Homeಮುಖಪುಟ'ಸಂಚಾರ್ ಸಾಥಿ' ಆ್ಯಪ್ ಕಡ್ಡಾಯ | ಕೇಂದ್ರದ ಆದೇಶ ವಿರೋಧಿಸಲು ಮುಂದಾದ ಆ್ಯಪಲ್ : ವರದಿ

‘ಸಂಚಾರ್ ಸಾಥಿ’ ಆ್ಯಪ್ ಕಡ್ಡಾಯ | ಕೇಂದ್ರದ ಆದೇಶ ವಿರೋಧಿಸಲು ಮುಂದಾದ ಆ್ಯಪಲ್ : ವರದಿ

- Advertisement -
- Advertisement -

ಸ್ಮಾರ್ಟ್‌ಫೋನ್ ತಯಾರಕರು ಎಲ್ಲಾ ಹೊಸ ಮೊಬೈಲ್‌ ಫೋನ್‌ಗಳಲ್ಲಿ ಸರ್ಕಾರಿ ಸ್ವಾಮ್ಯದ ‘ಸಂಚಾರ್ ಸಾಥಿ’ ಆ್ಯಪ್ ಪ್ರಿ ಇನ್‌ಸ್ಟಾಲ್ (Pre-Install) ಮಾಡಬೇಕು ಮತ್ತು ಬಳಕೆದಾರರು ಅದನ್ನು ಡಿಲಿಟ್ ಮಾಡದಂತೆ ನೋಡಿಕೊಳ್ಳಬೇಕು ಎಂಬ ಕೇಂದ್ರ ಸರ್ಕಾರದ ಆದೇಶವನ್ನು ವಿರೋಧಿಸಲು ಆ್ಯಪಲ್ ಕಂಪನಿ ಮುಂದಾಗಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ಮಂಗಳವಾರ (ಡಿ.2) ವರದಿ ಮಾಡಿದೆ.

“ಆ್ಯಪಲ್ ಕಂಪನಿ ಕೇಂದ್ರದ ಆದೇಶವನ್ನು ಪಾಲಿಸದಿರಲು ಯೋಜಿಸಿದೆ. ಈ ಬಗ್ಗೆ ತನ್ನ ಕಳವಳಗಳನ್ನು ಕಂಪನಿ ಕೇಂದ್ರ ಸರ್ಕಾರಕ್ಕೆ ತಿಳಿಸಲಿದೆ” ಎಂದು ಮೂರು ಮೂಲಗಳು ಹೇಳಿರುವುದಾಗಿ ರಾಯಿಟರ್ಸ್ ಹೇಳಿದೆ.

90 ದಿನಗಳ ಒಳಗೆ ಎಲ್ಲಾ ಹೊಸ ಮೊಬೈಲ್‌ ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಆ್ಯಪ್ ಪ್ರಿ ಲೋಡ್ ಮಾಡಲು ಆ್ಯಪಲ್, ಸ್ಯಾಮ್‌ಸಂಗ್, ಶಿವೋಮಿ ಸೇರಿದಂತೆ ಮೊಬೈಲ್ ಕಂಪನಿಗಳಿಗೆ ಕೇಂದ್ರ ಸರ್ಕಾರ ಆದೇಶಿಸಿದೆ.

ಕದ್ದ ಫೋನ್‌ಗಳನ್ನು ಪತ್ತೆಹಚ್ಚಲು, ಅವುಗಳನ್ನು ನಿರ್ಬಂಧಿಸಲು ಮತ್ತು ದುರುಪಯೋಗವಾಗದಂತೆ ತಡೆಯಲು ಈ ಅಪ್ಲಿಕೇಶನ್ ಇನ್‌ಸ್ಟಾಲ್ ಮಾಡಿಲಾಗುತ್ತಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಸ್ಮಾರ್ಟ್‌ ಫೋನ್ ತಯಾರಕರು ‘ಸಂಚಾರ್ ಸಾಥಿ’ ಆ್ಯಪ್ ಅನ್ನು ಮೊಬೈಲ್‌ ಬಳಕೆದಾರರು ಡಿಲಿಟ್ ಮಾಡದಂತೆ ಮಾಡಬೇಕು. ಈಗಾಗಲೇ ಪೂರೈಕೆ ಸರಪಳಿಯಲ್ಲಿರುವ ಫೋನ್‌ಗಳಿಗೆ ತಯಾರಕರು ಸಾಫ್ಟ್‌ವೇರ್ ಅಪ್ಡೇಟ್ ಮೂಲಕ ಅಪ್ಲಿಕೇಶನ್ ಅನ್ನು ತಳ್ಳಬೇಕು ಎಂದು ಸರ್ಕಾರ ಆದೇಶದಲ್ಲಿ ಹೇಳಿರುವುದಾಗಿ ಸೋಮವಾರ (ಡಿ.1) ರಾಯಿಟರ್ಸ್ ವರದಿ ಮಾಡಿದೆ.

ಸರ್ಕಾರದ ಆದೇಶದ ವಿರುದ್ದ ಪ್ರತಿಪಕ್ಷ ಕಾಂಗ್ರೆಸ್ ಸೇರಿದಂತೆ ಹಲವರು ಕಳವಳ ವ್ಯಕ್ತಪಡಿಸಿದ್ದಾರೆ. ಇದು ಮೊಬೈಲ್ ಫೋನ್ ಬಳಕೆದಾರರ ಮೇಲೆ ಕಣ್ಗಾವಲು ಇಡಲು ಸರ್ಕಾರ ಮಾಡಿರುವ ತಂತ್ರವಾಗಿದೆ. ಸರ್ಕಾರದ ಆದೇಶದ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಆರೋಪಿಸಿದ್ದಾರೆ.

ವಿರೋಧಗಳು ಹೆಚ್ಚಾಗುತ್ತಿದ್ದಂತೆ ಕೇಂದ್ರ ದೂರ ಸಂಪರ್ಕ ಖಾತೆ ಸಚಿವ ಜೋತಿರಾಧಿತ್ಯ ಎಂ. ಸಿಂಧಿಯಾ ಪ್ರತಿಕ್ರಿಯಿಸಿದ್ದಾರೆ. “ಸಂಚಾರ್ ಸಾಥಿ ಅಪ್ಲಿಕೇಶನ್ ‘ಸ್ವಯಂಪ್ರೇರಿತ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ’ಯನ್ನು ಹೊಂದಿದೆ. ಬಳಕೆದಾರರು ಅದನ್ನು ಸಕ್ರಿಯಗೊಳಿಸಬಹುದು ಮತ್ತು ಯಾವುದೇ ಸಮಯದಲ್ಲಿ ಅದನ್ನು ತಮ್ಮ ಫೋನ್‌ನಿಂದ ಸುಲಭವಾಗಿ ಅಳಿಸಬಹುದು ಎಂದು ಹೇಳಿದ್ದಾರೆ.

ಪ್ರಸ್ತುತ ಬಳಕೆದಾರರು ಅಪ್ಲಿಕೇಶನ್ ಅನ್ನು ಅಳಿಸಬಹುದು ಎಂದು ಮಾತ್ರ ಸಚಿವ ಸಿಂಧಿಯಾ ಹೇಳಿದ್ದಾರೆ. ಸ್ಮಾರ್ಟ್‌ಫೋನ್ ತಯಾರಕರು ಅದನ್ನು ಪ್ರಿ ಲೋಡ್ ಮಾಡಬೇಕು. ಅದು ನಿಷ್ಕ್ರಿಯಗೊಂಡಿಲ್ಲ ಅಥವಾ ನಿರ್ಬಂಧಿಸಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು ಎಂಬ ನವೆಂಬರ್ 28ರ ಗೌಪ್ಯ ನಿರ್ದೇಶನದ ಬಗ್ಗೆ ಸಿಂಧಿಯಾ ಯಾವುದೇ ಪ್ರತಿಕ್ರಿಯೆ ಅಥವಾ ಸ್ಪಷ್ಟನೆ ಕೊಟ್ಟಿಲ್ಲ ಎಂದು ರಾಯಿಟರ್ಸ್ ವರದಿ ಹೇಳಿದೆ.

“ಆ್ಯಪಲ್ ಕಂಪನಿ ಸರ್ಕಾರದ ನಿರ್ದೇಶನ ಪಾಲಿಸದಿರಲು ಯೋಜಿಸಿದೆ. ಏಕೆಂದರೆ, ಅದರಿಂದ ಕಂಪನಿಯ ಐಒಎಸ್‌ ಪರಿಸರ ವ್ಯವಸ್ಥೆಗೆ ಹಲವಾರು ಗೌಪ್ಯತೆ ಮತ್ತು ಭದ್ರತಾ ಸಮಸ್ಯೆಗಳು ಉಂಟಾಗಲಿದೆ. ಜಗತ್ತಿನಲ್ಲಿ ಎಲ್ಲಿಯೂ ಇಂತಹ ಆದೇಶಗಳನ್ನು ಪಾಲಿಸುತ್ತಿಲ್ಲ ಎಂದು ಸರ್ಕಾರಕ್ಕೆ ಕಂಪನಿ ತಿಳಿಸಲಿದೆ” ಎಂದು ಆ್ಯಪಲ್‌ನ ಕಳವಳಗಳನ್ನು ತಿಳಿದಿರುವ ಎರಡು ಉದ್ಯಮ ಮೂಲಗಳು ತಿಳಿಸಿವೆ ಎಂದು ರಾಯಿಟರ್ಸ್ ವರದಿ ವಿವರಿಸಿದೆ.

“ಇದು (ಸರ್ಕಾರದ ಆದೇಶ) ಕೇವಲ ದೊಣ್ಣೆ ಹೊಡೆತವಲ್ಲ, ಡಬಲ್ ಬ್ಯಾರೆಲ್ ಗನ್‌ನಂತಿದೆ” ಎಂದು ಆ ಮೂಲ ಹೇಳಿರುವುದಾಗಿ ವರದಿ ತಿಳಿಸಿದೆ.

ಆ್ಯಪಲ್ ಕಂಪನಿಯ ನಿರ್ಧಾರದ ಕುರಿತು ಕಂಪನಿಯಾಗಲಿ, ದೂರಸಂಪರ್ಕ ಸಚಿವಾಲಯವಾಗಲಿ ಇದುವರೆಗೆ ಅಧಿಕೃತ ಪ್ರತಿಕ್ರಿಯೆಗೆ ಸಿಕ್ಕಿಲ್ಲ ಎಂದು ವರದಿ ಹೇಳಿದೆ.

ಆ್ಯಪಲ್ ಕಂಪೆನಿ ತನ್ನ ಆ್ಯಪ್ ಸ್ಟೋರ್ ಮತ್ತು ಐಒಎಸ್‌ ಸಾಫ್ಟ್‌ವೇರ್‌ನ್ನು ತುಂಬಾ ಕಟ್ಟುನಿಟ್ಟಾಗಿ ನಿಯಂತ್ರಿಸುತ್ತದೆ. ಇದು ಆ್ಯಪಲ್‌ಗೆ ವರ್ಷಕ್ಕೆ ಸುಮಾರು 100 ಬಿಲಿಯನ್ ಡಾಲರ್ (ಸುಮಾರು 8 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚು) ಆದಾಯ ತಂದುಕೊಡುವ ಅತಿ ಮುಖ್ಯವಾದ ಸೇವೆಗಳ ವ್ಯವಹಾರವಾಗಿದೆ.

ಆದರೆ, ಗೂಗಲ್‌ನ ಆಂಡ್ರಾಯ್ಡ್ ತಂತ್ರಾಂಶವು ಓಪನ್-ಸೋರ್ಸ್ (ಯಾರು ಬೇಕಾದರೂ ಉಚಿತವಾಗಿ ಬದಲಾಯಿಸಬಹುದಾದ) ಆಗಿರುವುದರಿಂದ, ಸ್ಯಾಮ್‌ಸಂಗ್, ಶಿವೋಮಿ ಇತ್ಯಾದಿ ಮೊಬೈಲ್ ತಯಾರಕರು ತಮ್ಮ ಇಚ್ಛೆಯಂತೆ ಆಂಡ್ರಾಯ್ಡ್ ಸಾಫ್ಟ್‌ವೇರ್‌ನ್ನು ಬದಲಾಯಿಸಿ, ತಮ್ಮದೇ ಆವೃತ್ತಿಯನ್ನು ಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಇದರಿಂದ ಅವರಿಗೆ ಹೆಚ್ಚು ಸ್ವಾತಂತ್ರ್ಯ ಇದೆ.

ಎರಡನೇ ಮೂಲವು ಆ್ಯಪಲ್ ನ್ಯಾಯಾಲಯಕ್ಕೆ ಹೋಗಲು ಅಥವಾ ಸಾರ್ವಜನಿಕ ನಿಲುವು ತೆಗೆದುಕೊಳ್ಳಲು ಯೋಜಿಸಿಲ್ಲ ಎಂದು ಹೇಳಿದೆ. ಆದರೆ ಭದ್ರತಾ ದೋಷಗಳಿಂದಾಗಿ ಆದೇಶವನ್ನು ಪಾಲಿಸಲು ಸಾಧ್ಯವಿಲ್ಲ ಎಂದು ಸರ್ಕಾರಕ್ಕೆ ತಿಳಿಸುತ್ತದೆ ಎಂದಿದೆ ಎಂದು ರಾಯಿಟರ್ಸ್ ಹೇಳಿದೆ.

ಪ್ರಸ್ತುತ ಆ್ಯಪಲ್ ಕಂಪೆನಿ ಭಾರತದಲ್ಲಿ ಒಂದು ದೊಡ್ಡ ಕಾನೂನು ಹೋರಾಟ ನಡೆಸುತ್ತಿದೆ. ಭಾರತದ ಸ್ಪರ್ಧಾ ನಿಯಂತ್ರಣ ಸಂಸ್ಥೆ (CCI – Competition Commission of India) ಆ್ಯಪಲ್‌ನ ವಿರುದ್ಧ ದೇಶದ ಏಕಸ್ವಾಮ್ಯ ವಿರೋಧಿ ಕಾನೂನಿನಡಿ ದಂಡ ವಿಧಿಸುವ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಹೋರಾಡುತ್ತಿದೆ.

ಆ್ಯಪಲ್ ಕಂಪೆನಿ ಹೇಳಿಕೊಂಡಿರುವಂತೆ, ಈ ಪ್ರಕರಣದಲ್ಲಿ ಅದು ಸೋತರೆ ಗರಿಷ್ಠ 38 ಬಿಲಿಯನ್ ಡಾಲರ್ (ಅಂದರೆ ಸುಮಾರು 3.2 ಲಕ್ಷ ಕೋಟಿ ರೂಪಾಯಿಗಿಂತಲೂ ಹೆಚ್ಚು) ದಂಡ ಪಾವತಿಸಬೇಕಾಗಬಹುದು ಎಂಬ ಅಪಾಯ ಇದೆ.

ಸ್ಯಾಮ್‌ಸಂಗ್ ಸೇರಿದಂತೆ ಇತರ ಬ್ರ್ಯಾಂಡ್‌ಗಳು ಆದೇಶವನ್ನು ಪರಿಶೀಲಿಸುತ್ತಿವೆ ಎಂದು ಈ ವಿಷಯದ ಬಗ್ಗೆ ತಿಳಿದಿರುವ ನಾಲ್ಕನೇ ಉದ್ಯಮ ಮೂಲ ತಿಳಿಸಿವೆ. ನಮ್ಮ ಪ್ರಶ್ನೆಗಳಿಗೆ ಸ್ಯಾಮ್‌ಸಂಗ್ ಪ್ರತಿಕ್ರಿಯಿಸಿಲ್ಲ. ಸರ್ಕಾರವು ಉದ್ಯಮದ ಸಮಾಲೋಚನೆಯಿಲ್ಲದೆ ಆದೇಶದ ನೀಡಿದೆ ಎಂದು ಮೂಲಗಳು ಹೇಳಿವೆ ಎಂದು ರಾಯಿಟರ್ಸ್ ವರದಿ ವಿವರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ| ಕಾರು ಸಹಿತ ಮುಳುಗುತ್ತಿದ್ದ ಏಳು ಜೀವಗಳ ರಕ್ಷಣೆ; ಮಸೀದಿ ಧ್ವನಿವರ್ಧಕದ ಮೂಲಕ ಗ್ರಾಮಸ್ಥರನ್ನು ಎಚ್ಚರಿಸಿದ ಇಮಾಮ್

ನೀರಿನಲ್ಲಿ ಮುಳುಗುತ್ತಿರುವ ವಾಹನದಲ್ಲಿ ಸಿಲುಕಿದ್ದ ಏಳು ಜನರನ್ನು ರಕ್ಷಿಸಲು ಮುಂಜಾನೆ ಮಸೀದಿ ಮೈಕ್‌ ಬಳಸಿ ಇಡೀ ಗ್ರಾಮವನ್ನು ಎಚ್ಚರಿಸಿದ ಅಸ್ಸಾಂನ ಮುಸ್ಲಿಂ ಧರ್ಮಗುರು ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ. ಅಸ್ಸಾಂನ ಶ್ರೀಭೂಮಿ ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ...

ಪ್ರತಿಪಕ್ಷಗಳ ಪ್ರತಿಭಟನೆಗೆ ಮಣಿದ ಕೇಂದ್ರ : ಡಿ.9ರಂದು ಸಂಸತ್ತಿನಲ್ಲಿ ಎಸ್‌ಐಆರ್ ಚರ್ಚೆ

ಸಂಸತ್ತಿನ ಉಭಯ ಸದನಗಳಲ್ಲಿ ಎರಡು ದಿನಗಳಿಂದ ಪ್ರತಿಪಕ್ಷಗಳು ನಡೆಸಿದ ತೀವ್ರ ಪ್ರತಿಭಟನೆಗೆ ಕೇಂದ್ರ ಸರ್ಕಾರ ಮಣಿದಿದೆ. ಡಿಸೆಂಬರ್ 9ರಂದು ಚುನಾವಣಾ ಸುಧಾರಣೆಗಳು ಎಂಬ ವಿಷಯದ ಅಡಿಯಲ್ಲಿ ಎಸ್‌ಐಆರ್ ಕುರಿತು ಚರ್ಚೆ ನಡೆಸಲು ಒಪ್ಪಿಕೊಂಡಿದೆ. ವರದಿಗಳ...

‘ಸಂಚಾರ್ ಸಾಥಿ ಆ್ಯಪ್’ ಕಡ್ಡಾಯವಲ್ಲ, ಅಳಿಸಬಹುದು: ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸ್ಪಷ್ಟನೆ  

‘ಸಂಚಾರ್ ಸಾಥಿ’ ಅಪ್ಲಿಕೇಶನ್ ಅನ್ನು ಸಕ್ರಿಯಗೊಳಿಸುವುದು ಕಡ್ಡಾಯವಲ್ಲ, ನಿಮಗೆ ಬೇಡವೆಂದಾಗ ಅದನ್ನು ಅಳಿಸಬಹುದು ಎಂದು ದೂರ ಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ.  ನವೆಂಬರ್ 28 ರಂದು, ಟೆಲಿಕಾಂ ಇಲಾಖೆ ಭಾರತದಲ್ಲಿ...

ಉತ್ತರ ಪ್ರದೇಶ| ಊಟದ ಕೌಂಟರ್‌ನಲ್ಲಿ ‘ಬೀಫ್‌ ಕರಿ’ ಲೇಬಲ್‌’; ಮದುವೆ ಆರತಕ್ಷತೆ ಅಸ್ತವ್ಯಸ್ತ

ಉತ್ತರ ಪ್ರದೇಶದ ಅಲಿಘರ್‌ನ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದ ವಿವಾಹದ ಆರತಕ್ಷತೆಯಲ್ಲಿ ಇಬ್ಬರು ಅತಿಥಿಗಳು, ಆಹಾರ ಕೌಂಟರ್‌ನಲ್ಲಿ ಬರೆದಿದ್ದ 'ಬೀಫ್‌ ಕರಿ' ಎಂಬ ಲೇಬಲ್‌ಗೆ ಆಕ್ಷೇಪ ವ್ಯಕ್ತಪಡಿಸಿದ ನಂತರ ಸಮಾರಂಭ...

ಬಾಂಗ್ಲಾದೇಶಿಗರು ಎಂಬ ಆರೋಪ : ಬಂಗಾಳದ ನಾಲ್ವರು ಮುಸ್ಲಿಂ ವ್ಯಾಪಾರಿಗಳಿಗೆ ಒಡಿಶಾ ತೊರೆಯಲು 72 ಗಂಟೆಗಳ ಗಡುವು

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ನಾಲ್ವರು ಮುಸ್ಲಿಂ ವ್ಯಾಪಾರಿಗಳನ್ನು ಬಾಂಗ್ಲಾದೇಶಿಯರು ಮತ್ತು ರೋಹಿಂಗ್ಯಾ ವಲಸಿಗರು ಎಂದು ಆರೋಪಿಸಿ ಒಡಿಶಾದ ನಯಾಗಢವನ್ನು ತೊರೆಯಲು 72 ಗಂಟೆಗಳ ಗಡುವು ನೀಡಲಾಗಿದೆ ಎಂದು ದಿ ಟೆಲಿಗ್ರಾಫ್ ಮಂಗಳವಾರ...

‘ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ, ಒಗ್ಗಟ್ಟಿನಿಂದ ಇದ್ದೇವೆ: ನಾನು, ಡಿ.ಕೆ. ಶಿವಕುಮಾರ್ ಸಹೋದರರಿದ್ದಂತೆ’: ಸಿಎಂ ಸಿದ್ದರಾಮಯ್ಯ

‘ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರಿದ್ದಂತೆ, ಒಂದೇ ಪಕ್ಷದಲ್ಲಿದ್ದು, ಒಂದೇ ಸಿದ್ಧಾಂತ ನಂಬಿಕೊಂಡಿದ್ದೇವೆ, 2028ರ ಚುನಾವಣೆಯಲ್ಲಿಯೂ ಒಟ್ಟಿಗೆ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 2, ಮಂಗಳವಾರ ಉಪಮುಖ್ಯಮಂತ್ರಿ...

ಪೋಕ್ಸೊ ಪ್ರಕರಣ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಚಾರಣೆಗೆ ತಡೆಯಾಜ್ಞೆ ನೀಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಪೋಕ್ಸೊ ಪ್ರಕರಣದ ಮೊದಲ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಎಫ್‌ಟಿಎಸ್‌ ವಿಶೇಷ ಸೆಷನ್ಸ್‌ ನ್ಯಾಯಾಲಯ ಹೊರಡಿಸಿದ್ದ ಸಮನ್ಸ್‌ ಹಾಗೂ ವಿಚಾರಣಾ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್‌...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಗಾಂಧಿ ಕುಟುಂಬದ ವಿರುದ್ಧ ಹೊಸ ಎಫ್‌ಐಆರ್‌ ದಾಖಲಿಸಿದ ಇಡಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಹೊಸ ಎಫ್‌ಐಆರ್‌ ದಾಖಲಿಸಿದೆ. ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು,...

‘ಸಂಚಾರ ಸಾಥಿ’ ಆ್ಯಪ್‌ ಕಡ್ಡಾಯ: ಬಿಜೆಪಿ ದೇಶವನ್ನು ಸರ್ವಾಧಿಕಾರ ರಾಷ್ಟ್ರವನ್ನಾಗಿ ಪರಿವರ್ತಿಸುತ್ತಿದೆ ಎಂದ ಪ್ರಿಯಾಂಕಾ ಗಾಂಧಿ 

ಮೊಬೈಲ್ ಫೋನ್ ತಯಾರಕರು ಹೊಸ ಹ್ಯಾಂಡ್‌ಸೆಟ್‌ಗಳಲ್ಲಿ ಸಂಚಾರ್ ಸಾಥಿ ಅಪ್ಲಿಕೇಶನ್ ಅನ್ನು ಮೊದಲೇ ಸ್ಥಾಪಿಸುವಂತೆ ಟೆಲಿಕಾಂ ಇಲಾಖೆ ಕೇಳಿಕೊಂಡಿದ್ದು, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮಂಗಳವಾರ ಇದನ್ನು "ಗೂಢಚಾರಿ ಅಪ್ಲಿಕೇಶನ್" ಎಂದು ಕರೆದಿದ್ದಾರೆ....

ಎಸ್‌ಐಆರ್ ಚರ್ಚೆಗೆ ಬಿಗಿಪಟ್ಟು ಹಿಡಿದ ಪ್ರತಿಪಕ್ಷಗಳು, ಉಭಯ ಸದನಗಳಲ್ಲಿ ಕೋಲಾಹಲ ; ಕಲಾಪ ಮುಂದೂಡಿಕೆ

ಸಂಸತ್ತಿನ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಇಂದೂ (ಡಿ.2) ಕೂಡ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಚರ್ಚೆಗೆ ಪಟ್ಟು ಹಿಡಿದು ಪ್ರತಿಪಕ್ಷಗಳು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದೆ....