Homeಮುಖಪುಟದಲಿತ ವಿರೋಧಿ ವ್ಯಕ್ತಿ TISS ರಿಜಿಸ್ಟ್ರಾರ್ ಆಗಲು ಬಿಡುವುದಿಲ್ಲ: ವಿದ್ಯಾರ್ಥಿಗಳ ಪ್ರತಿಭಟನೆ

ದಲಿತ ವಿರೋಧಿ ವ್ಯಕ್ತಿ TISS ರಿಜಿಸ್ಟ್ರಾರ್ ಆಗಲು ಬಿಡುವುದಿಲ್ಲ: ವಿದ್ಯಾರ್ಥಿಗಳ ಪ್ರತಿಭಟನೆ

"ಭಾರತವು ಇನ್ನೂ ಕೊರೊನಾ ವೈರಸ್ ವಿರುದ್ಧ ಲಸಿಕೆ ಕಂಡುಹಿಡಿದಿಲ್ಲ. ಏಕೆಂದರೆ 90% ಅಂಕಗಳನ್ನು ಪಡೆದ ಜನರು ಪಕೋಡಾ ಮಾರಾಟ ಮಾಡುತ್ತಿದ್ದಾರೆ ಮತ್ತು 40% ಗಳಿಸಿದವರು ಪ್ರಯೋಗಾಲಯಗಳಲ್ಲಿ ಪ್ರಯೋಗ ನಡೆಸುತ್ತಿದ್ದಾರೆ" ಎಂದು ಟ್ವೀಟ್ ಮಾಡುವ ಮೂಲಕ ಮೀಸಲಾತಿಯನ್ನು ಅವರು ಗೇಲಿ ಮಾಡಿದ್ದರು.

- Advertisement -
- Advertisement -

ಇಸ್ಲಾಮೋಫೋಬಿಕ್, ಅಶ್ಲೀಲ ಮತ್ತು ದಲಿತ ವಿರೋಧಿ ಪೋಸ್ಟ್ ಗಳನ್ನು ತನ್ನ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡಿದ್ದ ಕರ್ನಲ್ ರಾಕೇಶ್ ಮೋಹನ್ ಜೋಶಿಯನ್ನು ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ (TISS)ನ ರಿಜಿಸ್ಟ್ರಾರ್ ಆಗಿ ನೇಮಕ ಮಾಡಿರುವುದನ್ನು ವಿರೋಧಿಸಿ ಮುಂಬೈನ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ.

“ದಲಿತ ವಿರೋಧಿ ವ್ಯಕ್ತಿ TISS ರಿಜಿಸ್ಟ್ರಾರ್ ಆಗಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿರುವ ವಿದ್ಯಾರ್ಥಿಗಳು, ಅವರು ಹಂಚಿಕೊಂಡಿರುವ ಪೋಸ್ಟ್ ಗಳನ್ನು ಡಿಲಿಟ್ ಮಾಡಿದರೆ ಮಾತ್ರ ಸಾಲದು” ಎಂದು ಸುಮಾರು 1,200ಕ್ಕೂ ಹೆಚ್ಚು ಸಹಿ ಸಂಗ್ರಹ ಮಾಡಿ ಪತ್ರ ಚಳುವಳಿ ಮಾಡುತ್ತಿದ್ದಾರೆ.

ಕರ್ನಲ್ ರಾಕೇಶ್ ಮೋಹನ್ ಜೋಶಿಯಂತಹ ಕೋಮುದ್ವೇಷಿ ಮತ್ತು ದಲಿತ ವಿರೋಧಿ ವ್ಯಕ್ತಿ  TISSನಂತಹ ಸಂಸ್ಥೆಗೆ ನೇಮಕಗೊಂಡಿರುವುದು ಸಮಸ್ಯಾತ್ಮಕವಾಗಬಹುದು ಎಂಬುದಾಗಿ ಪ್ರಗತಿಪರ ವಿದ್ಯಾರ್ಥಿಗಳ ವೇದಿಕೆ (PSF) ಹೇಳಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ರಾಕೇಶ್ ಮೋಹನ್ ಜೋಶಿ ಹಂಚಿಕೊಂಡಿರುವ ಕೆಲವು ಪೋಸ್ಟ್ ಗಳು ಯಾವುದೋ ಒಂದು ಧರ್ಮದ ವಿರುದ್ಧ ಪ್ರಚೊದನಾಕಾರಿ ನಿಲುವನ್ನು ಹೊಂದಿದ್ದು, ಕೋಮುಪ್ರಚೋದನೆಯನ್ನು ಉತ್ತೇಜಿಸುವಂತದ್ದಾಗಿದೆ ಎಂದು ವಿದ್ಯಾರ್ಥಿಗಳು ಪತ್ರದಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಬದುಕಿದ್ದರೆ ಗೌರಿ ಮೇಡಂ ಹೀಗನ್ನುತ್ತಿದ್ದರೇನೋ..

“ಹೊಸದಾಗಿ ನೇಮಕಗೊಂಡ ರಿಜಿಸ್ಟ್ರಾರ್, ಕೇಂದ್ರ ವಿಶ್ವವಿದ್ಯಾಲಯಗಳಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು, ಸಿಎಎ ವಿರೋಧಿ ಪ್ರತಿಭಟನಾಕಾರರನ್ನು ದೂಷಿಸಿದ್ದು, ಮಾಧ್ಯಮದ ಹಲವು ವ್ಯಕ್ತಿಗಳನ್ನು ಪ್ರಾಸ್ಟಿಟ್ಯೂಟ್ (ವ್ಯಭಿಚಾರಿಗಳು) ಎಂದು ಕರೆದಿದ್ದಾರೆ. ಹಾಸ್ಯನಟ-ಕಾರ್ಯಕರ್ತ ವರುಣ್ ಗ್ರೋವರ್ ಅವರನ್ನು ಕೀಳಾಗಿ ನಿಂದಿಸಿದ್ದಾರೆ” ಎಂದು ಆರೋಪಿಸಲಾಗಿದೆ.

ಅವರು ತಬ್ಲಿಘಿ ಜಮಾಅತ್ ವಿರುದ್ಧ ಪ್ರಚೋದನಕಾರಿ ಮತ್ತು ಕೋಮುವಾದದ ಪೋಸ್ಟ್ ಮಾಡಿದ್ದು, “ಭಾರತವು ಇನ್ನೂ ಕೊರೊನಾ ವೈರಸ್ ವಿರುದ್ಧ ಲಸಿಕೆ ಕಂಡುಹಿಡಿದಿಲ್ಲ. ಏಕೆಂದರೆ 90% ಅಂಕಗಳನ್ನು ಪಡೆದ ಜನರು ಪಕೋಡಾ ಮಾರಾಟ ಮಾಡುತ್ತಿದ್ದಾರೆ ಮತ್ತು 40% ಗಳಿಸಿದವರು ಪ್ರಯೋಗಾಲಯಗಳಲ್ಲಿ ಪ್ರಯೋಗ ನಡೆಸುತ್ತಿದ್ದಾರೆ” ಎಂದು ಟ್ವೀಟ್ ಮಾಡುವ ಮೂಲಕ ಮೀಸಲಾತಿಯನ್ನು ಗೇಲಿ ಮಾಡಿದ್ದರು.

“ನಮ್ಮ ಹೊಸ ರಿಜಿಸ್ಟ್ರಾರ್ ನೀಡಿರುವ, ದಲಿತ ಸಮುದಾಯದ ವಿರುದ್ಧ ಇಂತಹ ಪೂರ್ವಗ್ರಹಪೀಡಿತ ದೃಷ್ಟಿಕೋನಗಳು ಮತ್ತು ಕೋಮು ದ್ವೇಷದ ಹೇಳಿಕೆಗಳನ್ನು ಗಮನಿಸಿದ ನಂತರ, ವಿದ್ಯಾರ್ಥಿಗಳು ತಮ್ಮ ವಿಭಾಗಗಳ ಭವಿಷ್ಯದ ಬಗ್ಗೆ ಕಾಳಜಿ ವಹಿಸಿದ್ದಾರೆ” ಎಂದು PSF ಸದಸ್ಯ ರಾಮದಾಸ್ ಹೇಳಿದರು.

“ರಿಜಿಸ್ಟ್ರಾರ್ ಆಡಳಿತದ ಮುಖ್ಯಸ್ಥರಾಗಿದ್ದು, ಸಣ್ಣ ಸಣ್ಣ ಕಾರ್ಯಕ್ರಮಗಳಿಗೆ ಅನುಮೋದನೆ ನೀಡುವಂತಹ ಕರ್ತವ್ಯಗಳಿಂದ ಹಿಡಿದು ದೊಡ್ಡ ಮಟ್ಟದ ನಿರ್ಧಾರಗಳನ್ನು ತೆಗೆದುಕೊಳ್ಳುವವರೆಗೂ ಅಧಿಕಾರ ಹೊಂದಿರುತ್ತಾರೆ. ಹಾಗಾಗಿ ಅವರ ಏಕಪಕ್ಷೀಯ ದೃಷ್ಟಿಕೋನಗಳು ಈ ಎಲ್ಲದರ ಮೇಲೆ ಪರಿಣಾಮ ಬೀರಬಹುದು. ರಿಜಿಸ್ಟ್ರಾರ್ ವಿದ್ಯಾರ್ಥಿವೇತನವನ್ನೂ ಸಹ ತಡೆಹಿಡಿಯಬಹುದು” ಎಂದು ಅವರು ಹೇಳಿದರು.

TISSನಲ್ಲಿ ಮನೋವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮಾಡುತ್ತಿರುವ ಅವಿನಾಶ್ ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿ, “ಈ ಸಂಸ್ಥೆ ನಡೆಯುತ್ತಿರುವುದೇ Activism Based Social Sience ಮೇಲೆ. ಇಲ್ಲಿ ವಿದ್ಯಾರ್ಥಿಗಳಿಂದ-ಪ್ರಾಧ್ಯಾಪಕರುಗಳ ತನಕ ನೂರಾರು ಹೋರಾಟಗಾರರಿದ್ದಾರೆ. ಇಂತಹ ಸ್ಥಳಕ್ಕೆ ಏಕಪಕ್ಷೀಯ ದೃಷ್ಟಿಕೋನವುಳ್ಳವರು, ನಿರ್ಧಾರ ತೆಗೆದುಕೊಳ್ಳುವ ಸ್ಥಾನಕ್ಕೆ ನೇಮಕಗೊಂಡರೆ, ಖಂಡಿತ ಅವುಗಳನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಾರೆ” ಎಂದು ಹೇಳಿದರು.


ಇದನ್ನೂ ಓದಿ: ಸಂಘರ್ಷವಿರುವುದು 99% ಭಾರತೀಯರು v/s 1% ಕೋಮುವಾದಿ ಗ್ಯಾಂಗ್ ನಡುವೆ – ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...