Homeಕರ್ನಾಟಕನಾಳೆಯಿಂದಲೇ 'ಗೃಹಲಕ್ಷ್ಮಿ ಯೋಜನೆ'ಯ ಅರ್ಜಿ ಸಲ್ಲಿಕೆ ಆರಂಭ: ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ..

ನಾಳೆಯಿಂದಲೇ ‘ಗೃಹಲಕ್ಷ್ಮಿ ಯೋಜನೆ’ಯ ಅರ್ಜಿ ಸಲ್ಲಿಕೆ ಆರಂಭ: ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ..

- Advertisement -
- Advertisement -

ರಾಜ್ಯ ಸರ್ಕಾರದ 5ಗ್ಯಾರಂಟಿ ಯೋಜನೆಗಳಲ್ಲಿ ‘ಗೃಹಲಕ್ಷ್ಮಿ ಯೋಜನೆ’ಯ ಲಾಭ ಪಡೆಯಲು ಅರ್ಹ ಮಹಿಳೆಯರು ನಾಳೆಯಿಂದಲೇ (ಜೂನ್ 16 ರಿಂದ) ಅರ್ಜಿ ಸಲ್ಲಿಸಬಹುದು ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

ಈ ಯೋಜನೆಯು ಮಹಿಳಾ ಸಬಲೀಕರಣ ಮತ್ತು ಸ್ವಾಭಿಮಾನದ ಹೆಗ್ಗುರುತು ಎಂದಿರುವ ಸರ್ಕಾರ, ಪ್ರತಿ ಕುಟುಂಬದ ಯಜಮಾನಿ ಬ್ಯಾಂಕ್ ಖಾತೆಗೆ ಮಾಸಿಕ 2,000 ಗಳನ್ನು ನೇರವಾಗಿ ಜಮಾ ಮಾಡಲಿದೆ.

ಅರ್ಜಿಗಳನ್ನು ಅನ್‌ಲೈನ್‌ ಮೂಲಕ ಅಥವಾ ಭೌತಿಕವಾಗಿ ಗ್ರಾಮ ಒನ್/ ಬೆಂಗಳೂರು ಒನ್‌ ಇಲ್ಲವೇ ಕರ್ನಾಟಕ ಒನ್‌ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್ ಸಂಖ್ಯೆ, ಮೊಬೈಲ್‌ ಸಂಖ್ಯೆ ಮತ್ತು ಬ್ಯಾಂಕ್ ಖಾತೆ ವಿವರಗಳನ್ನು ನೀಡಬೇಕು.

ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ”ಮಹಿಳೆಯರಿಗೆ ಪ್ರತಿ ತಿಂಗಳು 2000 ರೂಪಾಯಿ ಹಣ ನೀಡುವ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ನಾಳೆ ಮಧ್ಯಾಹ್ನ 1.30ಕ್ಕೆ ಚಾಲನೆ ಸಿಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ರಾಜಭವನದಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

”ಶುಕ್ರವಾರದಿಂದಲೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಬಿಪಿಎಲ್, ಅಂತ್ಯೋದಯ ಕಾರ್ಡ್‌ದಾರರು ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ಗೃಹಜ್ಯೋತಿ, ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ಕುರಿತು ಸಿಎಂ ಸಿದ್ದರಾಮಯ್ಯ ನೀಡಿದ ಸಂಪೂರ್ಣ ಮಾಹಿತಿ ಇಲ್ಲಿದೆ..

”ಆಗಸ್ಟ್ 18ರಂದು ಅಕೌಂಟ್‌ಗೆ ಹಣ ಹಾಕುವ ಯೋಜನೆಗೆ ಚಾಲನೆ ನೀಡಲಾಗುವುದು. ಅರ್ಜಿ ಸಲ್ಲಿಕೆ ಬಗ್ಗೆ ಯಾವುದೇ ಅನುಮಾನ ಇದ್ದರೂ 1902 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದು” ಎಂದರು.

”ಪತಿ ತೆರಿಗೆ ಕಟ್ಟುತ್ತಿದ್ದರೆ ಅವರ ಪತ್ನಿಯರು ಈ ಯೋಜನೆಗೆ ಅರ್ಹರಾಗುವುದಿಲ್ಲ, ಅರ್ಜಿ ಸ್ವೀಕಾರ ಆಗುವುದಿಲ್ಲ, ಇ-ಗವರ್ನೆನ್ಸ್ ಮೂಲಕ ಅರ್ಜಿ ಸ್ವೀಕರಿಸುತ್ತಿರುವ ಕಾರಣ ಅನರ್ಹವಾಗಿ ಯೋಜನೆಯ ಲಾಭ ಪಡೆಯಲು ಪ್ರಯತ್ನಿಸಿದರೆ ಸುಲಭವಾಗಿ ತಿಳಿಯಲಿದೆ” ಎಂದು ಹೇಳಿದರು.

‘ಗೃಹಲಕ್ಷ್ಮಿ ಯೋಜನೆ’ಯ ಫಲಾನುಭವಿಗಳಾಗಲು ಯಾರು?

ಪ್ರತಿ ಕುಟುಂಬದಲ್ಲಿ ಒಬ್ಬರು ಮಹಿಳೆಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.

ಅತ್ತೆ-ಸೊಸೆ ಇದ್ದಾಗ ಇಬ್ಬರಲ್ಲಿ ಮನೆ ಯಜಮಾನಿ ಯಾರು ಎಂದು ನಿರ್ಧರಿಸಿ ಒಬ್ಬರು ಮಾತ್ರ ಅರ್ಜಿ ಸಲ್ಲಿಸಬೇಕಾಗುತ್ತದೆ.

ಅರ್ಜಿದಾರರು ಕರ್ನಾಟಕದಲ್ಲಿ ವಾಸಿಸುತ್ತಿರಬೇಕು.

ಬಿಪಿಎಲ್, ಅಂತ್ಯೋದಯ ಕಾರ್ಡ್ ಹೊಂದಿರುವವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಈ ದಾಖಲೆಗಳು ಬೇಕು:

1) ವಾಸಸ್ಥಳ ಪ್ರಮಾಣಪತ್ರ

2) ಮೊಬೈಲ್ ಸಂಖ್ಯೆ

3) 2 ಪಾಸ್‌ಪೋರ್ಟ್ ಗಾತ್ರದ ಫೋಟೊ

4) ಬ್ಯಾಂಕ್ ಪಾಸ್‌ಬುಕ್ ನಕಲು

5) ಪಡಿತರ ಚೀಟಿ, ನೀರಿನ ಬಿಲ್, ವಿದ್ಯುತ್ ಬಿಲ್ (ವಿಳಾಸ ದೃಢೀಕರಣಕ್ಕೆ)

6) ಆಧಾರ್ ಕಾರ್ಡ್, ವೋಟರ್ ಐಡಿ, ಡ್ರೈವಿಂಗ್ ಲೈಸೆನ್ಸ್ (ವೈಯಕ್ತಿಕ ದೃಢೀಕರಣಕ್ಕೆ)

7) ಅರ್ಜಿದಾರರ ಬ್ಯಾಂಕ್ ಖಾತೆ ವಿವರಗಳು

ಅರ್ಜಿ ಸಲ್ಲಿಸುವ ವಿಧಾನ :

ಯೋಜನೆಯ ಪುಟದ ಅಧಿಕೃತ ವೆಬ್‌ಸೈಟ್‌ಗೆ ಹೋಗಿ, ಗೃಹಲಕ್ಷ್ಮಿ ಯೋಜನೆ ನಮೂನೆ ಅರ್ಜಿ ಡೌನ್‌ಲೋಡ್ ಮಾಡಿಕೊಂಡು, ಪ್ರಿಂಟೌಟ್ ತೆಗೆದುಕೊಳ್ಳಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...