Homeಮುಖಪುಟ'ಸಂಚಾರ್ ಸಾಥಿ' ಆ್ಯಪ್ ಕಡ್ಡಾಯ | ಕೇಂದ್ರದ ಆದೇಶ ವಿರೋಧಿಸಲು ಮುಂದಾದ ಆ್ಯಪಲ್ : ವರದಿ

‘ಸಂಚಾರ್ ಸಾಥಿ’ ಆ್ಯಪ್ ಕಡ್ಡಾಯ | ಕೇಂದ್ರದ ಆದೇಶ ವಿರೋಧಿಸಲು ಮುಂದಾದ ಆ್ಯಪಲ್ : ವರದಿ

- Advertisement -
- Advertisement -

ಸ್ಮಾರ್ಟ್‌ಫೋನ್ ತಯಾರಕರು ಎಲ್ಲಾ ಹೊಸ ಮೊಬೈಲ್‌ ಫೋನ್‌ಗಳಲ್ಲಿ ಸರ್ಕಾರಿ ಸ್ವಾಮ್ಯದ ‘ಸಂಚಾರ್ ಸಾಥಿ’ ಆ್ಯಪ್ ಪ್ರಿ ಇನ್‌ಸ್ಟಾಲ್ (Pre-Install) ಮಾಡಬೇಕು ಮತ್ತು ಬಳಕೆದಾರರು ಅದನ್ನು ಡಿಲಿಟ್ ಮಾಡದಂತೆ ನೋಡಿಕೊಳ್ಳಬೇಕು ಎಂಬ ಕೇಂದ್ರ ಸರ್ಕಾರದ ಆದೇಶವನ್ನು ವಿರೋಧಿಸಲು ಆ್ಯಪಲ್ ಕಂಪನಿ ಮುಂದಾಗಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ಮಂಗಳವಾರ (ಡಿ.2) ವರದಿ ಮಾಡಿದೆ.

“ಆ್ಯಪಲ್ ಕಂಪನಿ ಕೇಂದ್ರದ ಆದೇಶವನ್ನು ಪಾಲಿಸದಿರಲು ಯೋಜಿಸಿದೆ. ಈ ಬಗ್ಗೆ ತನ್ನ ಕಳವಳಗಳನ್ನು ಕಂಪನಿ ಕೇಂದ್ರ ಸರ್ಕಾರಕ್ಕೆ ತಿಳಿಸಲಿದೆ” ಎಂದು ಮೂರು ಮೂಲಗಳು ಹೇಳಿರುವುದಾಗಿ ರಾಯಿಟರ್ಸ್ ಹೇಳಿದೆ.

90 ದಿನಗಳ ಒಳಗೆ ಎಲ್ಲಾ ಹೊಸ ಮೊಬೈಲ್‌ ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಆ್ಯಪ್ ಪ್ರಿ ಲೋಡ್ ಮಾಡಲು ಆ್ಯಪಲ್, ಸ್ಯಾಮ್‌ಸಂಗ್, ಶಿವೋಮಿ ಸೇರಿದಂತೆ ಮೊಬೈಲ್ ಕಂಪನಿಗಳಿಗೆ ಕೇಂದ್ರ ಸರ್ಕಾರ ಆದೇಶಿಸಿದೆ.

ಕದ್ದ ಫೋನ್‌ಗಳನ್ನು ಪತ್ತೆಹಚ್ಚಲು, ಅವುಗಳನ್ನು ನಿರ್ಬಂಧಿಸಲು ಮತ್ತು ದುರುಪಯೋಗವಾಗದಂತೆ ತಡೆಯಲು ಈ ಅಪ್ಲಿಕೇಶನ್ ಇನ್‌ಸ್ಟಾಲ್ ಮಾಡಿಲಾಗುತ್ತಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಸ್ಮಾರ್ಟ್‌ ಫೋನ್ ತಯಾರಕರು ‘ಸಂಚಾರ್ ಸಾಥಿ’ ಆ್ಯಪ್ ಅನ್ನು ಮೊಬೈಲ್‌ ಬಳಕೆದಾರರು ಡಿಲಿಟ್ ಮಾಡದಂತೆ ಮಾಡಬೇಕು. ಈಗಾಗಲೇ ಪೂರೈಕೆ ಸರಪಳಿಯಲ್ಲಿರುವ ಫೋನ್‌ಗಳಿಗೆ ತಯಾರಕರು ಸಾಫ್ಟ್‌ವೇರ್ ಅಪ್ಡೇಟ್ ಮೂಲಕ ಅಪ್ಲಿಕೇಶನ್ ಅನ್ನು ತಳ್ಳಬೇಕು ಎಂದು ಸರ್ಕಾರ ಆದೇಶದಲ್ಲಿ ಹೇಳಿರುವುದಾಗಿ ಸೋಮವಾರ (ಡಿ.1) ರಾಯಿಟರ್ಸ್ ವರದಿ ಮಾಡಿದೆ.

ಸರ್ಕಾರದ ಆದೇಶದ ವಿರುದ್ದ ಪ್ರತಿಪಕ್ಷ ಕಾಂಗ್ರೆಸ್ ಸೇರಿದಂತೆ ಹಲವರು ಕಳವಳ ವ್ಯಕ್ತಪಡಿಸಿದ್ದಾರೆ. ಇದು ಮೊಬೈಲ್ ಫೋನ್ ಬಳಕೆದಾರರ ಮೇಲೆ ಕಣ್ಗಾವಲು ಇಡಲು ಸರ್ಕಾರ ಮಾಡಿರುವ ತಂತ್ರವಾಗಿದೆ. ಸರ್ಕಾರದ ಆದೇಶದ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಆರೋಪಿಸಿದ್ದಾರೆ.

ವಿರೋಧಗಳು ಹೆಚ್ಚಾಗುತ್ತಿದ್ದಂತೆ ಕೇಂದ್ರ ದೂರ ಸಂಪರ್ಕ ಖಾತೆ ಸಚಿವ ಜೋತಿರಾಧಿತ್ಯ ಎಂ. ಸಿಂಧಿಯಾ ಪ್ರತಿಕ್ರಿಯಿಸಿದ್ದಾರೆ. “ಸಂಚಾರ್ ಸಾಥಿ ಅಪ್ಲಿಕೇಶನ್ ‘ಸ್ವಯಂಪ್ರೇರಿತ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ’ಯನ್ನು ಹೊಂದಿದೆ. ಬಳಕೆದಾರರು ಅದನ್ನು ಸಕ್ರಿಯಗೊಳಿಸಬಹುದು ಮತ್ತು ಯಾವುದೇ ಸಮಯದಲ್ಲಿ ಅದನ್ನು ತಮ್ಮ ಫೋನ್‌ನಿಂದ ಸುಲಭವಾಗಿ ಅಳಿಸಬಹುದು ಎಂದು ಹೇಳಿದ್ದಾರೆ.

ಪ್ರಸ್ತುತ ಬಳಕೆದಾರರು ಅಪ್ಲಿಕೇಶನ್ ಅನ್ನು ಅಳಿಸಬಹುದು ಎಂದು ಮಾತ್ರ ಸಚಿವ ಸಿಂಧಿಯಾ ಹೇಳಿದ್ದಾರೆ. ಸ್ಮಾರ್ಟ್‌ಫೋನ್ ತಯಾರಕರು ಅದನ್ನು ಪ್ರಿ ಲೋಡ್ ಮಾಡಬೇಕು. ಅದು ನಿಷ್ಕ್ರಿಯಗೊಂಡಿಲ್ಲ ಅಥವಾ ನಿರ್ಬಂಧಿಸಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು ಎಂಬ ನವೆಂಬರ್ 28ರ ಗೌಪ್ಯ ನಿರ್ದೇಶನದ ಬಗ್ಗೆ ಸಿಂಧಿಯಾ ಯಾವುದೇ ಪ್ರತಿಕ್ರಿಯೆ ಅಥವಾ ಸ್ಪಷ್ಟನೆ ಕೊಟ್ಟಿಲ್ಲ ಎಂದು ರಾಯಿಟರ್ಸ್ ವರದಿ ಹೇಳಿದೆ.

“ಆ್ಯಪಲ್ ಕಂಪನಿ ಸರ್ಕಾರದ ನಿರ್ದೇಶನ ಪಾಲಿಸದಿರಲು ಯೋಜಿಸಿದೆ. ಏಕೆಂದರೆ, ಅದರಿಂದ ಕಂಪನಿಯ ಐಒಎಸ್‌ ಪರಿಸರ ವ್ಯವಸ್ಥೆಗೆ ಹಲವಾರು ಗೌಪ್ಯತೆ ಮತ್ತು ಭದ್ರತಾ ಸಮಸ್ಯೆಗಳು ಉಂಟಾಗಲಿದೆ. ಜಗತ್ತಿನಲ್ಲಿ ಎಲ್ಲಿಯೂ ಇಂತಹ ಆದೇಶಗಳನ್ನು ಪಾಲಿಸುತ್ತಿಲ್ಲ ಎಂದು ಸರ್ಕಾರಕ್ಕೆ ಕಂಪನಿ ತಿಳಿಸಲಿದೆ” ಎಂದು ಆ್ಯಪಲ್‌ನ ಕಳವಳಗಳನ್ನು ತಿಳಿದಿರುವ ಎರಡು ಉದ್ಯಮ ಮೂಲಗಳು ತಿಳಿಸಿವೆ ಎಂದು ರಾಯಿಟರ್ಸ್ ವರದಿ ವಿವರಿಸಿದೆ.

“ಇದು (ಸರ್ಕಾರದ ಆದೇಶ) ಕೇವಲ ದೊಣ್ಣೆ ಹೊಡೆತವಲ್ಲ, ಡಬಲ್ ಬ್ಯಾರೆಲ್ ಗನ್‌ನಂತಿದೆ” ಎಂದು ಆ ಮೂಲ ಹೇಳಿರುವುದಾಗಿ ವರದಿ ತಿಳಿಸಿದೆ.

ಆ್ಯಪಲ್ ಕಂಪನಿಯ ನಿರ್ಧಾರದ ಕುರಿತು ಕಂಪನಿಯಾಗಲಿ, ದೂರಸಂಪರ್ಕ ಸಚಿವಾಲಯವಾಗಲಿ ಇದುವರೆಗೆ ಅಧಿಕೃತ ಪ್ರತಿಕ್ರಿಯೆಗೆ ಸಿಕ್ಕಿಲ್ಲ ಎಂದು ವರದಿ ಹೇಳಿದೆ.

ಆ್ಯಪಲ್ ಕಂಪೆನಿ ತನ್ನ ಆ್ಯಪ್ ಸ್ಟೋರ್ ಮತ್ತು ಐಒಎಸ್‌ ಸಾಫ್ಟ್‌ವೇರ್‌ನ್ನು ತುಂಬಾ ಕಟ್ಟುನಿಟ್ಟಾಗಿ ನಿಯಂತ್ರಿಸುತ್ತದೆ. ಇದು ಆ್ಯಪಲ್‌ಗೆ ವರ್ಷಕ್ಕೆ ಸುಮಾರು 100 ಬಿಲಿಯನ್ ಡಾಲರ್ (ಸುಮಾರು 8 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚು) ಆದಾಯ ತಂದುಕೊಡುವ ಅತಿ ಮುಖ್ಯವಾದ ಸೇವೆಗಳ ವ್ಯವಹಾರವಾಗಿದೆ.

ಆದರೆ, ಗೂಗಲ್‌ನ ಆಂಡ್ರಾಯ್ಡ್ ತಂತ್ರಾಂಶವು ಓಪನ್-ಸೋರ್ಸ್ (ಯಾರು ಬೇಕಾದರೂ ಉಚಿತವಾಗಿ ಬದಲಾಯಿಸಬಹುದಾದ) ಆಗಿರುವುದರಿಂದ, ಸ್ಯಾಮ್‌ಸಂಗ್, ಶಿವೋಮಿ ಇತ್ಯಾದಿ ಮೊಬೈಲ್ ತಯಾರಕರು ತಮ್ಮ ಇಚ್ಛೆಯಂತೆ ಆಂಡ್ರಾಯ್ಡ್ ಸಾಫ್ಟ್‌ವೇರ್‌ನ್ನು ಬದಲಾಯಿಸಿ, ತಮ್ಮದೇ ಆವೃತ್ತಿಯನ್ನು ಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಇದರಿಂದ ಅವರಿಗೆ ಹೆಚ್ಚು ಸ್ವಾತಂತ್ರ್ಯ ಇದೆ.

ಎರಡನೇ ಮೂಲವು ಆ್ಯಪಲ್ ನ್ಯಾಯಾಲಯಕ್ಕೆ ಹೋಗಲು ಅಥವಾ ಸಾರ್ವಜನಿಕ ನಿಲುವು ತೆಗೆದುಕೊಳ್ಳಲು ಯೋಜಿಸಿಲ್ಲ ಎಂದು ಹೇಳಿದೆ. ಆದರೆ ಭದ್ರತಾ ದೋಷಗಳಿಂದಾಗಿ ಆದೇಶವನ್ನು ಪಾಲಿಸಲು ಸಾಧ್ಯವಿಲ್ಲ ಎಂದು ಸರ್ಕಾರಕ್ಕೆ ತಿಳಿಸುತ್ತದೆ ಎಂದಿದೆ ಎಂದು ರಾಯಿಟರ್ಸ್ ಹೇಳಿದೆ.

ಪ್ರಸ್ತುತ ಆ್ಯಪಲ್ ಕಂಪೆನಿ ಭಾರತದಲ್ಲಿ ಒಂದು ದೊಡ್ಡ ಕಾನೂನು ಹೋರಾಟ ನಡೆಸುತ್ತಿದೆ. ಭಾರತದ ಸ್ಪರ್ಧಾ ನಿಯಂತ್ರಣ ಸಂಸ್ಥೆ (CCI – Competition Commission of India) ಆ್ಯಪಲ್‌ನ ವಿರುದ್ಧ ದೇಶದ ಏಕಸ್ವಾಮ್ಯ ವಿರೋಧಿ ಕಾನೂನಿನಡಿ ದಂಡ ವಿಧಿಸುವ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಹೋರಾಡುತ್ತಿದೆ.

ಆ್ಯಪಲ್ ಕಂಪೆನಿ ಹೇಳಿಕೊಂಡಿರುವಂತೆ, ಈ ಪ್ರಕರಣದಲ್ಲಿ ಅದು ಸೋತರೆ ಗರಿಷ್ಠ 38 ಬಿಲಿಯನ್ ಡಾಲರ್ (ಅಂದರೆ ಸುಮಾರು 3.2 ಲಕ್ಷ ಕೋಟಿ ರೂಪಾಯಿಗಿಂತಲೂ ಹೆಚ್ಚು) ದಂಡ ಪಾವತಿಸಬೇಕಾಗಬಹುದು ಎಂಬ ಅಪಾಯ ಇದೆ.

ಸ್ಯಾಮ್‌ಸಂಗ್ ಸೇರಿದಂತೆ ಇತರ ಬ್ರ್ಯಾಂಡ್‌ಗಳು ಆದೇಶವನ್ನು ಪರಿಶೀಲಿಸುತ್ತಿವೆ ಎಂದು ಈ ವಿಷಯದ ಬಗ್ಗೆ ತಿಳಿದಿರುವ ನಾಲ್ಕನೇ ಉದ್ಯಮ ಮೂಲ ತಿಳಿಸಿವೆ. ನಮ್ಮ ಪ್ರಶ್ನೆಗಳಿಗೆ ಸ್ಯಾಮ್‌ಸಂಗ್ ಪ್ರತಿಕ್ರಿಯಿಸಿಲ್ಲ. ಸರ್ಕಾರವು ಉದ್ಯಮದ ಸಮಾಲೋಚನೆಯಿಲ್ಲದೆ ಆದೇಶದ ನೀಡಿದೆ ಎಂದು ಮೂಲಗಳು ಹೇಳಿವೆ ಎಂದು ರಾಯಿಟರ್ಸ್ ವರದಿ ವಿವರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...