Homeಮುಖಪುಟಪ್ರತಿಪಕ್ಷ ನಾಯಕರಿಗೆ ಎಚ್ಚರಿಕೆ ಸಂದೇಶ: ಹೇಳಿಕೆ ಬದಲಿಸಲು ಅ್ಯಪಲ್‌ ಕಂಪನಿಗೆ ಸರ್ಕಾರದ ಒತ್ತಡ; ವರದಿ

ಪ್ರತಿಪಕ್ಷ ನಾಯಕರಿಗೆ ಎಚ್ಚರಿಕೆ ಸಂದೇಶ: ಹೇಳಿಕೆ ಬದಲಿಸಲು ಅ್ಯಪಲ್‌ ಕಂಪನಿಗೆ ಸರ್ಕಾರದ ಒತ್ತಡ; ವರದಿ

- Advertisement -
- Advertisement -

ಕಳೆದ ಅಕ್ಟೋಬರ್ ತಿಂಗಳಲ್ಲಿ ಇಂಡಿಯಾ ಒಕ್ಕೂಟದ ಹಲವು ಪಕ್ಷಗಳ ನಾಯಕರ ಅ್ಯಪಲ್‌ ಐಫೋನ್‌ಗೆ ಸರ್ಕಾರಿ ಪ್ರಾಯೋಜಿತ ಹ್ಯಾಕಿಂಗ್ ಸಾಧ್ಯತೆಯ ಬಗ್ಗೆ ಎಚ್ಚರಿಕೆಯ ಸಂದೇಶವೊಂದು ಬಂದ ಬಗ್ಗೆ ವರದಿಯಾಗಿತ್ತು. ಕೆಲ ನಾಯಕರು ತಮಗೆ ಬಂದ ಎಚ್ಚರಿಕೆ ಸಂದೇಶದ ಸ್ಕ್ರೀನ್ ಶಾಟ್‌ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಈ ಪ್ರಕರಣಕ್ಕೆ ಈಗ ಮಹತ್ವದ ತಿರುವೊಂದು ಸಿಕ್ಕಿದೆ.

ಕೇಂದ್ರ ಸರ್ಕಾರದ ಅಧಿಕಾರಿಗಳು ಅ್ಯಪಲ್‌ ಪ್ರತಿನಿಧಿಗಳನ್ನು ಕರೆಸಿಕೊಂಡು, ಈ ಹಿಂದೆ ಪ್ರತಿಪಕ್ಷ ನಾಯಕರಿಗೆ ಕಳುಹಿಸಿದ್ದ ಎಚ್ಚರಿಕೆಯ ಸಂದೇಶದ ಕುರಿತು ಸಾರ್ವಜನಿಕರಿಗೆ ಬೇರೆ ಏನಾದರೂ ಉತ್ತರ(ಸಾರ್ವಜನಿಕರ ದಾರಿ ತಪ್ಪಿಸುವ) ನೀಡುವಂತೆ ಒತ್ತಾಯಿಸಿದ್ದಾರೆ ಎಂದು ವಾಶಿಂಗ್ಟನ್ ಪೋಸ್ಟ್‌ ವರದಿ ಉಲ್ಲೇಖಿಸಿ ಸ್ವತಂತ್ರ ಸುದ್ದಿ ಮಾಧ್ಯಮ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ತಮ್ಮ ಮೊಬೈಲ್‌ಗೆ ಸರ್ಕಾರಿ ಪ್ರಯೋಜಿತ ಹ್ಯಾಕಿಂಗ್ ಸಾಧ್ಯತೆಯ ಕುರಿತು ಸಂದೇಶ ಬಂದಿದ್ದ ಬಗ್ಗೆ ಪ್ರತಿಪಕ್ಷ ನಾಯಕರು ಅ್ಯಪಲ್‌ ಕಂಪನಿಯನ್ನು ಪ್ರಶ್ನಿಸಿದ್ದರು. ಆಗ, ಅದು ಸರ್ಕಾರದ ಮೂಲಗಳು ನಿಮ್ಮ ಮೇಲೆ ಕಣ್ಗಾವಲಿಡಲು ಫೋನ್ ಹ್ಯಾಕ್ ಮಾಡುವ ಪ್ರಯತ್ನ ನಡೆಸಿದೆ ಎಂದು ಹೇಳಿತ್ತು. ಈ ಹೇಳಿಕೆಯನ್ನು ಬದಲಾಯಿಸಿ, ಸಾರ್ವಜನಿಕರಿಗೆ ಬೇರೆ ಏನಾದರೂ ದಾರಿ ತಪ್ಪಿಸುವ ವಿಶ್ಲೇಷಣೆ ನೀಡುವಂತೆ ಸರ್ಕಾರದ ಅಧಿಕಾರಿಗಳು ಕಂಪನಿಯ ಪ್ರತಿನಿಧಿಗಳನ್ನು ಒತ್ತಾಯಿಸಿದ್ದಾರೆ ಎಂದು ವರದಿ ಹೇಳಿದೆ.

ಅಕ್ಟೋಬರ್ 31, 2023ರಂದು ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟ ಕೆಲ ನಾಯಕರು ಮತ್ತು ಸ್ವತಂತ್ರ ಪತ್ರಕರ್ತರಿಗೆ ಅ್ಯಪಲ್‌ ಎಚ್ಚರಿಕೆಯ ಸಂದೇಶ ಕಳುಹಿಸಿತ್ತು. “ನಿಮ್ಮ ಅ್ಯಪಲ್‌ ಐಡಿಗೆ ಹೊಂದಿಸಿರುವ ಐಫೋನ್ ಸರ್ಕಾರಿ ಪ್ರಾಯೋಜಿತ ಹ್ಯಾಕಿಂಗ್‌ಗೆ ಗುರಿಯಾಗಿದೆ ಎಂದು ಅ್ಯಪಲ್‌ ಸಂದೇಶ ಎಚ್ಚರಿಸಿತ್ತು. ಜನ ಪ್ರತಿನಿಧಿಗಳು ಸ್ಕ್ರೀನ್ ಶಾಟ್ ಹಂಚಿಕೊಂಡಾಗ, ” ನಾವು ಹ್ಯಾಕಿಂಗ್ ಪ್ರಯತ್ನ ಮಾಡಿದ್ದಾರೆ ಎಂದು ಯಾರನ್ನೂ ಪ್ರತ್ಯೇಕವಾಗಿ ಉಲ್ಲೇಖಿಸುತ್ತಿಲ್ಲ. ಆದರೆ, ಈ ರೀತಿಯ ಅತ್ಯಾಧುನಿಕ ತಂತ್ರಜ್ಞಾನ ಸರ್ಕಾರಿ ಏಜೆನ್ಸಿಗಳಿಗೆ ಮಾತ್ರ ಲಭ್ಯವಿದೆ” ಎಂದು ಅ್ಯಪಲ್‌ ಹೇಳಿತ್ತು.

ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಹುವಾ ಮೊಯಿತ್ರಾ, ಕಾಂಗ್ರೆಸ್ ನಾಯಕ ಶಶಿ ತರೂರ್, ಬಿಆರ್‌ಎಸ್ ನಾಯಕರಾದ ಕೆಟಿ ರಾಮರಾವ್ ಮತ್ತು ಕವಿತಾ ಕವ್ಲಕುಂಟಲ, ಕಾಂಗ್ರೆಸ್‌ನ ಡೇಟಾ ಅನಾಲಿಟಿಕ್ಸ್ ವಿಭಾಗದ ಮುಖ್ಯಸ್ಥ ಪ್ರವೀಣ್ ಚಕ್ರವರ್ತಿ, ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಮಾಡುವ ಯೋಜನೆಯ (OCCRP)ಪತ್ರಕರ್ತ ಆನಂದ್ ಮಂಗ್ನಾಲೆ, ದಿ ವೈರ್‌ನ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಅವರ ಮೊಬೈಲ್ ಫೋನ್‌ಗಳು ಎಚ್ಚರಿಕೆಯ ಸಂದೇಶಗಳನ್ನು ಸ್ವೀಕರಿಸಿತ್ತು.

ಆಮ್ನೆಸ್ಟಿ ಇಂಟರ್‌ನ್ಯಾಶನಲ್‌ನ ಸೆಕ್ಯುರಿಟಿ ಲ್ಯಾಬ್‌ನ ಫೋರೆನ್ಸಿಕ್ ತನಿಖೆಗಳು-2023 ರಲ್ಲಿ ಪತ್ರಕರ್ತರಾದ ಸಿದ್ಧಾರ್ಥ್ ಮತ್ತು ಆನಂದ್ ಅವರ ಫೋನ್‌ಗಳಲ್ಲಿ ಪೆಗಾಸಸ್ ಸ್ಥಾಪಿಸಲಾಗಿತ್ತು ಎಂದು ದೃಢಪಡಿಸಿದೆ ಎಂದು ನ್ಯೂಸ್‌ ಮಿನಿಟ್ ವರದಿ ಹೇಳಿದೆ.

ಆನಂದ್ ಮತ್ತು ರವಿ ಅವರು ಅದಾನಿ ಗ್ರೂಪ್ ಒಳಗೊಂಡಿರುವ ಕಡಲಾಚೆಯ ಅಕ್ರಮ ಹಣ ವರ್ಗಾವಣೆ ಅವ್ಯವಹಾರವನ್ನು ತಾಜಾ ಪುರಾವೆಗಳೊಂದಿಗೆ ಬಯಲಿಗೆಳೆದ ವರದಿಗಾಗಿ ಕೆಲಸ ಮಾಡಿದ್ದರು. ಆಗಸ್ಟ್ 22 ರಂದು ಇಬ್ಬರು ಪತ್ರಕರ್ತರು ತಮ್ಮ ಸಂಶೋಧನಾ ವರದಿಗೆ ಪೂರಕ ಪ್ರತಿಕ್ರಿಯೆ ಕೋರಿ ಅದಾನಿ ಕಂಪನಿಗೆ ಪತ್ರ ಬರೆದಿದ್ದರು. ಇದಾಗಿ 24 ಗಂಟೆಯಲ್ಲಿ ಪತ್ರಕರ್ತ ಆನಂದ್ ಅವರ ಫೋನ್‌ಗೆ ಪೆಗಾಸಸ್ ದಾಳಿಯಾಗಿದೆ ಎಂದು ಆಮ್ನೆಸ್ಟಿ ತನಿಖೆಯಿಂದ ತಿಳಿದು ಬಂದಿರುವುದಾಗಿ ವರದಿ ತಿಳಿಸಿದೆ.

ಈ ಹಿಂದೆ ಇಸ್ರೇಲ್‌ ಮೂಲದ ಸಂಸ್ಥೆ ಎನ್‌ಎಸ್‌ಒ ತಮ್ಮ ಕಣ್ಗಾವಲು ಸಾಫ್ಟ್‌ವೇರ್‌ ಪೆಗಾಸಸ್ ಅನ್ನು
ಸರ್ಕಾರಗಳಿಗೆ ಮಾತ್ರ ಮಾರಾಟ ಮಾಡುವುದಾಗಿ ಸುಪ್ರೀಂ ಕೋರ್ಟ್‌ಗೆ ಹೇಳಿರುವುದನ್ನು ಇಲ್ಲಿ ಸ್ಮರಿಸಬಹುದು.

ZecOps ಎಂಬ ಅಪ್ಲಿಕೇಶನ್‌ನಿಂದ ಆನಂದ್ ಅವರ ಮೊಬೈಲ್‌ಗೆ ಎಚ್ಚರಿಕೆ ಸಂದೇಶ ಬಂದಿತ್ತು. ಇದು ಭದ್ರತಾ ಬೆದರಿಕೆ ಇರುವಾಗ ಮತ್ತು ಸುಧಾರಿತ ಡಿಜಿಟಲ್ ಫೋರೆನ್ಸಿಕ್ಸ್ ಅನ್ನು ಬಳಸುವಾಗ ಎಚ್ಚರಿಕೆ ನೀಡುವ ಅಪ್ಲಿಕೇಶನ್ ಆಗಿದೆ. ಆಗಸ್ಟ್ 23 ರಂದು ಎಚ್ಚರಿಕೆ ಸಂದೇಶ ಬರಲು ಪ್ರಾರಂಭಿಸಿದ್ದವು. ನಂತರ ಆನಂದ್ ಅವರು ತಮ್ಮ ಫೋನ್ ಅನ್ನು OCCRP ಮತ್ತು ಆಮ್ನೆಸ್ಟಿಗೆ ಫೊರೆನ್ಸಿಕ್ ವಿಶ್ಲೇಷಣೆಗೆ ಕೊಟ್ಟಿದ್ದರು. ಎಚ್ಚರಿಕೆ ಸಂದೇಶ ಬಂದಾಗ ಅವರ ಫೋನ್ ಸಂಪೂರ್ಣವಾಗಿ ಶೂನ್ಯ ಕ್ಲಿಕ್‌ಗೆ (ಜಾಮ್ ಆಗೋದು) ಒಳಗಾಗಿತ್ತು ಎಂದ ದಿ ನ್ಯೂಸ್ ಮಿನಿಟ್ ಹೇಳಿದೆ.

ಇದನ್ನೂ ಓದಿ : ‘ಸರ್ನಾ ಪ್ರತ್ಯೇಕ ಧರ್ಮ’ ಮಾನ್ಯತೆಗೆ ಒತ್ತಾಯಿಸಿ ಡಿ.30ರಂದು ಭಾರತ್ ಬಂದ್‌ಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...