Homeಮುಖಪುಟ'ಸಂಚಾರ್ ಸಾಥಿ' ಆ್ಯಪ್ ಕಡ್ಡಾಯ | ಕೇಂದ್ರದ ಆದೇಶ ವಿರೋಧಿಸಲು ಮುಂದಾದ ಆ್ಯಪಲ್ : ವರದಿ

‘ಸಂಚಾರ್ ಸಾಥಿ’ ಆ್ಯಪ್ ಕಡ್ಡಾಯ | ಕೇಂದ್ರದ ಆದೇಶ ವಿರೋಧಿಸಲು ಮುಂದಾದ ಆ್ಯಪಲ್ : ವರದಿ

- Advertisement -
- Advertisement -

ಸ್ಮಾರ್ಟ್‌ಫೋನ್ ತಯಾರಕರು ಎಲ್ಲಾ ಹೊಸ ಮೊಬೈಲ್‌ ಫೋನ್‌ಗಳಲ್ಲಿ ಸರ್ಕಾರಿ ಸ್ವಾಮ್ಯದ ‘ಸಂಚಾರ್ ಸಾಥಿ’ ಆ್ಯಪ್ ಪ್ರಿ ಇನ್‌ಸ್ಟಾಲ್ (Pre-Install) ಮಾಡಬೇಕು ಮತ್ತು ಬಳಕೆದಾರರು ಅದನ್ನು ಡಿಲಿಟ್ ಮಾಡದಂತೆ ನೋಡಿಕೊಳ್ಳಬೇಕು ಎಂಬ ಕೇಂದ್ರ ಸರ್ಕಾರದ ಆದೇಶವನ್ನು ವಿರೋಧಿಸಲು ಆ್ಯಪಲ್ ಕಂಪನಿ ಮುಂದಾಗಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ಮಂಗಳವಾರ (ಡಿ.2) ವರದಿ ಮಾಡಿದೆ.

“ಆ್ಯಪಲ್ ಕಂಪನಿ ಕೇಂದ್ರದ ಆದೇಶವನ್ನು ಪಾಲಿಸದಿರಲು ಯೋಜಿಸಿದೆ. ಈ ಬಗ್ಗೆ ತನ್ನ ಕಳವಳಗಳನ್ನು ಕಂಪನಿ ಕೇಂದ್ರ ಸರ್ಕಾರಕ್ಕೆ ತಿಳಿಸಲಿದೆ” ಎಂದು ಮೂರು ಮೂಲಗಳು ಹೇಳಿರುವುದಾಗಿ ರಾಯಿಟರ್ಸ್ ಹೇಳಿದೆ.

90 ದಿನಗಳ ಒಳಗೆ ಎಲ್ಲಾ ಹೊಸ ಮೊಬೈಲ್‌ ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಆ್ಯಪ್ ಪ್ರಿ ಲೋಡ್ ಮಾಡಲು ಆ್ಯಪಲ್, ಸ್ಯಾಮ್‌ಸಂಗ್, ಶಿವೋಮಿ ಸೇರಿದಂತೆ ಮೊಬೈಲ್ ಕಂಪನಿಗಳಿಗೆ ಕೇಂದ್ರ ಸರ್ಕಾರ ಆದೇಶಿಸಿದೆ.

ಕದ್ದ ಫೋನ್‌ಗಳನ್ನು ಪತ್ತೆಹಚ್ಚಲು, ಅವುಗಳನ್ನು ನಿರ್ಬಂಧಿಸಲು ಮತ್ತು ದುರುಪಯೋಗವಾಗದಂತೆ ತಡೆಯಲು ಈ ಅಪ್ಲಿಕೇಶನ್ ಇನ್‌ಸ್ಟಾಲ್ ಮಾಡಿಲಾಗುತ್ತಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಸ್ಮಾರ್ಟ್‌ ಫೋನ್ ತಯಾರಕರು ‘ಸಂಚಾರ್ ಸಾಥಿ’ ಆ್ಯಪ್ ಅನ್ನು ಮೊಬೈಲ್‌ ಬಳಕೆದಾರರು ಡಿಲಿಟ್ ಮಾಡದಂತೆ ಮಾಡಬೇಕು. ಈಗಾಗಲೇ ಪೂರೈಕೆ ಸರಪಳಿಯಲ್ಲಿರುವ ಫೋನ್‌ಗಳಿಗೆ ತಯಾರಕರು ಸಾಫ್ಟ್‌ವೇರ್ ಅಪ್ಡೇಟ್ ಮೂಲಕ ಅಪ್ಲಿಕೇಶನ್ ಅನ್ನು ತಳ್ಳಬೇಕು ಎಂದು ಸರ್ಕಾರ ಆದೇಶದಲ್ಲಿ ಹೇಳಿರುವುದಾಗಿ ಸೋಮವಾರ (ಡಿ.1) ರಾಯಿಟರ್ಸ್ ವರದಿ ಮಾಡಿದೆ.

ಸರ್ಕಾರದ ಆದೇಶದ ವಿರುದ್ದ ಪ್ರತಿಪಕ್ಷ ಕಾಂಗ್ರೆಸ್ ಸೇರಿದಂತೆ ಹಲವರು ಕಳವಳ ವ್ಯಕ್ತಪಡಿಸಿದ್ದಾರೆ. ಇದು ಮೊಬೈಲ್ ಫೋನ್ ಬಳಕೆದಾರರ ಮೇಲೆ ಕಣ್ಗಾವಲು ಇಡಲು ಸರ್ಕಾರ ಮಾಡಿರುವ ತಂತ್ರವಾಗಿದೆ. ಸರ್ಕಾರದ ಆದೇಶದ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಆರೋಪಿಸಿದ್ದಾರೆ.

ವಿರೋಧಗಳು ಹೆಚ್ಚಾಗುತ್ತಿದ್ದಂತೆ ಕೇಂದ್ರ ದೂರ ಸಂಪರ್ಕ ಖಾತೆ ಸಚಿವ ಜೋತಿರಾಧಿತ್ಯ ಎಂ. ಸಿಂಧಿಯಾ ಪ್ರತಿಕ್ರಿಯಿಸಿದ್ದಾರೆ. “ಸಂಚಾರ್ ಸಾಥಿ ಅಪ್ಲಿಕೇಶನ್ ‘ಸ್ವಯಂಪ್ರೇರಿತ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ’ಯನ್ನು ಹೊಂದಿದೆ. ಬಳಕೆದಾರರು ಅದನ್ನು ಸಕ್ರಿಯಗೊಳಿಸಬಹುದು ಮತ್ತು ಯಾವುದೇ ಸಮಯದಲ್ಲಿ ಅದನ್ನು ತಮ್ಮ ಫೋನ್‌ನಿಂದ ಸುಲಭವಾಗಿ ಅಳಿಸಬಹುದು ಎಂದು ಹೇಳಿದ್ದಾರೆ.

ಪ್ರಸ್ತುತ ಬಳಕೆದಾರರು ಅಪ್ಲಿಕೇಶನ್ ಅನ್ನು ಅಳಿಸಬಹುದು ಎಂದು ಮಾತ್ರ ಸಚಿವ ಸಿಂಧಿಯಾ ಹೇಳಿದ್ದಾರೆ. ಸ್ಮಾರ್ಟ್‌ಫೋನ್ ತಯಾರಕರು ಅದನ್ನು ಪ್ರಿ ಲೋಡ್ ಮಾಡಬೇಕು. ಅದು ನಿಷ್ಕ್ರಿಯಗೊಂಡಿಲ್ಲ ಅಥವಾ ನಿರ್ಬಂಧಿಸಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು ಎಂಬ ನವೆಂಬರ್ 28ರ ಗೌಪ್ಯ ನಿರ್ದೇಶನದ ಬಗ್ಗೆ ಸಿಂಧಿಯಾ ಯಾವುದೇ ಪ್ರತಿಕ್ರಿಯೆ ಅಥವಾ ಸ್ಪಷ್ಟನೆ ಕೊಟ್ಟಿಲ್ಲ ಎಂದು ರಾಯಿಟರ್ಸ್ ವರದಿ ಹೇಳಿದೆ.

“ಆ್ಯಪಲ್ ಕಂಪನಿ ಸರ್ಕಾರದ ನಿರ್ದೇಶನ ಪಾಲಿಸದಿರಲು ಯೋಜಿಸಿದೆ. ಏಕೆಂದರೆ, ಅದರಿಂದ ಕಂಪನಿಯ ಐಒಎಸ್‌ ಪರಿಸರ ವ್ಯವಸ್ಥೆಗೆ ಹಲವಾರು ಗೌಪ್ಯತೆ ಮತ್ತು ಭದ್ರತಾ ಸಮಸ್ಯೆಗಳು ಉಂಟಾಗಲಿದೆ. ಜಗತ್ತಿನಲ್ಲಿ ಎಲ್ಲಿಯೂ ಇಂತಹ ಆದೇಶಗಳನ್ನು ಪಾಲಿಸುತ್ತಿಲ್ಲ ಎಂದು ಸರ್ಕಾರಕ್ಕೆ ಕಂಪನಿ ತಿಳಿಸಲಿದೆ” ಎಂದು ಆ್ಯಪಲ್‌ನ ಕಳವಳಗಳನ್ನು ತಿಳಿದಿರುವ ಎರಡು ಉದ್ಯಮ ಮೂಲಗಳು ತಿಳಿಸಿವೆ ಎಂದು ರಾಯಿಟರ್ಸ್ ವರದಿ ವಿವರಿಸಿದೆ.

“ಇದು (ಸರ್ಕಾರದ ಆದೇಶ) ಕೇವಲ ದೊಣ್ಣೆ ಹೊಡೆತವಲ್ಲ, ಡಬಲ್ ಬ್ಯಾರೆಲ್ ಗನ್‌ನಂತಿದೆ” ಎಂದು ಆ ಮೂಲ ಹೇಳಿರುವುದಾಗಿ ವರದಿ ತಿಳಿಸಿದೆ.

ಆ್ಯಪಲ್ ಕಂಪನಿಯ ನಿರ್ಧಾರದ ಕುರಿತು ಕಂಪನಿಯಾಗಲಿ, ದೂರಸಂಪರ್ಕ ಸಚಿವಾಲಯವಾಗಲಿ ಇದುವರೆಗೆ ಅಧಿಕೃತ ಪ್ರತಿಕ್ರಿಯೆಗೆ ಸಿಕ್ಕಿಲ್ಲ ಎಂದು ವರದಿ ಹೇಳಿದೆ.

ಆ್ಯಪಲ್ ಕಂಪೆನಿ ತನ್ನ ಆ್ಯಪ್ ಸ್ಟೋರ್ ಮತ್ತು ಐಒಎಸ್‌ ಸಾಫ್ಟ್‌ವೇರ್‌ನ್ನು ತುಂಬಾ ಕಟ್ಟುನಿಟ್ಟಾಗಿ ನಿಯಂತ್ರಿಸುತ್ತದೆ. ಇದು ಆ್ಯಪಲ್‌ಗೆ ವರ್ಷಕ್ಕೆ ಸುಮಾರು 100 ಬಿಲಿಯನ್ ಡಾಲರ್ (ಸುಮಾರು 8 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚು) ಆದಾಯ ತಂದುಕೊಡುವ ಅತಿ ಮುಖ್ಯವಾದ ಸೇವೆಗಳ ವ್ಯವಹಾರವಾಗಿದೆ.

ಆದರೆ, ಗೂಗಲ್‌ನ ಆಂಡ್ರಾಯ್ಡ್ ತಂತ್ರಾಂಶವು ಓಪನ್-ಸೋರ್ಸ್ (ಯಾರು ಬೇಕಾದರೂ ಉಚಿತವಾಗಿ ಬದಲಾಯಿಸಬಹುದಾದ) ಆಗಿರುವುದರಿಂದ, ಸ್ಯಾಮ್‌ಸಂಗ್, ಶಿವೋಮಿ ಇತ್ಯಾದಿ ಮೊಬೈಲ್ ತಯಾರಕರು ತಮ್ಮ ಇಚ್ಛೆಯಂತೆ ಆಂಡ್ರಾಯ್ಡ್ ಸಾಫ್ಟ್‌ವೇರ್‌ನ್ನು ಬದಲಾಯಿಸಿ, ತಮ್ಮದೇ ಆವೃತ್ತಿಯನ್ನು ಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಇದರಿಂದ ಅವರಿಗೆ ಹೆಚ್ಚು ಸ್ವಾತಂತ್ರ್ಯ ಇದೆ.

ಎರಡನೇ ಮೂಲವು ಆ್ಯಪಲ್ ನ್ಯಾಯಾಲಯಕ್ಕೆ ಹೋಗಲು ಅಥವಾ ಸಾರ್ವಜನಿಕ ನಿಲುವು ತೆಗೆದುಕೊಳ್ಳಲು ಯೋಜಿಸಿಲ್ಲ ಎಂದು ಹೇಳಿದೆ. ಆದರೆ ಭದ್ರತಾ ದೋಷಗಳಿಂದಾಗಿ ಆದೇಶವನ್ನು ಪಾಲಿಸಲು ಸಾಧ್ಯವಿಲ್ಲ ಎಂದು ಸರ್ಕಾರಕ್ಕೆ ತಿಳಿಸುತ್ತದೆ ಎಂದಿದೆ ಎಂದು ರಾಯಿಟರ್ಸ್ ಹೇಳಿದೆ.

ಪ್ರಸ್ತುತ ಆ್ಯಪಲ್ ಕಂಪೆನಿ ಭಾರತದಲ್ಲಿ ಒಂದು ದೊಡ್ಡ ಕಾನೂನು ಹೋರಾಟ ನಡೆಸುತ್ತಿದೆ. ಭಾರತದ ಸ್ಪರ್ಧಾ ನಿಯಂತ್ರಣ ಸಂಸ್ಥೆ (CCI – Competition Commission of India) ಆ್ಯಪಲ್‌ನ ವಿರುದ್ಧ ದೇಶದ ಏಕಸ್ವಾಮ್ಯ ವಿರೋಧಿ ಕಾನೂನಿನಡಿ ದಂಡ ವಿಧಿಸುವ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಹೋರಾಡುತ್ತಿದೆ.

ಆ್ಯಪಲ್ ಕಂಪೆನಿ ಹೇಳಿಕೊಂಡಿರುವಂತೆ, ಈ ಪ್ರಕರಣದಲ್ಲಿ ಅದು ಸೋತರೆ ಗರಿಷ್ಠ 38 ಬಿಲಿಯನ್ ಡಾಲರ್ (ಅಂದರೆ ಸುಮಾರು 3.2 ಲಕ್ಷ ಕೋಟಿ ರೂಪಾಯಿಗಿಂತಲೂ ಹೆಚ್ಚು) ದಂಡ ಪಾವತಿಸಬೇಕಾಗಬಹುದು ಎಂಬ ಅಪಾಯ ಇದೆ.

ಸ್ಯಾಮ್‌ಸಂಗ್ ಸೇರಿದಂತೆ ಇತರ ಬ್ರ್ಯಾಂಡ್‌ಗಳು ಆದೇಶವನ್ನು ಪರಿಶೀಲಿಸುತ್ತಿವೆ ಎಂದು ಈ ವಿಷಯದ ಬಗ್ಗೆ ತಿಳಿದಿರುವ ನಾಲ್ಕನೇ ಉದ್ಯಮ ಮೂಲ ತಿಳಿಸಿವೆ. ನಮ್ಮ ಪ್ರಶ್ನೆಗಳಿಗೆ ಸ್ಯಾಮ್‌ಸಂಗ್ ಪ್ರತಿಕ್ರಿಯಿಸಿಲ್ಲ. ಸರ್ಕಾರವು ಉದ್ಯಮದ ಸಮಾಲೋಚನೆಯಿಲ್ಲದೆ ಆದೇಶದ ನೀಡಿದೆ ಎಂದು ಮೂಲಗಳು ಹೇಳಿವೆ ಎಂದು ರಾಯಿಟರ್ಸ್ ವರದಿ ವಿವರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...