Homeಮುಖಪುಟಪ್ರತಿಪಕ್ಷ ನಾಯಕರಿಗೆ ಎಚ್ಚರಿಕೆ ಸಂದೇಶ: ಹೇಳಿಕೆ ಬದಲಿಸಲು ಅ್ಯಪಲ್‌ ಕಂಪನಿಗೆ ಸರ್ಕಾರದ ಒತ್ತಡ; ವರದಿ

ಪ್ರತಿಪಕ್ಷ ನಾಯಕರಿಗೆ ಎಚ್ಚರಿಕೆ ಸಂದೇಶ: ಹೇಳಿಕೆ ಬದಲಿಸಲು ಅ್ಯಪಲ್‌ ಕಂಪನಿಗೆ ಸರ್ಕಾರದ ಒತ್ತಡ; ವರದಿ

- Advertisement -
- Advertisement -

ಕಳೆದ ಅಕ್ಟೋಬರ್ ತಿಂಗಳಲ್ಲಿ ಇಂಡಿಯಾ ಒಕ್ಕೂಟದ ಹಲವು ಪಕ್ಷಗಳ ನಾಯಕರ ಅ್ಯಪಲ್‌ ಐಫೋನ್‌ಗೆ ಸರ್ಕಾರಿ ಪ್ರಾಯೋಜಿತ ಹ್ಯಾಕಿಂಗ್ ಸಾಧ್ಯತೆಯ ಬಗ್ಗೆ ಎಚ್ಚರಿಕೆಯ ಸಂದೇಶವೊಂದು ಬಂದ ಬಗ್ಗೆ ವರದಿಯಾಗಿತ್ತು. ಕೆಲ ನಾಯಕರು ತಮಗೆ ಬಂದ ಎಚ್ಚರಿಕೆ ಸಂದೇಶದ ಸ್ಕ್ರೀನ್ ಶಾಟ್‌ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಈ ಪ್ರಕರಣಕ್ಕೆ ಈಗ ಮಹತ್ವದ ತಿರುವೊಂದು ಸಿಕ್ಕಿದೆ.

ಕೇಂದ್ರ ಸರ್ಕಾರದ ಅಧಿಕಾರಿಗಳು ಅ್ಯಪಲ್‌ ಪ್ರತಿನಿಧಿಗಳನ್ನು ಕರೆಸಿಕೊಂಡು, ಈ ಹಿಂದೆ ಪ್ರತಿಪಕ್ಷ ನಾಯಕರಿಗೆ ಕಳುಹಿಸಿದ್ದ ಎಚ್ಚರಿಕೆಯ ಸಂದೇಶದ ಕುರಿತು ಸಾರ್ವಜನಿಕರಿಗೆ ಬೇರೆ ಏನಾದರೂ ಉತ್ತರ(ಸಾರ್ವಜನಿಕರ ದಾರಿ ತಪ್ಪಿಸುವ) ನೀಡುವಂತೆ ಒತ್ತಾಯಿಸಿದ್ದಾರೆ ಎಂದು ವಾಶಿಂಗ್ಟನ್ ಪೋಸ್ಟ್‌ ವರದಿ ಉಲ್ಲೇಖಿಸಿ ಸ್ವತಂತ್ರ ಸುದ್ದಿ ಮಾಧ್ಯಮ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ತಮ್ಮ ಮೊಬೈಲ್‌ಗೆ ಸರ್ಕಾರಿ ಪ್ರಯೋಜಿತ ಹ್ಯಾಕಿಂಗ್ ಸಾಧ್ಯತೆಯ ಕುರಿತು ಸಂದೇಶ ಬಂದಿದ್ದ ಬಗ್ಗೆ ಪ್ರತಿಪಕ್ಷ ನಾಯಕರು ಅ್ಯಪಲ್‌ ಕಂಪನಿಯನ್ನು ಪ್ರಶ್ನಿಸಿದ್ದರು. ಆಗ, ಅದು ಸರ್ಕಾರದ ಮೂಲಗಳು ನಿಮ್ಮ ಮೇಲೆ ಕಣ್ಗಾವಲಿಡಲು ಫೋನ್ ಹ್ಯಾಕ್ ಮಾಡುವ ಪ್ರಯತ್ನ ನಡೆಸಿದೆ ಎಂದು ಹೇಳಿತ್ತು. ಈ ಹೇಳಿಕೆಯನ್ನು ಬದಲಾಯಿಸಿ, ಸಾರ್ವಜನಿಕರಿಗೆ ಬೇರೆ ಏನಾದರೂ ದಾರಿ ತಪ್ಪಿಸುವ ವಿಶ್ಲೇಷಣೆ ನೀಡುವಂತೆ ಸರ್ಕಾರದ ಅಧಿಕಾರಿಗಳು ಕಂಪನಿಯ ಪ್ರತಿನಿಧಿಗಳನ್ನು ಒತ್ತಾಯಿಸಿದ್ದಾರೆ ಎಂದು ವರದಿ ಹೇಳಿದೆ.

ಅಕ್ಟೋಬರ್ 31, 2023ರಂದು ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟ ಕೆಲ ನಾಯಕರು ಮತ್ತು ಸ್ವತಂತ್ರ ಪತ್ರಕರ್ತರಿಗೆ ಅ್ಯಪಲ್‌ ಎಚ್ಚರಿಕೆಯ ಸಂದೇಶ ಕಳುಹಿಸಿತ್ತು. “ನಿಮ್ಮ ಅ್ಯಪಲ್‌ ಐಡಿಗೆ ಹೊಂದಿಸಿರುವ ಐಫೋನ್ ಸರ್ಕಾರಿ ಪ್ರಾಯೋಜಿತ ಹ್ಯಾಕಿಂಗ್‌ಗೆ ಗುರಿಯಾಗಿದೆ ಎಂದು ಅ್ಯಪಲ್‌ ಸಂದೇಶ ಎಚ್ಚರಿಸಿತ್ತು. ಜನ ಪ್ರತಿನಿಧಿಗಳು ಸ್ಕ್ರೀನ್ ಶಾಟ್ ಹಂಚಿಕೊಂಡಾಗ, ” ನಾವು ಹ್ಯಾಕಿಂಗ್ ಪ್ರಯತ್ನ ಮಾಡಿದ್ದಾರೆ ಎಂದು ಯಾರನ್ನೂ ಪ್ರತ್ಯೇಕವಾಗಿ ಉಲ್ಲೇಖಿಸುತ್ತಿಲ್ಲ. ಆದರೆ, ಈ ರೀತಿಯ ಅತ್ಯಾಧುನಿಕ ತಂತ್ರಜ್ಞಾನ ಸರ್ಕಾರಿ ಏಜೆನ್ಸಿಗಳಿಗೆ ಮಾತ್ರ ಲಭ್ಯವಿದೆ” ಎಂದು ಅ್ಯಪಲ್‌ ಹೇಳಿತ್ತು.

ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಹುವಾ ಮೊಯಿತ್ರಾ, ಕಾಂಗ್ರೆಸ್ ನಾಯಕ ಶಶಿ ತರೂರ್, ಬಿಆರ್‌ಎಸ್ ನಾಯಕರಾದ ಕೆಟಿ ರಾಮರಾವ್ ಮತ್ತು ಕವಿತಾ ಕವ್ಲಕುಂಟಲ, ಕಾಂಗ್ರೆಸ್‌ನ ಡೇಟಾ ಅನಾಲಿಟಿಕ್ಸ್ ವಿಭಾಗದ ಮುಖ್ಯಸ್ಥ ಪ್ರವೀಣ್ ಚಕ್ರವರ್ತಿ, ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಮಾಡುವ ಯೋಜನೆಯ (OCCRP)ಪತ್ರಕರ್ತ ಆನಂದ್ ಮಂಗ್ನಾಲೆ, ದಿ ವೈರ್‌ನ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಅವರ ಮೊಬೈಲ್ ಫೋನ್‌ಗಳು ಎಚ್ಚರಿಕೆಯ ಸಂದೇಶಗಳನ್ನು ಸ್ವೀಕರಿಸಿತ್ತು.

ಆಮ್ನೆಸ್ಟಿ ಇಂಟರ್‌ನ್ಯಾಶನಲ್‌ನ ಸೆಕ್ಯುರಿಟಿ ಲ್ಯಾಬ್‌ನ ಫೋರೆನ್ಸಿಕ್ ತನಿಖೆಗಳು-2023 ರಲ್ಲಿ ಪತ್ರಕರ್ತರಾದ ಸಿದ್ಧಾರ್ಥ್ ಮತ್ತು ಆನಂದ್ ಅವರ ಫೋನ್‌ಗಳಲ್ಲಿ ಪೆಗಾಸಸ್ ಸ್ಥಾಪಿಸಲಾಗಿತ್ತು ಎಂದು ದೃಢಪಡಿಸಿದೆ ಎಂದು ನ್ಯೂಸ್‌ ಮಿನಿಟ್ ವರದಿ ಹೇಳಿದೆ.

ಆನಂದ್ ಮತ್ತು ರವಿ ಅವರು ಅದಾನಿ ಗ್ರೂಪ್ ಒಳಗೊಂಡಿರುವ ಕಡಲಾಚೆಯ ಅಕ್ರಮ ಹಣ ವರ್ಗಾವಣೆ ಅವ್ಯವಹಾರವನ್ನು ತಾಜಾ ಪುರಾವೆಗಳೊಂದಿಗೆ ಬಯಲಿಗೆಳೆದ ವರದಿಗಾಗಿ ಕೆಲಸ ಮಾಡಿದ್ದರು. ಆಗಸ್ಟ್ 22 ರಂದು ಇಬ್ಬರು ಪತ್ರಕರ್ತರು ತಮ್ಮ ಸಂಶೋಧನಾ ವರದಿಗೆ ಪೂರಕ ಪ್ರತಿಕ್ರಿಯೆ ಕೋರಿ ಅದಾನಿ ಕಂಪನಿಗೆ ಪತ್ರ ಬರೆದಿದ್ದರು. ಇದಾಗಿ 24 ಗಂಟೆಯಲ್ಲಿ ಪತ್ರಕರ್ತ ಆನಂದ್ ಅವರ ಫೋನ್‌ಗೆ ಪೆಗಾಸಸ್ ದಾಳಿಯಾಗಿದೆ ಎಂದು ಆಮ್ನೆಸ್ಟಿ ತನಿಖೆಯಿಂದ ತಿಳಿದು ಬಂದಿರುವುದಾಗಿ ವರದಿ ತಿಳಿಸಿದೆ.

ಈ ಹಿಂದೆ ಇಸ್ರೇಲ್‌ ಮೂಲದ ಸಂಸ್ಥೆ ಎನ್‌ಎಸ್‌ಒ ತಮ್ಮ ಕಣ್ಗಾವಲು ಸಾಫ್ಟ್‌ವೇರ್‌ ಪೆಗಾಸಸ್ ಅನ್ನು
ಸರ್ಕಾರಗಳಿಗೆ ಮಾತ್ರ ಮಾರಾಟ ಮಾಡುವುದಾಗಿ ಸುಪ್ರೀಂ ಕೋರ್ಟ್‌ಗೆ ಹೇಳಿರುವುದನ್ನು ಇಲ್ಲಿ ಸ್ಮರಿಸಬಹುದು.

ZecOps ಎಂಬ ಅಪ್ಲಿಕೇಶನ್‌ನಿಂದ ಆನಂದ್ ಅವರ ಮೊಬೈಲ್‌ಗೆ ಎಚ್ಚರಿಕೆ ಸಂದೇಶ ಬಂದಿತ್ತು. ಇದು ಭದ್ರತಾ ಬೆದರಿಕೆ ಇರುವಾಗ ಮತ್ತು ಸುಧಾರಿತ ಡಿಜಿಟಲ್ ಫೋರೆನ್ಸಿಕ್ಸ್ ಅನ್ನು ಬಳಸುವಾಗ ಎಚ್ಚರಿಕೆ ನೀಡುವ ಅಪ್ಲಿಕೇಶನ್ ಆಗಿದೆ. ಆಗಸ್ಟ್ 23 ರಂದು ಎಚ್ಚರಿಕೆ ಸಂದೇಶ ಬರಲು ಪ್ರಾರಂಭಿಸಿದ್ದವು. ನಂತರ ಆನಂದ್ ಅವರು ತಮ್ಮ ಫೋನ್ ಅನ್ನು OCCRP ಮತ್ತು ಆಮ್ನೆಸ್ಟಿಗೆ ಫೊರೆನ್ಸಿಕ್ ವಿಶ್ಲೇಷಣೆಗೆ ಕೊಟ್ಟಿದ್ದರು. ಎಚ್ಚರಿಕೆ ಸಂದೇಶ ಬಂದಾಗ ಅವರ ಫೋನ್ ಸಂಪೂರ್ಣವಾಗಿ ಶೂನ್ಯ ಕ್ಲಿಕ್‌ಗೆ (ಜಾಮ್ ಆಗೋದು) ಒಳಗಾಗಿತ್ತು ಎಂದ ದಿ ನ್ಯೂಸ್ ಮಿನಿಟ್ ಹೇಳಿದೆ.

ಇದನ್ನೂ ಓದಿ : ‘ಸರ್ನಾ ಪ್ರತ್ಯೇಕ ಧರ್ಮ’ ಮಾನ್ಯತೆಗೆ ಒತ್ತಾಯಿಸಿ ಡಿ.30ರಂದು ಭಾರತ್ ಬಂದ್‌ಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...