Homeಮುಖಪುಟನರೇಗ ಕಾರ್ಮಿಕರಿಗೆ ಈಗಲೇ ವೇತನ ನೀಡಿ. ನಗರ ಕಾರ್ಮಿಕರಿಗೆ ಹೊಸ ಜಾಬ್‌ ಕಾರ್ಡ್ ಕೊಡಿ -...

ನರೇಗ ಕಾರ್ಮಿಕರಿಗೆ ಈಗಲೇ ವೇತನ ನೀಡಿ. ನಗರ ಕಾರ್ಮಿಕರಿಗೆ ಹೊಸ ಜಾಬ್‌ ಕಾರ್ಡ್ ಕೊಡಿ – ಸುಪ್ರೀಂಗೆ PIL

ಲಾಕ್‌ಡೌನ್‌ ಕಾರಣದಿಂದ ನಗರಗಳಿಂದ ಹಳ್ಳಿಗಳಿಗೆ ವಲಸೆ ಹೋದವರಿಗೂ ಸಹ ಹೊಸ ಉದ್ಯೋಗ ಖಾತ್ರಿ ಜಾಬ್‌ ಕಾರ್ಡ್‌‌ಗಳನ್ನು ನೀಡುವಂತೆ ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.

- Advertisement -
- Advertisement -

ಲಾಕ್‌ಡೌನ್‌ ಕಾರಣಕ್ಕೆ ಸಂಕಷ್ಟದಲ್ಲಿರುವ ಉದ್ಯೋಗ ಖಾತ್ರಿ ಯೋಜನೆಯಡಿ ಎಲ್ಲಾ ಸಕ್ರಿಯ ಮತ್ತು ನೋಂದಾಯಿತ ಜಾಬ್ ಕಾರ್ಡ್ ಹೊಂದಿರುವವರಿಗೆ ಮುಂಚಿತವಾಗಿ ವೇತನ ನೀಡುವಂತೆ ಎಲ್ಲಾ ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಿಗೆ ಏಕರೂಪದ ಮಾರ್ಗಸೂಚಿಗಳನ್ನು ನೀಡುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

ಸಾಮಾಜಿಕ ಕಾರ್ಯಕರ್ತರಾದ ಅರುಣಾ ರಾಯ್ ಮತ್ತು ನಿಖಿಲ್ ಡೇಯವರ ಪರವಾಗಿ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಅರ್ಜಿ ಸಲ್ಲಿಸಿದ್ದು, ಭಾರತ ಸಂವಿಧಾನದ 14 ಮತ್ತು 21 ರ ವಿಧಿ ಅಡಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿಯ 7.6 ಕೋಟಿಗೂ ಹೆಚ್ಚು ಸಕ್ರಿಯ ಜಾಬ್ ಕಾರ್ಡ್ ಹೊಂದಿರುವವರ ಆರೋಗ್ಯ ಮತ್ತು ಜೀವನೋಪಾಯದ ಮೂಲಭೂತ ಹಕ್ಕುಗಳ ರಕ್ಷಣೆ ನೀಡುವಂತೆ ಒತ್ತಾಯಿಸಲಾಗಿದೆ.

ಅಲ್ಲದೇ ಲಾಕ್‌ಡೌನ್‌ ಕಾರಣದಿಂದ ನಗರಗಳಿಂದ ಹಳ್ಳಿಗಳಿಗೆ ವಲಸೆ ಹೋದವರಿಗೂ ಸಹ ಹೊಸ ಉದ್ಯೋಗ ಖಾತ್ರಿ ಜಾಬ್‌ ಕಾರ್ಡ್‌‌ಗಳನ್ನು ನೀಡುವಂತೆ ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.

ಲಾಕ್‌ಡೌನ್‌ ಸಮಯದಲ್ಲಿಯೂ ಕೆಲವು ರಾಜ್ಯಗಳು ಉದ್ಯೋಗ ಖಾತ್ರಿ ಯೋಜನೆಯ ಕಾರ್ಮಿಕರಿಗೆ ಕೆಲಸ ನಿರ್ವಹಿಸಲು ಸೂಚಿಸಲಾಗಿದೆ. ಇದು ಕೊರೊನಾ ಸಾಂಕ್ರಾಮಿಕ ರೋಗ ಹರಡುತ್ತಿರುವ ಹಿನ್ನೆಲೆಯಲ್ಲಿ ಅವರ ಜೀವವನ್ನು ಅಪಾಯಕ್ಕೆ ತಳ್ಳುತ್ತದೆ. ದೇಶದ ಎಲ್ಲಾ ಜಿಲ್ಲೆಗಳಿಗೂ ಕೊರೊನಾ ಹರಡಿರುವುದರಿಂದ ಕೂಡಲೇ ಅವರ ಕೆಲಸ ನಿಲ್ಲಿಸುವಂತೆ ಮತ್ತು ಲಾಕ್‌ಡೌನ್‌ ಮುಗಿಯುವವರೆಗೂ ಎಲ್ಲರಿಗೂ ಪೂರ್ಣ ವೇತನ ನೀಡುವಂತೆ ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.

ಅರ್ಜಿಯಲ್ಲಿ ಕೋರಿದ ಮನವಿಗಳು ಹೀಗಿವೆ:

1. 24.03.2020 ರಿಂದ ಪ್ರಾರಂಭವಾಗುವ ಲಾಕ್‌ಡೌನ್ ಅವಧಿಯ ಸಂಪೂರ್ಣ ಅವಧಿಗೆ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನೋಂದಾಯಿತ ಎಲ್ಲಾ ಸಕ್ರಿಯ ಕುಟುಂಬಗಳು ಕೆಲಸದಲ್ಲಿದ್ದಾರೆ ಎಂದು ಪರಿಗಣಿಸಲು ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡುವುದು. ಅದಕ್ಕೆ ಅನುಗುಣವಾಗಿ ಅವರ ಪೂರ್ಣ ವೇತನವನ್ನು ಪಾವತಿಸುವುದು.

2. ನಗರಗಳಿಂದ ತಮ್ಮ ಸ್ಥಳೀಯ ಹಳ್ಳಿಗಳಿಗೆ ಮರಳಿದ ಎಲ್ಲ ವಲಸಿಗ ಕಾರ್ಮಿಕರಿಗೂ 15 ದಿನಗಳಲ್ಲಿ ವೈಯಕ್ತಿಕ ತಾತ್ಕಾಲಿಕ ಉದ್ಯೋಗ ಖಾತರಿ ಕಾರ್ಡ್‌ಗಳನ್ನು ನೀಡಲು ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡುವುದು.

3. ಕೊರೊನಾ ಸಾಂಕ್ರಾಮಿಕ ಮುಗಿದ ನಂತರ ಹೆಚ್ಚಿನ ಉದ್ಯೋಗದ ಭರವಸೆ ನೀಡಬೇಕು.

4. ಹೊಸ ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಗ್ರಾಮೀಣ ಜೀವನೋಪಾಯವನ್ನು ಬೆಂಬಲಿಸಲು 100 ದಿನಗಳ ಕೆಲಸದ ಸಮಯದಿಂದ ಪ್ರತಿ ಮನೆಗೆ 200 ದಿನಗಳವರೆಗೆ ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವುದು.

ಈ ಅರ್ಜಿಯು ಏಪ್ರಿಲ್ 7 ರಂದು ವಿಚಾರಣೆಗೆ ಬರುವ ಸಾಧ್ಯತೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಾಯಿಲ್ಲದವರ ಪರವಾಗಿ ದನಿ ಎತ್ತುವ ವಕೀಲರು, ನಮ್ಮ ದೇಶದಲ್ಲಿ ಇದ್ದಾರೆ ಎಂಬುದು ಸಮಾಧಾನಕರ ಮತ್ತು ಸಂತೋಷದ ಸುದ್ದಿ.

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...