Homeಮುಖಪುಟನರೇಗ ಕಾರ್ಮಿಕರಿಗೆ ಈಗಲೇ ವೇತನ ನೀಡಿ. ನಗರ ಕಾರ್ಮಿಕರಿಗೆ ಹೊಸ ಜಾಬ್‌ ಕಾರ್ಡ್ ಕೊಡಿ -...

ನರೇಗ ಕಾರ್ಮಿಕರಿಗೆ ಈಗಲೇ ವೇತನ ನೀಡಿ. ನಗರ ಕಾರ್ಮಿಕರಿಗೆ ಹೊಸ ಜಾಬ್‌ ಕಾರ್ಡ್ ಕೊಡಿ – ಸುಪ್ರೀಂಗೆ PIL

ಲಾಕ್‌ಡೌನ್‌ ಕಾರಣದಿಂದ ನಗರಗಳಿಂದ ಹಳ್ಳಿಗಳಿಗೆ ವಲಸೆ ಹೋದವರಿಗೂ ಸಹ ಹೊಸ ಉದ್ಯೋಗ ಖಾತ್ರಿ ಜಾಬ್‌ ಕಾರ್ಡ್‌‌ಗಳನ್ನು ನೀಡುವಂತೆ ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.

- Advertisement -
- Advertisement -

ಲಾಕ್‌ಡೌನ್‌ ಕಾರಣಕ್ಕೆ ಸಂಕಷ್ಟದಲ್ಲಿರುವ ಉದ್ಯೋಗ ಖಾತ್ರಿ ಯೋಜನೆಯಡಿ ಎಲ್ಲಾ ಸಕ್ರಿಯ ಮತ್ತು ನೋಂದಾಯಿತ ಜಾಬ್ ಕಾರ್ಡ್ ಹೊಂದಿರುವವರಿಗೆ ಮುಂಚಿತವಾಗಿ ವೇತನ ನೀಡುವಂತೆ ಎಲ್ಲಾ ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಿಗೆ ಏಕರೂಪದ ಮಾರ್ಗಸೂಚಿಗಳನ್ನು ನೀಡುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

ಸಾಮಾಜಿಕ ಕಾರ್ಯಕರ್ತರಾದ ಅರುಣಾ ರಾಯ್ ಮತ್ತು ನಿಖಿಲ್ ಡೇಯವರ ಪರವಾಗಿ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಅರ್ಜಿ ಸಲ್ಲಿಸಿದ್ದು, ಭಾರತ ಸಂವಿಧಾನದ 14 ಮತ್ತು 21 ರ ವಿಧಿ ಅಡಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿಯ 7.6 ಕೋಟಿಗೂ ಹೆಚ್ಚು ಸಕ್ರಿಯ ಜಾಬ್ ಕಾರ್ಡ್ ಹೊಂದಿರುವವರ ಆರೋಗ್ಯ ಮತ್ತು ಜೀವನೋಪಾಯದ ಮೂಲಭೂತ ಹಕ್ಕುಗಳ ರಕ್ಷಣೆ ನೀಡುವಂತೆ ಒತ್ತಾಯಿಸಲಾಗಿದೆ.

ಅಲ್ಲದೇ ಲಾಕ್‌ಡೌನ್‌ ಕಾರಣದಿಂದ ನಗರಗಳಿಂದ ಹಳ್ಳಿಗಳಿಗೆ ವಲಸೆ ಹೋದವರಿಗೂ ಸಹ ಹೊಸ ಉದ್ಯೋಗ ಖಾತ್ರಿ ಜಾಬ್‌ ಕಾರ್ಡ್‌‌ಗಳನ್ನು ನೀಡುವಂತೆ ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.

ಲಾಕ್‌ಡೌನ್‌ ಸಮಯದಲ್ಲಿಯೂ ಕೆಲವು ರಾಜ್ಯಗಳು ಉದ್ಯೋಗ ಖಾತ್ರಿ ಯೋಜನೆಯ ಕಾರ್ಮಿಕರಿಗೆ ಕೆಲಸ ನಿರ್ವಹಿಸಲು ಸೂಚಿಸಲಾಗಿದೆ. ಇದು ಕೊರೊನಾ ಸಾಂಕ್ರಾಮಿಕ ರೋಗ ಹರಡುತ್ತಿರುವ ಹಿನ್ನೆಲೆಯಲ್ಲಿ ಅವರ ಜೀವವನ್ನು ಅಪಾಯಕ್ಕೆ ತಳ್ಳುತ್ತದೆ. ದೇಶದ ಎಲ್ಲಾ ಜಿಲ್ಲೆಗಳಿಗೂ ಕೊರೊನಾ ಹರಡಿರುವುದರಿಂದ ಕೂಡಲೇ ಅವರ ಕೆಲಸ ನಿಲ್ಲಿಸುವಂತೆ ಮತ್ತು ಲಾಕ್‌ಡೌನ್‌ ಮುಗಿಯುವವರೆಗೂ ಎಲ್ಲರಿಗೂ ಪೂರ್ಣ ವೇತನ ನೀಡುವಂತೆ ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.

ಅರ್ಜಿಯಲ್ಲಿ ಕೋರಿದ ಮನವಿಗಳು ಹೀಗಿವೆ:

1. 24.03.2020 ರಿಂದ ಪ್ರಾರಂಭವಾಗುವ ಲಾಕ್‌ಡೌನ್ ಅವಧಿಯ ಸಂಪೂರ್ಣ ಅವಧಿಗೆ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನೋಂದಾಯಿತ ಎಲ್ಲಾ ಸಕ್ರಿಯ ಕುಟುಂಬಗಳು ಕೆಲಸದಲ್ಲಿದ್ದಾರೆ ಎಂದು ಪರಿಗಣಿಸಲು ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡುವುದು. ಅದಕ್ಕೆ ಅನುಗುಣವಾಗಿ ಅವರ ಪೂರ್ಣ ವೇತನವನ್ನು ಪಾವತಿಸುವುದು.

2. ನಗರಗಳಿಂದ ತಮ್ಮ ಸ್ಥಳೀಯ ಹಳ್ಳಿಗಳಿಗೆ ಮರಳಿದ ಎಲ್ಲ ವಲಸಿಗ ಕಾರ್ಮಿಕರಿಗೂ 15 ದಿನಗಳಲ್ಲಿ ವೈಯಕ್ತಿಕ ತಾತ್ಕಾಲಿಕ ಉದ್ಯೋಗ ಖಾತರಿ ಕಾರ್ಡ್‌ಗಳನ್ನು ನೀಡಲು ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡುವುದು.

3. ಕೊರೊನಾ ಸಾಂಕ್ರಾಮಿಕ ಮುಗಿದ ನಂತರ ಹೆಚ್ಚಿನ ಉದ್ಯೋಗದ ಭರವಸೆ ನೀಡಬೇಕು.

4. ಹೊಸ ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಗ್ರಾಮೀಣ ಜೀವನೋಪಾಯವನ್ನು ಬೆಂಬಲಿಸಲು 100 ದಿನಗಳ ಕೆಲಸದ ಸಮಯದಿಂದ ಪ್ರತಿ ಮನೆಗೆ 200 ದಿನಗಳವರೆಗೆ ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವುದು.

ಈ ಅರ್ಜಿಯು ಏಪ್ರಿಲ್ 7 ರಂದು ವಿಚಾರಣೆಗೆ ಬರುವ ಸಾಧ್ಯತೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಾಯಿಲ್ಲದವರ ಪರವಾಗಿ ದನಿ ಎತ್ತುವ ವಕೀಲರು, ನಮ್ಮ ದೇಶದಲ್ಲಿ ಇದ್ದಾರೆ ಎಂಬುದು ಸಮಾಧಾನಕರ ಮತ್ತು ಸಂತೋಷದ ಸುದ್ದಿ.

LEAVE A REPLY

Please enter your comment!
Please enter your name here

- Advertisment -

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...