Homeಕರ್ನಾಟಕರಾಜ್ಯ ಸರ್ಕಾರಿ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಕರೆ: ಲಿಂಗತ್ವ ಅಲ್ಪಸಂಖ್ಯಾತರಿಗೆ 1% ಮೀಸಲು

ರಾಜ್ಯ ಸರ್ಕಾರಿ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಕರೆ: ಲಿಂಗತ್ವ ಅಲ್ಪಸಂಖ್ಯಾತರಿಗೆ 1% ಮೀಸಲು

- Advertisement -
- Advertisement -

ಕರ್ನಾಟಕದ ಕೆಲವು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ಇದರ ಭಾಗವಾಗಿ, ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಾಥಮಿಕ ಶಾಲಾ ಶಿಕ್ಷಕರ ಅರ್ಜಿಗಳನ್ನು ಆಹ್ವಾನಿಸಿದ್ದು, ಇದರಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ (ಟ್ರಾನ್ಸ್‌ಜೆಂಡರ್‌‌) 1% ಮೀಸಲಾತಿಯನ್ನು ನೀಡಿದೆ. ಈ ಮೂಲಕ, ಆ ಸಮುದಾಯದ ಶಿಕ್ಷಕರನ್ನು ನೇಮಿಸಿಕೊಳ್ಳುತ್ತಿರುವ ದೇಶದ ಮೊದಲ ರಾಜ್ಯವಾಗಿ ಕರ್ನಾಟಕ ಗುರುತಿಸಿಕೊಳ್ಳುತ್ತಿದೆ.

ಹಲವು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಎದುರಾಗಿದ್ದು, ಕೆಲವೆಡೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಡಿಸೆಂಬರ್ 2021ರಲ್ಲಿ, ಹಣಕಾಸು ಇಲಾಖೆಯು ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಿದ ನಂತರ, ಸಾರ್ವಜನಿಕ ಶಿಕ್ಷಣ ಇಲಾಖೆಯು 6 ರಿಂದ 8ನೇ ತರಗತಿಗಳಿಗೆ 15,000 ಶಿಕ್ಷಕರನ್ನು ನೇಮಕ ಮಾಡುವ ಪ್ರಕ್ರಿಯೆ ಆರಂಭಿಸಲು ಮುಂದಾಗಿದೆ. 15,000 ಹುದ್ದಗಳ ಪೈಕಿ 5,000 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಮೀಸಲಿಡಲಾಗಿದೆ.

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಗ್ರಾಮೀಣ ಕೋಟಾ, ದೈಹಿಕವಾಗಿ ಅಶಕ್ತರು, ಮಹಿಳಾ ಮೀಸಲಾತಿಗಳ ಜೊತೆಗೆ, ಹೊಸದಾಗಿ ಪರಿಚಯಿಸಲಾದ ಟ್ರಾನ್ಸ್ಜೆಂಡರ್ ಕೋಟಾವನ್ನು ಪಡೆಯಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 50% ಅಂಕಗಳೊಂದಿಗೆ ಪದವಿ ಪಡೆದಿರಬೇಕು. ಎರಡು ವರ್ಷಗಳ ಕಾಲ ಬೋಧನೆಯಲ್ಲಿ ಡಿಪ್ಲೊಮಾ (ಬಿಎಡ್) ಪಡೆದಿರಬೇಕು ಎಂದು ಶಿಕ್ಷಣ ಇಲಾಖೆ ಹೇಳಿದೆ.

“ಎಲ್ಲಾ ಇಲಾಖೆಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಅವಕಾಶ ನೀಡಲು ಸರ್ಕಾರವು 1% ಕೋಟಾವನ್ನು ಜಾರಿಗೊಳಿಸಿದೆ. ನಾವು ಶಿಕ್ಷಕರ ನೇಮಕಾತಿಗೆ ಕರೆ ನೀಡಿದ್ದೇವೆ, ಟಾನ್ಸ್‌ಜೆಂಡರ್‌ಗಳಿಗೆ ಮೀಸಲಾತಿ ನೀಡಲಾಗಿದೆ. ಇದು ಮಹತ್ವದ ಹೆಜ್ಜೆಯಾಗಿದ್ದು, ಈ ಸಮುದಾಯವು ಮುಖ್ಯವಾಹಿನಿಗೆ ಸೇರಲು ಸಹಾಯ ಮಾಡುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಡಿಸೆಂಬರ್ 2021ರಲ್ಲಿ, ಕರ್ನಾಟಕ ಪೊಲೀಸ್ ಇಲಾಖೆಯು ಟ್ರಾನ್ಸ್‌ಜೆಂಡರ್‌ಗಳನ್ನು ಸೇವೆಗೆ ಸೇರಿಸಲು ನಿರ್ಧರಿಸಿತ್ತು. ಅದರಂತೆ, ಮೀಸಲು ಸಬ್-ಇನ್ಸ್ಪೆಕ್ಟರ್ (ಆರ್ಎಸ್ಐ) ಶ್ರೇಣಿಯ 70 ಹುದ್ದೆಗಳಿಗೆ ಅರ್ಹ ಪುರುಷರು, ಮಹಿಳೆಯರು ಮತ್ತು ಟ್ರಾನ್ಸ್‌ಜೆಂಡರ್‌ಗಳು ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ.

“ಕರ್ನಾಟಕದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಬಗ್ಗೆ ರಾಜ್ಯ ಸರ್ಕಾರ ಸಮೀಕ್ಷೆ ನಡೆಸಿಲ್ಲ. ಆ ಸಮುದಾಯದ ಬಗ್ಗೆ ಸರ್ಕಾರದ ಬಳಿ ಸರಿಯಾದ ಮಾಹಿತಿ ಇಲ್ಲ. ಆ ಸಮುದಾಯದ ಜನರ ಶಿಕ್ಷಣ ಅಥವಾ ಸಾಮಾಜಿಕ-ಆರ್ಥಿಕ ಸ್ಥಿತಿಯ ಬಗ್ಗೆ ಯಾವುದೇ ಡೇಟಾ ಇಲ್ಲದಿರುವಾಗ, ಅಂತಹ ಅಧಿಸೂಚನೆಯು ಅವರಿಗೆ ಹೇಗೆ ಸಹಾಯ ಮಾಡುತ್ತದೆ? ಅಧಿಸೂಚನೆಯ ಪ್ರಕಾರ, ಟ್ರಾನ್ಸ್‌ಜೆಂಡರ್‌ಗಳಿಗಾಗಿ 150 ಪೋಸ್ಟ್‌ಗಳಿವೆ. ಶಿಕ್ಷಣಕ್ಕೆ ಬಂದಾಗ ಎಷ್ಟು ಅರ್ಹರು ಇದ್ದಾರೆ ಎಂಬುದು ನಮಗೆ ತಿಳಿದಿಲ್ಲ. ಅವರ ಶಿಕ್ಷಣಕ್ಕೆ ಸರ್ಕಾರ ಮೊದಲು ಒತ್ತು ನೀಡಬೇಕು’’ ಎಂದು ಲೈಂಗಿಕ ಅಲ್ಪಸಂಖ್ಯಾತರ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿರಿ: ಅಂಬೇಡ್ಕರ್‌‌ ವಿಚಾರಧಾರೆಯೇ ಪ್ರೇರಣೆ: ಮೈಸೂರು ವಿವಿಯಲ್ಲಿ ಪಿಎಚ್‌.ಡಿ ಮಾಡುತ್ತಿರುವ ಟ್ರಾನ್ಸ್‌ಜೆಂಡರ್‌ ಮಹಿಳೆಯ ಮನದಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...