Homeಮುಖಪುಟನಿಮ್ಮ ಐಫೋನ್ ಹ್ಯಾಕ್ ಮಾಡಿರಬಹುದು: ಪತ್ರಕರ್ತರು ಸೇರಿ ಹಲವು ವಿಪಕ್ಷ ನಾಯಕರಿಗೆ ಎಚ್ಚರಿಕೆ ಸಂದೇಶ

ನಿಮ್ಮ ಐಫೋನ್ ಹ್ಯಾಕ್ ಮಾಡಿರಬಹುದು: ಪತ್ರಕರ್ತರು ಸೇರಿ ಹಲವು ವಿಪಕ್ಷ ನಾಯಕರಿಗೆ ಎಚ್ಚರಿಕೆ ಸಂದೇಶ

- Advertisement -
- Advertisement -

ಆಪಲ್ ಮೊಬೈಲ್ ಕಂಪನಿಯು ಕನಿಷ್ಟ ಇಬ್ಬರು ಪತ್ರಕರ್ತರು ಸೇರಿದಂತೆ ಹಲವು ವಿರೋಧ ಪಕ್ಷದ ನಾಯಕರಿಗೆ ಎಚ್ಚರಿಕೆ ಸಂದೇಶಗಳನ್ನು ನೀಡಿದೆ. ಅವರ ಐಫೋನ್‌ಗಳನ್ನು ಪ್ರಾಯೋಜಿತ ದಾಳಿಕೋರರು ಹ್ಯಾಕ್ ಮಾಡಿರಬಹುದು ಎಂದು ಎಚ್ಚರಿಕೆ ನೀಡಿದೆ.

ತೃಣಮೂಲ ಕಾಂಗ್ರೆಸ್ ಲೋಕಸಭಾ ಸಂಸದ ಮಹುವಾ ಮೊಯಿತ್ರಾ, ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಕಾಂಗ್ರೆಸ್ ನಾಯಕ ಶಶಿ ತರೂರ್, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಪವನ್ ಖೇರಾ, ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮ ಉಸ್ತುವಾರಿ ಸುಪ್ರಿಯಾ ಶ್ರೀನಾಟೆ ಮತ್ತು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಸಂಸದ ಪ್ರಿಯಾಂಕಾ ಚತುರ್ವೇದಿ ಅವರು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಬೆದರಿಕೆ ಸಂದೇಶ ಸ್ವೀಕರಿಸಿದ್ದರ ಬಗ್ಗೆ ಬರೆದಿದ್ದಾರೆ.

ಅಬ್ಸರ್ವರ್ ರಿಸರ್ಚ್ ಫೌಂಡೇಶನ್ ಅಧ್ಯಕ್ಷ ಸಮೀರ್ ಸರನ್ ಮತ್ತು ಡೆಕ್ಕನ್ ಕ್ರಾನಿಕಲ್ ರೆಸಿಡೆಂಟ್ ಎಡಿಟರ್ ಶ್ರೀರಾಮ್ ಕರ್ರಿ ಅವರು ಆಪಲ್‌ನಿಂದ ಎಚ್ಚರಿಕೆಯನ್ನು ಸ್ವೀಕರಿಸಿದ್ದಾರೆ ಎಂದು ಹೇಳಿದರು. ಅದರ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ನಾಯಕ ಸೀತಾರಾಂ ಯೆಚೂರಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ಅವರಿಗೂ ಎಚ್ಚರಿಕೆ ನೀಡಲಾಗಿದೆ ಎಂದು ದಿ ವೈರ್ ವರದಿ ಮಾಡಿದೆ.

ಸ್ವತಂತ್ರ ಪತ್ರಿಕೋದ್ಯಮ ರೇವತಿಗೂ ಈ ಎಚ್ಚರಿಕೆ ಸಂದೇಶ ಬಂದಿದೆ. ಈ ಬಗ್ಗೆ ಎಕ್ಸಾನಲ್ಲಿ ಪೋಸ್ಟ್ ಮಾಡಿರುವ ಅವರು, ”ಕಳೆದ ಕೆಲವು ದಿನಗಳಿಂದ ಅವರುಗಳ ಫೋನ್ ಬ್ಯಾಟರಿಯಿಂದ ಬೇಗ ಖಾಲಿಯಾಗುತ್ತಿದೆ ಮತ್ತು ವಿಚಿತ್ರವಾಗಿ ವರ್ತಿಸುತ್ತಿದೆ. ಇದು ಮೊದಲ ಬಾರಿ ಅಲ್ಲ!” ಎಂದು ತಿಳಿಸಿದ್ದಾರೆ.

ಓವೈಸಿಯನ್ನು ಹೊರತುಪಡಿಸಿ ಇನ್ನುಳಿದ ರಾಜಕೀಯ ನಾಯಕರು ವಿರೋಧ ಪಕ್ಷಗಳ ಒಕ್ಕೂಟ INDIAಗೆ  ಸೇರಿದವರು. ಇವರೆಲ್ಲ ಮೋದಿ ಸರ್ಕಾರದ ವಿರುದ್ಧ ನಿರಂತರವಾಗಿ ಟೀಕೆ ಮಾಡುತ್ತಿದ್ದಾರೆ.

”ನಿಮ್ಮ ಸಾಧನವು ರಾಜ್ಯ ಪ್ರಾಯೋಜಿತ ದಾಳಿಕೋರರಿಂದ ರಾಜಿ ಮಾಡಿಕೊಂಡರೆ, ಅವರು ನಿಮ್ಮ ಸೂಕ್ಷ್ಮ ಡೇಟಾ, ಸಂವಹನಗಳು ಅಥವಾ ಕ್ಯಾಮರಾ ಮತ್ತು ಮೈಕ್ರೊಫೋನ್ ಅನ್ನು ದೂರದಿಂದಲೇ ಪ್ರವೇಶಿಸಲು ಸಾಧ್ಯವಾಗುತ್ತದೆ” ಎಂದು ಅವರಿಗೆ ಬಂದಿರುವ ಸಂದೇಶಗಳು ಎಚ್ಚರಿಕೆ ನೀಡಿವೆ.

ಅಧಿಸೂಚನೆಯಲ್ಲಿ, ”ಈ ರೀತಿ ನಿಮ್ಮ ಮೊಬೈಲ್‌ ಹ್ಯಾಕ್ ಮಾಡಲು ಸಾಧ್ಯವಿರುವಾಗ ಇದು ತಪ್ಪು… ಈ ಎಚ್ಚರಿಕೆಯನ್ನು ದಯವಿಟ್ಟು ಗಂಭೀರವಾಗಿ ತೆಗೆದುಕೊಳ್ಳಿ” ಎಂದು ಹೇಳಲಾಗಿದೆ.

ಆಪಲ್ ತನ್ನ ವೆಬ್‌ಸೈಟ್‌ನಲ್ಲಿ ಹೇಳಿದ್ದೇನೆ?

”ಸಾಂಪ್ರದಾಯಿಕ ಸೈಬರ್ ಅಪರಾಧಿಗಳಿಗಿಂತ ಇದು ಭಿನ್ನವಾಗಿದೆ. ರಾಜ್ಯ ಪ್ರಾಯೋಜಿತ ದಾಳಿಕೋರರು ಕಡಿಮೆ ಸಂಖ್ಯೆಯ ನಿರ್ದಿಷ್ಟ ವ್ಯಕ್ತಿಗಳು ಮತ್ತು ಅವರ ಸಾಧನಗಳನ್ನು ಗುರಿಯಾಗಿಸುತ್ತಾರೆ. ಹ್ಯಾಕ್ ಮಾಡಲು ಅಸಾಧಾರಣ ಸಂಪನ್ಮೂಲಗಳನ್ನು ಬಳಸುತ್ತಾರೆ. ಈ ದಾಳಿಗಳನ್ನು ಪತ್ತೆಹಚ್ಚಲು ಮತ್ತು ತಡೆಯುವುದು ತುಂಬಾ ಕಷ್ಟಕರವಾಗುತ್ತದೆ. ರಾಜ್ಯ-ಪ್ರಾಯೋಜಿತ ದಾಳಿಗಳು ಹೆಚ್ಚು ಸಂಕೀರ್ಣವಾಗಿವೆ” ಎಂದು ಹೇಳಿದೆ.

ಇದನ್ನೂ ಓದಿ: ಕೇರಳ: ಸ್ಪೋಟದ ಬಗ್ಗೆ ವಿವಾದಾತ್ಮಕ ಪೋಸ್ಟ್‌ ಮಾಡಿದ್ದ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...