Homeಮುಖಪುಟಪ್ರತಿಪಕ್ಷ ನಾಯಕರಿಗೆ ಎಚ್ಚರಿಕೆ ಸಂದೇಶ: ಹೇಳಿಕೆ ಬದಲಿಸಲು ಅ್ಯಪಲ್‌ ಕಂಪನಿಗೆ ಸರ್ಕಾರದ ಒತ್ತಡ; ವರದಿ

ಪ್ರತಿಪಕ್ಷ ನಾಯಕರಿಗೆ ಎಚ್ಚರಿಕೆ ಸಂದೇಶ: ಹೇಳಿಕೆ ಬದಲಿಸಲು ಅ್ಯಪಲ್‌ ಕಂಪನಿಗೆ ಸರ್ಕಾರದ ಒತ್ತಡ; ವರದಿ

- Advertisement -
- Advertisement -

ಕಳೆದ ಅಕ್ಟೋಬರ್ ತಿಂಗಳಲ್ಲಿ ಇಂಡಿಯಾ ಒಕ್ಕೂಟದ ಹಲವು ಪಕ್ಷಗಳ ನಾಯಕರ ಅ್ಯಪಲ್‌ ಐಫೋನ್‌ಗೆ ಸರ್ಕಾರಿ ಪ್ರಾಯೋಜಿತ ಹ್ಯಾಕಿಂಗ್ ಸಾಧ್ಯತೆಯ ಬಗ್ಗೆ ಎಚ್ಚರಿಕೆಯ ಸಂದೇಶವೊಂದು ಬಂದ ಬಗ್ಗೆ ವರದಿಯಾಗಿತ್ತು. ಕೆಲ ನಾಯಕರು ತಮಗೆ ಬಂದ ಎಚ್ಚರಿಕೆ ಸಂದೇಶದ ಸ್ಕ್ರೀನ್ ಶಾಟ್‌ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಈ ಪ್ರಕರಣಕ್ಕೆ ಈಗ ಮಹತ್ವದ ತಿರುವೊಂದು ಸಿಕ್ಕಿದೆ.

ಕೇಂದ್ರ ಸರ್ಕಾರದ ಅಧಿಕಾರಿಗಳು ಅ್ಯಪಲ್‌ ಪ್ರತಿನಿಧಿಗಳನ್ನು ಕರೆಸಿಕೊಂಡು, ಈ ಹಿಂದೆ ಪ್ರತಿಪಕ್ಷ ನಾಯಕರಿಗೆ ಕಳುಹಿಸಿದ್ದ ಎಚ್ಚರಿಕೆಯ ಸಂದೇಶದ ಕುರಿತು ಸಾರ್ವಜನಿಕರಿಗೆ ಬೇರೆ ಏನಾದರೂ ಉತ್ತರ(ಸಾರ್ವಜನಿಕರ ದಾರಿ ತಪ್ಪಿಸುವ) ನೀಡುವಂತೆ ಒತ್ತಾಯಿಸಿದ್ದಾರೆ ಎಂದು ವಾಶಿಂಗ್ಟನ್ ಪೋಸ್ಟ್‌ ವರದಿ ಉಲ್ಲೇಖಿಸಿ ಸ್ವತಂತ್ರ ಸುದ್ದಿ ಮಾಧ್ಯಮ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ತಮ್ಮ ಮೊಬೈಲ್‌ಗೆ ಸರ್ಕಾರಿ ಪ್ರಯೋಜಿತ ಹ್ಯಾಕಿಂಗ್ ಸಾಧ್ಯತೆಯ ಕುರಿತು ಸಂದೇಶ ಬಂದಿದ್ದ ಬಗ್ಗೆ ಪ್ರತಿಪಕ್ಷ ನಾಯಕರು ಅ್ಯಪಲ್‌ ಕಂಪನಿಯನ್ನು ಪ್ರಶ್ನಿಸಿದ್ದರು. ಆಗ, ಅದು ಸರ್ಕಾರದ ಮೂಲಗಳು ನಿಮ್ಮ ಮೇಲೆ ಕಣ್ಗಾವಲಿಡಲು ಫೋನ್ ಹ್ಯಾಕ್ ಮಾಡುವ ಪ್ರಯತ್ನ ನಡೆಸಿದೆ ಎಂದು ಹೇಳಿತ್ತು. ಈ ಹೇಳಿಕೆಯನ್ನು ಬದಲಾಯಿಸಿ, ಸಾರ್ವಜನಿಕರಿಗೆ ಬೇರೆ ಏನಾದರೂ ದಾರಿ ತಪ್ಪಿಸುವ ವಿಶ್ಲೇಷಣೆ ನೀಡುವಂತೆ ಸರ್ಕಾರದ ಅಧಿಕಾರಿಗಳು ಕಂಪನಿಯ ಪ್ರತಿನಿಧಿಗಳನ್ನು ಒತ್ತಾಯಿಸಿದ್ದಾರೆ ಎಂದು ವರದಿ ಹೇಳಿದೆ.

ಅಕ್ಟೋಬರ್ 31, 2023ರಂದು ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟ ಕೆಲ ನಾಯಕರು ಮತ್ತು ಸ್ವತಂತ್ರ ಪತ್ರಕರ್ತರಿಗೆ ಅ್ಯಪಲ್‌ ಎಚ್ಚರಿಕೆಯ ಸಂದೇಶ ಕಳುಹಿಸಿತ್ತು. “ನಿಮ್ಮ ಅ್ಯಪಲ್‌ ಐಡಿಗೆ ಹೊಂದಿಸಿರುವ ಐಫೋನ್ ಸರ್ಕಾರಿ ಪ್ರಾಯೋಜಿತ ಹ್ಯಾಕಿಂಗ್‌ಗೆ ಗುರಿಯಾಗಿದೆ ಎಂದು ಅ್ಯಪಲ್‌ ಸಂದೇಶ ಎಚ್ಚರಿಸಿತ್ತು. ಜನ ಪ್ರತಿನಿಧಿಗಳು ಸ್ಕ್ರೀನ್ ಶಾಟ್ ಹಂಚಿಕೊಂಡಾಗ, ” ನಾವು ಹ್ಯಾಕಿಂಗ್ ಪ್ರಯತ್ನ ಮಾಡಿದ್ದಾರೆ ಎಂದು ಯಾರನ್ನೂ ಪ್ರತ್ಯೇಕವಾಗಿ ಉಲ್ಲೇಖಿಸುತ್ತಿಲ್ಲ. ಆದರೆ, ಈ ರೀತಿಯ ಅತ್ಯಾಧುನಿಕ ತಂತ್ರಜ್ಞಾನ ಸರ್ಕಾರಿ ಏಜೆನ್ಸಿಗಳಿಗೆ ಮಾತ್ರ ಲಭ್ಯವಿದೆ” ಎಂದು ಅ್ಯಪಲ್‌ ಹೇಳಿತ್ತು.

ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಹುವಾ ಮೊಯಿತ್ರಾ, ಕಾಂಗ್ರೆಸ್ ನಾಯಕ ಶಶಿ ತರೂರ್, ಬಿಆರ್‌ಎಸ್ ನಾಯಕರಾದ ಕೆಟಿ ರಾಮರಾವ್ ಮತ್ತು ಕವಿತಾ ಕವ್ಲಕುಂಟಲ, ಕಾಂಗ್ರೆಸ್‌ನ ಡೇಟಾ ಅನಾಲಿಟಿಕ್ಸ್ ವಿಭಾಗದ ಮುಖ್ಯಸ್ಥ ಪ್ರವೀಣ್ ಚಕ್ರವರ್ತಿ, ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಮಾಡುವ ಯೋಜನೆಯ (OCCRP)ಪತ್ರಕರ್ತ ಆನಂದ್ ಮಂಗ್ನಾಲೆ, ದಿ ವೈರ್‌ನ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಅವರ ಮೊಬೈಲ್ ಫೋನ್‌ಗಳು ಎಚ್ಚರಿಕೆಯ ಸಂದೇಶಗಳನ್ನು ಸ್ವೀಕರಿಸಿತ್ತು.

ಆಮ್ನೆಸ್ಟಿ ಇಂಟರ್‌ನ್ಯಾಶನಲ್‌ನ ಸೆಕ್ಯುರಿಟಿ ಲ್ಯಾಬ್‌ನ ಫೋರೆನ್ಸಿಕ್ ತನಿಖೆಗಳು-2023 ರಲ್ಲಿ ಪತ್ರಕರ್ತರಾದ ಸಿದ್ಧಾರ್ಥ್ ಮತ್ತು ಆನಂದ್ ಅವರ ಫೋನ್‌ಗಳಲ್ಲಿ ಪೆಗಾಸಸ್ ಸ್ಥಾಪಿಸಲಾಗಿತ್ತು ಎಂದು ದೃಢಪಡಿಸಿದೆ ಎಂದು ನ್ಯೂಸ್‌ ಮಿನಿಟ್ ವರದಿ ಹೇಳಿದೆ.

ಆನಂದ್ ಮತ್ತು ರವಿ ಅವರು ಅದಾನಿ ಗ್ರೂಪ್ ಒಳಗೊಂಡಿರುವ ಕಡಲಾಚೆಯ ಅಕ್ರಮ ಹಣ ವರ್ಗಾವಣೆ ಅವ್ಯವಹಾರವನ್ನು ತಾಜಾ ಪುರಾವೆಗಳೊಂದಿಗೆ ಬಯಲಿಗೆಳೆದ ವರದಿಗಾಗಿ ಕೆಲಸ ಮಾಡಿದ್ದರು. ಆಗಸ್ಟ್ 22 ರಂದು ಇಬ್ಬರು ಪತ್ರಕರ್ತರು ತಮ್ಮ ಸಂಶೋಧನಾ ವರದಿಗೆ ಪೂರಕ ಪ್ರತಿಕ್ರಿಯೆ ಕೋರಿ ಅದಾನಿ ಕಂಪನಿಗೆ ಪತ್ರ ಬರೆದಿದ್ದರು. ಇದಾಗಿ 24 ಗಂಟೆಯಲ್ಲಿ ಪತ್ರಕರ್ತ ಆನಂದ್ ಅವರ ಫೋನ್‌ಗೆ ಪೆಗಾಸಸ್ ದಾಳಿಯಾಗಿದೆ ಎಂದು ಆಮ್ನೆಸ್ಟಿ ತನಿಖೆಯಿಂದ ತಿಳಿದು ಬಂದಿರುವುದಾಗಿ ವರದಿ ತಿಳಿಸಿದೆ.

ಈ ಹಿಂದೆ ಇಸ್ರೇಲ್‌ ಮೂಲದ ಸಂಸ್ಥೆ ಎನ್‌ಎಸ್‌ಒ ತಮ್ಮ ಕಣ್ಗಾವಲು ಸಾಫ್ಟ್‌ವೇರ್‌ ಪೆಗಾಸಸ್ ಅನ್ನು
ಸರ್ಕಾರಗಳಿಗೆ ಮಾತ್ರ ಮಾರಾಟ ಮಾಡುವುದಾಗಿ ಸುಪ್ರೀಂ ಕೋರ್ಟ್‌ಗೆ ಹೇಳಿರುವುದನ್ನು ಇಲ್ಲಿ ಸ್ಮರಿಸಬಹುದು.

ZecOps ಎಂಬ ಅಪ್ಲಿಕೇಶನ್‌ನಿಂದ ಆನಂದ್ ಅವರ ಮೊಬೈಲ್‌ಗೆ ಎಚ್ಚರಿಕೆ ಸಂದೇಶ ಬಂದಿತ್ತು. ಇದು ಭದ್ರತಾ ಬೆದರಿಕೆ ಇರುವಾಗ ಮತ್ತು ಸುಧಾರಿತ ಡಿಜಿಟಲ್ ಫೋರೆನ್ಸಿಕ್ಸ್ ಅನ್ನು ಬಳಸುವಾಗ ಎಚ್ಚರಿಕೆ ನೀಡುವ ಅಪ್ಲಿಕೇಶನ್ ಆಗಿದೆ. ಆಗಸ್ಟ್ 23 ರಂದು ಎಚ್ಚರಿಕೆ ಸಂದೇಶ ಬರಲು ಪ್ರಾರಂಭಿಸಿದ್ದವು. ನಂತರ ಆನಂದ್ ಅವರು ತಮ್ಮ ಫೋನ್ ಅನ್ನು OCCRP ಮತ್ತು ಆಮ್ನೆಸ್ಟಿಗೆ ಫೊರೆನ್ಸಿಕ್ ವಿಶ್ಲೇಷಣೆಗೆ ಕೊಟ್ಟಿದ್ದರು. ಎಚ್ಚರಿಕೆ ಸಂದೇಶ ಬಂದಾಗ ಅವರ ಫೋನ್ ಸಂಪೂರ್ಣವಾಗಿ ಶೂನ್ಯ ಕ್ಲಿಕ್‌ಗೆ (ಜಾಮ್ ಆಗೋದು) ಒಳಗಾಗಿತ್ತು ಎಂದ ದಿ ನ್ಯೂಸ್ ಮಿನಿಟ್ ಹೇಳಿದೆ.

ಇದನ್ನೂ ಓದಿ : ‘ಸರ್ನಾ ಪ್ರತ್ಯೇಕ ಧರ್ಮ’ ಮಾನ್ಯತೆಗೆ ಒತ್ತಾಯಿಸಿ ಡಿ.30ರಂದು ಭಾರತ್ ಬಂದ್‌ಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...