Homeಕರ್ನಾಟಕನಾಳೆಯಿಂದಲೇ 'ಗೃಹಲಕ್ಷ್ಮಿ ಯೋಜನೆ'ಯ ಅರ್ಜಿ ಸಲ್ಲಿಕೆ ಆರಂಭ: ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ..

ನಾಳೆಯಿಂದಲೇ ‘ಗೃಹಲಕ್ಷ್ಮಿ ಯೋಜನೆ’ಯ ಅರ್ಜಿ ಸಲ್ಲಿಕೆ ಆರಂಭ: ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ..

- Advertisement -
- Advertisement -

ರಾಜ್ಯ ಸರ್ಕಾರದ 5ಗ್ಯಾರಂಟಿ ಯೋಜನೆಗಳಲ್ಲಿ ‘ಗೃಹಲಕ್ಷ್ಮಿ ಯೋಜನೆ’ಯ ಲಾಭ ಪಡೆಯಲು ಅರ್ಹ ಮಹಿಳೆಯರು ನಾಳೆಯಿಂದಲೇ (ಜೂನ್ 16 ರಿಂದ) ಅರ್ಜಿ ಸಲ್ಲಿಸಬಹುದು ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

ಈ ಯೋಜನೆಯು ಮಹಿಳಾ ಸಬಲೀಕರಣ ಮತ್ತು ಸ್ವಾಭಿಮಾನದ ಹೆಗ್ಗುರುತು ಎಂದಿರುವ ಸರ್ಕಾರ, ಪ್ರತಿ ಕುಟುಂಬದ ಯಜಮಾನಿ ಬ್ಯಾಂಕ್ ಖಾತೆಗೆ ಮಾಸಿಕ 2,000 ಗಳನ್ನು ನೇರವಾಗಿ ಜಮಾ ಮಾಡಲಿದೆ.

ಅರ್ಜಿಗಳನ್ನು ಅನ್‌ಲೈನ್‌ ಮೂಲಕ ಅಥವಾ ಭೌತಿಕವಾಗಿ ಗ್ರಾಮ ಒನ್/ ಬೆಂಗಳೂರು ಒನ್‌ ಇಲ್ಲವೇ ಕರ್ನಾಟಕ ಒನ್‌ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್ ಸಂಖ್ಯೆ, ಮೊಬೈಲ್‌ ಸಂಖ್ಯೆ ಮತ್ತು ಬ್ಯಾಂಕ್ ಖಾತೆ ವಿವರಗಳನ್ನು ನೀಡಬೇಕು.

ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ”ಮಹಿಳೆಯರಿಗೆ ಪ್ರತಿ ತಿಂಗಳು 2000 ರೂಪಾಯಿ ಹಣ ನೀಡುವ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ನಾಳೆ ಮಧ್ಯಾಹ್ನ 1.30ಕ್ಕೆ ಚಾಲನೆ ಸಿಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ರಾಜಭವನದಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

”ಶುಕ್ರವಾರದಿಂದಲೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಬಿಪಿಎಲ್, ಅಂತ್ಯೋದಯ ಕಾರ್ಡ್‌ದಾರರು ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ಗೃಹಜ್ಯೋತಿ, ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ಕುರಿತು ಸಿಎಂ ಸಿದ್ದರಾಮಯ್ಯ ನೀಡಿದ ಸಂಪೂರ್ಣ ಮಾಹಿತಿ ಇಲ್ಲಿದೆ..

”ಆಗಸ್ಟ್ 18ರಂದು ಅಕೌಂಟ್‌ಗೆ ಹಣ ಹಾಕುವ ಯೋಜನೆಗೆ ಚಾಲನೆ ನೀಡಲಾಗುವುದು. ಅರ್ಜಿ ಸಲ್ಲಿಕೆ ಬಗ್ಗೆ ಯಾವುದೇ ಅನುಮಾನ ಇದ್ದರೂ 1902 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದು” ಎಂದರು.

”ಪತಿ ತೆರಿಗೆ ಕಟ್ಟುತ್ತಿದ್ದರೆ ಅವರ ಪತ್ನಿಯರು ಈ ಯೋಜನೆಗೆ ಅರ್ಹರಾಗುವುದಿಲ್ಲ, ಅರ್ಜಿ ಸ್ವೀಕಾರ ಆಗುವುದಿಲ್ಲ, ಇ-ಗವರ್ನೆನ್ಸ್ ಮೂಲಕ ಅರ್ಜಿ ಸ್ವೀಕರಿಸುತ್ತಿರುವ ಕಾರಣ ಅನರ್ಹವಾಗಿ ಯೋಜನೆಯ ಲಾಭ ಪಡೆಯಲು ಪ್ರಯತ್ನಿಸಿದರೆ ಸುಲಭವಾಗಿ ತಿಳಿಯಲಿದೆ” ಎಂದು ಹೇಳಿದರು.

‘ಗೃಹಲಕ್ಷ್ಮಿ ಯೋಜನೆ’ಯ ಫಲಾನುಭವಿಗಳಾಗಲು ಯಾರು?

ಪ್ರತಿ ಕುಟುಂಬದಲ್ಲಿ ಒಬ್ಬರು ಮಹಿಳೆಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.

ಅತ್ತೆ-ಸೊಸೆ ಇದ್ದಾಗ ಇಬ್ಬರಲ್ಲಿ ಮನೆ ಯಜಮಾನಿ ಯಾರು ಎಂದು ನಿರ್ಧರಿಸಿ ಒಬ್ಬರು ಮಾತ್ರ ಅರ್ಜಿ ಸಲ್ಲಿಸಬೇಕಾಗುತ್ತದೆ.

ಅರ್ಜಿದಾರರು ಕರ್ನಾಟಕದಲ್ಲಿ ವಾಸಿಸುತ್ತಿರಬೇಕು.

ಬಿಪಿಎಲ್, ಅಂತ್ಯೋದಯ ಕಾರ್ಡ್ ಹೊಂದಿರುವವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಈ ದಾಖಲೆಗಳು ಬೇಕು:

1) ವಾಸಸ್ಥಳ ಪ್ರಮಾಣಪತ್ರ

2) ಮೊಬೈಲ್ ಸಂಖ್ಯೆ

3) 2 ಪಾಸ್‌ಪೋರ್ಟ್ ಗಾತ್ರದ ಫೋಟೊ

4) ಬ್ಯಾಂಕ್ ಪಾಸ್‌ಬುಕ್ ನಕಲು

5) ಪಡಿತರ ಚೀಟಿ, ನೀರಿನ ಬಿಲ್, ವಿದ್ಯುತ್ ಬಿಲ್ (ವಿಳಾಸ ದೃಢೀಕರಣಕ್ಕೆ)

6) ಆಧಾರ್ ಕಾರ್ಡ್, ವೋಟರ್ ಐಡಿ, ಡ್ರೈವಿಂಗ್ ಲೈಸೆನ್ಸ್ (ವೈಯಕ್ತಿಕ ದೃಢೀಕರಣಕ್ಕೆ)

7) ಅರ್ಜಿದಾರರ ಬ್ಯಾಂಕ್ ಖಾತೆ ವಿವರಗಳು

ಅರ್ಜಿ ಸಲ್ಲಿಸುವ ವಿಧಾನ :

ಯೋಜನೆಯ ಪುಟದ ಅಧಿಕೃತ ವೆಬ್‌ಸೈಟ್‌ಗೆ ಹೋಗಿ, ಗೃಹಲಕ್ಷ್ಮಿ ಯೋಜನೆ ನಮೂನೆ ಅರ್ಜಿ ಡೌನ್‌ಲೋಡ್ ಮಾಡಿಕೊಂಡು, ಪ್ರಿಂಟೌಟ್ ತೆಗೆದುಕೊಳ್ಳಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...