Homeಕರ್ನಾಟಕ‘ಅಭಿವ್ಯಕ್ತಿ’ ಉಚಿತ ಜರ್ನಲಿಸಂ ಕೋರ್ಸ್‌ಗೆ ಅರ್ಜಿ ಆಹ್ವಾನ

‘ಅಭಿವ್ಯಕ್ತಿ’ ಉಚಿತ ಜರ್ನಲಿಸಂ ಕೋರ್ಸ್‌ಗೆ ಅರ್ಜಿ ಆಹ್ವಾನ

- Advertisement -
- Advertisement -

ಬದುಕು ಸೆಂಟರ್ ಫಾರ್ ಲೈವ್ಲಿವುಡ್ಸ್ ಲರ್ನಿಂಗ್ ‘ಅಭಿವ್ಯಕ್ತಿ’ ಹೆಸರಿನ 9 ತಿಂಗಳ ಪತ್ರಿಕೋದ್ಯಮ ಡಿಪ್ಲೊಮಾ ಕೋರ್ಸ್‌ಗೆ ಆಸಕ್ತ ಯುವಜನರಿಂದ ಅರ್ಜಿ ಆಹ್ವಾನಿಸಿದೆ. ಪತ್ರಿಕೆ, ಸುದ್ದಿ ವಾಹಿನಿ, ಮನರಂಜನಾ ವಾಹಿನಿ, ಸಿನಿಮಾ, ಡಿಜಿಟಲ್ ಮೀಡಿಯಾದಲ್ಲಿ ತೊಡಗಿಸಿಕೊಳ್ಳಲು ಆಸಕ್ತಿ ಇರುವ; ಪದವಿ, ಸ್ನಾತಕೋತ್ತರ ಪದವಿ ಮುಗಿಸಿರುವ ಯುವಜನರು ಅರ್ಜಿ ಸಲ್ಲಿಸಬಹುದು. ಯುವತಿಯರಿಗೆ ವಿಶೇಷ ಆದ್ಯತೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಕೋರ್ಸ್‌ ಅವಧಿಯಲ್ಲಿ ಸ್ಕಾಲರ್‌ಶಿಪ್‌ ಸಿಗಲಿದೆ. ವರದಿಗಾರಿಕೆ, ಬರವಣಿಗೆಗೆ ಬೇಕಾದ ದೃಷ್ಟಿಕೋನ, ತಾಂತ್ರಿಕ ಕೌಶಲ್ಯದ ಜೊತೆಗೆ ಪ್ರಾಯೋಗಿಕ ಕಲಿಕೆ, ಸುದ್ದಿ ಸಂಪಾದನೆ, ಭಾಷಾಂತರದ ಜತೆಗೆ ಕಿರುತೆರೆ-ಹಿರಿತೆರೆಗಳಿಗೆ ಸೃಜನಶೀಲ ಸ್ಕ್ರಿಪ್ಟ್ ಬರವಣಿಗೆಯ ಪ್ರಾಯೋಗಿಕ ಕಲಿಕೆ, ಕ್ಯಾಮೆರಾ ನಿರ್ವಹಣೆ, ವಿಡಿಯೊ ಎಡಿಟಿಂಗ್, ಪೇಜ್ ಡಿಸೈನಿಂಗ್ (ಪ್ರಿಂಟ್ / ವೆಬ್) ಬಗ್ಗೆ ಅನುಭವಿ ತಂತ್ರಜ್ಞರಿಂದ ತರಗತಿಗಳು ಇರಲಿವೆ.

ಮೊಬೈಲ್‌ ಜರ್ನಲಿಸಮ್, ವೆಬ್‌ಸೈಟ್, ಸೋಷಿಯಲ್ ಮೀಡಿಯಾ ಹ್ಯಾಂಡ್ಲಿಂಗ್, ಆನ್‌ಲೈನ್‌ ಜರ್ನಲಿಸಮ್‌ನ ಆಧುನಿಕ ತಂತ್ರಜ್ಞಾನದ ಕೌಶಲ್ಯ ಕಲಿಕೆಯ ಜತೆಗೆ ಇಂಗ್ಲಿಷ್ ಭಾಷೆ, ಭಾಷಾಂತರ ಕಲೆ, ವರದಿಗಾರಿಕೆ, ಬರವಣಿಗೆ ಮುಂತಾದ ಕೌಶಲಗಳ ಪ್ರಾಯೋಗಿಕ ಕಲಿಕೆಯನ್ನು ಕೋರ್ಸ್ ಒಳಗೊಂಡಿದೆ.

ಬೆಂಗಳೂರಿನ ಕನಕಪುರ ರಸ್ತೆ ಬಳಿಯ ಬಂಜಾರಪಾಳ್ಯದಲ್ಲಿರುವ ಪರಿಸರ ಸ್ನೇಹಿ ಕ್ಯಾಂಪಸ್‌ನಲ್ಲಿ ಈ ವಸತಿಸಹಿತ (ರೆಸಿಡೆನ್ಷಿಯಲ್) ಕೋರ್ಸ್‌ ನಡೆಯಲಿದೆ. ಕ್ಯಾಂಪಸ್‌ನಲ್ಲಿ ಸುಸಜ್ಜಿತ ವಸತಿ, ಗ್ರಂಥಾಲಯ, ಕಂಪ್ಯೂಟರ್‌ ಲ್ಯಾಬ್‌ ವ್ಯವಸ್ಥೆ ಇದೆ. ವೃತ್ತಿಪರ ಮೆಂಟರಿಂಗ್, ಕೌನ್ಸಲಿಂಗ್ ವ್ಯವಸ್ಥೆಯ ಯುವಜನ ಸ್ನೇಹಿ ವಾತಾವರಣದಲ್ಲಿ ಕೋರ್ಸ್‌ ನಡೆಯಲಿದೆ.

ಬದುಕು ಸೆಂಟರ್ ಫಾರ್ ಲೈವ್ಲಿವುಡ್ಸ್ ಲರ್ನಿಂಗ್ ಕಳೆದ ಹದಿನೈದು ವರ್ಷಗಳಿಂದ ಗುಣಮಟ್ಟದ ಮಾಧ್ಯಮ ಶಿಕ್ಷಣವನ್ನು ನೀಡುತ್ತಿದೆ. ಅವಕಾಶ ವಂಚಿತ ಗ್ರಾಮೀಣ, ಅಂಚಿನ ಸಮುದಾಯಗಳ ಯುವಜನರಿಗೆ ಶಿಕ್ಷಣ ನೀಡುವುದು ಮತ್ತು ಆ ಮೂಲಕ ಅವರ ಸಾಮಾಜಿಕ ಚಲನೆಯಲ್ಲಿ ಭಾಗಿಯಾಗುವುದು ಬದುಕು ಸೆಂಟರ್ ಫಾರ್ ಲೈವ್ಲಿಹುಡ್ಸ್ ಲರ್ನಿಂಗ್‌ನ ಮುಖ್ಯ ಗುರಿಯಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 31. ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಪ್ರವೇಶ ಪರೀಕ್ಷೆ ಹಾಗೂ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆಗಸ್ಟ್ ತಿಂಗಳ ಕೊನೆಯ ವಾರದಲ್ಲಿ ತರಗತಿಗಳು ಆರಂಭವಾಗುತ್ತವೆ.

ಆಸಕ್ತರು https://forms.gle/JFSS5Kzvs4DhVoco9 ಈ ಗೂಗಲ್ ಫಾರ್ಮ್ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ 9945065060 / 9036602022 ಅಥವಾ [email protected] ಮೂಲಕ ಸಂಪರ್ಕಿಸಬಹುದು.

ಪ್ರಕಟಣೆ: ದಯಾನಂದ ಅಧ್ಯಾಪಕರು ಹಾಗೂ ಸಂಯೋಜಕರು, ಜರ್ನಲಿಸಮ್ ಕೋರ್ಸ್, ಬದುಕು ಸೆಂಟರ್ ಫಾರ್ ಲೈವ್ಲಿವುಡ್ಸ್ ಲರ್ನಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...