Homeಮುಖಪುಟನಿಮ್ಮ ಐಫೋನ್ ಹ್ಯಾಕ್ ಮಾಡಿರಬಹುದು: ಪತ್ರಕರ್ತರು ಸೇರಿ ಹಲವು ವಿಪಕ್ಷ ನಾಯಕರಿಗೆ ಎಚ್ಚರಿಕೆ ಸಂದೇಶ

ನಿಮ್ಮ ಐಫೋನ್ ಹ್ಯಾಕ್ ಮಾಡಿರಬಹುದು: ಪತ್ರಕರ್ತರು ಸೇರಿ ಹಲವು ವಿಪಕ್ಷ ನಾಯಕರಿಗೆ ಎಚ್ಚರಿಕೆ ಸಂದೇಶ

- Advertisement -
- Advertisement -

ಆಪಲ್ ಮೊಬೈಲ್ ಕಂಪನಿಯು ಕನಿಷ್ಟ ಇಬ್ಬರು ಪತ್ರಕರ್ತರು ಸೇರಿದಂತೆ ಹಲವು ವಿರೋಧ ಪಕ್ಷದ ನಾಯಕರಿಗೆ ಎಚ್ಚರಿಕೆ ಸಂದೇಶಗಳನ್ನು ನೀಡಿದೆ. ಅವರ ಐಫೋನ್‌ಗಳನ್ನು ಪ್ರಾಯೋಜಿತ ದಾಳಿಕೋರರು ಹ್ಯಾಕ್ ಮಾಡಿರಬಹುದು ಎಂದು ಎಚ್ಚರಿಕೆ ನೀಡಿದೆ.

ತೃಣಮೂಲ ಕಾಂಗ್ರೆಸ್ ಲೋಕಸಭಾ ಸಂಸದ ಮಹುವಾ ಮೊಯಿತ್ರಾ, ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಕಾಂಗ್ರೆಸ್ ನಾಯಕ ಶಶಿ ತರೂರ್, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಪವನ್ ಖೇರಾ, ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮ ಉಸ್ತುವಾರಿ ಸುಪ್ರಿಯಾ ಶ್ರೀನಾಟೆ ಮತ್ತು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಸಂಸದ ಪ್ರಿಯಾಂಕಾ ಚತುರ್ವೇದಿ ಅವರು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಬೆದರಿಕೆ ಸಂದೇಶ ಸ್ವೀಕರಿಸಿದ್ದರ ಬಗ್ಗೆ ಬರೆದಿದ್ದಾರೆ.

ಅಬ್ಸರ್ವರ್ ರಿಸರ್ಚ್ ಫೌಂಡೇಶನ್ ಅಧ್ಯಕ್ಷ ಸಮೀರ್ ಸರನ್ ಮತ್ತು ಡೆಕ್ಕನ್ ಕ್ರಾನಿಕಲ್ ರೆಸಿಡೆಂಟ್ ಎಡಿಟರ್ ಶ್ರೀರಾಮ್ ಕರ್ರಿ ಅವರು ಆಪಲ್‌ನಿಂದ ಎಚ್ಚರಿಕೆಯನ್ನು ಸ್ವೀಕರಿಸಿದ್ದಾರೆ ಎಂದು ಹೇಳಿದರು. ಅದರ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ನಾಯಕ ಸೀತಾರಾಂ ಯೆಚೂರಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ಅವರಿಗೂ ಎಚ್ಚರಿಕೆ ನೀಡಲಾಗಿದೆ ಎಂದು ದಿ ವೈರ್ ವರದಿ ಮಾಡಿದೆ.

ಸ್ವತಂತ್ರ ಪತ್ರಿಕೋದ್ಯಮ ರೇವತಿಗೂ ಈ ಎಚ್ಚರಿಕೆ ಸಂದೇಶ ಬಂದಿದೆ. ಈ ಬಗ್ಗೆ ಎಕ್ಸಾನಲ್ಲಿ ಪೋಸ್ಟ್ ಮಾಡಿರುವ ಅವರು, ”ಕಳೆದ ಕೆಲವು ದಿನಗಳಿಂದ ಅವರುಗಳ ಫೋನ್ ಬ್ಯಾಟರಿಯಿಂದ ಬೇಗ ಖಾಲಿಯಾಗುತ್ತಿದೆ ಮತ್ತು ವಿಚಿತ್ರವಾಗಿ ವರ್ತಿಸುತ್ತಿದೆ. ಇದು ಮೊದಲ ಬಾರಿ ಅಲ್ಲ!” ಎಂದು ತಿಳಿಸಿದ್ದಾರೆ.

ಓವೈಸಿಯನ್ನು ಹೊರತುಪಡಿಸಿ ಇನ್ನುಳಿದ ರಾಜಕೀಯ ನಾಯಕರು ವಿರೋಧ ಪಕ್ಷಗಳ ಒಕ್ಕೂಟ INDIAಗೆ  ಸೇರಿದವರು. ಇವರೆಲ್ಲ ಮೋದಿ ಸರ್ಕಾರದ ವಿರುದ್ಧ ನಿರಂತರವಾಗಿ ಟೀಕೆ ಮಾಡುತ್ತಿದ್ದಾರೆ.

”ನಿಮ್ಮ ಸಾಧನವು ರಾಜ್ಯ ಪ್ರಾಯೋಜಿತ ದಾಳಿಕೋರರಿಂದ ರಾಜಿ ಮಾಡಿಕೊಂಡರೆ, ಅವರು ನಿಮ್ಮ ಸೂಕ್ಷ್ಮ ಡೇಟಾ, ಸಂವಹನಗಳು ಅಥವಾ ಕ್ಯಾಮರಾ ಮತ್ತು ಮೈಕ್ರೊಫೋನ್ ಅನ್ನು ದೂರದಿಂದಲೇ ಪ್ರವೇಶಿಸಲು ಸಾಧ್ಯವಾಗುತ್ತದೆ” ಎಂದು ಅವರಿಗೆ ಬಂದಿರುವ ಸಂದೇಶಗಳು ಎಚ್ಚರಿಕೆ ನೀಡಿವೆ.

ಅಧಿಸೂಚನೆಯಲ್ಲಿ, ”ಈ ರೀತಿ ನಿಮ್ಮ ಮೊಬೈಲ್‌ ಹ್ಯಾಕ್ ಮಾಡಲು ಸಾಧ್ಯವಿರುವಾಗ ಇದು ತಪ್ಪು… ಈ ಎಚ್ಚರಿಕೆಯನ್ನು ದಯವಿಟ್ಟು ಗಂಭೀರವಾಗಿ ತೆಗೆದುಕೊಳ್ಳಿ” ಎಂದು ಹೇಳಲಾಗಿದೆ.

ಆಪಲ್ ತನ್ನ ವೆಬ್‌ಸೈಟ್‌ನಲ್ಲಿ ಹೇಳಿದ್ದೇನೆ?

”ಸಾಂಪ್ರದಾಯಿಕ ಸೈಬರ್ ಅಪರಾಧಿಗಳಿಗಿಂತ ಇದು ಭಿನ್ನವಾಗಿದೆ. ರಾಜ್ಯ ಪ್ರಾಯೋಜಿತ ದಾಳಿಕೋರರು ಕಡಿಮೆ ಸಂಖ್ಯೆಯ ನಿರ್ದಿಷ್ಟ ವ್ಯಕ್ತಿಗಳು ಮತ್ತು ಅವರ ಸಾಧನಗಳನ್ನು ಗುರಿಯಾಗಿಸುತ್ತಾರೆ. ಹ್ಯಾಕ್ ಮಾಡಲು ಅಸಾಧಾರಣ ಸಂಪನ್ಮೂಲಗಳನ್ನು ಬಳಸುತ್ತಾರೆ. ಈ ದಾಳಿಗಳನ್ನು ಪತ್ತೆಹಚ್ಚಲು ಮತ್ತು ತಡೆಯುವುದು ತುಂಬಾ ಕಷ್ಟಕರವಾಗುತ್ತದೆ. ರಾಜ್ಯ-ಪ್ರಾಯೋಜಿತ ದಾಳಿಗಳು ಹೆಚ್ಚು ಸಂಕೀರ್ಣವಾಗಿವೆ” ಎಂದು ಹೇಳಿದೆ.

ಇದನ್ನೂ ಓದಿ: ಕೇರಳ: ಸ್ಪೋಟದ ಬಗ್ಗೆ ವಿವಾದಾತ್ಮಕ ಪೋಸ್ಟ್‌ ಮಾಡಿದ್ದ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...