ರಾಹುಲ್ ಗಾಂಧಿಯವರ ಅನರ್ಹತೆ ಕುರಿತು ಜರ್ಮನ್ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದ್ದು, “ನ್ಯಾಯಾಂಗ ಸ್ವಾತಂತ್ರ್ಯದ ಮಾನದಂಡಗಳು ಮತ್ತು ಪ್ರಜಾಸತ್ತಾತ್ಮಕ ತತ್ವಗಳನ್ನು ಅನ್ವಯಿಸುವುದನ್ನು ನಿರೀಕ್ಷಿಸುತ್ತೇವೆ” ಎಂದಿದೆ.
ಯೂರೋಪ್ ಒಕ್ಕೂಟದಿಂದ ರಾಹುಲ್ ಗಾಂಧಿ ವಿಚಾರವಾಗಿ ಪ್ರತಿಕ್ರಿಯಿಸಿದ ಮೊದಲ ರಾಷ್ಟ್ರ ಜರ್ಮನಿಯಾಗಿದೆ. “ರಾಹುಲ್ ಗಾಂಧಿ ವಿರುದ್ಧದ ಮೊದಲ ತೀರ್ಪು ಮತ್ತು ಅವರ ಸಂಸದೀಯ ಸ್ಥಾನದ ಅಮಾನತನ್ನು” ಜರ್ಮನ್ ಸರ್ಕಾರ ಗಮನಿಸಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ಹೇಳಿದ್ದಾರೆ.
“ನಮಗೆ ತಿಳಿದಿರುವಂತೆ, ರಾಹುಲ್ ಗಾಂಧಿ ಅವರು ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ ತಯಾರಿಯಲ್ಲಿದ್ದಾರೆ. ಈ ತೀರ್ಪು ಮಾನ್ಯವಾಗುತ್ತದೆಯೇ ಅವರ ಸಂಸತ್ ಸ್ಥಾನದ ಅಮಾನತಿಗೆ ಯಾವುದೇ ಆಧಾರವಿಲ್ಲ ಎಂಬುದು ನಂತರ ಸ್ಪಷ್ಟವಾಗುತ್ತದೆ” ಎಂದು ಹೇಳಲಾಗಿದೆ.
NEW: Rahul Gandhi case
German Foreign Ministry spokesperson comments for first time:– Takes note of verdict, suspension from parliament
– Appeal will show whether verdict stands & suspension has basis
– Expects standards of judicial independence & democratic principles to apply pic.twitter.com/dNZB6vflG2— Richard Walker (@rbsw) March 29, 2023
ನ್ಯಾಯಾಂಗದ ಸ್ವಾತಂತ್ರ್ಯದ ಮಾನದಂಡಗಳು ಮತ್ತು ಮೂಲಭೂತ ಪ್ರಜಾಪ್ರಭುತ್ವದ ತತ್ವಗಳು ರಾಹುಲ್ ಗಾಂಧಿ ವಿರುದ್ಧದ ಪ್ರಕ್ರಿಯೆಗಳಿಗೆ ಸಮಾನವಾಗಿ ಅನ್ವಯಿಸುತ್ತವೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ವಕ್ತಾರರು ತಿಳಿಸಿದ್ದಾರೆ.
ಈ ಕುರಿತು ಕಾಂಗ್ರೆಸ್ ಪಕ್ಷದ ಮುಖಂಡ ದಿಗ್ವಿಜಯ್ ಸಿಂಗ್ ಜರ್ಮನ್ ವಕ್ತಾರರಿಗೆ ಧನ್ಯವಾದ ತಿಳಿಸಿದ್ದಾರೆ.
Congress MP Digvijaya Singh thanked the German Foreign Affairs Ministry and Richard Walker for "taking note of how Democracy is being compromised in India through the persecution of Rahul Gandhi" pic.twitter.com/CRdQp5NouM
— ANI (@ANI) March 30, 2023
ಆದರೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಜರ್ಮನಿ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಭಾರತದ ಆಂತರಿಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡಲು ವಿದೇಶಿ ಶಕ್ತಿಗಳನ್ನು ಆಹ್ವಾನಿಸಿದ್ದಕ್ಕಾಗಿ ರಾಹುಲ್ ಗಾಂಧಿ ಅವರಿಗೆ ಧನ್ಯವಾದಗಳು. ವಿದೇಶಿ ಹಸ್ತಕ್ಷೇಪದಿಂದ ಭಾರತೀಯ ನ್ಯಾಯಾಂಗದ ಮೇಲೆ ಪ್ರಭಾವ ಬೀರಲು ಸಾಧ್ಯವಿಲ್ಲ” ಎಂದು ಅವರು ಟ್ವೀಟ್ ಮಾಡಿದ್ದಾರೆ.
ಈ ಮುಂಚೆ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವುದು ”ಗಾಂಧಿ ತತ್ವಕ್ಕೆ ಎಸಗಿದ ದ್ರೋಹ” ಎಂದು ಭಾರತ ಮೂಲದ ಅಮೆರಿಕದ ಕಾಂಗ್ರೆಸ್ ಸದಸ್ಯ ರೋ ಖನ್ನಾ ಹೇಳಿದ್ದಾರೆ.
”ರಾಹುಲ್ ಗಾಂಧಿ ಅವರನ್ನು ಸಂಸತ್ತಿನಿಂದ ಹೊರಹಾಕಿರುವುದು ಗಾಂಧಿ ತತ್ವಗಳಿಗೆ ಮತ್ತು ಭಾರತದ ಮೌಲ್ಯಗಳಿಗೆ ಎಸಗಿದ ದೊಡ್ಡ ದ್ರೋಹವಾಗಿದೆ. ನನ್ನ ಅಜ್ಜ (ಮಹಾತ್ಮ ಗಾಂಧಿ) ಹಲವು ವರ್ಷಗಳ ಕಾಲ ಜೈಲಿನಲ್ಲಿ ಇದ್ದದ್ದು, ತ್ಯಾಗ ಮಾಡಿದ್ದು ಇದಕ್ಕಾಗಿ ಅಲ್ಲ” ಎಂದು ಅವರು ಟ್ವೀಟ್ ಮಾಡಿದ್ದಾರೆ.
ಇನ್ನೂ ಓದಿ: ಧರ್ಮದೊಂದಿಗೆ ರಾಜಕೀಯ ಬೆರೆಸುವುದನ್ನು ನಿಲ್ಲಿಸಿ, ದ್ವೇಷ ಭಾಷಣ ನಿಲ್ಲುತ್ತೆ: ರಾಜಕಾರಣಿಗಳಿಗೆ ಸುಪ್ರೀಂ ತಾಖೀತು