Homeಮುಖಪುಟಪ್ರತಿಪಕ್ಷ ನಾಯಕರಿಗೆ ಎಚ್ಚರಿಕೆ ಸಂದೇಶ: ಹೇಳಿಕೆ ಬದಲಿಸಲು ಅ್ಯಪಲ್‌ ಕಂಪನಿಗೆ ಸರ್ಕಾರದ ಒತ್ತಡ; ವರದಿ

ಪ್ರತಿಪಕ್ಷ ನಾಯಕರಿಗೆ ಎಚ್ಚರಿಕೆ ಸಂದೇಶ: ಹೇಳಿಕೆ ಬದಲಿಸಲು ಅ್ಯಪಲ್‌ ಕಂಪನಿಗೆ ಸರ್ಕಾರದ ಒತ್ತಡ; ವರದಿ

- Advertisement -
- Advertisement -

ಕಳೆದ ಅಕ್ಟೋಬರ್ ತಿಂಗಳಲ್ಲಿ ಇಂಡಿಯಾ ಒಕ್ಕೂಟದ ಹಲವು ಪಕ್ಷಗಳ ನಾಯಕರ ಅ್ಯಪಲ್‌ ಐಫೋನ್‌ಗೆ ಸರ್ಕಾರಿ ಪ್ರಾಯೋಜಿತ ಹ್ಯಾಕಿಂಗ್ ಸಾಧ್ಯತೆಯ ಬಗ್ಗೆ ಎಚ್ಚರಿಕೆಯ ಸಂದೇಶವೊಂದು ಬಂದ ಬಗ್ಗೆ ವರದಿಯಾಗಿತ್ತು. ಕೆಲ ನಾಯಕರು ತಮಗೆ ಬಂದ ಎಚ್ಚರಿಕೆ ಸಂದೇಶದ ಸ್ಕ್ರೀನ್ ಶಾಟ್‌ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಈ ಪ್ರಕರಣಕ್ಕೆ ಈಗ ಮಹತ್ವದ ತಿರುವೊಂದು ಸಿಕ್ಕಿದೆ.

ಕೇಂದ್ರ ಸರ್ಕಾರದ ಅಧಿಕಾರಿಗಳು ಅ್ಯಪಲ್‌ ಪ್ರತಿನಿಧಿಗಳನ್ನು ಕರೆಸಿಕೊಂಡು, ಈ ಹಿಂದೆ ಪ್ರತಿಪಕ್ಷ ನಾಯಕರಿಗೆ ಕಳುಹಿಸಿದ್ದ ಎಚ್ಚರಿಕೆಯ ಸಂದೇಶದ ಕುರಿತು ಸಾರ್ವಜನಿಕರಿಗೆ ಬೇರೆ ಏನಾದರೂ ಉತ್ತರ(ಸಾರ್ವಜನಿಕರ ದಾರಿ ತಪ್ಪಿಸುವ) ನೀಡುವಂತೆ ಒತ್ತಾಯಿಸಿದ್ದಾರೆ ಎಂದು ವಾಶಿಂಗ್ಟನ್ ಪೋಸ್ಟ್‌ ವರದಿ ಉಲ್ಲೇಖಿಸಿ ಸ್ವತಂತ್ರ ಸುದ್ದಿ ಮಾಧ್ಯಮ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ತಮ್ಮ ಮೊಬೈಲ್‌ಗೆ ಸರ್ಕಾರಿ ಪ್ರಯೋಜಿತ ಹ್ಯಾಕಿಂಗ್ ಸಾಧ್ಯತೆಯ ಕುರಿತು ಸಂದೇಶ ಬಂದಿದ್ದ ಬಗ್ಗೆ ಪ್ರತಿಪಕ್ಷ ನಾಯಕರು ಅ್ಯಪಲ್‌ ಕಂಪನಿಯನ್ನು ಪ್ರಶ್ನಿಸಿದ್ದರು. ಆಗ, ಅದು ಸರ್ಕಾರದ ಮೂಲಗಳು ನಿಮ್ಮ ಮೇಲೆ ಕಣ್ಗಾವಲಿಡಲು ಫೋನ್ ಹ್ಯಾಕ್ ಮಾಡುವ ಪ್ರಯತ್ನ ನಡೆಸಿದೆ ಎಂದು ಹೇಳಿತ್ತು. ಈ ಹೇಳಿಕೆಯನ್ನು ಬದಲಾಯಿಸಿ, ಸಾರ್ವಜನಿಕರಿಗೆ ಬೇರೆ ಏನಾದರೂ ದಾರಿ ತಪ್ಪಿಸುವ ವಿಶ್ಲೇಷಣೆ ನೀಡುವಂತೆ ಸರ್ಕಾರದ ಅಧಿಕಾರಿಗಳು ಕಂಪನಿಯ ಪ್ರತಿನಿಧಿಗಳನ್ನು ಒತ್ತಾಯಿಸಿದ್ದಾರೆ ಎಂದು ವರದಿ ಹೇಳಿದೆ.

ಅಕ್ಟೋಬರ್ 31, 2023ರಂದು ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟ ಕೆಲ ನಾಯಕರು ಮತ್ತು ಸ್ವತಂತ್ರ ಪತ್ರಕರ್ತರಿಗೆ ಅ್ಯಪಲ್‌ ಎಚ್ಚರಿಕೆಯ ಸಂದೇಶ ಕಳುಹಿಸಿತ್ತು. “ನಿಮ್ಮ ಅ್ಯಪಲ್‌ ಐಡಿಗೆ ಹೊಂದಿಸಿರುವ ಐಫೋನ್ ಸರ್ಕಾರಿ ಪ್ರಾಯೋಜಿತ ಹ್ಯಾಕಿಂಗ್‌ಗೆ ಗುರಿಯಾಗಿದೆ ಎಂದು ಅ್ಯಪಲ್‌ ಸಂದೇಶ ಎಚ್ಚರಿಸಿತ್ತು. ಜನ ಪ್ರತಿನಿಧಿಗಳು ಸ್ಕ್ರೀನ್ ಶಾಟ್ ಹಂಚಿಕೊಂಡಾಗ, ” ನಾವು ಹ್ಯಾಕಿಂಗ್ ಪ್ರಯತ್ನ ಮಾಡಿದ್ದಾರೆ ಎಂದು ಯಾರನ್ನೂ ಪ್ರತ್ಯೇಕವಾಗಿ ಉಲ್ಲೇಖಿಸುತ್ತಿಲ್ಲ. ಆದರೆ, ಈ ರೀತಿಯ ಅತ್ಯಾಧುನಿಕ ತಂತ್ರಜ್ಞಾನ ಸರ್ಕಾರಿ ಏಜೆನ್ಸಿಗಳಿಗೆ ಮಾತ್ರ ಲಭ್ಯವಿದೆ” ಎಂದು ಅ್ಯಪಲ್‌ ಹೇಳಿತ್ತು.

ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಹುವಾ ಮೊಯಿತ್ರಾ, ಕಾಂಗ್ರೆಸ್ ನಾಯಕ ಶಶಿ ತರೂರ್, ಬಿಆರ್‌ಎಸ್ ನಾಯಕರಾದ ಕೆಟಿ ರಾಮರಾವ್ ಮತ್ತು ಕವಿತಾ ಕವ್ಲಕುಂಟಲ, ಕಾಂಗ್ರೆಸ್‌ನ ಡೇಟಾ ಅನಾಲಿಟಿಕ್ಸ್ ವಿಭಾಗದ ಮುಖ್ಯಸ್ಥ ಪ್ರವೀಣ್ ಚಕ್ರವರ್ತಿ, ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಮಾಡುವ ಯೋಜನೆಯ (OCCRP)ಪತ್ರಕರ್ತ ಆನಂದ್ ಮಂಗ್ನಾಲೆ, ದಿ ವೈರ್‌ನ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಅವರ ಮೊಬೈಲ್ ಫೋನ್‌ಗಳು ಎಚ್ಚರಿಕೆಯ ಸಂದೇಶಗಳನ್ನು ಸ್ವೀಕರಿಸಿತ್ತು.

ಆಮ್ನೆಸ್ಟಿ ಇಂಟರ್‌ನ್ಯಾಶನಲ್‌ನ ಸೆಕ್ಯುರಿಟಿ ಲ್ಯಾಬ್‌ನ ಫೋರೆನ್ಸಿಕ್ ತನಿಖೆಗಳು-2023 ರಲ್ಲಿ ಪತ್ರಕರ್ತರಾದ ಸಿದ್ಧಾರ್ಥ್ ಮತ್ತು ಆನಂದ್ ಅವರ ಫೋನ್‌ಗಳಲ್ಲಿ ಪೆಗಾಸಸ್ ಸ್ಥಾಪಿಸಲಾಗಿತ್ತು ಎಂದು ದೃಢಪಡಿಸಿದೆ ಎಂದು ನ್ಯೂಸ್‌ ಮಿನಿಟ್ ವರದಿ ಹೇಳಿದೆ.

ಆನಂದ್ ಮತ್ತು ರವಿ ಅವರು ಅದಾನಿ ಗ್ರೂಪ್ ಒಳಗೊಂಡಿರುವ ಕಡಲಾಚೆಯ ಅಕ್ರಮ ಹಣ ವರ್ಗಾವಣೆ ಅವ್ಯವಹಾರವನ್ನು ತಾಜಾ ಪುರಾವೆಗಳೊಂದಿಗೆ ಬಯಲಿಗೆಳೆದ ವರದಿಗಾಗಿ ಕೆಲಸ ಮಾಡಿದ್ದರು. ಆಗಸ್ಟ್ 22 ರಂದು ಇಬ್ಬರು ಪತ್ರಕರ್ತರು ತಮ್ಮ ಸಂಶೋಧನಾ ವರದಿಗೆ ಪೂರಕ ಪ್ರತಿಕ್ರಿಯೆ ಕೋರಿ ಅದಾನಿ ಕಂಪನಿಗೆ ಪತ್ರ ಬರೆದಿದ್ದರು. ಇದಾಗಿ 24 ಗಂಟೆಯಲ್ಲಿ ಪತ್ರಕರ್ತ ಆನಂದ್ ಅವರ ಫೋನ್‌ಗೆ ಪೆಗಾಸಸ್ ದಾಳಿಯಾಗಿದೆ ಎಂದು ಆಮ್ನೆಸ್ಟಿ ತನಿಖೆಯಿಂದ ತಿಳಿದು ಬಂದಿರುವುದಾಗಿ ವರದಿ ತಿಳಿಸಿದೆ.

ಈ ಹಿಂದೆ ಇಸ್ರೇಲ್‌ ಮೂಲದ ಸಂಸ್ಥೆ ಎನ್‌ಎಸ್‌ಒ ತಮ್ಮ ಕಣ್ಗಾವಲು ಸಾಫ್ಟ್‌ವೇರ್‌ ಪೆಗಾಸಸ್ ಅನ್ನು
ಸರ್ಕಾರಗಳಿಗೆ ಮಾತ್ರ ಮಾರಾಟ ಮಾಡುವುದಾಗಿ ಸುಪ್ರೀಂ ಕೋರ್ಟ್‌ಗೆ ಹೇಳಿರುವುದನ್ನು ಇಲ್ಲಿ ಸ್ಮರಿಸಬಹುದು.

ZecOps ಎಂಬ ಅಪ್ಲಿಕೇಶನ್‌ನಿಂದ ಆನಂದ್ ಅವರ ಮೊಬೈಲ್‌ಗೆ ಎಚ್ಚರಿಕೆ ಸಂದೇಶ ಬಂದಿತ್ತು. ಇದು ಭದ್ರತಾ ಬೆದರಿಕೆ ಇರುವಾಗ ಮತ್ತು ಸುಧಾರಿತ ಡಿಜಿಟಲ್ ಫೋರೆನ್ಸಿಕ್ಸ್ ಅನ್ನು ಬಳಸುವಾಗ ಎಚ್ಚರಿಕೆ ನೀಡುವ ಅಪ್ಲಿಕೇಶನ್ ಆಗಿದೆ. ಆಗಸ್ಟ್ 23 ರಂದು ಎಚ್ಚರಿಕೆ ಸಂದೇಶ ಬರಲು ಪ್ರಾರಂಭಿಸಿದ್ದವು. ನಂತರ ಆನಂದ್ ಅವರು ತಮ್ಮ ಫೋನ್ ಅನ್ನು OCCRP ಮತ್ತು ಆಮ್ನೆಸ್ಟಿಗೆ ಫೊರೆನ್ಸಿಕ್ ವಿಶ್ಲೇಷಣೆಗೆ ಕೊಟ್ಟಿದ್ದರು. ಎಚ್ಚರಿಕೆ ಸಂದೇಶ ಬಂದಾಗ ಅವರ ಫೋನ್ ಸಂಪೂರ್ಣವಾಗಿ ಶೂನ್ಯ ಕ್ಲಿಕ್‌ಗೆ (ಜಾಮ್ ಆಗೋದು) ಒಳಗಾಗಿತ್ತು ಎಂದ ದಿ ನ್ಯೂಸ್ ಮಿನಿಟ್ ಹೇಳಿದೆ.

ಇದನ್ನೂ ಓದಿ : ‘ಸರ್ನಾ ಪ್ರತ್ಯೇಕ ಧರ್ಮ’ ಮಾನ್ಯತೆಗೆ ಒತ್ತಾಯಿಸಿ ಡಿ.30ರಂದು ಭಾರತ್ ಬಂದ್‌ಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...