Homeಮುಖಪುಟದಲಿತ ವಿರೋಧಿ ವ್ಯಕ್ತಿ TISS ರಿಜಿಸ್ಟ್ರಾರ್ ಆಗಲು ಬಿಡುವುದಿಲ್ಲ: ವಿದ್ಯಾರ್ಥಿಗಳ ಪ್ರತಿಭಟನೆ

ದಲಿತ ವಿರೋಧಿ ವ್ಯಕ್ತಿ TISS ರಿಜಿಸ್ಟ್ರಾರ್ ಆಗಲು ಬಿಡುವುದಿಲ್ಲ: ವಿದ್ಯಾರ್ಥಿಗಳ ಪ್ರತಿಭಟನೆ

"ಭಾರತವು ಇನ್ನೂ ಕೊರೊನಾ ವೈರಸ್ ವಿರುದ್ಧ ಲಸಿಕೆ ಕಂಡುಹಿಡಿದಿಲ್ಲ. ಏಕೆಂದರೆ 90% ಅಂಕಗಳನ್ನು ಪಡೆದ ಜನರು ಪಕೋಡಾ ಮಾರಾಟ ಮಾಡುತ್ತಿದ್ದಾರೆ ಮತ್ತು 40% ಗಳಿಸಿದವರು ಪ್ರಯೋಗಾಲಯಗಳಲ್ಲಿ ಪ್ರಯೋಗ ನಡೆಸುತ್ತಿದ್ದಾರೆ" ಎಂದು ಟ್ವೀಟ್ ಮಾಡುವ ಮೂಲಕ ಮೀಸಲಾತಿಯನ್ನು ಅವರು ಗೇಲಿ ಮಾಡಿದ್ದರು.

- Advertisement -
- Advertisement -

ಇಸ್ಲಾಮೋಫೋಬಿಕ್, ಅಶ್ಲೀಲ ಮತ್ತು ದಲಿತ ವಿರೋಧಿ ಪೋಸ್ಟ್ ಗಳನ್ನು ತನ್ನ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡಿದ್ದ ಕರ್ನಲ್ ರಾಕೇಶ್ ಮೋಹನ್ ಜೋಶಿಯನ್ನು ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ (TISS)ನ ರಿಜಿಸ್ಟ್ರಾರ್ ಆಗಿ ನೇಮಕ ಮಾಡಿರುವುದನ್ನು ವಿರೋಧಿಸಿ ಮುಂಬೈನ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ.

“ದಲಿತ ವಿರೋಧಿ ವ್ಯಕ್ತಿ TISS ರಿಜಿಸ್ಟ್ರಾರ್ ಆಗಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿರುವ ವಿದ್ಯಾರ್ಥಿಗಳು, ಅವರು ಹಂಚಿಕೊಂಡಿರುವ ಪೋಸ್ಟ್ ಗಳನ್ನು ಡಿಲಿಟ್ ಮಾಡಿದರೆ ಮಾತ್ರ ಸಾಲದು” ಎಂದು ಸುಮಾರು 1,200ಕ್ಕೂ ಹೆಚ್ಚು ಸಹಿ ಸಂಗ್ರಹ ಮಾಡಿ ಪತ್ರ ಚಳುವಳಿ ಮಾಡುತ್ತಿದ್ದಾರೆ.

ಕರ್ನಲ್ ರಾಕೇಶ್ ಮೋಹನ್ ಜೋಶಿಯಂತಹ ಕೋಮುದ್ವೇಷಿ ಮತ್ತು ದಲಿತ ವಿರೋಧಿ ವ್ಯಕ್ತಿ  TISSನಂತಹ ಸಂಸ್ಥೆಗೆ ನೇಮಕಗೊಂಡಿರುವುದು ಸಮಸ್ಯಾತ್ಮಕವಾಗಬಹುದು ಎಂಬುದಾಗಿ ಪ್ರಗತಿಪರ ವಿದ್ಯಾರ್ಥಿಗಳ ವೇದಿಕೆ (PSF) ಹೇಳಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ರಾಕೇಶ್ ಮೋಹನ್ ಜೋಶಿ ಹಂಚಿಕೊಂಡಿರುವ ಕೆಲವು ಪೋಸ್ಟ್ ಗಳು ಯಾವುದೋ ಒಂದು ಧರ್ಮದ ವಿರುದ್ಧ ಪ್ರಚೊದನಾಕಾರಿ ನಿಲುವನ್ನು ಹೊಂದಿದ್ದು, ಕೋಮುಪ್ರಚೋದನೆಯನ್ನು ಉತ್ತೇಜಿಸುವಂತದ್ದಾಗಿದೆ ಎಂದು ವಿದ್ಯಾರ್ಥಿಗಳು ಪತ್ರದಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಬದುಕಿದ್ದರೆ ಗೌರಿ ಮೇಡಂ ಹೀಗನ್ನುತ್ತಿದ್ದರೇನೋ..

“ಹೊಸದಾಗಿ ನೇಮಕಗೊಂಡ ರಿಜಿಸ್ಟ್ರಾರ್, ಕೇಂದ್ರ ವಿಶ್ವವಿದ್ಯಾಲಯಗಳಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು, ಸಿಎಎ ವಿರೋಧಿ ಪ್ರತಿಭಟನಾಕಾರರನ್ನು ದೂಷಿಸಿದ್ದು, ಮಾಧ್ಯಮದ ಹಲವು ವ್ಯಕ್ತಿಗಳನ್ನು ಪ್ರಾಸ್ಟಿಟ್ಯೂಟ್ (ವ್ಯಭಿಚಾರಿಗಳು) ಎಂದು ಕರೆದಿದ್ದಾರೆ. ಹಾಸ್ಯನಟ-ಕಾರ್ಯಕರ್ತ ವರುಣ್ ಗ್ರೋವರ್ ಅವರನ್ನು ಕೀಳಾಗಿ ನಿಂದಿಸಿದ್ದಾರೆ” ಎಂದು ಆರೋಪಿಸಲಾಗಿದೆ.

ಅವರು ತಬ್ಲಿಘಿ ಜಮಾಅತ್ ವಿರುದ್ಧ ಪ್ರಚೋದನಕಾರಿ ಮತ್ತು ಕೋಮುವಾದದ ಪೋಸ್ಟ್ ಮಾಡಿದ್ದು, “ಭಾರತವು ಇನ್ನೂ ಕೊರೊನಾ ವೈರಸ್ ವಿರುದ್ಧ ಲಸಿಕೆ ಕಂಡುಹಿಡಿದಿಲ್ಲ. ಏಕೆಂದರೆ 90% ಅಂಕಗಳನ್ನು ಪಡೆದ ಜನರು ಪಕೋಡಾ ಮಾರಾಟ ಮಾಡುತ್ತಿದ್ದಾರೆ ಮತ್ತು 40% ಗಳಿಸಿದವರು ಪ್ರಯೋಗಾಲಯಗಳಲ್ಲಿ ಪ್ರಯೋಗ ನಡೆಸುತ್ತಿದ್ದಾರೆ” ಎಂದು ಟ್ವೀಟ್ ಮಾಡುವ ಮೂಲಕ ಮೀಸಲಾತಿಯನ್ನು ಗೇಲಿ ಮಾಡಿದ್ದರು.

“ನಮ್ಮ ಹೊಸ ರಿಜಿಸ್ಟ್ರಾರ್ ನೀಡಿರುವ, ದಲಿತ ಸಮುದಾಯದ ವಿರುದ್ಧ ಇಂತಹ ಪೂರ್ವಗ್ರಹಪೀಡಿತ ದೃಷ್ಟಿಕೋನಗಳು ಮತ್ತು ಕೋಮು ದ್ವೇಷದ ಹೇಳಿಕೆಗಳನ್ನು ಗಮನಿಸಿದ ನಂತರ, ವಿದ್ಯಾರ್ಥಿಗಳು ತಮ್ಮ ವಿಭಾಗಗಳ ಭವಿಷ್ಯದ ಬಗ್ಗೆ ಕಾಳಜಿ ವಹಿಸಿದ್ದಾರೆ” ಎಂದು PSF ಸದಸ್ಯ ರಾಮದಾಸ್ ಹೇಳಿದರು.

“ರಿಜಿಸ್ಟ್ರಾರ್ ಆಡಳಿತದ ಮುಖ್ಯಸ್ಥರಾಗಿದ್ದು, ಸಣ್ಣ ಸಣ್ಣ ಕಾರ್ಯಕ್ರಮಗಳಿಗೆ ಅನುಮೋದನೆ ನೀಡುವಂತಹ ಕರ್ತವ್ಯಗಳಿಂದ ಹಿಡಿದು ದೊಡ್ಡ ಮಟ್ಟದ ನಿರ್ಧಾರಗಳನ್ನು ತೆಗೆದುಕೊಳ್ಳುವವರೆಗೂ ಅಧಿಕಾರ ಹೊಂದಿರುತ್ತಾರೆ. ಹಾಗಾಗಿ ಅವರ ಏಕಪಕ್ಷೀಯ ದೃಷ್ಟಿಕೋನಗಳು ಈ ಎಲ್ಲದರ ಮೇಲೆ ಪರಿಣಾಮ ಬೀರಬಹುದು. ರಿಜಿಸ್ಟ್ರಾರ್ ವಿದ್ಯಾರ್ಥಿವೇತನವನ್ನೂ ಸಹ ತಡೆಹಿಡಿಯಬಹುದು” ಎಂದು ಅವರು ಹೇಳಿದರು.

TISSನಲ್ಲಿ ಮನೋವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮಾಡುತ್ತಿರುವ ಅವಿನಾಶ್ ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿ, “ಈ ಸಂಸ್ಥೆ ನಡೆಯುತ್ತಿರುವುದೇ Activism Based Social Sience ಮೇಲೆ. ಇಲ್ಲಿ ವಿದ್ಯಾರ್ಥಿಗಳಿಂದ-ಪ್ರಾಧ್ಯಾಪಕರುಗಳ ತನಕ ನೂರಾರು ಹೋರಾಟಗಾರರಿದ್ದಾರೆ. ಇಂತಹ ಸ್ಥಳಕ್ಕೆ ಏಕಪಕ್ಷೀಯ ದೃಷ್ಟಿಕೋನವುಳ್ಳವರು, ನಿರ್ಧಾರ ತೆಗೆದುಕೊಳ್ಳುವ ಸ್ಥಾನಕ್ಕೆ ನೇಮಕಗೊಂಡರೆ, ಖಂಡಿತ ಅವುಗಳನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಾರೆ” ಎಂದು ಹೇಳಿದರು.


ಇದನ್ನೂ ಓದಿ: ಸಂಘರ್ಷವಿರುವುದು 99% ಭಾರತೀಯರು v/s 1% ಕೋಮುವಾದಿ ಗ್ಯಾಂಗ್ ನಡುವೆ – ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...