Homeಅಂಕಣಗಳುಜಂಟಿ ಕಾರ್ಯದರ್ಶಿ ಹುದ್ದೆಗಳ ನೇರ ನೇಮಕದ ಹುನ್ನಾರಗಳು

ಜಂಟಿ ಕಾರ್ಯದರ್ಶಿ ಹುದ್ದೆಗಳ ನೇರ ನೇಮಕದ ಹುನ್ನಾರಗಳು

- Advertisement -
- Advertisement -

ಇದೊಂದು ತೀರಾ ಅಪಾಯಕಾರಿ ಸಂವಿಧಾನ ವಿರೋಧಿ ನಡೆ. ಭಾರತೀಯ ಪ್ರತಿಭಾವಂತ ಉತ್ಸಾಹಿಗಳಿಗೆ ಸದೃಢ ಭಾರತವನ್ನು ಕಟ್ಟಲು ನೀವು ಜಂಟಿ ಕಾರ್ಯದರ್ಶಿಯಾಗಿ ಸರಕಾರದೊಂದಿಗೆ ಕೈಜೋಡಿಸಿ ಎಂದು ಹೇಳುವ ಸರಕಾರದ ಈ ಘೋಷಣೆಯಲ್ಲಿಯೇ ಬಹುದೊಡ್ಡ ಹುನ್ನಾರ ಅಡಗಿದೆ. ನೇರ ಆಯ್ಕೆಯಲ್ಲಿ ಆಯ್ಕೆಯಾಗುವ ಈ ಜಾಯಿಂಟ್ ಸೆಕ್ರೆಟ್ರಿಗಳು ಯೋಜನೆಗಳನ್ನು ರೂಪಿಸುವುದಲ್ಲದೆ, ಈ ಯೋಜನೆಗಳನ್ನು ಸ್ವತಂತ್ರವಾಗಿ ಜಾರಿಗೊಳಿಸುವ ಪರಮಾಧಿಕಾರವನ್ನೂ ಹೊಂದಿದ್ದಾರೆ.
ಇದೀಗ ಹಣಕಾಸು, ಆರ್ಥಿಕವ್ಯವಹಾರ, ಕೃಷಿ ಮತ್ತು ಕೃಷಿಕರ ಕಲ್ಯಾಣ, ಸಾರಿಗೆ, ನಾಗರಿಕ ವಿಮಾನಯಾನ, ನೌಕಾಯಾನ, ಪರಿಸರ, ಅರಣ್ಯ ಮೊದಲಾದ ಪ್ರಮುಖ 10 ಇಲಾಖೆಗಳಿಗೆ ಈ ಹುದ್ದೆಗಳನ್ನು ಕರೆಯಲಾಗಿದೆ. ಹುದ್ದೆಗಿರುವ ಮಾನದಂಡಗಳನ್ನು ಗಮನಿಸೋಣ. ಜುಲೈ 1, 2018 ಕ್ಕೆ ಸರಿಯಾಗಿ 40 ವರ್ಷ ತುಂಬಿರಬೇಕು, ಪದವೀಧರರಾಗಿರಬೇಕು, ಈಗಾಗಲೆ ಜಾಯಿಂಟ್ ಸೆಕ್ರೆಟರಿಯ ಪದನಾಮಕ್ಕೆ ಸಮನಾದ ಹುದ್ದೆಗಳಲ್ಲಿ ಅನುಭವ ಇದ್ದವರಿಗೆ ಆದ್ಯತೆ ಇದೆ. ಖಾಸಗಿಯಾಗಿಯೂ ಕನಿಷ್ಠ 15 ವರ್ಷಗಳ ಕಾಲ ಖಾಸಗಿ, ಡೀಮ್ಡ್ ಕಂಪನಿಗಳನ್ನು ಒಳಗೊಂಡಂತೆ ವಿಶ್ವವಿದ್ಯಾಲಯಗಳು, ಎನ್‍ಜಿಓಗಳಲ್ಲಿ ಕೆಲಸ ಮಾಡಿದವರನ್ನೂ ಪರಿಗಣಿಸಲಾಗುವುದು. ಇದು 3 ವರ್ಷದಿಂದ 5 ವರ್ಷದ ಅವಧಿಯ ಕಾಂಟ್ರಾಕ್ಟ್ ಬೇಸ್ಡ್ ಆದ ಜವಾಬ್ದಾರಿಯಾಗಿದೆ. ಸಂಬಳ 144200 ರಿಂದ 218200/- ತನಕ ನಿಗದಿ ಮಾಡಬಹುದಾಗಿದೆ. ಇದೇ ಜೂನ್ 15 ರಿಂದ ಜುಲೈ 30 ರತನಕ ಅರ್ಜಿಯನ್ನು ಆನ್‍ಲೈನಲ್ಲಿ ಆಹ್ವಾನಿಸಲಾಗಿದೆ. ಅರ್ಜಿ ಹಾಕಿದವರಲ್ಲಿ ಅರ್ಹರಾದವರ ಅಂತಿಮ ಪಟ್ಟಿ ಸಿದ್ಧಪಡಿಸಿ, ಈ ಅಂತಿಮ ಪಟ್ಟಿಯಲ್ಲಿರುವವರನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಕಾರ್ಪೊರೇಟ್‍ಗಳು, ಬಂಡವಾಳಶಾಹಿಗಳು ಹಣ ಹೂಡಿ ಒಬ್ಬ ರಾಜಕಾರಣಿಯನ್ನು ಗೆಲ್ಲಿಸುವುದಿದೆ. ಅದೀಗ ದೇಶದ ಬಲಾಢ್ಯ ಕಾರ್ಪೊರೇಟ್‍ಗಳ ಒಕ್ಕೂಟ ಬಂಡವಾಳ ಹೂಡಿ ಈ ದೇಶದ ಪ್ರಧಾನಿಯನ್ನು ನಿರ್ಧರಿಸುವ ಹಂತಕ್ಕೆ ತಲುಪಿದೆ. ಆದರೆ ಭಾರತೀಯ ನಾಗರಿಕ ಸೇವೆಯ ಉನ್ನತ ಅಧಿಕಾರಿಗಳನ್ನು ಹೀಗೆ ಕೊಳ್ಳುವುದು ಕಷ್ಟ. ಈತನಕ ಲೋಕಸೇವಾ ಆಯೋಗದ ಐಎಎಸ್‍ನ ಆಯ್ಕೆ ಸಾಧ್ಯವಾದಷ್ಟು ಪಾರದರ್ಶಕವಾಗಿ ನಡೆಯುತ್ತಿದೆ. ಆದರೆ ಈ ಬೆಳವಣಿಗೆಯನ್ನು ನೋಡಿದರೆ ಕಾರ್ಪೊರೇಟ್ ಶ್ರೀಮಂತರ ಒಕ್ಕೂಟ ಇದೀಗ ಲೋಕಸೇವಾ ಆಯೋಗಕ್ಕೂ ಲಗ್ಗೆ ಇಟ್ಟು ತಮಗೆ ಬೇಕಾದವರನ್ನು ನಿರ್ಧರಿಸಿ ಅವರ ಆಯ್ಕೆಗೆ ಬೇಕಾದ ಲಾಬಿ ಮಾಡುವ ಕಾಲವೂ ದೂರವಿಲ್ಲ ಅನ್ನಿಸುತ್ತದೆ. ಹಾಗಾಗಿ ಮೊದಲನೆಯದಾಗಿ ನಾಗರಿಕ ಸೇವೆಯ ಕನಸು ಕಾಣುವ ಯುವ ಸಮುದಾಯ ಈ ಬಗ್ಗೆ ಎಚ್ಚರಗೊಳ್ಳಬೇಕಿದೆ.
ಈ ನಡೆಯ ಅಪಾಯವನ್ನು ಪಕ್ಷಾತೀತವಾಗಿ ವಿರೋಧಿಸುವಿಕೆ ಕಂಡುಬರುತ್ತಿದೆ. ಅಂತಹ ಕೆಲವು ಚರ್ಚೆಗಳನ್ನು ಗಮನಿಸುವಾಗ ಬಿಹಾರದ ಆರ್‍ಜೆಡಿ ಮುಖಂಡ ತೇಜಸ್ವಿ ಯಾದವ್ ಟ್ವೀಟ್‍ನ್ನು ಗಮನಿಸಬಹುದು, `ಈ ಮನುವಾದಿ ಸರಕಾರ ಯುಪಿಎಸ್‍ಸಿ ವ್ಯವಸ್ಥೆಯನ್ನು ಬದಿಗೆ ಸರಿಸಿ, ಯಾವುದೇ ಪರೀಕ್ಷೆ ನಡೆಸದೆ ತನಗಿಷ್ಟ ಬಂದವರನ್ನು ಜಂಟಿ ಕಾರ್ಯದರ್ಶಿಗಳಂತಹ ಪ್ರಮುಖ ಹುದ್ದೆಗೆ ಆಯ್ಕೆ ಮಾಡಿಕೊಳ್ಳುವುದು ಸರಿಯೇ? ಇದು ಸಂವಿಧಾನದ ಮತ್ತು ಮೀಸಲಾತಿ ನಿಯಮದ ಉಲ್ಲಂಘನೆಯಾಗಿದೆ. ನಾಳೆ ಚುನಾವಣೆ ನಡೆಸದೆ ಪ್ರಧಾನಿಯನ್ನು ಮತ್ತು ಸಚಿವ ಸಂಪುಟವನ್ನೂ ಅವರು ನೇಮಿಸಬಹುದು. ಈ ಸರಕಾರ ಸಂವಿಧಾನವನ್ನು ಒಂದು ತಮಾಷೆಯ ವಿಷಯವನ್ನಾಗಿಸಿದೆ’ ಎನ್ನುತ್ತಾರೆ. ಅಂತೆಯೇ ಕಾಂಗ್ರೆಸ್ ಮುಖಂಡ ಪಿ.ಎಲ್.ಪುನಿಯಾ `ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಆರೆಸ್ಸೆಸ್ ಸಿದ್ಧಾಂತದ ಹಿನ್ನೆಲೆಯ ವ್ಯಕ್ತಿಗಳಿಗೆ ಅವಕಾಶ ಮಾಡಿಕೊಡಲು ಸರಕಾರ ರೂಪಿಸಿದ ಯೋಜನೆ ಇದಾಗಿದೆ. ಇಂತಹ ಪ್ರಮುಖ ಹುದ್ದೆಗಳಿಗೆ ಆರೆಸ್ಸೆಸ್ ಹಿನ್ನೆಲೆಯ ವ್ಯಕ್ತಿಗಳನ್ನು ನೇಮಿಸಿ ಅವರು ಸರಕಾರದ ನಿರ್ಧಾರದ ಮೇಲೆ ನೇರವಾಗಿ ಪ್ರಭಾವ ಬೀರುವ ಯೋಜನೆ ಇದಾಗಿದೆ’ ಎಂದು ಟೀಕಿಸಿದ್ದಾರೆ.
ಅಧಿಸೂಚನೆಯಲ್ಲಿ `ಪ್ರತಿಭಾವಂತ ಉತ್ಸಾಹಿ’ ಎನ್ನುವ ಪದವನ್ನು ಬಳಸಲಾಗಿದೆ. ಈ ಪದವೆ ಮೀಸಲಾತಿಯ ವಿರೋಧಿಯಾಗಿದೆ. ಪ್ರತಿಭಾವಂತರನ್ನು ಗುರುತಿಸುವ ಮಾನದಂಡಗಳೇನು? ನಿಸ್ಸಂಶಯವಾಗಿ ಇದು ಮೇಲುಜಾತಿಗಳ, ಕಾರ್ಪೋರೇಟ್ ಕಂಪನಿಗಳ ಸಿಇಓಗಳಂತವರನ್ನು ಪ್ರತಿಭಾವಂತರೆಂದು ಭಾವಿಸುವ ಸಾಧ್ಯತೆಯಿದೆ. ಅಂತೆಯೇ ಆರ್‍ಎಸ್‍ಎಸ್ ನಂತಹ ಸಂಸ್ಥೆಗಳಲ್ಲಿರುವವರು ನಿಸ್ಸಂಶಯವಾಗಿ ಈ ಹುದ್ದೆಗಳಿಗೆ ಆಯ್ಕೆಯಾಗುವ ಬಗ್ಗೆ ಈಗಾಗಲೆ ಹಲವಾರು ರಾಜಕೀಯ ನಾಯಕರು ಪ್ರತಿಕ್ರಿಯಿಸಿದ್ದಾರೆ.
ಈ ಹುದ್ದೆಗಳು ಕಾಂಟ್ರಾಕ್ಟ್ ಬೇಸ್ಡ್ ಎನ್ನುತ್ತಲೇ, ಮೂರರಿಂದ ಐದು ವರ್ಷದ ಅವಧಿಯ ಹುದ್ದೆಗಳು ಎಂದಾಗ, ಇವರುಗಳು ಸರಕಾರದ ಪೂರ್ಣಪ್ರಮಾಣದ ಯೋಜನೆಗಳನ್ನು ಜಾರಿ ಮಾಡುವ ಅಧಿಕಾರವನ್ನು ಹೇಗೆ ಪಡೆಯುತ್ತಾರೆ? ಯಾವುದೇ ಯೋಜನೆಗಳು ಜಾರಿಯಾದಾಗಲೂ ಅದಕ್ಕೆ ಅಧಿಕಾರಿ ವಲಯವೆ ಉತ್ತರದಾಯಿತ್ವವನ್ನು ಹೊಂದಿರುತ್ತದೆ. ಯಾವುದೇ ಮಂತ್ರಿ ಭ್ರಷ್ಟಾಚಾರ ಮಾಡಿದಾಗಲೂ ಆಯಾ ಮಂತ್ರಿಯ ಸಚಿವಾಲಯವೂ ಇದಕ್ಕೆ ಉತ್ತರದಾಯಿತ್ವದ ಜವಾಬ್ದಾರಿಯನ್ನು ಹೊರಬೇಕಾಗುತ್ತದೆ. ಹಾಗಾದರೆ ಯೋಜನೆಗಳನ್ನು ಜಾರಿಗೊಳಿಸಿ ಐದು ವರ್ಷದ ನಂತರ ಹುದ್ದೆಗಳನ್ನು ಬಿಟ್ಟುಹೋದರೆ ಈ ಯೋಜನೆಗಳ ಉತ್ತರದಾಯಿತ್ವದ ಹೊಣೆಗಾರಿಕೆ ಯಾರದು? ಎನ್ನುವ ಪ್ರಶ್ನೆಯಿದೆ. ಇದು ಭಾರತೀಯ ನಾಗರಿಕ ಸೇವಾ ಅಧಿಕಾರಿಗಳಿಗೆ ದೊಡ್ಡ ಗಂಡಾಂತರ ತಂದಿಡುತ್ತದೆ. ಕಾರಣ ಈ ಅರೆಕಾಲಿಕ ಜಾಯಿಂಟ್ ಸೆಕ್ರೆಟ್ರಿಗಳು ಮಾಡಿದ ಯಡವಟ್ಟುಗಳಿಗೆ ಈ ಐಎಎಸ್ ಅಧಿಕಾರಿಗಳು ಉತ್ತರ ಕೊಡಬೇಕಾಗುತ್ತದೆ. ಹಾಗಾಗಿ ಮೊದಲನೆಯದಾಗಿ ಐಎಎಸ್ ಅಧಿಕಾರಿಗಳ ಸಮೂಹ ಈ ಆಯ್ಕೆ ಕ್ರಮವನ್ನು ಗಟ್ಟಿಯಾಗಿ ಪ್ರತಿರೋಧಿಸಬೇಕಿದೆ.
ಈ ಮೇಲಿನ ಸಂಗತಿಗಳನ್ನು ಒಳಗೊಂಡಂತೆ ಸೂಕ್ಷ್ಮವಾಗಿ ಗಮನಿಸಿದರೆ, ಕೆಲವು ಗಂಭೀರ ಪ್ರಶ್ನೆಗಳು ಕಾಡುತ್ತವೆ. ಮೊದಲೆ ಹೇಳಿದಂತೆ, ಜನರು ಚುನಾವಣೆಯ ಮೂಲಕ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಶಾಸಕಾಂಗವನ್ನು ಬಂಡವಾಳಶಾಹಿ ಶಕ್ತಿಗಳು ನಿಯಂತ್ರಿಸುತ್ತಿವೆ. ಅಂತೆಯೇ ಈಚಿನ ನ್ಯಾಯಾಂಗದ ಕೆಲವು ತೀರ್ಮಾನಗಳನ್ನು ನೋಡಿದರೆ ಕಾರ್ಪೊರೇಟ್ ಶಕ್ತಿಗಳಿಗೆ ನ್ಯಾಯಾಂಗವೂ ಮಣಿಯುತ್ತಿರುವಂತಿದೆ. ಆಳ್ವಿಕೆಗೆ ಸಂಬಂಧಿಸಿದ ಶಾಸನಗಳನ್ನು ಶಾಸಕಾಂಗ ರಚಿಸಿದರೆ, ನ್ಯಾಯಾಂಗ ಅದನ್ನು ಅರ್ಥೈಸುತ್ತದೆ, ಅನ್ವಯಿಸುತ್ತದೆ. ಆದರೆ ಇದನ್ನು ಜಾರಿ ಮಾಡುವುದು, ಈ ಶಾಸನಗಳನ್ನು ಕಾರ್ಯಗತ ಮಾಡುವ ಪರಮ ಅಧಿಕಾರ ಕಾರ್ಯಾಂಗಕ್ಕಿದೆ. ಸಂವಿಧಾನಬದ್ಧವಾಗಿ ಕಾರ್ಯನಿರ್ವಹಿಸಬೇಕಿರುವ ಕಾರ್ಯಾಂಗ ಸಾಮಾನ್ಯವಾಗಿ ಸಂವಿಧಾನಿಕವಲ್ಲದ ನಡೆಗಳನ್ನು ಬೆಂಬಲಿಸುವುದಿಲ್ಲ. ಹಾಗಾಗಿ ಶಾಸಕಾಂಗ ಮತ್ತು ನ್ಯಾಯಾಂಗವನ್ನು ಕಾರ್ಪೊರೇಟ್ ಶಕ್ತಿಗಳು ಮಣಿಸಿದಂತೆ ಸುಲಭವಾಗಿ ಕಾರ್ಯಾಂಗವನ್ನು ಮಣಿಸುವುದು ಕಷ್ಟ. ಮೇಲಿನ ಜಂಟಿಕಾರ್ಯದರ್ಶಿಗಳ ನೇರ ಆಯ್ಕೆ, ನೇರವಾಗಿ ಕಾರ್ಯಾಂಗವನ್ನು ಕೈವಶಮಾಡಿಕೊಳ್ಳುವ ಹುನ್ನಾರವಾಗಿದೆ. ಹೀಗಾಗಿ ಈಗಿನ ಕಾರ್ಯಾಂಗದ ಭಾಗವಾಗಿರುವ ಸದಸ್ಯರು ಈ ಆಯ್ಕೆಯ ಬಗ್ಗೆ ಸಂವಿಧಾನಿಕ ವಿರೋಧಿ ನಡೆಯನ್ನು ಜನರೆದುರು ಬಯಲುಗೊಳಿಸಬೇಕಿದೆ.
ಇದನ್ನು ಗಮನಿಸಿದರೆ, ಈಗಾಗಲೆ ಇರುವ ಕಾರ್ಯಾಂಗವನ್ನು ಬದಿಗೆ ಸರಿಸಿ ತಮಗೆ ಬೇಕಾದ ಕಾರ್ಯಾಂಗವನ್ನು ಮರುಸೃಷ್ಟಿ ಮಾಡಿಕೊಳ್ಳುತ್ತಿದೆ. ಇದು ದೇಶದ ಸಂವಿಧಾನಕ್ಕೆ ಎದುರಾದ ಬಹುದೊಡ್ಡ ಗಂಡಾಂತರಗಳಲ್ಲಿ ಒಂದಾಗಿದೆ. ಈ ದೇಶದ ದಲಿತ ದಮನಿತ ಕೆಳಜಾತಿ ಅಲ್ಪಸಂಖ್ಯಾತರು ಈ ಆಯ್ಕೆ ಪ್ರಕ್ರಿಯೆಯ ವಿರುದ್ಧ ದೇಶವ್ಯಾಪಿ ಸಂವಿಧಾನಬದ್ಧ ಪ್ರಶ್ನೆಗಳನ್ನು ಕೇಳಬೇಕಾಗಿದೆ. ಕಾರಣ ಈ ನಡೆ ಪರೋಕ್ಷವಾಗಿ ಸಂವಿಧಾನವನ್ನು ಇಲ್ಲವಾಗಿಸುವ ಹುನ್ನಾರ. ಅಂತೆಯೇ ಈ ಬಗೆಯ ಚಟುವಟಿಕೆಗಳ ಮೂಲಕವೆ ಸಂವಿಧಾನವನ್ನು ನಿಧಾನಕ್ಕೆ ದುರ್ಬಲಗೊಳಿಸಲಾಗುತ್ತದೆ. ಅದರ ಜತೆಗೆ ಸಂವಿಧಾನ ಪರವಾದ ಹೋರಾಟ ಮತ್ತು ಚಳವಳಿಗಳನ್ನೂ ದಿಕ್ಕುತಪ್ಪಿಸುವ ಸಾಧ್ಯತೆಯಿದೆ.

– ಅರುಣ್ ಜೋಳದ ಕೂಡ್ಲಿಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...