Homeಮುಖಪುಟಪ್ರತಿಪಕ್ಷ ನಾಯಕರಿಗೆ ಎಚ್ಚರಿಕೆ ಸಂದೇಶ: ಹೇಳಿಕೆ ಬದಲಿಸಲು ಅ್ಯಪಲ್‌ ಕಂಪನಿಗೆ ಸರ್ಕಾರದ ಒತ್ತಡ; ವರದಿ

ಪ್ರತಿಪಕ್ಷ ನಾಯಕರಿಗೆ ಎಚ್ಚರಿಕೆ ಸಂದೇಶ: ಹೇಳಿಕೆ ಬದಲಿಸಲು ಅ್ಯಪಲ್‌ ಕಂಪನಿಗೆ ಸರ್ಕಾರದ ಒತ್ತಡ; ವರದಿ

- Advertisement -
- Advertisement -

ಕಳೆದ ಅಕ್ಟೋಬರ್ ತಿಂಗಳಲ್ಲಿ ಇಂಡಿಯಾ ಒಕ್ಕೂಟದ ಹಲವು ಪಕ್ಷಗಳ ನಾಯಕರ ಅ್ಯಪಲ್‌ ಐಫೋನ್‌ಗೆ ಸರ್ಕಾರಿ ಪ್ರಾಯೋಜಿತ ಹ್ಯಾಕಿಂಗ್ ಸಾಧ್ಯತೆಯ ಬಗ್ಗೆ ಎಚ್ಚರಿಕೆಯ ಸಂದೇಶವೊಂದು ಬಂದ ಬಗ್ಗೆ ವರದಿಯಾಗಿತ್ತು. ಕೆಲ ನಾಯಕರು ತಮಗೆ ಬಂದ ಎಚ್ಚರಿಕೆ ಸಂದೇಶದ ಸ್ಕ್ರೀನ್ ಶಾಟ್‌ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಈ ಪ್ರಕರಣಕ್ಕೆ ಈಗ ಮಹತ್ವದ ತಿರುವೊಂದು ಸಿಕ್ಕಿದೆ.

ಕೇಂದ್ರ ಸರ್ಕಾರದ ಅಧಿಕಾರಿಗಳು ಅ್ಯಪಲ್‌ ಪ್ರತಿನಿಧಿಗಳನ್ನು ಕರೆಸಿಕೊಂಡು, ಈ ಹಿಂದೆ ಪ್ರತಿಪಕ್ಷ ನಾಯಕರಿಗೆ ಕಳುಹಿಸಿದ್ದ ಎಚ್ಚರಿಕೆಯ ಸಂದೇಶದ ಕುರಿತು ಸಾರ್ವಜನಿಕರಿಗೆ ಬೇರೆ ಏನಾದರೂ ಉತ್ತರ(ಸಾರ್ವಜನಿಕರ ದಾರಿ ತಪ್ಪಿಸುವ) ನೀಡುವಂತೆ ಒತ್ತಾಯಿಸಿದ್ದಾರೆ ಎಂದು ವಾಶಿಂಗ್ಟನ್ ಪೋಸ್ಟ್‌ ವರದಿ ಉಲ್ಲೇಖಿಸಿ ಸ್ವತಂತ್ರ ಸುದ್ದಿ ಮಾಧ್ಯಮ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ತಮ್ಮ ಮೊಬೈಲ್‌ಗೆ ಸರ್ಕಾರಿ ಪ್ರಯೋಜಿತ ಹ್ಯಾಕಿಂಗ್ ಸಾಧ್ಯತೆಯ ಕುರಿತು ಸಂದೇಶ ಬಂದಿದ್ದ ಬಗ್ಗೆ ಪ್ರತಿಪಕ್ಷ ನಾಯಕರು ಅ್ಯಪಲ್‌ ಕಂಪನಿಯನ್ನು ಪ್ರಶ್ನಿಸಿದ್ದರು. ಆಗ, ಅದು ಸರ್ಕಾರದ ಮೂಲಗಳು ನಿಮ್ಮ ಮೇಲೆ ಕಣ್ಗಾವಲಿಡಲು ಫೋನ್ ಹ್ಯಾಕ್ ಮಾಡುವ ಪ್ರಯತ್ನ ನಡೆಸಿದೆ ಎಂದು ಹೇಳಿತ್ತು. ಈ ಹೇಳಿಕೆಯನ್ನು ಬದಲಾಯಿಸಿ, ಸಾರ್ವಜನಿಕರಿಗೆ ಬೇರೆ ಏನಾದರೂ ದಾರಿ ತಪ್ಪಿಸುವ ವಿಶ್ಲೇಷಣೆ ನೀಡುವಂತೆ ಸರ್ಕಾರದ ಅಧಿಕಾರಿಗಳು ಕಂಪನಿಯ ಪ್ರತಿನಿಧಿಗಳನ್ನು ಒತ್ತಾಯಿಸಿದ್ದಾರೆ ಎಂದು ವರದಿ ಹೇಳಿದೆ.

ಅಕ್ಟೋಬರ್ 31, 2023ರಂದು ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟ ಕೆಲ ನಾಯಕರು ಮತ್ತು ಸ್ವತಂತ್ರ ಪತ್ರಕರ್ತರಿಗೆ ಅ್ಯಪಲ್‌ ಎಚ್ಚರಿಕೆಯ ಸಂದೇಶ ಕಳುಹಿಸಿತ್ತು. “ನಿಮ್ಮ ಅ್ಯಪಲ್‌ ಐಡಿಗೆ ಹೊಂದಿಸಿರುವ ಐಫೋನ್ ಸರ್ಕಾರಿ ಪ್ರಾಯೋಜಿತ ಹ್ಯಾಕಿಂಗ್‌ಗೆ ಗುರಿಯಾಗಿದೆ ಎಂದು ಅ್ಯಪಲ್‌ ಸಂದೇಶ ಎಚ್ಚರಿಸಿತ್ತು. ಜನ ಪ್ರತಿನಿಧಿಗಳು ಸ್ಕ್ರೀನ್ ಶಾಟ್ ಹಂಚಿಕೊಂಡಾಗ, ” ನಾವು ಹ್ಯಾಕಿಂಗ್ ಪ್ರಯತ್ನ ಮಾಡಿದ್ದಾರೆ ಎಂದು ಯಾರನ್ನೂ ಪ್ರತ್ಯೇಕವಾಗಿ ಉಲ್ಲೇಖಿಸುತ್ತಿಲ್ಲ. ಆದರೆ, ಈ ರೀತಿಯ ಅತ್ಯಾಧುನಿಕ ತಂತ್ರಜ್ಞಾನ ಸರ್ಕಾರಿ ಏಜೆನ್ಸಿಗಳಿಗೆ ಮಾತ್ರ ಲಭ್ಯವಿದೆ” ಎಂದು ಅ್ಯಪಲ್‌ ಹೇಳಿತ್ತು.

ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಹುವಾ ಮೊಯಿತ್ರಾ, ಕಾಂಗ್ರೆಸ್ ನಾಯಕ ಶಶಿ ತರೂರ್, ಬಿಆರ್‌ಎಸ್ ನಾಯಕರಾದ ಕೆಟಿ ರಾಮರಾವ್ ಮತ್ತು ಕವಿತಾ ಕವ್ಲಕುಂಟಲ, ಕಾಂಗ್ರೆಸ್‌ನ ಡೇಟಾ ಅನಾಲಿಟಿಕ್ಸ್ ವಿಭಾಗದ ಮುಖ್ಯಸ್ಥ ಪ್ರವೀಣ್ ಚಕ್ರವರ್ತಿ, ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಮಾಡುವ ಯೋಜನೆಯ (OCCRP)ಪತ್ರಕರ್ತ ಆನಂದ್ ಮಂಗ್ನಾಲೆ, ದಿ ವೈರ್‌ನ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಅವರ ಮೊಬೈಲ್ ಫೋನ್‌ಗಳು ಎಚ್ಚರಿಕೆಯ ಸಂದೇಶಗಳನ್ನು ಸ್ವೀಕರಿಸಿತ್ತು.

ಆಮ್ನೆಸ್ಟಿ ಇಂಟರ್‌ನ್ಯಾಶನಲ್‌ನ ಸೆಕ್ಯುರಿಟಿ ಲ್ಯಾಬ್‌ನ ಫೋರೆನ್ಸಿಕ್ ತನಿಖೆಗಳು-2023 ರಲ್ಲಿ ಪತ್ರಕರ್ತರಾದ ಸಿದ್ಧಾರ್ಥ್ ಮತ್ತು ಆನಂದ್ ಅವರ ಫೋನ್‌ಗಳಲ್ಲಿ ಪೆಗಾಸಸ್ ಸ್ಥಾಪಿಸಲಾಗಿತ್ತು ಎಂದು ದೃಢಪಡಿಸಿದೆ ಎಂದು ನ್ಯೂಸ್‌ ಮಿನಿಟ್ ವರದಿ ಹೇಳಿದೆ.

ಆನಂದ್ ಮತ್ತು ರವಿ ಅವರು ಅದಾನಿ ಗ್ರೂಪ್ ಒಳಗೊಂಡಿರುವ ಕಡಲಾಚೆಯ ಅಕ್ರಮ ಹಣ ವರ್ಗಾವಣೆ ಅವ್ಯವಹಾರವನ್ನು ತಾಜಾ ಪುರಾವೆಗಳೊಂದಿಗೆ ಬಯಲಿಗೆಳೆದ ವರದಿಗಾಗಿ ಕೆಲಸ ಮಾಡಿದ್ದರು. ಆಗಸ್ಟ್ 22 ರಂದು ಇಬ್ಬರು ಪತ್ರಕರ್ತರು ತಮ್ಮ ಸಂಶೋಧನಾ ವರದಿಗೆ ಪೂರಕ ಪ್ರತಿಕ್ರಿಯೆ ಕೋರಿ ಅದಾನಿ ಕಂಪನಿಗೆ ಪತ್ರ ಬರೆದಿದ್ದರು. ಇದಾಗಿ 24 ಗಂಟೆಯಲ್ಲಿ ಪತ್ರಕರ್ತ ಆನಂದ್ ಅವರ ಫೋನ್‌ಗೆ ಪೆಗಾಸಸ್ ದಾಳಿಯಾಗಿದೆ ಎಂದು ಆಮ್ನೆಸ್ಟಿ ತನಿಖೆಯಿಂದ ತಿಳಿದು ಬಂದಿರುವುದಾಗಿ ವರದಿ ತಿಳಿಸಿದೆ.

ಈ ಹಿಂದೆ ಇಸ್ರೇಲ್‌ ಮೂಲದ ಸಂಸ್ಥೆ ಎನ್‌ಎಸ್‌ಒ ತಮ್ಮ ಕಣ್ಗಾವಲು ಸಾಫ್ಟ್‌ವೇರ್‌ ಪೆಗಾಸಸ್ ಅನ್ನು
ಸರ್ಕಾರಗಳಿಗೆ ಮಾತ್ರ ಮಾರಾಟ ಮಾಡುವುದಾಗಿ ಸುಪ್ರೀಂ ಕೋರ್ಟ್‌ಗೆ ಹೇಳಿರುವುದನ್ನು ಇಲ್ಲಿ ಸ್ಮರಿಸಬಹುದು.

ZecOps ಎಂಬ ಅಪ್ಲಿಕೇಶನ್‌ನಿಂದ ಆನಂದ್ ಅವರ ಮೊಬೈಲ್‌ಗೆ ಎಚ್ಚರಿಕೆ ಸಂದೇಶ ಬಂದಿತ್ತು. ಇದು ಭದ್ರತಾ ಬೆದರಿಕೆ ಇರುವಾಗ ಮತ್ತು ಸುಧಾರಿತ ಡಿಜಿಟಲ್ ಫೋರೆನ್ಸಿಕ್ಸ್ ಅನ್ನು ಬಳಸುವಾಗ ಎಚ್ಚರಿಕೆ ನೀಡುವ ಅಪ್ಲಿಕೇಶನ್ ಆಗಿದೆ. ಆಗಸ್ಟ್ 23 ರಂದು ಎಚ್ಚರಿಕೆ ಸಂದೇಶ ಬರಲು ಪ್ರಾರಂಭಿಸಿದ್ದವು. ನಂತರ ಆನಂದ್ ಅವರು ತಮ್ಮ ಫೋನ್ ಅನ್ನು OCCRP ಮತ್ತು ಆಮ್ನೆಸ್ಟಿಗೆ ಫೊರೆನ್ಸಿಕ್ ವಿಶ್ಲೇಷಣೆಗೆ ಕೊಟ್ಟಿದ್ದರು. ಎಚ್ಚರಿಕೆ ಸಂದೇಶ ಬಂದಾಗ ಅವರ ಫೋನ್ ಸಂಪೂರ್ಣವಾಗಿ ಶೂನ್ಯ ಕ್ಲಿಕ್‌ಗೆ (ಜಾಮ್ ಆಗೋದು) ಒಳಗಾಗಿತ್ತು ಎಂದ ದಿ ನ್ಯೂಸ್ ಮಿನಿಟ್ ಹೇಳಿದೆ.

ಇದನ್ನೂ ಓದಿ : ‘ಸರ್ನಾ ಪ್ರತ್ಯೇಕ ಧರ್ಮ’ ಮಾನ್ಯತೆಗೆ ಒತ್ತಾಯಿಸಿ ಡಿ.30ರಂದು ಭಾರತ್ ಬಂದ್‌ಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...