Homeಮುಖಪುಟದಲಿತ ವಿರೋಧಿ ವ್ಯಕ್ತಿ TISS ರಿಜಿಸ್ಟ್ರಾರ್ ಆಗಲು ಬಿಡುವುದಿಲ್ಲ: ವಿದ್ಯಾರ್ಥಿಗಳ ಪ್ರತಿಭಟನೆ

ದಲಿತ ವಿರೋಧಿ ವ್ಯಕ್ತಿ TISS ರಿಜಿಸ್ಟ್ರಾರ್ ಆಗಲು ಬಿಡುವುದಿಲ್ಲ: ವಿದ್ಯಾರ್ಥಿಗಳ ಪ್ರತಿಭಟನೆ

"ಭಾರತವು ಇನ್ನೂ ಕೊರೊನಾ ವೈರಸ್ ವಿರುದ್ಧ ಲಸಿಕೆ ಕಂಡುಹಿಡಿದಿಲ್ಲ. ಏಕೆಂದರೆ 90% ಅಂಕಗಳನ್ನು ಪಡೆದ ಜನರು ಪಕೋಡಾ ಮಾರಾಟ ಮಾಡುತ್ತಿದ್ದಾರೆ ಮತ್ತು 40% ಗಳಿಸಿದವರು ಪ್ರಯೋಗಾಲಯಗಳಲ್ಲಿ ಪ್ರಯೋಗ ನಡೆಸುತ್ತಿದ್ದಾರೆ" ಎಂದು ಟ್ವೀಟ್ ಮಾಡುವ ಮೂಲಕ ಮೀಸಲಾತಿಯನ್ನು ಅವರು ಗೇಲಿ ಮಾಡಿದ್ದರು.

- Advertisement -
- Advertisement -

ಇಸ್ಲಾಮೋಫೋಬಿಕ್, ಅಶ್ಲೀಲ ಮತ್ತು ದಲಿತ ವಿರೋಧಿ ಪೋಸ್ಟ್ ಗಳನ್ನು ತನ್ನ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡಿದ್ದ ಕರ್ನಲ್ ರಾಕೇಶ್ ಮೋಹನ್ ಜೋಶಿಯನ್ನು ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ (TISS)ನ ರಿಜಿಸ್ಟ್ರಾರ್ ಆಗಿ ನೇಮಕ ಮಾಡಿರುವುದನ್ನು ವಿರೋಧಿಸಿ ಮುಂಬೈನ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ.

“ದಲಿತ ವಿರೋಧಿ ವ್ಯಕ್ತಿ TISS ರಿಜಿಸ್ಟ್ರಾರ್ ಆಗಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿರುವ ವಿದ್ಯಾರ್ಥಿಗಳು, ಅವರು ಹಂಚಿಕೊಂಡಿರುವ ಪೋಸ್ಟ್ ಗಳನ್ನು ಡಿಲಿಟ್ ಮಾಡಿದರೆ ಮಾತ್ರ ಸಾಲದು” ಎಂದು ಸುಮಾರು 1,200ಕ್ಕೂ ಹೆಚ್ಚು ಸಹಿ ಸಂಗ್ರಹ ಮಾಡಿ ಪತ್ರ ಚಳುವಳಿ ಮಾಡುತ್ತಿದ್ದಾರೆ.

ಕರ್ನಲ್ ರಾಕೇಶ್ ಮೋಹನ್ ಜೋಶಿಯಂತಹ ಕೋಮುದ್ವೇಷಿ ಮತ್ತು ದಲಿತ ವಿರೋಧಿ ವ್ಯಕ್ತಿ  TISSನಂತಹ ಸಂಸ್ಥೆಗೆ ನೇಮಕಗೊಂಡಿರುವುದು ಸಮಸ್ಯಾತ್ಮಕವಾಗಬಹುದು ಎಂಬುದಾಗಿ ಪ್ರಗತಿಪರ ವಿದ್ಯಾರ್ಥಿಗಳ ವೇದಿಕೆ (PSF) ಹೇಳಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ರಾಕೇಶ್ ಮೋಹನ್ ಜೋಶಿ ಹಂಚಿಕೊಂಡಿರುವ ಕೆಲವು ಪೋಸ್ಟ್ ಗಳು ಯಾವುದೋ ಒಂದು ಧರ್ಮದ ವಿರುದ್ಧ ಪ್ರಚೊದನಾಕಾರಿ ನಿಲುವನ್ನು ಹೊಂದಿದ್ದು, ಕೋಮುಪ್ರಚೋದನೆಯನ್ನು ಉತ್ತೇಜಿಸುವಂತದ್ದಾಗಿದೆ ಎಂದು ವಿದ್ಯಾರ್ಥಿಗಳು ಪತ್ರದಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಬದುಕಿದ್ದರೆ ಗೌರಿ ಮೇಡಂ ಹೀಗನ್ನುತ್ತಿದ್ದರೇನೋ..

“ಹೊಸದಾಗಿ ನೇಮಕಗೊಂಡ ರಿಜಿಸ್ಟ್ರಾರ್, ಕೇಂದ್ರ ವಿಶ್ವವಿದ್ಯಾಲಯಗಳಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು, ಸಿಎಎ ವಿರೋಧಿ ಪ್ರತಿಭಟನಾಕಾರರನ್ನು ದೂಷಿಸಿದ್ದು, ಮಾಧ್ಯಮದ ಹಲವು ವ್ಯಕ್ತಿಗಳನ್ನು ಪ್ರಾಸ್ಟಿಟ್ಯೂಟ್ (ವ್ಯಭಿಚಾರಿಗಳು) ಎಂದು ಕರೆದಿದ್ದಾರೆ. ಹಾಸ್ಯನಟ-ಕಾರ್ಯಕರ್ತ ವರುಣ್ ಗ್ರೋವರ್ ಅವರನ್ನು ಕೀಳಾಗಿ ನಿಂದಿಸಿದ್ದಾರೆ” ಎಂದು ಆರೋಪಿಸಲಾಗಿದೆ.

ಅವರು ತಬ್ಲಿಘಿ ಜಮಾಅತ್ ವಿರುದ್ಧ ಪ್ರಚೋದನಕಾರಿ ಮತ್ತು ಕೋಮುವಾದದ ಪೋಸ್ಟ್ ಮಾಡಿದ್ದು, “ಭಾರತವು ಇನ್ನೂ ಕೊರೊನಾ ವೈರಸ್ ವಿರುದ್ಧ ಲಸಿಕೆ ಕಂಡುಹಿಡಿದಿಲ್ಲ. ಏಕೆಂದರೆ 90% ಅಂಕಗಳನ್ನು ಪಡೆದ ಜನರು ಪಕೋಡಾ ಮಾರಾಟ ಮಾಡುತ್ತಿದ್ದಾರೆ ಮತ್ತು 40% ಗಳಿಸಿದವರು ಪ್ರಯೋಗಾಲಯಗಳಲ್ಲಿ ಪ್ರಯೋಗ ನಡೆಸುತ್ತಿದ್ದಾರೆ” ಎಂದು ಟ್ವೀಟ್ ಮಾಡುವ ಮೂಲಕ ಮೀಸಲಾತಿಯನ್ನು ಗೇಲಿ ಮಾಡಿದ್ದರು.

“ನಮ್ಮ ಹೊಸ ರಿಜಿಸ್ಟ್ರಾರ್ ನೀಡಿರುವ, ದಲಿತ ಸಮುದಾಯದ ವಿರುದ್ಧ ಇಂತಹ ಪೂರ್ವಗ್ರಹಪೀಡಿತ ದೃಷ್ಟಿಕೋನಗಳು ಮತ್ತು ಕೋಮು ದ್ವೇಷದ ಹೇಳಿಕೆಗಳನ್ನು ಗಮನಿಸಿದ ನಂತರ, ವಿದ್ಯಾರ್ಥಿಗಳು ತಮ್ಮ ವಿಭಾಗಗಳ ಭವಿಷ್ಯದ ಬಗ್ಗೆ ಕಾಳಜಿ ವಹಿಸಿದ್ದಾರೆ” ಎಂದು PSF ಸದಸ್ಯ ರಾಮದಾಸ್ ಹೇಳಿದರು.

“ರಿಜಿಸ್ಟ್ರಾರ್ ಆಡಳಿತದ ಮುಖ್ಯಸ್ಥರಾಗಿದ್ದು, ಸಣ್ಣ ಸಣ್ಣ ಕಾರ್ಯಕ್ರಮಗಳಿಗೆ ಅನುಮೋದನೆ ನೀಡುವಂತಹ ಕರ್ತವ್ಯಗಳಿಂದ ಹಿಡಿದು ದೊಡ್ಡ ಮಟ್ಟದ ನಿರ್ಧಾರಗಳನ್ನು ತೆಗೆದುಕೊಳ್ಳುವವರೆಗೂ ಅಧಿಕಾರ ಹೊಂದಿರುತ್ತಾರೆ. ಹಾಗಾಗಿ ಅವರ ಏಕಪಕ್ಷೀಯ ದೃಷ್ಟಿಕೋನಗಳು ಈ ಎಲ್ಲದರ ಮೇಲೆ ಪರಿಣಾಮ ಬೀರಬಹುದು. ರಿಜಿಸ್ಟ್ರಾರ್ ವಿದ್ಯಾರ್ಥಿವೇತನವನ್ನೂ ಸಹ ತಡೆಹಿಡಿಯಬಹುದು” ಎಂದು ಅವರು ಹೇಳಿದರು.

TISSನಲ್ಲಿ ಮನೋವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮಾಡುತ್ತಿರುವ ಅವಿನಾಶ್ ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿ, “ಈ ಸಂಸ್ಥೆ ನಡೆಯುತ್ತಿರುವುದೇ Activism Based Social Sience ಮೇಲೆ. ಇಲ್ಲಿ ವಿದ್ಯಾರ್ಥಿಗಳಿಂದ-ಪ್ರಾಧ್ಯಾಪಕರುಗಳ ತನಕ ನೂರಾರು ಹೋರಾಟಗಾರರಿದ್ದಾರೆ. ಇಂತಹ ಸ್ಥಳಕ್ಕೆ ಏಕಪಕ್ಷೀಯ ದೃಷ್ಟಿಕೋನವುಳ್ಳವರು, ನಿರ್ಧಾರ ತೆಗೆದುಕೊಳ್ಳುವ ಸ್ಥಾನಕ್ಕೆ ನೇಮಕಗೊಂಡರೆ, ಖಂಡಿತ ಅವುಗಳನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಾರೆ” ಎಂದು ಹೇಳಿದರು.


ಇದನ್ನೂ ಓದಿ: ಸಂಘರ್ಷವಿರುವುದು 99% ಭಾರತೀಯರು v/s 1% ಕೋಮುವಾದಿ ಗ್ಯಾಂಗ್ ನಡುವೆ – ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...