Homeಮುಖಪುಟಪ್ರತಿಪಕ್ಷ ನಾಯಕರಿಗೆ ಎಚ್ಚರಿಕೆ ಸಂದೇಶ: ಹೇಳಿಕೆ ಬದಲಿಸಲು ಅ್ಯಪಲ್‌ ಕಂಪನಿಗೆ ಸರ್ಕಾರದ ಒತ್ತಡ; ವರದಿ

ಪ್ರತಿಪಕ್ಷ ನಾಯಕರಿಗೆ ಎಚ್ಚರಿಕೆ ಸಂದೇಶ: ಹೇಳಿಕೆ ಬದಲಿಸಲು ಅ್ಯಪಲ್‌ ಕಂಪನಿಗೆ ಸರ್ಕಾರದ ಒತ್ತಡ; ವರದಿ

- Advertisement -
- Advertisement -

ಕಳೆದ ಅಕ್ಟೋಬರ್ ತಿಂಗಳಲ್ಲಿ ಇಂಡಿಯಾ ಒಕ್ಕೂಟದ ಹಲವು ಪಕ್ಷಗಳ ನಾಯಕರ ಅ್ಯಪಲ್‌ ಐಫೋನ್‌ಗೆ ಸರ್ಕಾರಿ ಪ್ರಾಯೋಜಿತ ಹ್ಯಾಕಿಂಗ್ ಸಾಧ್ಯತೆಯ ಬಗ್ಗೆ ಎಚ್ಚರಿಕೆಯ ಸಂದೇಶವೊಂದು ಬಂದ ಬಗ್ಗೆ ವರದಿಯಾಗಿತ್ತು. ಕೆಲ ನಾಯಕರು ತಮಗೆ ಬಂದ ಎಚ್ಚರಿಕೆ ಸಂದೇಶದ ಸ್ಕ್ರೀನ್ ಶಾಟ್‌ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಈ ಪ್ರಕರಣಕ್ಕೆ ಈಗ ಮಹತ್ವದ ತಿರುವೊಂದು ಸಿಕ್ಕಿದೆ.

ಕೇಂದ್ರ ಸರ್ಕಾರದ ಅಧಿಕಾರಿಗಳು ಅ್ಯಪಲ್‌ ಪ್ರತಿನಿಧಿಗಳನ್ನು ಕರೆಸಿಕೊಂಡು, ಈ ಹಿಂದೆ ಪ್ರತಿಪಕ್ಷ ನಾಯಕರಿಗೆ ಕಳುಹಿಸಿದ್ದ ಎಚ್ಚರಿಕೆಯ ಸಂದೇಶದ ಕುರಿತು ಸಾರ್ವಜನಿಕರಿಗೆ ಬೇರೆ ಏನಾದರೂ ಉತ್ತರ(ಸಾರ್ವಜನಿಕರ ದಾರಿ ತಪ್ಪಿಸುವ) ನೀಡುವಂತೆ ಒತ್ತಾಯಿಸಿದ್ದಾರೆ ಎಂದು ವಾಶಿಂಗ್ಟನ್ ಪೋಸ್ಟ್‌ ವರದಿ ಉಲ್ಲೇಖಿಸಿ ಸ್ವತಂತ್ರ ಸುದ್ದಿ ಮಾಧ್ಯಮ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ತಮ್ಮ ಮೊಬೈಲ್‌ಗೆ ಸರ್ಕಾರಿ ಪ್ರಯೋಜಿತ ಹ್ಯಾಕಿಂಗ್ ಸಾಧ್ಯತೆಯ ಕುರಿತು ಸಂದೇಶ ಬಂದಿದ್ದ ಬಗ್ಗೆ ಪ್ರತಿಪಕ್ಷ ನಾಯಕರು ಅ್ಯಪಲ್‌ ಕಂಪನಿಯನ್ನು ಪ್ರಶ್ನಿಸಿದ್ದರು. ಆಗ, ಅದು ಸರ್ಕಾರದ ಮೂಲಗಳು ನಿಮ್ಮ ಮೇಲೆ ಕಣ್ಗಾವಲಿಡಲು ಫೋನ್ ಹ್ಯಾಕ್ ಮಾಡುವ ಪ್ರಯತ್ನ ನಡೆಸಿದೆ ಎಂದು ಹೇಳಿತ್ತು. ಈ ಹೇಳಿಕೆಯನ್ನು ಬದಲಾಯಿಸಿ, ಸಾರ್ವಜನಿಕರಿಗೆ ಬೇರೆ ಏನಾದರೂ ದಾರಿ ತಪ್ಪಿಸುವ ವಿಶ್ಲೇಷಣೆ ನೀಡುವಂತೆ ಸರ್ಕಾರದ ಅಧಿಕಾರಿಗಳು ಕಂಪನಿಯ ಪ್ರತಿನಿಧಿಗಳನ್ನು ಒತ್ತಾಯಿಸಿದ್ದಾರೆ ಎಂದು ವರದಿ ಹೇಳಿದೆ.

ಅಕ್ಟೋಬರ್ 31, 2023ರಂದು ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟ ಕೆಲ ನಾಯಕರು ಮತ್ತು ಸ್ವತಂತ್ರ ಪತ್ರಕರ್ತರಿಗೆ ಅ್ಯಪಲ್‌ ಎಚ್ಚರಿಕೆಯ ಸಂದೇಶ ಕಳುಹಿಸಿತ್ತು. “ನಿಮ್ಮ ಅ್ಯಪಲ್‌ ಐಡಿಗೆ ಹೊಂದಿಸಿರುವ ಐಫೋನ್ ಸರ್ಕಾರಿ ಪ್ರಾಯೋಜಿತ ಹ್ಯಾಕಿಂಗ್‌ಗೆ ಗುರಿಯಾಗಿದೆ ಎಂದು ಅ್ಯಪಲ್‌ ಸಂದೇಶ ಎಚ್ಚರಿಸಿತ್ತು. ಜನ ಪ್ರತಿನಿಧಿಗಳು ಸ್ಕ್ರೀನ್ ಶಾಟ್ ಹಂಚಿಕೊಂಡಾಗ, ” ನಾವು ಹ್ಯಾಕಿಂಗ್ ಪ್ರಯತ್ನ ಮಾಡಿದ್ದಾರೆ ಎಂದು ಯಾರನ್ನೂ ಪ್ರತ್ಯೇಕವಾಗಿ ಉಲ್ಲೇಖಿಸುತ್ತಿಲ್ಲ. ಆದರೆ, ಈ ರೀತಿಯ ಅತ್ಯಾಧುನಿಕ ತಂತ್ರಜ್ಞಾನ ಸರ್ಕಾರಿ ಏಜೆನ್ಸಿಗಳಿಗೆ ಮಾತ್ರ ಲಭ್ಯವಿದೆ” ಎಂದು ಅ್ಯಪಲ್‌ ಹೇಳಿತ್ತು.

ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಹುವಾ ಮೊಯಿತ್ರಾ, ಕಾಂಗ್ರೆಸ್ ನಾಯಕ ಶಶಿ ತರೂರ್, ಬಿಆರ್‌ಎಸ್ ನಾಯಕರಾದ ಕೆಟಿ ರಾಮರಾವ್ ಮತ್ತು ಕವಿತಾ ಕವ್ಲಕುಂಟಲ, ಕಾಂಗ್ರೆಸ್‌ನ ಡೇಟಾ ಅನಾಲಿಟಿಕ್ಸ್ ವಿಭಾಗದ ಮುಖ್ಯಸ್ಥ ಪ್ರವೀಣ್ ಚಕ್ರವರ್ತಿ, ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಮಾಡುವ ಯೋಜನೆಯ (OCCRP)ಪತ್ರಕರ್ತ ಆನಂದ್ ಮಂಗ್ನಾಲೆ, ದಿ ವೈರ್‌ನ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಅವರ ಮೊಬೈಲ್ ಫೋನ್‌ಗಳು ಎಚ್ಚರಿಕೆಯ ಸಂದೇಶಗಳನ್ನು ಸ್ವೀಕರಿಸಿತ್ತು.

ಆಮ್ನೆಸ್ಟಿ ಇಂಟರ್‌ನ್ಯಾಶನಲ್‌ನ ಸೆಕ್ಯುರಿಟಿ ಲ್ಯಾಬ್‌ನ ಫೋರೆನ್ಸಿಕ್ ತನಿಖೆಗಳು-2023 ರಲ್ಲಿ ಪತ್ರಕರ್ತರಾದ ಸಿದ್ಧಾರ್ಥ್ ಮತ್ತು ಆನಂದ್ ಅವರ ಫೋನ್‌ಗಳಲ್ಲಿ ಪೆಗಾಸಸ್ ಸ್ಥಾಪಿಸಲಾಗಿತ್ತು ಎಂದು ದೃಢಪಡಿಸಿದೆ ಎಂದು ನ್ಯೂಸ್‌ ಮಿನಿಟ್ ವರದಿ ಹೇಳಿದೆ.

ಆನಂದ್ ಮತ್ತು ರವಿ ಅವರು ಅದಾನಿ ಗ್ರೂಪ್ ಒಳಗೊಂಡಿರುವ ಕಡಲಾಚೆಯ ಅಕ್ರಮ ಹಣ ವರ್ಗಾವಣೆ ಅವ್ಯವಹಾರವನ್ನು ತಾಜಾ ಪುರಾವೆಗಳೊಂದಿಗೆ ಬಯಲಿಗೆಳೆದ ವರದಿಗಾಗಿ ಕೆಲಸ ಮಾಡಿದ್ದರು. ಆಗಸ್ಟ್ 22 ರಂದು ಇಬ್ಬರು ಪತ್ರಕರ್ತರು ತಮ್ಮ ಸಂಶೋಧನಾ ವರದಿಗೆ ಪೂರಕ ಪ್ರತಿಕ್ರಿಯೆ ಕೋರಿ ಅದಾನಿ ಕಂಪನಿಗೆ ಪತ್ರ ಬರೆದಿದ್ದರು. ಇದಾಗಿ 24 ಗಂಟೆಯಲ್ಲಿ ಪತ್ರಕರ್ತ ಆನಂದ್ ಅವರ ಫೋನ್‌ಗೆ ಪೆಗಾಸಸ್ ದಾಳಿಯಾಗಿದೆ ಎಂದು ಆಮ್ನೆಸ್ಟಿ ತನಿಖೆಯಿಂದ ತಿಳಿದು ಬಂದಿರುವುದಾಗಿ ವರದಿ ತಿಳಿಸಿದೆ.

ಈ ಹಿಂದೆ ಇಸ್ರೇಲ್‌ ಮೂಲದ ಸಂಸ್ಥೆ ಎನ್‌ಎಸ್‌ಒ ತಮ್ಮ ಕಣ್ಗಾವಲು ಸಾಫ್ಟ್‌ವೇರ್‌ ಪೆಗಾಸಸ್ ಅನ್ನು
ಸರ್ಕಾರಗಳಿಗೆ ಮಾತ್ರ ಮಾರಾಟ ಮಾಡುವುದಾಗಿ ಸುಪ್ರೀಂ ಕೋರ್ಟ್‌ಗೆ ಹೇಳಿರುವುದನ್ನು ಇಲ್ಲಿ ಸ್ಮರಿಸಬಹುದು.

ZecOps ಎಂಬ ಅಪ್ಲಿಕೇಶನ್‌ನಿಂದ ಆನಂದ್ ಅವರ ಮೊಬೈಲ್‌ಗೆ ಎಚ್ಚರಿಕೆ ಸಂದೇಶ ಬಂದಿತ್ತು. ಇದು ಭದ್ರತಾ ಬೆದರಿಕೆ ಇರುವಾಗ ಮತ್ತು ಸುಧಾರಿತ ಡಿಜಿಟಲ್ ಫೋರೆನ್ಸಿಕ್ಸ್ ಅನ್ನು ಬಳಸುವಾಗ ಎಚ್ಚರಿಕೆ ನೀಡುವ ಅಪ್ಲಿಕೇಶನ್ ಆಗಿದೆ. ಆಗಸ್ಟ್ 23 ರಂದು ಎಚ್ಚರಿಕೆ ಸಂದೇಶ ಬರಲು ಪ್ರಾರಂಭಿಸಿದ್ದವು. ನಂತರ ಆನಂದ್ ಅವರು ತಮ್ಮ ಫೋನ್ ಅನ್ನು OCCRP ಮತ್ತು ಆಮ್ನೆಸ್ಟಿಗೆ ಫೊರೆನ್ಸಿಕ್ ವಿಶ್ಲೇಷಣೆಗೆ ಕೊಟ್ಟಿದ್ದರು. ಎಚ್ಚರಿಕೆ ಸಂದೇಶ ಬಂದಾಗ ಅವರ ಫೋನ್ ಸಂಪೂರ್ಣವಾಗಿ ಶೂನ್ಯ ಕ್ಲಿಕ್‌ಗೆ (ಜಾಮ್ ಆಗೋದು) ಒಳಗಾಗಿತ್ತು ಎಂದ ದಿ ನ್ಯೂಸ್ ಮಿನಿಟ್ ಹೇಳಿದೆ.

ಇದನ್ನೂ ಓದಿ : ‘ಸರ್ನಾ ಪ್ರತ್ಯೇಕ ಧರ್ಮ’ ಮಾನ್ಯತೆಗೆ ಒತ್ತಾಯಿಸಿ ಡಿ.30ರಂದು ಭಾರತ್ ಬಂದ್‌ಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...