Homeಮುಖಪುಟ'ಸಂಚಾರ್ ಸಾಥಿ' ಆ್ಯಪ್ ಕಡ್ಡಾಯ | ಕೇಂದ್ರದ ಆದೇಶ ವಿರೋಧಿಸಲು ಮುಂದಾದ ಆ್ಯಪಲ್ : ವರದಿ

‘ಸಂಚಾರ್ ಸಾಥಿ’ ಆ್ಯಪ್ ಕಡ್ಡಾಯ | ಕೇಂದ್ರದ ಆದೇಶ ವಿರೋಧಿಸಲು ಮುಂದಾದ ಆ್ಯಪಲ್ : ವರದಿ

- Advertisement -
- Advertisement -

ಸ್ಮಾರ್ಟ್‌ಫೋನ್ ತಯಾರಕರು ಎಲ್ಲಾ ಹೊಸ ಮೊಬೈಲ್‌ ಫೋನ್‌ಗಳಲ್ಲಿ ಸರ್ಕಾರಿ ಸ್ವಾಮ್ಯದ ‘ಸಂಚಾರ್ ಸಾಥಿ’ ಆ್ಯಪ್ ಪ್ರಿ ಇನ್‌ಸ್ಟಾಲ್ (Pre-Install) ಮಾಡಬೇಕು ಮತ್ತು ಬಳಕೆದಾರರು ಅದನ್ನು ಡಿಲಿಟ್ ಮಾಡದಂತೆ ನೋಡಿಕೊಳ್ಳಬೇಕು ಎಂಬ ಕೇಂದ್ರ ಸರ್ಕಾರದ ಆದೇಶವನ್ನು ವಿರೋಧಿಸಲು ಆ್ಯಪಲ್ ಕಂಪನಿ ಮುಂದಾಗಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ಮಂಗಳವಾರ (ಡಿ.2) ವರದಿ ಮಾಡಿದೆ.

“ಆ್ಯಪಲ್ ಕಂಪನಿ ಕೇಂದ್ರದ ಆದೇಶವನ್ನು ಪಾಲಿಸದಿರಲು ಯೋಜಿಸಿದೆ. ಈ ಬಗ್ಗೆ ತನ್ನ ಕಳವಳಗಳನ್ನು ಕಂಪನಿ ಕೇಂದ್ರ ಸರ್ಕಾರಕ್ಕೆ ತಿಳಿಸಲಿದೆ” ಎಂದು ಮೂರು ಮೂಲಗಳು ಹೇಳಿರುವುದಾಗಿ ರಾಯಿಟರ್ಸ್ ಹೇಳಿದೆ.

90 ದಿನಗಳ ಒಳಗೆ ಎಲ್ಲಾ ಹೊಸ ಮೊಬೈಲ್‌ ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಆ್ಯಪ್ ಪ್ರಿ ಲೋಡ್ ಮಾಡಲು ಆ್ಯಪಲ್, ಸ್ಯಾಮ್‌ಸಂಗ್, ಶಿವೋಮಿ ಸೇರಿದಂತೆ ಮೊಬೈಲ್ ಕಂಪನಿಗಳಿಗೆ ಕೇಂದ್ರ ಸರ್ಕಾರ ಆದೇಶಿಸಿದೆ.

ಕದ್ದ ಫೋನ್‌ಗಳನ್ನು ಪತ್ತೆಹಚ್ಚಲು, ಅವುಗಳನ್ನು ನಿರ್ಬಂಧಿಸಲು ಮತ್ತು ದುರುಪಯೋಗವಾಗದಂತೆ ತಡೆಯಲು ಈ ಅಪ್ಲಿಕೇಶನ್ ಇನ್‌ಸ್ಟಾಲ್ ಮಾಡಿಲಾಗುತ್ತಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಸ್ಮಾರ್ಟ್‌ ಫೋನ್ ತಯಾರಕರು ‘ಸಂಚಾರ್ ಸಾಥಿ’ ಆ್ಯಪ್ ಅನ್ನು ಮೊಬೈಲ್‌ ಬಳಕೆದಾರರು ಡಿಲಿಟ್ ಮಾಡದಂತೆ ಮಾಡಬೇಕು. ಈಗಾಗಲೇ ಪೂರೈಕೆ ಸರಪಳಿಯಲ್ಲಿರುವ ಫೋನ್‌ಗಳಿಗೆ ತಯಾರಕರು ಸಾಫ್ಟ್‌ವೇರ್ ಅಪ್ಡೇಟ್ ಮೂಲಕ ಅಪ್ಲಿಕೇಶನ್ ಅನ್ನು ತಳ್ಳಬೇಕು ಎಂದು ಸರ್ಕಾರ ಆದೇಶದಲ್ಲಿ ಹೇಳಿರುವುದಾಗಿ ಸೋಮವಾರ (ಡಿ.1) ರಾಯಿಟರ್ಸ್ ವರದಿ ಮಾಡಿದೆ.

ಸರ್ಕಾರದ ಆದೇಶದ ವಿರುದ್ದ ಪ್ರತಿಪಕ್ಷ ಕಾಂಗ್ರೆಸ್ ಸೇರಿದಂತೆ ಹಲವರು ಕಳವಳ ವ್ಯಕ್ತಪಡಿಸಿದ್ದಾರೆ. ಇದು ಮೊಬೈಲ್ ಫೋನ್ ಬಳಕೆದಾರರ ಮೇಲೆ ಕಣ್ಗಾವಲು ಇಡಲು ಸರ್ಕಾರ ಮಾಡಿರುವ ತಂತ್ರವಾಗಿದೆ. ಸರ್ಕಾರದ ಆದೇಶದ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಆರೋಪಿಸಿದ್ದಾರೆ.

ವಿರೋಧಗಳು ಹೆಚ್ಚಾಗುತ್ತಿದ್ದಂತೆ ಕೇಂದ್ರ ದೂರ ಸಂಪರ್ಕ ಖಾತೆ ಸಚಿವ ಜೋತಿರಾಧಿತ್ಯ ಎಂ. ಸಿಂಧಿಯಾ ಪ್ರತಿಕ್ರಿಯಿಸಿದ್ದಾರೆ. “ಸಂಚಾರ್ ಸಾಥಿ ಅಪ್ಲಿಕೇಶನ್ ‘ಸ್ವಯಂಪ್ರೇರಿತ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ’ಯನ್ನು ಹೊಂದಿದೆ. ಬಳಕೆದಾರರು ಅದನ್ನು ಸಕ್ರಿಯಗೊಳಿಸಬಹುದು ಮತ್ತು ಯಾವುದೇ ಸಮಯದಲ್ಲಿ ಅದನ್ನು ತಮ್ಮ ಫೋನ್‌ನಿಂದ ಸುಲಭವಾಗಿ ಅಳಿಸಬಹುದು ಎಂದು ಹೇಳಿದ್ದಾರೆ.

ಪ್ರಸ್ತುತ ಬಳಕೆದಾರರು ಅಪ್ಲಿಕೇಶನ್ ಅನ್ನು ಅಳಿಸಬಹುದು ಎಂದು ಮಾತ್ರ ಸಚಿವ ಸಿಂಧಿಯಾ ಹೇಳಿದ್ದಾರೆ. ಸ್ಮಾರ್ಟ್‌ಫೋನ್ ತಯಾರಕರು ಅದನ್ನು ಪ್ರಿ ಲೋಡ್ ಮಾಡಬೇಕು. ಅದು ನಿಷ್ಕ್ರಿಯಗೊಂಡಿಲ್ಲ ಅಥವಾ ನಿರ್ಬಂಧಿಸಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು ಎಂಬ ನವೆಂಬರ್ 28ರ ಗೌಪ್ಯ ನಿರ್ದೇಶನದ ಬಗ್ಗೆ ಸಿಂಧಿಯಾ ಯಾವುದೇ ಪ್ರತಿಕ್ರಿಯೆ ಅಥವಾ ಸ್ಪಷ್ಟನೆ ಕೊಟ್ಟಿಲ್ಲ ಎಂದು ರಾಯಿಟರ್ಸ್ ವರದಿ ಹೇಳಿದೆ.

“ಆ್ಯಪಲ್ ಕಂಪನಿ ಸರ್ಕಾರದ ನಿರ್ದೇಶನ ಪಾಲಿಸದಿರಲು ಯೋಜಿಸಿದೆ. ಏಕೆಂದರೆ, ಅದರಿಂದ ಕಂಪನಿಯ ಐಒಎಸ್‌ ಪರಿಸರ ವ್ಯವಸ್ಥೆಗೆ ಹಲವಾರು ಗೌಪ್ಯತೆ ಮತ್ತು ಭದ್ರತಾ ಸಮಸ್ಯೆಗಳು ಉಂಟಾಗಲಿದೆ. ಜಗತ್ತಿನಲ್ಲಿ ಎಲ್ಲಿಯೂ ಇಂತಹ ಆದೇಶಗಳನ್ನು ಪಾಲಿಸುತ್ತಿಲ್ಲ ಎಂದು ಸರ್ಕಾರಕ್ಕೆ ಕಂಪನಿ ತಿಳಿಸಲಿದೆ” ಎಂದು ಆ್ಯಪಲ್‌ನ ಕಳವಳಗಳನ್ನು ತಿಳಿದಿರುವ ಎರಡು ಉದ್ಯಮ ಮೂಲಗಳು ತಿಳಿಸಿವೆ ಎಂದು ರಾಯಿಟರ್ಸ್ ವರದಿ ವಿವರಿಸಿದೆ.

“ಇದು (ಸರ್ಕಾರದ ಆದೇಶ) ಕೇವಲ ದೊಣ್ಣೆ ಹೊಡೆತವಲ್ಲ, ಡಬಲ್ ಬ್ಯಾರೆಲ್ ಗನ್‌ನಂತಿದೆ” ಎಂದು ಆ ಮೂಲ ಹೇಳಿರುವುದಾಗಿ ವರದಿ ತಿಳಿಸಿದೆ.

ಆ್ಯಪಲ್ ಕಂಪನಿಯ ನಿರ್ಧಾರದ ಕುರಿತು ಕಂಪನಿಯಾಗಲಿ, ದೂರಸಂಪರ್ಕ ಸಚಿವಾಲಯವಾಗಲಿ ಇದುವರೆಗೆ ಅಧಿಕೃತ ಪ್ರತಿಕ್ರಿಯೆಗೆ ಸಿಕ್ಕಿಲ್ಲ ಎಂದು ವರದಿ ಹೇಳಿದೆ.

ಆ್ಯಪಲ್ ಕಂಪೆನಿ ತನ್ನ ಆ್ಯಪ್ ಸ್ಟೋರ್ ಮತ್ತು ಐಒಎಸ್‌ ಸಾಫ್ಟ್‌ವೇರ್‌ನ್ನು ತುಂಬಾ ಕಟ್ಟುನಿಟ್ಟಾಗಿ ನಿಯಂತ್ರಿಸುತ್ತದೆ. ಇದು ಆ್ಯಪಲ್‌ಗೆ ವರ್ಷಕ್ಕೆ ಸುಮಾರು 100 ಬಿಲಿಯನ್ ಡಾಲರ್ (ಸುಮಾರು 8 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚು) ಆದಾಯ ತಂದುಕೊಡುವ ಅತಿ ಮುಖ್ಯವಾದ ಸೇವೆಗಳ ವ್ಯವಹಾರವಾಗಿದೆ.

ಆದರೆ, ಗೂಗಲ್‌ನ ಆಂಡ್ರಾಯ್ಡ್ ತಂತ್ರಾಂಶವು ಓಪನ್-ಸೋರ್ಸ್ (ಯಾರು ಬೇಕಾದರೂ ಉಚಿತವಾಗಿ ಬದಲಾಯಿಸಬಹುದಾದ) ಆಗಿರುವುದರಿಂದ, ಸ್ಯಾಮ್‌ಸಂಗ್, ಶಿವೋಮಿ ಇತ್ಯಾದಿ ಮೊಬೈಲ್ ತಯಾರಕರು ತಮ್ಮ ಇಚ್ಛೆಯಂತೆ ಆಂಡ್ರಾಯ್ಡ್ ಸಾಫ್ಟ್‌ವೇರ್‌ನ್ನು ಬದಲಾಯಿಸಿ, ತಮ್ಮದೇ ಆವೃತ್ತಿಯನ್ನು ಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಇದರಿಂದ ಅವರಿಗೆ ಹೆಚ್ಚು ಸ್ವಾತಂತ್ರ್ಯ ಇದೆ.

ಎರಡನೇ ಮೂಲವು ಆ್ಯಪಲ್ ನ್ಯಾಯಾಲಯಕ್ಕೆ ಹೋಗಲು ಅಥವಾ ಸಾರ್ವಜನಿಕ ನಿಲುವು ತೆಗೆದುಕೊಳ್ಳಲು ಯೋಜಿಸಿಲ್ಲ ಎಂದು ಹೇಳಿದೆ. ಆದರೆ ಭದ್ರತಾ ದೋಷಗಳಿಂದಾಗಿ ಆದೇಶವನ್ನು ಪಾಲಿಸಲು ಸಾಧ್ಯವಿಲ್ಲ ಎಂದು ಸರ್ಕಾರಕ್ಕೆ ತಿಳಿಸುತ್ತದೆ ಎಂದಿದೆ ಎಂದು ರಾಯಿಟರ್ಸ್ ಹೇಳಿದೆ.

ಪ್ರಸ್ತುತ ಆ್ಯಪಲ್ ಕಂಪೆನಿ ಭಾರತದಲ್ಲಿ ಒಂದು ದೊಡ್ಡ ಕಾನೂನು ಹೋರಾಟ ನಡೆಸುತ್ತಿದೆ. ಭಾರತದ ಸ್ಪರ್ಧಾ ನಿಯಂತ್ರಣ ಸಂಸ್ಥೆ (CCI – Competition Commission of India) ಆ್ಯಪಲ್‌ನ ವಿರುದ್ಧ ದೇಶದ ಏಕಸ್ವಾಮ್ಯ ವಿರೋಧಿ ಕಾನೂನಿನಡಿ ದಂಡ ವಿಧಿಸುವ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಹೋರಾಡುತ್ತಿದೆ.

ಆ್ಯಪಲ್ ಕಂಪೆನಿ ಹೇಳಿಕೊಂಡಿರುವಂತೆ, ಈ ಪ್ರಕರಣದಲ್ಲಿ ಅದು ಸೋತರೆ ಗರಿಷ್ಠ 38 ಬಿಲಿಯನ್ ಡಾಲರ್ (ಅಂದರೆ ಸುಮಾರು 3.2 ಲಕ್ಷ ಕೋಟಿ ರೂಪಾಯಿಗಿಂತಲೂ ಹೆಚ್ಚು) ದಂಡ ಪಾವತಿಸಬೇಕಾಗಬಹುದು ಎಂಬ ಅಪಾಯ ಇದೆ.

ಸ್ಯಾಮ್‌ಸಂಗ್ ಸೇರಿದಂತೆ ಇತರ ಬ್ರ್ಯಾಂಡ್‌ಗಳು ಆದೇಶವನ್ನು ಪರಿಶೀಲಿಸುತ್ತಿವೆ ಎಂದು ಈ ವಿಷಯದ ಬಗ್ಗೆ ತಿಳಿದಿರುವ ನಾಲ್ಕನೇ ಉದ್ಯಮ ಮೂಲ ತಿಳಿಸಿವೆ. ನಮ್ಮ ಪ್ರಶ್ನೆಗಳಿಗೆ ಸ್ಯಾಮ್‌ಸಂಗ್ ಪ್ರತಿಕ್ರಿಯಿಸಿಲ್ಲ. ಸರ್ಕಾರವು ಉದ್ಯಮದ ಸಮಾಲೋಚನೆಯಿಲ್ಲದೆ ಆದೇಶದ ನೀಡಿದೆ ಎಂದು ಮೂಲಗಳು ಹೇಳಿವೆ ಎಂದು ರಾಯಿಟರ್ಸ್ ವರದಿ ವಿವರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...