Homeಮುಖಪುಟ'ಸಂಚಾರ್ ಸಾಥಿ' ಆ್ಯಪ್ ಕಡ್ಡಾಯ | ಕೇಂದ್ರದ ಆದೇಶ ವಿರೋಧಿಸಲು ಮುಂದಾದ ಆ್ಯಪಲ್ : ವರದಿ

‘ಸಂಚಾರ್ ಸಾಥಿ’ ಆ್ಯಪ್ ಕಡ್ಡಾಯ | ಕೇಂದ್ರದ ಆದೇಶ ವಿರೋಧಿಸಲು ಮುಂದಾದ ಆ್ಯಪಲ್ : ವರದಿ

- Advertisement -
- Advertisement -

ಸ್ಮಾರ್ಟ್‌ಫೋನ್ ತಯಾರಕರು ಎಲ್ಲಾ ಹೊಸ ಮೊಬೈಲ್‌ ಫೋನ್‌ಗಳಲ್ಲಿ ಸರ್ಕಾರಿ ಸ್ವಾಮ್ಯದ ‘ಸಂಚಾರ್ ಸಾಥಿ’ ಆ್ಯಪ್ ಪ್ರಿ ಇನ್‌ಸ್ಟಾಲ್ (Pre-Install) ಮಾಡಬೇಕು ಮತ್ತು ಬಳಕೆದಾರರು ಅದನ್ನು ಡಿಲಿಟ್ ಮಾಡದಂತೆ ನೋಡಿಕೊಳ್ಳಬೇಕು ಎಂಬ ಕೇಂದ್ರ ಸರ್ಕಾರದ ಆದೇಶವನ್ನು ವಿರೋಧಿಸಲು ಆ್ಯಪಲ್ ಕಂಪನಿ ಮುಂದಾಗಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ಮಂಗಳವಾರ (ಡಿ.2) ವರದಿ ಮಾಡಿದೆ.

“ಆ್ಯಪಲ್ ಕಂಪನಿ ಕೇಂದ್ರದ ಆದೇಶವನ್ನು ಪಾಲಿಸದಿರಲು ಯೋಜಿಸಿದೆ. ಈ ಬಗ್ಗೆ ತನ್ನ ಕಳವಳಗಳನ್ನು ಕಂಪನಿ ಕೇಂದ್ರ ಸರ್ಕಾರಕ್ಕೆ ತಿಳಿಸಲಿದೆ” ಎಂದು ಮೂರು ಮೂಲಗಳು ಹೇಳಿರುವುದಾಗಿ ರಾಯಿಟರ್ಸ್ ಹೇಳಿದೆ.

90 ದಿನಗಳ ಒಳಗೆ ಎಲ್ಲಾ ಹೊಸ ಮೊಬೈಲ್‌ ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಆ್ಯಪ್ ಪ್ರಿ ಲೋಡ್ ಮಾಡಲು ಆ್ಯಪಲ್, ಸ್ಯಾಮ್‌ಸಂಗ್, ಶಿವೋಮಿ ಸೇರಿದಂತೆ ಮೊಬೈಲ್ ಕಂಪನಿಗಳಿಗೆ ಕೇಂದ್ರ ಸರ್ಕಾರ ಆದೇಶಿಸಿದೆ.

ಕದ್ದ ಫೋನ್‌ಗಳನ್ನು ಪತ್ತೆಹಚ್ಚಲು, ಅವುಗಳನ್ನು ನಿರ್ಬಂಧಿಸಲು ಮತ್ತು ದುರುಪಯೋಗವಾಗದಂತೆ ತಡೆಯಲು ಈ ಅಪ್ಲಿಕೇಶನ್ ಇನ್‌ಸ್ಟಾಲ್ ಮಾಡಿಲಾಗುತ್ತಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಸ್ಮಾರ್ಟ್‌ ಫೋನ್ ತಯಾರಕರು ‘ಸಂಚಾರ್ ಸಾಥಿ’ ಆ್ಯಪ್ ಅನ್ನು ಮೊಬೈಲ್‌ ಬಳಕೆದಾರರು ಡಿಲಿಟ್ ಮಾಡದಂತೆ ಮಾಡಬೇಕು. ಈಗಾಗಲೇ ಪೂರೈಕೆ ಸರಪಳಿಯಲ್ಲಿರುವ ಫೋನ್‌ಗಳಿಗೆ ತಯಾರಕರು ಸಾಫ್ಟ್‌ವೇರ್ ಅಪ್ಡೇಟ್ ಮೂಲಕ ಅಪ್ಲಿಕೇಶನ್ ಅನ್ನು ತಳ್ಳಬೇಕು ಎಂದು ಸರ್ಕಾರ ಆದೇಶದಲ್ಲಿ ಹೇಳಿರುವುದಾಗಿ ಸೋಮವಾರ (ಡಿ.1) ರಾಯಿಟರ್ಸ್ ವರದಿ ಮಾಡಿದೆ.

ಸರ್ಕಾರದ ಆದೇಶದ ವಿರುದ್ದ ಪ್ರತಿಪಕ್ಷ ಕಾಂಗ್ರೆಸ್ ಸೇರಿದಂತೆ ಹಲವರು ಕಳವಳ ವ್ಯಕ್ತಪಡಿಸಿದ್ದಾರೆ. ಇದು ಮೊಬೈಲ್ ಫೋನ್ ಬಳಕೆದಾರರ ಮೇಲೆ ಕಣ್ಗಾವಲು ಇಡಲು ಸರ್ಕಾರ ಮಾಡಿರುವ ತಂತ್ರವಾಗಿದೆ. ಸರ್ಕಾರದ ಆದೇಶದ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಆರೋಪಿಸಿದ್ದಾರೆ.

ವಿರೋಧಗಳು ಹೆಚ್ಚಾಗುತ್ತಿದ್ದಂತೆ ಕೇಂದ್ರ ದೂರ ಸಂಪರ್ಕ ಖಾತೆ ಸಚಿವ ಜೋತಿರಾಧಿತ್ಯ ಎಂ. ಸಿಂಧಿಯಾ ಪ್ರತಿಕ್ರಿಯಿಸಿದ್ದಾರೆ. “ಸಂಚಾರ್ ಸಾಥಿ ಅಪ್ಲಿಕೇಶನ್ ‘ಸ್ವಯಂಪ್ರೇರಿತ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ’ಯನ್ನು ಹೊಂದಿದೆ. ಬಳಕೆದಾರರು ಅದನ್ನು ಸಕ್ರಿಯಗೊಳಿಸಬಹುದು ಮತ್ತು ಯಾವುದೇ ಸಮಯದಲ್ಲಿ ಅದನ್ನು ತಮ್ಮ ಫೋನ್‌ನಿಂದ ಸುಲಭವಾಗಿ ಅಳಿಸಬಹುದು ಎಂದು ಹೇಳಿದ್ದಾರೆ.

ಪ್ರಸ್ತುತ ಬಳಕೆದಾರರು ಅಪ್ಲಿಕೇಶನ್ ಅನ್ನು ಅಳಿಸಬಹುದು ಎಂದು ಮಾತ್ರ ಸಚಿವ ಸಿಂಧಿಯಾ ಹೇಳಿದ್ದಾರೆ. ಸ್ಮಾರ್ಟ್‌ಫೋನ್ ತಯಾರಕರು ಅದನ್ನು ಪ್ರಿ ಲೋಡ್ ಮಾಡಬೇಕು. ಅದು ನಿಷ್ಕ್ರಿಯಗೊಂಡಿಲ್ಲ ಅಥವಾ ನಿರ್ಬಂಧಿಸಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು ಎಂಬ ನವೆಂಬರ್ 28ರ ಗೌಪ್ಯ ನಿರ್ದೇಶನದ ಬಗ್ಗೆ ಸಿಂಧಿಯಾ ಯಾವುದೇ ಪ್ರತಿಕ್ರಿಯೆ ಅಥವಾ ಸ್ಪಷ್ಟನೆ ಕೊಟ್ಟಿಲ್ಲ ಎಂದು ರಾಯಿಟರ್ಸ್ ವರದಿ ಹೇಳಿದೆ.

“ಆ್ಯಪಲ್ ಕಂಪನಿ ಸರ್ಕಾರದ ನಿರ್ದೇಶನ ಪಾಲಿಸದಿರಲು ಯೋಜಿಸಿದೆ. ಏಕೆಂದರೆ, ಅದರಿಂದ ಕಂಪನಿಯ ಐಒಎಸ್‌ ಪರಿಸರ ವ್ಯವಸ್ಥೆಗೆ ಹಲವಾರು ಗೌಪ್ಯತೆ ಮತ್ತು ಭದ್ರತಾ ಸಮಸ್ಯೆಗಳು ಉಂಟಾಗಲಿದೆ. ಜಗತ್ತಿನಲ್ಲಿ ಎಲ್ಲಿಯೂ ಇಂತಹ ಆದೇಶಗಳನ್ನು ಪಾಲಿಸುತ್ತಿಲ್ಲ ಎಂದು ಸರ್ಕಾರಕ್ಕೆ ಕಂಪನಿ ತಿಳಿಸಲಿದೆ” ಎಂದು ಆ್ಯಪಲ್‌ನ ಕಳವಳಗಳನ್ನು ತಿಳಿದಿರುವ ಎರಡು ಉದ್ಯಮ ಮೂಲಗಳು ತಿಳಿಸಿವೆ ಎಂದು ರಾಯಿಟರ್ಸ್ ವರದಿ ವಿವರಿಸಿದೆ.

“ಇದು (ಸರ್ಕಾರದ ಆದೇಶ) ಕೇವಲ ದೊಣ್ಣೆ ಹೊಡೆತವಲ್ಲ, ಡಬಲ್ ಬ್ಯಾರೆಲ್ ಗನ್‌ನಂತಿದೆ” ಎಂದು ಆ ಮೂಲ ಹೇಳಿರುವುದಾಗಿ ವರದಿ ತಿಳಿಸಿದೆ.

ಆ್ಯಪಲ್ ಕಂಪನಿಯ ನಿರ್ಧಾರದ ಕುರಿತು ಕಂಪನಿಯಾಗಲಿ, ದೂರಸಂಪರ್ಕ ಸಚಿವಾಲಯವಾಗಲಿ ಇದುವರೆಗೆ ಅಧಿಕೃತ ಪ್ರತಿಕ್ರಿಯೆಗೆ ಸಿಕ್ಕಿಲ್ಲ ಎಂದು ವರದಿ ಹೇಳಿದೆ.

ಆ್ಯಪಲ್ ಕಂಪೆನಿ ತನ್ನ ಆ್ಯಪ್ ಸ್ಟೋರ್ ಮತ್ತು ಐಒಎಸ್‌ ಸಾಫ್ಟ್‌ವೇರ್‌ನ್ನು ತುಂಬಾ ಕಟ್ಟುನಿಟ್ಟಾಗಿ ನಿಯಂತ್ರಿಸುತ್ತದೆ. ಇದು ಆ್ಯಪಲ್‌ಗೆ ವರ್ಷಕ್ಕೆ ಸುಮಾರು 100 ಬಿಲಿಯನ್ ಡಾಲರ್ (ಸುಮಾರು 8 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚು) ಆದಾಯ ತಂದುಕೊಡುವ ಅತಿ ಮುಖ್ಯವಾದ ಸೇವೆಗಳ ವ್ಯವಹಾರವಾಗಿದೆ.

ಆದರೆ, ಗೂಗಲ್‌ನ ಆಂಡ್ರಾಯ್ಡ್ ತಂತ್ರಾಂಶವು ಓಪನ್-ಸೋರ್ಸ್ (ಯಾರು ಬೇಕಾದರೂ ಉಚಿತವಾಗಿ ಬದಲಾಯಿಸಬಹುದಾದ) ಆಗಿರುವುದರಿಂದ, ಸ್ಯಾಮ್‌ಸಂಗ್, ಶಿವೋಮಿ ಇತ್ಯಾದಿ ಮೊಬೈಲ್ ತಯಾರಕರು ತಮ್ಮ ಇಚ್ಛೆಯಂತೆ ಆಂಡ್ರಾಯ್ಡ್ ಸಾಫ್ಟ್‌ವೇರ್‌ನ್ನು ಬದಲಾಯಿಸಿ, ತಮ್ಮದೇ ಆವೃತ್ತಿಯನ್ನು ಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಇದರಿಂದ ಅವರಿಗೆ ಹೆಚ್ಚು ಸ್ವಾತಂತ್ರ್ಯ ಇದೆ.

ಎರಡನೇ ಮೂಲವು ಆ್ಯಪಲ್ ನ್ಯಾಯಾಲಯಕ್ಕೆ ಹೋಗಲು ಅಥವಾ ಸಾರ್ವಜನಿಕ ನಿಲುವು ತೆಗೆದುಕೊಳ್ಳಲು ಯೋಜಿಸಿಲ್ಲ ಎಂದು ಹೇಳಿದೆ. ಆದರೆ ಭದ್ರತಾ ದೋಷಗಳಿಂದಾಗಿ ಆದೇಶವನ್ನು ಪಾಲಿಸಲು ಸಾಧ್ಯವಿಲ್ಲ ಎಂದು ಸರ್ಕಾರಕ್ಕೆ ತಿಳಿಸುತ್ತದೆ ಎಂದಿದೆ ಎಂದು ರಾಯಿಟರ್ಸ್ ಹೇಳಿದೆ.

ಪ್ರಸ್ತುತ ಆ್ಯಪಲ್ ಕಂಪೆನಿ ಭಾರತದಲ್ಲಿ ಒಂದು ದೊಡ್ಡ ಕಾನೂನು ಹೋರಾಟ ನಡೆಸುತ್ತಿದೆ. ಭಾರತದ ಸ್ಪರ್ಧಾ ನಿಯಂತ್ರಣ ಸಂಸ್ಥೆ (CCI – Competition Commission of India) ಆ್ಯಪಲ್‌ನ ವಿರುದ್ಧ ದೇಶದ ಏಕಸ್ವಾಮ್ಯ ವಿರೋಧಿ ಕಾನೂನಿನಡಿ ದಂಡ ವಿಧಿಸುವ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಹೋರಾಡುತ್ತಿದೆ.

ಆ್ಯಪಲ್ ಕಂಪೆನಿ ಹೇಳಿಕೊಂಡಿರುವಂತೆ, ಈ ಪ್ರಕರಣದಲ್ಲಿ ಅದು ಸೋತರೆ ಗರಿಷ್ಠ 38 ಬಿಲಿಯನ್ ಡಾಲರ್ (ಅಂದರೆ ಸುಮಾರು 3.2 ಲಕ್ಷ ಕೋಟಿ ರೂಪಾಯಿಗಿಂತಲೂ ಹೆಚ್ಚು) ದಂಡ ಪಾವತಿಸಬೇಕಾಗಬಹುದು ಎಂಬ ಅಪಾಯ ಇದೆ.

ಸ್ಯಾಮ್‌ಸಂಗ್ ಸೇರಿದಂತೆ ಇತರ ಬ್ರ್ಯಾಂಡ್‌ಗಳು ಆದೇಶವನ್ನು ಪರಿಶೀಲಿಸುತ್ತಿವೆ ಎಂದು ಈ ವಿಷಯದ ಬಗ್ಗೆ ತಿಳಿದಿರುವ ನಾಲ್ಕನೇ ಉದ್ಯಮ ಮೂಲ ತಿಳಿಸಿವೆ. ನಮ್ಮ ಪ್ರಶ್ನೆಗಳಿಗೆ ಸ್ಯಾಮ್‌ಸಂಗ್ ಪ್ರತಿಕ್ರಿಯಿಸಿಲ್ಲ. ಸರ್ಕಾರವು ಉದ್ಯಮದ ಸಮಾಲೋಚನೆಯಿಲ್ಲದೆ ಆದೇಶದ ನೀಡಿದೆ ಎಂದು ಮೂಲಗಳು ಹೇಳಿವೆ ಎಂದು ರಾಯಿಟರ್ಸ್ ವರದಿ ವಿವರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ ಹಿಂಸಾಚಾರ: ಸೋರಿಕೆಯಾದ ಸಂಪೂರ್ಣ ಆಡಿಯೋ ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಿಲ್ಲ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ನವದೆಹಲಿ: 2023ರ ಜನಾಂಗೀಯ ಹಿಂಸಾಚಾರದಲ್ಲಿ ಮಣಿಪುರದ ಮಾಜಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪಾತ್ರವನ್ನು ಸೂಚಿಸಿರುವ ಅರ್ಜಿಯಲ್ಲಿ ಲಭ್ಯವಿರುವ ಸಂಪೂರ್ಣ ಸೋರಿಕೆಯಾದ ಆಡಿಯೋ ತುಣುಕುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಲಿಲ್ಲ ಎಂದು...

ಎಸ್‌ಐಆರ್‌ ಭಯಕ್ಕೆ ಮತ್ತೊಂದು ಬಲಿ: ಬಂಗಾಳದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ, ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ಸಂಬಂಧಿಸಿದ ಭಯದಿಂದ ವೃದ್ಧನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತರನ್ನು ರಣಘಾಟ್‌ನ...

MGNREGA ಬದಲು VB-G Ram G : ರಾಜ್ಯಗಳ ಮೇಲೆ 40 ಶೇಕಡ ಆರ್ಥಿಕ ಹೊರೆ

ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ 2005ರಲ್ಲಿ ಜಾರಿಗೆ ತಂದ ಮಹತ್ವಕಾಂಕ್ಷೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಮತ್ತು ಅದರಡಿ ರೂಪಿಸಲಾದ ನರೇಗಾ ಯೋಜನೆಯ ಹೆಸರನ್ನು ಬದಲಿಸಲು ಕೇಂದ್ರ...

ಕೇರಳ: ಕೊಲ್ಲಂ ಕಾರ್ಪೊರೇಷನ್‌ನಲ್ಲಿ 25 ವರ್ಷಗಳ ಎಲ್‌ಡಿಎಫ್‌ ಆಳ್ವಿಕೆ ಕೊನೆಗೊಳಿಸಿದ ಯುಡಿಎಫ್

2025 ರ ಕೇರಳ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳು ರಾಜ್ಯದಲ್ಲಿ ಅತ್ಯಂತ ಅಚ್ಚರಿಯ ರಾಜಕೀಯ ಫಲಿತಾಂಶಳನ್ನು ನೀಡಿವೆ. ಅದರಲ್ಲಿ, ಕೊಲ್ಲಂ ಕಾರ್ಪೊರೇಷನ್‌ನಲ್ಲಿ ಎಡಪಂಥೀಯ ಪ್ರಜಾಸತ್ತಾತ್ಮಕ ರಂಗದ ನಿರಂತರ 25 ವರ್ಷಗಳ ನಿಯಂತ್ರಣವನ್ನು ಯುನೈಟೆಡ್...

‘ಇಂಡಿಯಾ ಬಣಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ’: ಕಾಂಗ್ರೆಸ್‌ನ ‘ವೋಟ್ ಚೋರಿ’ ಅಭಿಯಾನದ ಬಗ್ಗೆ ಒಮರ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಕಾಂಗ್ರೆಸ್‌ನ "ಮತ ಚೋರಿ" ಅಭಿಯಾನದಿಂದ ದೂರ ಉಳಿದಿದ್ದಾರೆ, ಈ ವಿಷಯವು ಒಟ್ಟಾರೆಯಾಗಿ ವಿರೋಧ ಪಕ್ಷದ ಇಂಡಿಯಾ ಬಣದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸೋಮವಾರ...

ಇಂಡಿಗೋ ವಿಮಾನ ರದ್ದತಿಗೆ ಸಂಬಂಧಿಸಿದ ಪಿಐಎಲ್ ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್

ನೂರಾರು ಇಂಡಿಗೋ ವಿಮಾನಗಳ ರದ್ದತಿಗೆ ನ್ಯಾಯಾಂಗ ಹಸ್ತಕ್ಷೇಪ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸೋಮವಾರ ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಅರ್ಜಿದಾರರು ತಮ್ಮ ದೂರುಗಳೊಂದಿಗೆ ದೆಹಲಿ ಹೈಕೋರ್ಟ್ ಅನ್ನು...

ಹಣ ಅಕ್ರಮ ವರ್ಗಾವಣೆ ಪ್ರಕರಣ : ಪತ್ರಕರ್ತ ಮಹೇಶ್ ಲಾಂಗಾಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

ವಂಚನೆ ಆರೋಪದ ಮೇಲೆ ದಾಖಲಾಗಿರುವ ಎರಡು ಎಫ್‌ಐಆರ್‌ಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪತ್ರಕರ್ತ ಮಹೇಶ್ ಲಾಂಗಾ ಅವರಿಗೆ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ (ಡಿ.15) ಮಧ್ಯಂತರ ಜಾಮೀನು ನೀಡಿದೆ. ಜಿಎಸ್‌ಟಿ ವಂಚನೆ...

‘ಮಹಿಳೆಯರು ಗಂಡಂದಿರ ಜೊತೆ ಮಲಗಲು ಮಾತ್ರ’: ಸಿಪಿಎಂ ನಾಯಕನ ಅಸೂಕ್ಷ್ಮ ಹೇಳಿಕೆಗೆ ವ್ಯಾಪಕ ಆಕ್ರೋಶ

ಮಲಪ್ಪುರಂ ಜಿಲ್ಲೆಯಲ್ಲಿ ಸಿಪಿಎಂ ಪ್ರಾದೇಶಿಕ ನಾಯಕ ಸಯೀದ್ ಅಲಿ ಮಜೀದ್ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುವಾಗ ಸ್ತ್ರೀದ್ವೇಷದ ಹೇಳಿಕೆಗಳನ್ನು ನೀಡಿದ ನಂತರ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.  ಸಯೀದ್ ಅಲಿ ಮಜೀದ್, ತೆನ್ನೆಲಾ ಪಂಚಾಯತ್ ವಾರ್ಡ್ ಅನ್ನು...

ಅಖ್ಲಾಕ್ ಹತ್ಯೆ ಪ್ರಕರಣ ಹಿಂತೆಗೆದುಕೊಳ್ಳುವುದು ನ್ಯಾಯಾಂಗ ಪ್ರಕ್ರಿಯೆ ಹಳಿತಪ್ಪಿಸುವ ಪ್ರಯತ್ನ: ಬೃಂದಾ ಕಾರಟ್

ರಾಜ್ಯಪಾಲರ ಅನುಮತಿಯೊಂದಿಗೆ ಮೊಹಮ್ಮದ್ ಅಖ್ಲಾಕ್ ಅವರ ಕೊಲೆ ಮತ್ತು ಗುಂಪು ಹತ್ಯೆಗೆ ಸಂಬಂಧಿಸಿದ ಪ್ರಕರಣವನ್ನು ಹಿಂತೆಗೆದುಕೊಳ್ಳುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಖಂಡಿಸಿ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದಿ) ಹಿರಿಯ ನಾಯಕಿ ಬೃಂದಾ ಕಾರಟ್...

ಮತ್ತೆ ಮುನ್ನೆಲೆಗೆ ಬಂದ ‘Avalkoppam’: ದಿಲೀಪ್ ಖುಲಾಸೆ ಬಳಿಕ ಕೇರಳದಾದ್ಯಂತ ಪ್ರತಿಭಟನೆ

ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿರುವ ನ್ಯಾಯಾಲಯದ ತೀರ್ಪಿಗೆ ಕೇರಳದಾದ್ಯಂತ ದೊಡ್ಡ ಮಟ್ಟದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. 2017ರಲ್ಲಿ ನಟಿ ಮೇಲೆ ದೌರ್ಜನ್ಯ ನಡೆದಾಗ...