Homeಮುಖಪುಟ'ಸಂಚಾರ್ ಸಾಥಿ' ಆ್ಯಪ್ ಕಡ್ಡಾಯ | ಕೇಂದ್ರದ ಆದೇಶ ವಿರೋಧಿಸಲು ಮುಂದಾದ ಆ್ಯಪಲ್ : ವರದಿ

‘ಸಂಚಾರ್ ಸಾಥಿ’ ಆ್ಯಪ್ ಕಡ್ಡಾಯ | ಕೇಂದ್ರದ ಆದೇಶ ವಿರೋಧಿಸಲು ಮುಂದಾದ ಆ್ಯಪಲ್ : ವರದಿ

- Advertisement -
- Advertisement -

ಸ್ಮಾರ್ಟ್‌ಫೋನ್ ತಯಾರಕರು ಎಲ್ಲಾ ಹೊಸ ಮೊಬೈಲ್‌ ಫೋನ್‌ಗಳಲ್ಲಿ ಸರ್ಕಾರಿ ಸ್ವಾಮ್ಯದ ‘ಸಂಚಾರ್ ಸಾಥಿ’ ಆ್ಯಪ್ ಪ್ರಿ ಇನ್‌ಸ್ಟಾಲ್ (Pre-Install) ಮಾಡಬೇಕು ಮತ್ತು ಬಳಕೆದಾರರು ಅದನ್ನು ಡಿಲಿಟ್ ಮಾಡದಂತೆ ನೋಡಿಕೊಳ್ಳಬೇಕು ಎಂಬ ಕೇಂದ್ರ ಸರ್ಕಾರದ ಆದೇಶವನ್ನು ವಿರೋಧಿಸಲು ಆ್ಯಪಲ್ ಕಂಪನಿ ಮುಂದಾಗಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ಮಂಗಳವಾರ (ಡಿ.2) ವರದಿ ಮಾಡಿದೆ.

“ಆ್ಯಪಲ್ ಕಂಪನಿ ಕೇಂದ್ರದ ಆದೇಶವನ್ನು ಪಾಲಿಸದಿರಲು ಯೋಜಿಸಿದೆ. ಈ ಬಗ್ಗೆ ತನ್ನ ಕಳವಳಗಳನ್ನು ಕಂಪನಿ ಕೇಂದ್ರ ಸರ್ಕಾರಕ್ಕೆ ತಿಳಿಸಲಿದೆ” ಎಂದು ಮೂರು ಮೂಲಗಳು ಹೇಳಿರುವುದಾಗಿ ರಾಯಿಟರ್ಸ್ ಹೇಳಿದೆ.

90 ದಿನಗಳ ಒಳಗೆ ಎಲ್ಲಾ ಹೊಸ ಮೊಬೈಲ್‌ ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಆ್ಯಪ್ ಪ್ರಿ ಲೋಡ್ ಮಾಡಲು ಆ್ಯಪಲ್, ಸ್ಯಾಮ್‌ಸಂಗ್, ಶಿವೋಮಿ ಸೇರಿದಂತೆ ಮೊಬೈಲ್ ಕಂಪನಿಗಳಿಗೆ ಕೇಂದ್ರ ಸರ್ಕಾರ ಆದೇಶಿಸಿದೆ.

ಕದ್ದ ಫೋನ್‌ಗಳನ್ನು ಪತ್ತೆಹಚ್ಚಲು, ಅವುಗಳನ್ನು ನಿರ್ಬಂಧಿಸಲು ಮತ್ತು ದುರುಪಯೋಗವಾಗದಂತೆ ತಡೆಯಲು ಈ ಅಪ್ಲಿಕೇಶನ್ ಇನ್‌ಸ್ಟಾಲ್ ಮಾಡಿಲಾಗುತ್ತಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಸ್ಮಾರ್ಟ್‌ ಫೋನ್ ತಯಾರಕರು ‘ಸಂಚಾರ್ ಸಾಥಿ’ ಆ್ಯಪ್ ಅನ್ನು ಮೊಬೈಲ್‌ ಬಳಕೆದಾರರು ಡಿಲಿಟ್ ಮಾಡದಂತೆ ಮಾಡಬೇಕು. ಈಗಾಗಲೇ ಪೂರೈಕೆ ಸರಪಳಿಯಲ್ಲಿರುವ ಫೋನ್‌ಗಳಿಗೆ ತಯಾರಕರು ಸಾಫ್ಟ್‌ವೇರ್ ಅಪ್ಡೇಟ್ ಮೂಲಕ ಅಪ್ಲಿಕೇಶನ್ ಅನ್ನು ತಳ್ಳಬೇಕು ಎಂದು ಸರ್ಕಾರ ಆದೇಶದಲ್ಲಿ ಹೇಳಿರುವುದಾಗಿ ಸೋಮವಾರ (ಡಿ.1) ರಾಯಿಟರ್ಸ್ ವರದಿ ಮಾಡಿದೆ.

ಸರ್ಕಾರದ ಆದೇಶದ ವಿರುದ್ದ ಪ್ರತಿಪಕ್ಷ ಕಾಂಗ್ರೆಸ್ ಸೇರಿದಂತೆ ಹಲವರು ಕಳವಳ ವ್ಯಕ್ತಪಡಿಸಿದ್ದಾರೆ. ಇದು ಮೊಬೈಲ್ ಫೋನ್ ಬಳಕೆದಾರರ ಮೇಲೆ ಕಣ್ಗಾವಲು ಇಡಲು ಸರ್ಕಾರ ಮಾಡಿರುವ ತಂತ್ರವಾಗಿದೆ. ಸರ್ಕಾರದ ಆದೇಶದ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಆರೋಪಿಸಿದ್ದಾರೆ.

ವಿರೋಧಗಳು ಹೆಚ್ಚಾಗುತ್ತಿದ್ದಂತೆ ಕೇಂದ್ರ ದೂರ ಸಂಪರ್ಕ ಖಾತೆ ಸಚಿವ ಜೋತಿರಾಧಿತ್ಯ ಎಂ. ಸಿಂಧಿಯಾ ಪ್ರತಿಕ್ರಿಯಿಸಿದ್ದಾರೆ. “ಸಂಚಾರ್ ಸಾಥಿ ಅಪ್ಲಿಕೇಶನ್ ‘ಸ್ವಯಂಪ್ರೇರಿತ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ’ಯನ್ನು ಹೊಂದಿದೆ. ಬಳಕೆದಾರರು ಅದನ್ನು ಸಕ್ರಿಯಗೊಳಿಸಬಹುದು ಮತ್ತು ಯಾವುದೇ ಸಮಯದಲ್ಲಿ ಅದನ್ನು ತಮ್ಮ ಫೋನ್‌ನಿಂದ ಸುಲಭವಾಗಿ ಅಳಿಸಬಹುದು ಎಂದು ಹೇಳಿದ್ದಾರೆ.

ಪ್ರಸ್ತುತ ಬಳಕೆದಾರರು ಅಪ್ಲಿಕೇಶನ್ ಅನ್ನು ಅಳಿಸಬಹುದು ಎಂದು ಮಾತ್ರ ಸಚಿವ ಸಿಂಧಿಯಾ ಹೇಳಿದ್ದಾರೆ. ಸ್ಮಾರ್ಟ್‌ಫೋನ್ ತಯಾರಕರು ಅದನ್ನು ಪ್ರಿ ಲೋಡ್ ಮಾಡಬೇಕು. ಅದು ನಿಷ್ಕ್ರಿಯಗೊಂಡಿಲ್ಲ ಅಥವಾ ನಿರ್ಬಂಧಿಸಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು ಎಂಬ ನವೆಂಬರ್ 28ರ ಗೌಪ್ಯ ನಿರ್ದೇಶನದ ಬಗ್ಗೆ ಸಿಂಧಿಯಾ ಯಾವುದೇ ಪ್ರತಿಕ್ರಿಯೆ ಅಥವಾ ಸ್ಪಷ್ಟನೆ ಕೊಟ್ಟಿಲ್ಲ ಎಂದು ರಾಯಿಟರ್ಸ್ ವರದಿ ಹೇಳಿದೆ.

“ಆ್ಯಪಲ್ ಕಂಪನಿ ಸರ್ಕಾರದ ನಿರ್ದೇಶನ ಪಾಲಿಸದಿರಲು ಯೋಜಿಸಿದೆ. ಏಕೆಂದರೆ, ಅದರಿಂದ ಕಂಪನಿಯ ಐಒಎಸ್‌ ಪರಿಸರ ವ್ಯವಸ್ಥೆಗೆ ಹಲವಾರು ಗೌಪ್ಯತೆ ಮತ್ತು ಭದ್ರತಾ ಸಮಸ್ಯೆಗಳು ಉಂಟಾಗಲಿದೆ. ಜಗತ್ತಿನಲ್ಲಿ ಎಲ್ಲಿಯೂ ಇಂತಹ ಆದೇಶಗಳನ್ನು ಪಾಲಿಸುತ್ತಿಲ್ಲ ಎಂದು ಸರ್ಕಾರಕ್ಕೆ ಕಂಪನಿ ತಿಳಿಸಲಿದೆ” ಎಂದು ಆ್ಯಪಲ್‌ನ ಕಳವಳಗಳನ್ನು ತಿಳಿದಿರುವ ಎರಡು ಉದ್ಯಮ ಮೂಲಗಳು ತಿಳಿಸಿವೆ ಎಂದು ರಾಯಿಟರ್ಸ್ ವರದಿ ವಿವರಿಸಿದೆ.

“ಇದು (ಸರ್ಕಾರದ ಆದೇಶ) ಕೇವಲ ದೊಣ್ಣೆ ಹೊಡೆತವಲ್ಲ, ಡಬಲ್ ಬ್ಯಾರೆಲ್ ಗನ್‌ನಂತಿದೆ” ಎಂದು ಆ ಮೂಲ ಹೇಳಿರುವುದಾಗಿ ವರದಿ ತಿಳಿಸಿದೆ.

ಆ್ಯಪಲ್ ಕಂಪನಿಯ ನಿರ್ಧಾರದ ಕುರಿತು ಕಂಪನಿಯಾಗಲಿ, ದೂರಸಂಪರ್ಕ ಸಚಿವಾಲಯವಾಗಲಿ ಇದುವರೆಗೆ ಅಧಿಕೃತ ಪ್ರತಿಕ್ರಿಯೆಗೆ ಸಿಕ್ಕಿಲ್ಲ ಎಂದು ವರದಿ ಹೇಳಿದೆ.

ಆ್ಯಪಲ್ ಕಂಪೆನಿ ತನ್ನ ಆ್ಯಪ್ ಸ್ಟೋರ್ ಮತ್ತು ಐಒಎಸ್‌ ಸಾಫ್ಟ್‌ವೇರ್‌ನ್ನು ತುಂಬಾ ಕಟ್ಟುನಿಟ್ಟಾಗಿ ನಿಯಂತ್ರಿಸುತ್ತದೆ. ಇದು ಆ್ಯಪಲ್‌ಗೆ ವರ್ಷಕ್ಕೆ ಸುಮಾರು 100 ಬಿಲಿಯನ್ ಡಾಲರ್ (ಸುಮಾರು 8 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚು) ಆದಾಯ ತಂದುಕೊಡುವ ಅತಿ ಮುಖ್ಯವಾದ ಸೇವೆಗಳ ವ್ಯವಹಾರವಾಗಿದೆ.

ಆದರೆ, ಗೂಗಲ್‌ನ ಆಂಡ್ರಾಯ್ಡ್ ತಂತ್ರಾಂಶವು ಓಪನ್-ಸೋರ್ಸ್ (ಯಾರು ಬೇಕಾದರೂ ಉಚಿತವಾಗಿ ಬದಲಾಯಿಸಬಹುದಾದ) ಆಗಿರುವುದರಿಂದ, ಸ್ಯಾಮ್‌ಸಂಗ್, ಶಿವೋಮಿ ಇತ್ಯಾದಿ ಮೊಬೈಲ್ ತಯಾರಕರು ತಮ್ಮ ಇಚ್ಛೆಯಂತೆ ಆಂಡ್ರಾಯ್ಡ್ ಸಾಫ್ಟ್‌ವೇರ್‌ನ್ನು ಬದಲಾಯಿಸಿ, ತಮ್ಮದೇ ಆವೃತ್ತಿಯನ್ನು ಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಇದರಿಂದ ಅವರಿಗೆ ಹೆಚ್ಚು ಸ್ವಾತಂತ್ರ್ಯ ಇದೆ.

ಎರಡನೇ ಮೂಲವು ಆ್ಯಪಲ್ ನ್ಯಾಯಾಲಯಕ್ಕೆ ಹೋಗಲು ಅಥವಾ ಸಾರ್ವಜನಿಕ ನಿಲುವು ತೆಗೆದುಕೊಳ್ಳಲು ಯೋಜಿಸಿಲ್ಲ ಎಂದು ಹೇಳಿದೆ. ಆದರೆ ಭದ್ರತಾ ದೋಷಗಳಿಂದಾಗಿ ಆದೇಶವನ್ನು ಪಾಲಿಸಲು ಸಾಧ್ಯವಿಲ್ಲ ಎಂದು ಸರ್ಕಾರಕ್ಕೆ ತಿಳಿಸುತ್ತದೆ ಎಂದಿದೆ ಎಂದು ರಾಯಿಟರ್ಸ್ ಹೇಳಿದೆ.

ಪ್ರಸ್ತುತ ಆ್ಯಪಲ್ ಕಂಪೆನಿ ಭಾರತದಲ್ಲಿ ಒಂದು ದೊಡ್ಡ ಕಾನೂನು ಹೋರಾಟ ನಡೆಸುತ್ತಿದೆ. ಭಾರತದ ಸ್ಪರ್ಧಾ ನಿಯಂತ್ರಣ ಸಂಸ್ಥೆ (CCI – Competition Commission of India) ಆ್ಯಪಲ್‌ನ ವಿರುದ್ಧ ದೇಶದ ಏಕಸ್ವಾಮ್ಯ ವಿರೋಧಿ ಕಾನೂನಿನಡಿ ದಂಡ ವಿಧಿಸುವ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಹೋರಾಡುತ್ತಿದೆ.

ಆ್ಯಪಲ್ ಕಂಪೆನಿ ಹೇಳಿಕೊಂಡಿರುವಂತೆ, ಈ ಪ್ರಕರಣದಲ್ಲಿ ಅದು ಸೋತರೆ ಗರಿಷ್ಠ 38 ಬಿಲಿಯನ್ ಡಾಲರ್ (ಅಂದರೆ ಸುಮಾರು 3.2 ಲಕ್ಷ ಕೋಟಿ ರೂಪಾಯಿಗಿಂತಲೂ ಹೆಚ್ಚು) ದಂಡ ಪಾವತಿಸಬೇಕಾಗಬಹುದು ಎಂಬ ಅಪಾಯ ಇದೆ.

ಸ್ಯಾಮ್‌ಸಂಗ್ ಸೇರಿದಂತೆ ಇತರ ಬ್ರ್ಯಾಂಡ್‌ಗಳು ಆದೇಶವನ್ನು ಪರಿಶೀಲಿಸುತ್ತಿವೆ ಎಂದು ಈ ವಿಷಯದ ಬಗ್ಗೆ ತಿಳಿದಿರುವ ನಾಲ್ಕನೇ ಉದ್ಯಮ ಮೂಲ ತಿಳಿಸಿವೆ. ನಮ್ಮ ಪ್ರಶ್ನೆಗಳಿಗೆ ಸ್ಯಾಮ್‌ಸಂಗ್ ಪ್ರತಿಕ್ರಿಯಿಸಿಲ್ಲ. ಸರ್ಕಾರವು ಉದ್ಯಮದ ಸಮಾಲೋಚನೆಯಿಲ್ಲದೆ ಆದೇಶದ ನೀಡಿದೆ ಎಂದು ಮೂಲಗಳು ಹೇಳಿವೆ ಎಂದು ರಾಯಿಟರ್ಸ್ ವರದಿ ವಿವರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...