Homeಕರ್ನಾಟಕ‘ಅಭಿವ್ಯಕ್ತಿ’ ಉಚಿತ ಜರ್ನಲಿಸಂ ಕೋರ್ಸ್‌ಗೆ ಅರ್ಜಿ ಆಹ್ವಾನ

‘ಅಭಿವ್ಯಕ್ತಿ’ ಉಚಿತ ಜರ್ನಲಿಸಂ ಕೋರ್ಸ್‌ಗೆ ಅರ್ಜಿ ಆಹ್ವಾನ

- Advertisement -
- Advertisement -

ಬದುಕು ಸೆಂಟರ್ ಫಾರ್ ಲೈವ್ಲಿವುಡ್ಸ್ ಲರ್ನಿಂಗ್ ‘ಅಭಿವ್ಯಕ್ತಿ’ ಹೆಸರಿನ 9 ತಿಂಗಳ ಪತ್ರಿಕೋದ್ಯಮ ಡಿಪ್ಲೊಮಾ ಕೋರ್ಸ್‌ಗೆ ಆಸಕ್ತ ಯುವಜನರಿಂದ ಅರ್ಜಿ ಆಹ್ವಾನಿಸಿದೆ. ಪತ್ರಿಕೆ, ಸುದ್ದಿ ವಾಹಿನಿ, ಮನರಂಜನಾ ವಾಹಿನಿ, ಸಿನಿಮಾ, ಡಿಜಿಟಲ್ ಮೀಡಿಯಾದಲ್ಲಿ ತೊಡಗಿಸಿಕೊಳ್ಳಲು ಆಸಕ್ತಿ ಇರುವ; ಪದವಿ, ಸ್ನಾತಕೋತ್ತರ ಪದವಿ ಮುಗಿಸಿರುವ ಯುವಜನರು ಅರ್ಜಿ ಸಲ್ಲಿಸಬಹುದು. ಯುವತಿಯರಿಗೆ ವಿಶೇಷ ಆದ್ಯತೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಕೋರ್ಸ್‌ ಅವಧಿಯಲ್ಲಿ ಸ್ಕಾಲರ್‌ಶಿಪ್‌ ಸಿಗಲಿದೆ. ವರದಿಗಾರಿಕೆ, ಬರವಣಿಗೆಗೆ ಬೇಕಾದ ದೃಷ್ಟಿಕೋನ, ತಾಂತ್ರಿಕ ಕೌಶಲ್ಯದ ಜೊತೆಗೆ ಪ್ರಾಯೋಗಿಕ ಕಲಿಕೆ, ಸುದ್ದಿ ಸಂಪಾದನೆ, ಭಾಷಾಂತರದ ಜತೆಗೆ ಕಿರುತೆರೆ-ಹಿರಿತೆರೆಗಳಿಗೆ ಸೃಜನಶೀಲ ಸ್ಕ್ರಿಪ್ಟ್ ಬರವಣಿಗೆಯ ಪ್ರಾಯೋಗಿಕ ಕಲಿಕೆ, ಕ್ಯಾಮೆರಾ ನಿರ್ವಹಣೆ, ವಿಡಿಯೊ ಎಡಿಟಿಂಗ್, ಪೇಜ್ ಡಿಸೈನಿಂಗ್ (ಪ್ರಿಂಟ್ / ವೆಬ್) ಬಗ್ಗೆ ಅನುಭವಿ ತಂತ್ರಜ್ಞರಿಂದ ತರಗತಿಗಳು ಇರಲಿವೆ.

ಮೊಬೈಲ್‌ ಜರ್ನಲಿಸಮ್, ವೆಬ್‌ಸೈಟ್, ಸೋಷಿಯಲ್ ಮೀಡಿಯಾ ಹ್ಯಾಂಡ್ಲಿಂಗ್, ಆನ್‌ಲೈನ್‌ ಜರ್ನಲಿಸಮ್‌ನ ಆಧುನಿಕ ತಂತ್ರಜ್ಞಾನದ ಕೌಶಲ್ಯ ಕಲಿಕೆಯ ಜತೆಗೆ ಇಂಗ್ಲಿಷ್ ಭಾಷೆ, ಭಾಷಾಂತರ ಕಲೆ, ವರದಿಗಾರಿಕೆ, ಬರವಣಿಗೆ ಮುಂತಾದ ಕೌಶಲಗಳ ಪ್ರಾಯೋಗಿಕ ಕಲಿಕೆಯನ್ನು ಕೋರ್ಸ್ ಒಳಗೊಂಡಿದೆ.

ಬೆಂಗಳೂರಿನ ಕನಕಪುರ ರಸ್ತೆ ಬಳಿಯ ಬಂಜಾರಪಾಳ್ಯದಲ್ಲಿರುವ ಪರಿಸರ ಸ್ನೇಹಿ ಕ್ಯಾಂಪಸ್‌ನಲ್ಲಿ ಈ ವಸತಿಸಹಿತ (ರೆಸಿಡೆನ್ಷಿಯಲ್) ಕೋರ್ಸ್‌ ನಡೆಯಲಿದೆ. ಕ್ಯಾಂಪಸ್‌ನಲ್ಲಿ ಸುಸಜ್ಜಿತ ವಸತಿ, ಗ್ರಂಥಾಲಯ, ಕಂಪ್ಯೂಟರ್‌ ಲ್ಯಾಬ್‌ ವ್ಯವಸ್ಥೆ ಇದೆ. ವೃತ್ತಿಪರ ಮೆಂಟರಿಂಗ್, ಕೌನ್ಸಲಿಂಗ್ ವ್ಯವಸ್ಥೆಯ ಯುವಜನ ಸ್ನೇಹಿ ವಾತಾವರಣದಲ್ಲಿ ಕೋರ್ಸ್‌ ನಡೆಯಲಿದೆ.

ಬದುಕು ಸೆಂಟರ್ ಫಾರ್ ಲೈವ್ಲಿವುಡ್ಸ್ ಲರ್ನಿಂಗ್ ಕಳೆದ ಹದಿನೈದು ವರ್ಷಗಳಿಂದ ಗುಣಮಟ್ಟದ ಮಾಧ್ಯಮ ಶಿಕ್ಷಣವನ್ನು ನೀಡುತ್ತಿದೆ. ಅವಕಾಶ ವಂಚಿತ ಗ್ರಾಮೀಣ, ಅಂಚಿನ ಸಮುದಾಯಗಳ ಯುವಜನರಿಗೆ ಶಿಕ್ಷಣ ನೀಡುವುದು ಮತ್ತು ಆ ಮೂಲಕ ಅವರ ಸಾಮಾಜಿಕ ಚಲನೆಯಲ್ಲಿ ಭಾಗಿಯಾಗುವುದು ಬದುಕು ಸೆಂಟರ್ ಫಾರ್ ಲೈವ್ಲಿಹುಡ್ಸ್ ಲರ್ನಿಂಗ್‌ನ ಮುಖ್ಯ ಗುರಿಯಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 31. ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಪ್ರವೇಶ ಪರೀಕ್ಷೆ ಹಾಗೂ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆಗಸ್ಟ್ ತಿಂಗಳ ಕೊನೆಯ ವಾರದಲ್ಲಿ ತರಗತಿಗಳು ಆರಂಭವಾಗುತ್ತವೆ.

ಆಸಕ್ತರು https://forms.gle/JFSS5Kzvs4DhVoco9 ಈ ಗೂಗಲ್ ಫಾರ್ಮ್ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ 9945065060 / 9036602022 ಅಥವಾ [email protected] ಮೂಲಕ ಸಂಪರ್ಕಿಸಬಹುದು.

ಪ್ರಕಟಣೆ: ದಯಾನಂದ ಅಧ್ಯಾಪಕರು ಹಾಗೂ ಸಂಯೋಜಕರು, ಜರ್ನಲಿಸಮ್ ಕೋರ್ಸ್, ಬದುಕು ಸೆಂಟರ್ ಫಾರ್ ಲೈವ್ಲಿವುಡ್ಸ್ ಲರ್ನಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....