Homeಮುಖಪುಟದಲಿತ ವಿರೋಧಿ ವ್ಯಕ್ತಿ TISS ರಿಜಿಸ್ಟ್ರಾರ್ ಆಗಲು ಬಿಡುವುದಿಲ್ಲ: ವಿದ್ಯಾರ್ಥಿಗಳ ಪ್ರತಿಭಟನೆ

ದಲಿತ ವಿರೋಧಿ ವ್ಯಕ್ತಿ TISS ರಿಜಿಸ್ಟ್ರಾರ್ ಆಗಲು ಬಿಡುವುದಿಲ್ಲ: ವಿದ್ಯಾರ್ಥಿಗಳ ಪ್ರತಿಭಟನೆ

"ಭಾರತವು ಇನ್ನೂ ಕೊರೊನಾ ವೈರಸ್ ವಿರುದ್ಧ ಲಸಿಕೆ ಕಂಡುಹಿಡಿದಿಲ್ಲ. ಏಕೆಂದರೆ 90% ಅಂಕಗಳನ್ನು ಪಡೆದ ಜನರು ಪಕೋಡಾ ಮಾರಾಟ ಮಾಡುತ್ತಿದ್ದಾರೆ ಮತ್ತು 40% ಗಳಿಸಿದವರು ಪ್ರಯೋಗಾಲಯಗಳಲ್ಲಿ ಪ್ರಯೋಗ ನಡೆಸುತ್ತಿದ್ದಾರೆ" ಎಂದು ಟ್ವೀಟ್ ಮಾಡುವ ಮೂಲಕ ಮೀಸಲಾತಿಯನ್ನು ಅವರು ಗೇಲಿ ಮಾಡಿದ್ದರು.

- Advertisement -
- Advertisement -

ಇಸ್ಲಾಮೋಫೋಬಿಕ್, ಅಶ್ಲೀಲ ಮತ್ತು ದಲಿತ ವಿರೋಧಿ ಪೋಸ್ಟ್ ಗಳನ್ನು ತನ್ನ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡಿದ್ದ ಕರ್ನಲ್ ರಾಕೇಶ್ ಮೋಹನ್ ಜೋಶಿಯನ್ನು ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ (TISS)ನ ರಿಜಿಸ್ಟ್ರಾರ್ ಆಗಿ ನೇಮಕ ಮಾಡಿರುವುದನ್ನು ವಿರೋಧಿಸಿ ಮುಂಬೈನ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ.

“ದಲಿತ ವಿರೋಧಿ ವ್ಯಕ್ತಿ TISS ರಿಜಿಸ್ಟ್ರಾರ್ ಆಗಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿರುವ ವಿದ್ಯಾರ್ಥಿಗಳು, ಅವರು ಹಂಚಿಕೊಂಡಿರುವ ಪೋಸ್ಟ್ ಗಳನ್ನು ಡಿಲಿಟ್ ಮಾಡಿದರೆ ಮಾತ್ರ ಸಾಲದು” ಎಂದು ಸುಮಾರು 1,200ಕ್ಕೂ ಹೆಚ್ಚು ಸಹಿ ಸಂಗ್ರಹ ಮಾಡಿ ಪತ್ರ ಚಳುವಳಿ ಮಾಡುತ್ತಿದ್ದಾರೆ.

ಕರ್ನಲ್ ರಾಕೇಶ್ ಮೋಹನ್ ಜೋಶಿಯಂತಹ ಕೋಮುದ್ವೇಷಿ ಮತ್ತು ದಲಿತ ವಿರೋಧಿ ವ್ಯಕ್ತಿ  TISSನಂತಹ ಸಂಸ್ಥೆಗೆ ನೇಮಕಗೊಂಡಿರುವುದು ಸಮಸ್ಯಾತ್ಮಕವಾಗಬಹುದು ಎಂಬುದಾಗಿ ಪ್ರಗತಿಪರ ವಿದ್ಯಾರ್ಥಿಗಳ ವೇದಿಕೆ (PSF) ಹೇಳಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ರಾಕೇಶ್ ಮೋಹನ್ ಜೋಶಿ ಹಂಚಿಕೊಂಡಿರುವ ಕೆಲವು ಪೋಸ್ಟ್ ಗಳು ಯಾವುದೋ ಒಂದು ಧರ್ಮದ ವಿರುದ್ಧ ಪ್ರಚೊದನಾಕಾರಿ ನಿಲುವನ್ನು ಹೊಂದಿದ್ದು, ಕೋಮುಪ್ರಚೋದನೆಯನ್ನು ಉತ್ತೇಜಿಸುವಂತದ್ದಾಗಿದೆ ಎಂದು ವಿದ್ಯಾರ್ಥಿಗಳು ಪತ್ರದಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಬದುಕಿದ್ದರೆ ಗೌರಿ ಮೇಡಂ ಹೀಗನ್ನುತ್ತಿದ್ದರೇನೋ..

“ಹೊಸದಾಗಿ ನೇಮಕಗೊಂಡ ರಿಜಿಸ್ಟ್ರಾರ್, ಕೇಂದ್ರ ವಿಶ್ವವಿದ್ಯಾಲಯಗಳಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು, ಸಿಎಎ ವಿರೋಧಿ ಪ್ರತಿಭಟನಾಕಾರರನ್ನು ದೂಷಿಸಿದ್ದು, ಮಾಧ್ಯಮದ ಹಲವು ವ್ಯಕ್ತಿಗಳನ್ನು ಪ್ರಾಸ್ಟಿಟ್ಯೂಟ್ (ವ್ಯಭಿಚಾರಿಗಳು) ಎಂದು ಕರೆದಿದ್ದಾರೆ. ಹಾಸ್ಯನಟ-ಕಾರ್ಯಕರ್ತ ವರುಣ್ ಗ್ರೋವರ್ ಅವರನ್ನು ಕೀಳಾಗಿ ನಿಂದಿಸಿದ್ದಾರೆ” ಎಂದು ಆರೋಪಿಸಲಾಗಿದೆ.

ಅವರು ತಬ್ಲಿಘಿ ಜಮಾಅತ್ ವಿರುದ್ಧ ಪ್ರಚೋದನಕಾರಿ ಮತ್ತು ಕೋಮುವಾದದ ಪೋಸ್ಟ್ ಮಾಡಿದ್ದು, “ಭಾರತವು ಇನ್ನೂ ಕೊರೊನಾ ವೈರಸ್ ವಿರುದ್ಧ ಲಸಿಕೆ ಕಂಡುಹಿಡಿದಿಲ್ಲ. ಏಕೆಂದರೆ 90% ಅಂಕಗಳನ್ನು ಪಡೆದ ಜನರು ಪಕೋಡಾ ಮಾರಾಟ ಮಾಡುತ್ತಿದ್ದಾರೆ ಮತ್ತು 40% ಗಳಿಸಿದವರು ಪ್ರಯೋಗಾಲಯಗಳಲ್ಲಿ ಪ್ರಯೋಗ ನಡೆಸುತ್ತಿದ್ದಾರೆ” ಎಂದು ಟ್ವೀಟ್ ಮಾಡುವ ಮೂಲಕ ಮೀಸಲಾತಿಯನ್ನು ಗೇಲಿ ಮಾಡಿದ್ದರು.

“ನಮ್ಮ ಹೊಸ ರಿಜಿಸ್ಟ್ರಾರ್ ನೀಡಿರುವ, ದಲಿತ ಸಮುದಾಯದ ವಿರುದ್ಧ ಇಂತಹ ಪೂರ್ವಗ್ರಹಪೀಡಿತ ದೃಷ್ಟಿಕೋನಗಳು ಮತ್ತು ಕೋಮು ದ್ವೇಷದ ಹೇಳಿಕೆಗಳನ್ನು ಗಮನಿಸಿದ ನಂತರ, ವಿದ್ಯಾರ್ಥಿಗಳು ತಮ್ಮ ವಿಭಾಗಗಳ ಭವಿಷ್ಯದ ಬಗ್ಗೆ ಕಾಳಜಿ ವಹಿಸಿದ್ದಾರೆ” ಎಂದು PSF ಸದಸ್ಯ ರಾಮದಾಸ್ ಹೇಳಿದರು.

“ರಿಜಿಸ್ಟ್ರಾರ್ ಆಡಳಿತದ ಮುಖ್ಯಸ್ಥರಾಗಿದ್ದು, ಸಣ್ಣ ಸಣ್ಣ ಕಾರ್ಯಕ್ರಮಗಳಿಗೆ ಅನುಮೋದನೆ ನೀಡುವಂತಹ ಕರ್ತವ್ಯಗಳಿಂದ ಹಿಡಿದು ದೊಡ್ಡ ಮಟ್ಟದ ನಿರ್ಧಾರಗಳನ್ನು ತೆಗೆದುಕೊಳ್ಳುವವರೆಗೂ ಅಧಿಕಾರ ಹೊಂದಿರುತ್ತಾರೆ. ಹಾಗಾಗಿ ಅವರ ಏಕಪಕ್ಷೀಯ ದೃಷ್ಟಿಕೋನಗಳು ಈ ಎಲ್ಲದರ ಮೇಲೆ ಪರಿಣಾಮ ಬೀರಬಹುದು. ರಿಜಿಸ್ಟ್ರಾರ್ ವಿದ್ಯಾರ್ಥಿವೇತನವನ್ನೂ ಸಹ ತಡೆಹಿಡಿಯಬಹುದು” ಎಂದು ಅವರು ಹೇಳಿದರು.

TISSನಲ್ಲಿ ಮನೋವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮಾಡುತ್ತಿರುವ ಅವಿನಾಶ್ ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿ, “ಈ ಸಂಸ್ಥೆ ನಡೆಯುತ್ತಿರುವುದೇ Activism Based Social Sience ಮೇಲೆ. ಇಲ್ಲಿ ವಿದ್ಯಾರ್ಥಿಗಳಿಂದ-ಪ್ರಾಧ್ಯಾಪಕರುಗಳ ತನಕ ನೂರಾರು ಹೋರಾಟಗಾರರಿದ್ದಾರೆ. ಇಂತಹ ಸ್ಥಳಕ್ಕೆ ಏಕಪಕ್ಷೀಯ ದೃಷ್ಟಿಕೋನವುಳ್ಳವರು, ನಿರ್ಧಾರ ತೆಗೆದುಕೊಳ್ಳುವ ಸ್ಥಾನಕ್ಕೆ ನೇಮಕಗೊಂಡರೆ, ಖಂಡಿತ ಅವುಗಳನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಾರೆ” ಎಂದು ಹೇಳಿದರು.


ಇದನ್ನೂ ಓದಿ: ಸಂಘರ್ಷವಿರುವುದು 99% ಭಾರತೀಯರು v/s 1% ಕೋಮುವಾದಿ ಗ್ಯಾಂಗ್ ನಡುವೆ – ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...