯವರ ಕಾರ್ಯವೈಖರಿ ಹಾನಿಕಾರಕವಾಗಿದೆ” ಎನ್ನುತ್ತಿದ್ದಾರೆ.

ರೋಹ್ರು ಮೂಲದ ‘ಹಿಮಾಲಯನ್‌ ಸಮುದಾಯಕ್ಕಾಗಿ ತೋಟಗಾರಿಕೆ ಮತ್ತು ಕೃಷಿ ಅಭಿವೃದ್ಧಿ’ ಸರ್ಕಾರೇತರ ಸಂಸ್ಥೆಯ ಅಧ್ಯಕ್ಷ ಡಿಂಪ್ಲೆ ಪಂಜ್ಟ ಅವರು ‘ದಿ ವೈರ್‌’ ಜಾಲತಾಣಕ್ಕೆ ಪ್ರತಿಕ್ರಿಯಿಸಿದ್ದು, “2011ರಲ್ಲಿ ಅದಾನಿ ಕಂಪನಿಯವರು ಎ ಗ್ರೇಡ್‌ ಗುಣಮಟ್ಟದ ಸೇಬಿಗೆ 65 ರೂಪಾಯಿಗಳನ್ನು ನೀಡುತ್ತಿದ್ದರು. ಒಂದು ದಶಕದ ನಂತರದಲ್ಲಿ ಅವರು 7 ರೂ.ಗಿಂತ ಹೆಚ್ಚು ನೀಡುತ್ತಿಲ್ಲ” ಎಂದಿದ್ದಾರೆ.

“ನಾವು ಅಷ್ಟಕ್ಕೆ ಮಾತ್ರ ಅರ್ಹರಾಗಿದ್ದೇವೆ. ದಿನದಿಂದ ದಿನಕ್ಕೆ ಉತ್ಪಾದನಾ ವೆಚ್ಚದಿಂದ ರೈತರು ಕುಗ್ಗುತ್ತಿರುವಾಗ ಸರ್ಕಾರದ ಸಹಕಾರದಿಂದ ಬಂದ ಕಂಪೆನಿಯು, ನಿರಂತರವಾಗಿ ಖರೀದಿ ಬೆಲೆಯನ್ನು ಕಡಿಮೆ ಮಾಡುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ ಪಂಜ್ಟ.

“ಪ್ಯಾಕೇಜಿಂಗ್‌ ವೆಚ್ಚವನ್ನೂ ಸೇರಿದಂತೆ ಒಂದು ಬಾಕ್ಸ್‌ಗೆ 250 ರೂ.ಗಳು ಉತ್ಪಾದನಾ ವೆಚ್ಚ ರೈತರಿಗೆ ತಗುಲುತ್ತಿತ್ತು. ಈಗ ಉತ್ಪಾದನಾ ವೆಚ್ಚ 600 ರೂ.ಗಳಾಗಿದೆ. ಆದರೆ ಹಿಂತಿರುಗುವ ಹಣ ಮಾತ್ರ ದಶಕದ ಹಿಂದೆ ಇದ್ದಷ್ಟೇ ಈಗಲೂ ಇದೆ” ಎನ್ನುತ್ತಾರೆ ಅವರು.

ಮತ್ತೊಂದು ಸಮಸ್ಯೆಯೇನೆಂದರೆ ಅದಾನಿ ಗುಂಪಿನವರು ಒಂದು ಸೀಸನ್‌ನಲ್ಲಿ ಒಂಬತ್ತು ಅಥವಾ ಹತ್ತು ಲಕ್ಷ ಬಾಕ್ಸ್‌‌ (ಒಂದು ಬಾಕ್ಸ್‌ನಲ್ಲಿ 25 ಕೆ.ಜಿ. ಸೇಬುಗಳು ಇರುತ್ತವೆ) ಕೊಳ್ಳುತ್ತಾರಷ್ಟೇ. ಇದು ರಾಜ್ಯದ ಒಟ್ಟು ಸೇಬು ಉತ್ಪಾದನೆಯಲ್ಲಿ ಶೇ. 3-4ರಷ್ಟು ಉತ್ಪನ್ನವನ್ನೂ ಮೀರುವುದಿಲ್ಲ. ಅದಾನಿ ಕಂಪನಿಯು ಮಾರುಕಟ್ಟೆಯನ್ನೂ ಅಸ್ಥಿರಗೊಳಿಸುತ್ತಿದೆ ಎಂದು ಆತಂಕ ವ್ಯಕ್ತಪಡಿಸುತ್ತಾರೆ ಪಂಜ್ಟ.

ಕೃಪೆ: ದಿ ವೈರ್‌‍


ಇದನ್ನೂ ಓದಿ: ಗುಜರಾತ್‌ನಲ್ಲಿ ಹೆರಾಯಿನ್ ವಶ: ಮೋದಿ ಮಿತ್ರ ಅದಾನಿಯ ಪಾತ್ರದ ಬಗ್ಗೆ ತನಿಖೆ ಏಕಿಲ್ಲ?- ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...