Homeಮುಖಪುಟನರೇಗ ಕಾರ್ಮಿಕರಿಗೆ ಈಗಲೇ ವೇತನ ನೀಡಿ. ನಗರ ಕಾರ್ಮಿಕರಿಗೆ ಹೊಸ ಜಾಬ್‌ ಕಾರ್ಡ್ ಕೊಡಿ -...

ನರೇಗ ಕಾರ್ಮಿಕರಿಗೆ ಈಗಲೇ ವೇತನ ನೀಡಿ. ನಗರ ಕಾರ್ಮಿಕರಿಗೆ ಹೊಸ ಜಾಬ್‌ ಕಾರ್ಡ್ ಕೊಡಿ – ಸುಪ್ರೀಂಗೆ PIL

ಲಾಕ್‌ಡೌನ್‌ ಕಾರಣದಿಂದ ನಗರಗಳಿಂದ ಹಳ್ಳಿಗಳಿಗೆ ವಲಸೆ ಹೋದವರಿಗೂ ಸಹ ಹೊಸ ಉದ್ಯೋಗ ಖಾತ್ರಿ ಜಾಬ್‌ ಕಾರ್ಡ್‌‌ಗಳನ್ನು ನೀಡುವಂತೆ ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.

- Advertisement -
- Advertisement -

ಲಾಕ್‌ಡೌನ್‌ ಕಾರಣಕ್ಕೆ ಸಂಕಷ್ಟದಲ್ಲಿರುವ ಉದ್ಯೋಗ ಖಾತ್ರಿ ಯೋಜನೆಯಡಿ ಎಲ್ಲಾ ಸಕ್ರಿಯ ಮತ್ತು ನೋಂದಾಯಿತ ಜಾಬ್ ಕಾರ್ಡ್ ಹೊಂದಿರುವವರಿಗೆ ಮುಂಚಿತವಾಗಿ ವೇತನ ನೀಡುವಂತೆ ಎಲ್ಲಾ ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಿಗೆ ಏಕರೂಪದ ಮಾರ್ಗಸೂಚಿಗಳನ್ನು ನೀಡುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

ಸಾಮಾಜಿಕ ಕಾರ್ಯಕರ್ತರಾದ ಅರುಣಾ ರಾಯ್ ಮತ್ತು ನಿಖಿಲ್ ಡೇಯವರ ಪರವಾಗಿ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಅರ್ಜಿ ಸಲ್ಲಿಸಿದ್ದು, ಭಾರತ ಸಂವಿಧಾನದ 14 ಮತ್ತು 21 ರ ವಿಧಿ ಅಡಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿಯ 7.6 ಕೋಟಿಗೂ ಹೆಚ್ಚು ಸಕ್ರಿಯ ಜಾಬ್ ಕಾರ್ಡ್ ಹೊಂದಿರುವವರ ಆರೋಗ್ಯ ಮತ್ತು ಜೀವನೋಪಾಯದ ಮೂಲಭೂತ ಹಕ್ಕುಗಳ ರಕ್ಷಣೆ ನೀಡುವಂತೆ ಒತ್ತಾಯಿಸಲಾಗಿದೆ.

ಅಲ್ಲದೇ ಲಾಕ್‌ಡೌನ್‌ ಕಾರಣದಿಂದ ನಗರಗಳಿಂದ ಹಳ್ಳಿಗಳಿಗೆ ವಲಸೆ ಹೋದವರಿಗೂ ಸಹ ಹೊಸ ಉದ್ಯೋಗ ಖಾತ್ರಿ ಜಾಬ್‌ ಕಾರ್ಡ್‌‌ಗಳನ್ನು ನೀಡುವಂತೆ ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.

ಲಾಕ್‌ಡೌನ್‌ ಸಮಯದಲ್ಲಿಯೂ ಕೆಲವು ರಾಜ್ಯಗಳು ಉದ್ಯೋಗ ಖಾತ್ರಿ ಯೋಜನೆಯ ಕಾರ್ಮಿಕರಿಗೆ ಕೆಲಸ ನಿರ್ವಹಿಸಲು ಸೂಚಿಸಲಾಗಿದೆ. ಇದು ಕೊರೊನಾ ಸಾಂಕ್ರಾಮಿಕ ರೋಗ ಹರಡುತ್ತಿರುವ ಹಿನ್ನೆಲೆಯಲ್ಲಿ ಅವರ ಜೀವವನ್ನು ಅಪಾಯಕ್ಕೆ ತಳ್ಳುತ್ತದೆ. ದೇಶದ ಎಲ್ಲಾ ಜಿಲ್ಲೆಗಳಿಗೂ ಕೊರೊನಾ ಹರಡಿರುವುದರಿಂದ ಕೂಡಲೇ ಅವರ ಕೆಲಸ ನಿಲ್ಲಿಸುವಂತೆ ಮತ್ತು ಲಾಕ್‌ಡೌನ್‌ ಮುಗಿಯುವವರೆಗೂ ಎಲ್ಲರಿಗೂ ಪೂರ್ಣ ವೇತನ ನೀಡುವಂತೆ ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.

ಅರ್ಜಿಯಲ್ಲಿ ಕೋರಿದ ಮನವಿಗಳು ಹೀಗಿವೆ:

1. 24.03.2020 ರಿಂದ ಪ್ರಾರಂಭವಾಗುವ ಲಾಕ್‌ಡೌನ್ ಅವಧಿಯ ಸಂಪೂರ್ಣ ಅವಧಿಗೆ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನೋಂದಾಯಿತ ಎಲ್ಲಾ ಸಕ್ರಿಯ ಕುಟುಂಬಗಳು ಕೆಲಸದಲ್ಲಿದ್ದಾರೆ ಎಂದು ಪರಿಗಣಿಸಲು ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡುವುದು. ಅದಕ್ಕೆ ಅನುಗುಣವಾಗಿ ಅವರ ಪೂರ್ಣ ವೇತನವನ್ನು ಪಾವತಿಸುವುದು.

2. ನಗರಗಳಿಂದ ತಮ್ಮ ಸ್ಥಳೀಯ ಹಳ್ಳಿಗಳಿಗೆ ಮರಳಿದ ಎಲ್ಲ ವಲಸಿಗ ಕಾರ್ಮಿಕರಿಗೂ 15 ದಿನಗಳಲ್ಲಿ ವೈಯಕ್ತಿಕ ತಾತ್ಕಾಲಿಕ ಉದ್ಯೋಗ ಖಾತರಿ ಕಾರ್ಡ್‌ಗಳನ್ನು ನೀಡಲು ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡುವುದು.

3. ಕೊರೊನಾ ಸಾಂಕ್ರಾಮಿಕ ಮುಗಿದ ನಂತರ ಹೆಚ್ಚಿನ ಉದ್ಯೋಗದ ಭರವಸೆ ನೀಡಬೇಕು.

4. ಹೊಸ ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಗ್ರಾಮೀಣ ಜೀವನೋಪಾಯವನ್ನು ಬೆಂಬಲಿಸಲು 100 ದಿನಗಳ ಕೆಲಸದ ಸಮಯದಿಂದ ಪ್ರತಿ ಮನೆಗೆ 200 ದಿನಗಳವರೆಗೆ ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವುದು.

ಈ ಅರ್ಜಿಯು ಏಪ್ರಿಲ್ 7 ರಂದು ವಿಚಾರಣೆಗೆ ಬರುವ ಸಾಧ್ಯತೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಾಯಿಲ್ಲದವರ ಪರವಾಗಿ ದನಿ ಎತ್ತುವ ವಕೀಲರು, ನಮ್ಮ ದೇಶದಲ್ಲಿ ಇದ್ದಾರೆ ಎಂಬುದು ಸಮಾಧಾನಕರ ಮತ್ತು ಸಂತೋಷದ ಸುದ್ದಿ.

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...