Homeಮುಖಪುಟಪ್ರತಿಪಕ್ಷ ನಾಯಕರಿಗೆ ಎಚ್ಚರಿಕೆ ಸಂದೇಶ: ಹೇಳಿಕೆ ಬದಲಿಸಲು ಅ್ಯಪಲ್‌ ಕಂಪನಿಗೆ ಸರ್ಕಾರದ ಒತ್ತಡ; ವರದಿ

ಪ್ರತಿಪಕ್ಷ ನಾಯಕರಿಗೆ ಎಚ್ಚರಿಕೆ ಸಂದೇಶ: ಹೇಳಿಕೆ ಬದಲಿಸಲು ಅ್ಯಪಲ್‌ ಕಂಪನಿಗೆ ಸರ್ಕಾರದ ಒತ್ತಡ; ವರದಿ

- Advertisement -
- Advertisement -

ಕಳೆದ ಅಕ್ಟೋಬರ್ ತಿಂಗಳಲ್ಲಿ ಇಂಡಿಯಾ ಒಕ್ಕೂಟದ ಹಲವು ಪಕ್ಷಗಳ ನಾಯಕರ ಅ್ಯಪಲ್‌ ಐಫೋನ್‌ಗೆ ಸರ್ಕಾರಿ ಪ್ರಾಯೋಜಿತ ಹ್ಯಾಕಿಂಗ್ ಸಾಧ್ಯತೆಯ ಬಗ್ಗೆ ಎಚ್ಚರಿಕೆಯ ಸಂದೇಶವೊಂದು ಬಂದ ಬಗ್ಗೆ ವರದಿಯಾಗಿತ್ತು. ಕೆಲ ನಾಯಕರು ತಮಗೆ ಬಂದ ಎಚ್ಚರಿಕೆ ಸಂದೇಶದ ಸ್ಕ್ರೀನ್ ಶಾಟ್‌ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಈ ಪ್ರಕರಣಕ್ಕೆ ಈಗ ಮಹತ್ವದ ತಿರುವೊಂದು ಸಿಕ್ಕಿದೆ.

ಕೇಂದ್ರ ಸರ್ಕಾರದ ಅಧಿಕಾರಿಗಳು ಅ್ಯಪಲ್‌ ಪ್ರತಿನಿಧಿಗಳನ್ನು ಕರೆಸಿಕೊಂಡು, ಈ ಹಿಂದೆ ಪ್ರತಿಪಕ್ಷ ನಾಯಕರಿಗೆ ಕಳುಹಿಸಿದ್ದ ಎಚ್ಚರಿಕೆಯ ಸಂದೇಶದ ಕುರಿತು ಸಾರ್ವಜನಿಕರಿಗೆ ಬೇರೆ ಏನಾದರೂ ಉತ್ತರ(ಸಾರ್ವಜನಿಕರ ದಾರಿ ತಪ್ಪಿಸುವ) ನೀಡುವಂತೆ ಒತ್ತಾಯಿಸಿದ್ದಾರೆ ಎಂದು ವಾಶಿಂಗ್ಟನ್ ಪೋಸ್ಟ್‌ ವರದಿ ಉಲ್ಲೇಖಿಸಿ ಸ್ವತಂತ್ರ ಸುದ್ದಿ ಮಾಧ್ಯಮ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ತಮ್ಮ ಮೊಬೈಲ್‌ಗೆ ಸರ್ಕಾರಿ ಪ್ರಯೋಜಿತ ಹ್ಯಾಕಿಂಗ್ ಸಾಧ್ಯತೆಯ ಕುರಿತು ಸಂದೇಶ ಬಂದಿದ್ದ ಬಗ್ಗೆ ಪ್ರತಿಪಕ್ಷ ನಾಯಕರು ಅ್ಯಪಲ್‌ ಕಂಪನಿಯನ್ನು ಪ್ರಶ್ನಿಸಿದ್ದರು. ಆಗ, ಅದು ಸರ್ಕಾರದ ಮೂಲಗಳು ನಿಮ್ಮ ಮೇಲೆ ಕಣ್ಗಾವಲಿಡಲು ಫೋನ್ ಹ್ಯಾಕ್ ಮಾಡುವ ಪ್ರಯತ್ನ ನಡೆಸಿದೆ ಎಂದು ಹೇಳಿತ್ತು. ಈ ಹೇಳಿಕೆಯನ್ನು ಬದಲಾಯಿಸಿ, ಸಾರ್ವಜನಿಕರಿಗೆ ಬೇರೆ ಏನಾದರೂ ದಾರಿ ತಪ್ಪಿಸುವ ವಿಶ್ಲೇಷಣೆ ನೀಡುವಂತೆ ಸರ್ಕಾರದ ಅಧಿಕಾರಿಗಳು ಕಂಪನಿಯ ಪ್ರತಿನಿಧಿಗಳನ್ನು ಒತ್ತಾಯಿಸಿದ್ದಾರೆ ಎಂದು ವರದಿ ಹೇಳಿದೆ.

ಅಕ್ಟೋಬರ್ 31, 2023ರಂದು ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟ ಕೆಲ ನಾಯಕರು ಮತ್ತು ಸ್ವತಂತ್ರ ಪತ್ರಕರ್ತರಿಗೆ ಅ್ಯಪಲ್‌ ಎಚ್ಚರಿಕೆಯ ಸಂದೇಶ ಕಳುಹಿಸಿತ್ತು. “ನಿಮ್ಮ ಅ್ಯಪಲ್‌ ಐಡಿಗೆ ಹೊಂದಿಸಿರುವ ಐಫೋನ್ ಸರ್ಕಾರಿ ಪ್ರಾಯೋಜಿತ ಹ್ಯಾಕಿಂಗ್‌ಗೆ ಗುರಿಯಾಗಿದೆ ಎಂದು ಅ್ಯಪಲ್‌ ಸಂದೇಶ ಎಚ್ಚರಿಸಿತ್ತು. ಜನ ಪ್ರತಿನಿಧಿಗಳು ಸ್ಕ್ರೀನ್ ಶಾಟ್ ಹಂಚಿಕೊಂಡಾಗ, ” ನಾವು ಹ್ಯಾಕಿಂಗ್ ಪ್ರಯತ್ನ ಮಾಡಿದ್ದಾರೆ ಎಂದು ಯಾರನ್ನೂ ಪ್ರತ್ಯೇಕವಾಗಿ ಉಲ್ಲೇಖಿಸುತ್ತಿಲ್ಲ. ಆದರೆ, ಈ ರೀತಿಯ ಅತ್ಯಾಧುನಿಕ ತಂತ್ರಜ್ಞಾನ ಸರ್ಕಾರಿ ಏಜೆನ್ಸಿಗಳಿಗೆ ಮಾತ್ರ ಲಭ್ಯವಿದೆ” ಎಂದು ಅ್ಯಪಲ್‌ ಹೇಳಿತ್ತು.

ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಹುವಾ ಮೊಯಿತ್ರಾ, ಕಾಂಗ್ರೆಸ್ ನಾಯಕ ಶಶಿ ತರೂರ್, ಬಿಆರ್‌ಎಸ್ ನಾಯಕರಾದ ಕೆಟಿ ರಾಮರಾವ್ ಮತ್ತು ಕವಿತಾ ಕವ್ಲಕುಂಟಲ, ಕಾಂಗ್ರೆಸ್‌ನ ಡೇಟಾ ಅನಾಲಿಟಿಕ್ಸ್ ವಿಭಾಗದ ಮುಖ್ಯಸ್ಥ ಪ್ರವೀಣ್ ಚಕ್ರವರ್ತಿ, ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಮಾಡುವ ಯೋಜನೆಯ (OCCRP)ಪತ್ರಕರ್ತ ಆನಂದ್ ಮಂಗ್ನಾಲೆ, ದಿ ವೈರ್‌ನ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಅವರ ಮೊಬೈಲ್ ಫೋನ್‌ಗಳು ಎಚ್ಚರಿಕೆಯ ಸಂದೇಶಗಳನ್ನು ಸ್ವೀಕರಿಸಿತ್ತು.

ಆಮ್ನೆಸ್ಟಿ ಇಂಟರ್‌ನ್ಯಾಶನಲ್‌ನ ಸೆಕ್ಯುರಿಟಿ ಲ್ಯಾಬ್‌ನ ಫೋರೆನ್ಸಿಕ್ ತನಿಖೆಗಳು-2023 ರಲ್ಲಿ ಪತ್ರಕರ್ತರಾದ ಸಿದ್ಧಾರ್ಥ್ ಮತ್ತು ಆನಂದ್ ಅವರ ಫೋನ್‌ಗಳಲ್ಲಿ ಪೆಗಾಸಸ್ ಸ್ಥಾಪಿಸಲಾಗಿತ್ತು ಎಂದು ದೃಢಪಡಿಸಿದೆ ಎಂದು ನ್ಯೂಸ್‌ ಮಿನಿಟ್ ವರದಿ ಹೇಳಿದೆ.

ಆನಂದ್ ಮತ್ತು ರವಿ ಅವರು ಅದಾನಿ ಗ್ರೂಪ್ ಒಳಗೊಂಡಿರುವ ಕಡಲಾಚೆಯ ಅಕ್ರಮ ಹಣ ವರ್ಗಾವಣೆ ಅವ್ಯವಹಾರವನ್ನು ತಾಜಾ ಪುರಾವೆಗಳೊಂದಿಗೆ ಬಯಲಿಗೆಳೆದ ವರದಿಗಾಗಿ ಕೆಲಸ ಮಾಡಿದ್ದರು. ಆಗಸ್ಟ್ 22 ರಂದು ಇಬ್ಬರು ಪತ್ರಕರ್ತರು ತಮ್ಮ ಸಂಶೋಧನಾ ವರದಿಗೆ ಪೂರಕ ಪ್ರತಿಕ್ರಿಯೆ ಕೋರಿ ಅದಾನಿ ಕಂಪನಿಗೆ ಪತ್ರ ಬರೆದಿದ್ದರು. ಇದಾಗಿ 24 ಗಂಟೆಯಲ್ಲಿ ಪತ್ರಕರ್ತ ಆನಂದ್ ಅವರ ಫೋನ್‌ಗೆ ಪೆಗಾಸಸ್ ದಾಳಿಯಾಗಿದೆ ಎಂದು ಆಮ್ನೆಸ್ಟಿ ತನಿಖೆಯಿಂದ ತಿಳಿದು ಬಂದಿರುವುದಾಗಿ ವರದಿ ತಿಳಿಸಿದೆ.

ಈ ಹಿಂದೆ ಇಸ್ರೇಲ್‌ ಮೂಲದ ಸಂಸ್ಥೆ ಎನ್‌ಎಸ್‌ಒ ತಮ್ಮ ಕಣ್ಗಾವಲು ಸಾಫ್ಟ್‌ವೇರ್‌ ಪೆಗಾಸಸ್ ಅನ್ನು
ಸರ್ಕಾರಗಳಿಗೆ ಮಾತ್ರ ಮಾರಾಟ ಮಾಡುವುದಾಗಿ ಸುಪ್ರೀಂ ಕೋರ್ಟ್‌ಗೆ ಹೇಳಿರುವುದನ್ನು ಇಲ್ಲಿ ಸ್ಮರಿಸಬಹುದು.

ZecOps ಎಂಬ ಅಪ್ಲಿಕೇಶನ್‌ನಿಂದ ಆನಂದ್ ಅವರ ಮೊಬೈಲ್‌ಗೆ ಎಚ್ಚರಿಕೆ ಸಂದೇಶ ಬಂದಿತ್ತು. ಇದು ಭದ್ರತಾ ಬೆದರಿಕೆ ಇರುವಾಗ ಮತ್ತು ಸುಧಾರಿತ ಡಿಜಿಟಲ್ ಫೋರೆನ್ಸಿಕ್ಸ್ ಅನ್ನು ಬಳಸುವಾಗ ಎಚ್ಚರಿಕೆ ನೀಡುವ ಅಪ್ಲಿಕೇಶನ್ ಆಗಿದೆ. ಆಗಸ್ಟ್ 23 ರಂದು ಎಚ್ಚರಿಕೆ ಸಂದೇಶ ಬರಲು ಪ್ರಾರಂಭಿಸಿದ್ದವು. ನಂತರ ಆನಂದ್ ಅವರು ತಮ್ಮ ಫೋನ್ ಅನ್ನು OCCRP ಮತ್ತು ಆಮ್ನೆಸ್ಟಿಗೆ ಫೊರೆನ್ಸಿಕ್ ವಿಶ್ಲೇಷಣೆಗೆ ಕೊಟ್ಟಿದ್ದರು. ಎಚ್ಚರಿಕೆ ಸಂದೇಶ ಬಂದಾಗ ಅವರ ಫೋನ್ ಸಂಪೂರ್ಣವಾಗಿ ಶೂನ್ಯ ಕ್ಲಿಕ್‌ಗೆ (ಜಾಮ್ ಆಗೋದು) ಒಳಗಾಗಿತ್ತು ಎಂದ ದಿ ನ್ಯೂಸ್ ಮಿನಿಟ್ ಹೇಳಿದೆ.

ಇದನ್ನೂ ಓದಿ : ‘ಸರ್ನಾ ಪ್ರತ್ಯೇಕ ಧರ್ಮ’ ಮಾನ್ಯತೆಗೆ ಒತ್ತಾಯಿಸಿ ಡಿ.30ರಂದು ಭಾರತ್ ಬಂದ್‌ಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...