Homeಅಂಕಣಗಳುಜಂಟಿ ಕಾರ್ಯದರ್ಶಿ ಹುದ್ದೆಗಳ ನೇರ ನೇಮಕದ ಹುನ್ನಾರಗಳು

ಜಂಟಿ ಕಾರ್ಯದರ್ಶಿ ಹುದ್ದೆಗಳ ನೇರ ನೇಮಕದ ಹುನ್ನಾರಗಳು

- Advertisement -
- Advertisement -

ಇದೊಂದು ತೀರಾ ಅಪಾಯಕಾರಿ ಸಂವಿಧಾನ ವಿರೋಧಿ ನಡೆ. ಭಾರತೀಯ ಪ್ರತಿಭಾವಂತ ಉತ್ಸಾಹಿಗಳಿಗೆ ಸದೃಢ ಭಾರತವನ್ನು ಕಟ್ಟಲು ನೀವು ಜಂಟಿ ಕಾರ್ಯದರ್ಶಿಯಾಗಿ ಸರಕಾರದೊಂದಿಗೆ ಕೈಜೋಡಿಸಿ ಎಂದು ಹೇಳುವ ಸರಕಾರದ ಈ ಘೋಷಣೆಯಲ್ಲಿಯೇ ಬಹುದೊಡ್ಡ ಹುನ್ನಾರ ಅಡಗಿದೆ. ನೇರ ಆಯ್ಕೆಯಲ್ಲಿ ಆಯ್ಕೆಯಾಗುವ ಈ ಜಾಯಿಂಟ್ ಸೆಕ್ರೆಟ್ರಿಗಳು ಯೋಜನೆಗಳನ್ನು ರೂಪಿಸುವುದಲ್ಲದೆ, ಈ ಯೋಜನೆಗಳನ್ನು ಸ್ವತಂತ್ರವಾಗಿ ಜಾರಿಗೊಳಿಸುವ ಪರಮಾಧಿಕಾರವನ್ನೂ ಹೊಂದಿದ್ದಾರೆ.
ಇದೀಗ ಹಣಕಾಸು, ಆರ್ಥಿಕವ್ಯವಹಾರ, ಕೃಷಿ ಮತ್ತು ಕೃಷಿಕರ ಕಲ್ಯಾಣ, ಸಾರಿಗೆ, ನಾಗರಿಕ ವಿಮಾನಯಾನ, ನೌಕಾಯಾನ, ಪರಿಸರ, ಅರಣ್ಯ ಮೊದಲಾದ ಪ್ರಮುಖ 10 ಇಲಾಖೆಗಳಿಗೆ ಈ ಹುದ್ದೆಗಳನ್ನು ಕರೆಯಲಾಗಿದೆ. ಹುದ್ದೆಗಿರುವ ಮಾನದಂಡಗಳನ್ನು ಗಮನಿಸೋಣ. ಜುಲೈ 1, 2018 ಕ್ಕೆ ಸರಿಯಾಗಿ 40 ವರ್ಷ ತುಂಬಿರಬೇಕು, ಪದವೀಧರರಾಗಿರಬೇಕು, ಈಗಾಗಲೆ ಜಾಯಿಂಟ್ ಸೆಕ್ರೆಟರಿಯ ಪದನಾಮಕ್ಕೆ ಸಮನಾದ ಹುದ್ದೆಗಳಲ್ಲಿ ಅನುಭವ ಇದ್ದವರಿಗೆ ಆದ್ಯತೆ ಇದೆ. ಖಾಸಗಿಯಾಗಿಯೂ ಕನಿಷ್ಠ 15 ವರ್ಷಗಳ ಕಾಲ ಖಾಸಗಿ, ಡೀಮ್ಡ್ ಕಂಪನಿಗಳನ್ನು ಒಳಗೊಂಡಂತೆ ವಿಶ್ವವಿದ್ಯಾಲಯಗಳು, ಎನ್‍ಜಿಓಗಳಲ್ಲಿ ಕೆಲಸ ಮಾಡಿದವರನ್ನೂ ಪರಿಗಣಿಸಲಾಗುವುದು. ಇದು 3 ವರ್ಷದಿಂದ 5 ವರ್ಷದ ಅವಧಿಯ ಕಾಂಟ್ರಾಕ್ಟ್ ಬೇಸ್ಡ್ ಆದ ಜವಾಬ್ದಾರಿಯಾಗಿದೆ. ಸಂಬಳ 144200 ರಿಂದ 218200/- ತನಕ ನಿಗದಿ ಮಾಡಬಹುದಾಗಿದೆ. ಇದೇ ಜೂನ್ 15 ರಿಂದ ಜುಲೈ 30 ರತನಕ ಅರ್ಜಿಯನ್ನು ಆನ್‍ಲೈನಲ್ಲಿ ಆಹ್ವಾನಿಸಲಾಗಿದೆ. ಅರ್ಜಿ ಹಾಕಿದವರಲ್ಲಿ ಅರ್ಹರಾದವರ ಅಂತಿಮ ಪಟ್ಟಿ ಸಿದ್ಧಪಡಿಸಿ, ಈ ಅಂತಿಮ ಪಟ್ಟಿಯಲ್ಲಿರುವವರನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಕಾರ್ಪೊರೇಟ್‍ಗಳು, ಬಂಡವಾಳಶಾಹಿಗಳು ಹಣ ಹೂಡಿ ಒಬ್ಬ ರಾಜಕಾರಣಿಯನ್ನು ಗೆಲ್ಲಿಸುವುದಿದೆ. ಅದೀಗ ದೇಶದ ಬಲಾಢ್ಯ ಕಾರ್ಪೊರೇಟ್‍ಗಳ ಒಕ್ಕೂಟ ಬಂಡವಾಳ ಹೂಡಿ ಈ ದೇಶದ ಪ್ರಧಾನಿಯನ್ನು ನಿರ್ಧರಿಸುವ ಹಂತಕ್ಕೆ ತಲುಪಿದೆ. ಆದರೆ ಭಾರತೀಯ ನಾಗರಿಕ ಸೇವೆಯ ಉನ್ನತ ಅಧಿಕಾರಿಗಳನ್ನು ಹೀಗೆ ಕೊಳ್ಳುವುದು ಕಷ್ಟ. ಈತನಕ ಲೋಕಸೇವಾ ಆಯೋಗದ ಐಎಎಸ್‍ನ ಆಯ್ಕೆ ಸಾಧ್ಯವಾದಷ್ಟು ಪಾರದರ್ಶಕವಾಗಿ ನಡೆಯುತ್ತಿದೆ. ಆದರೆ ಈ ಬೆಳವಣಿಗೆಯನ್ನು ನೋಡಿದರೆ ಕಾರ್ಪೊರೇಟ್ ಶ್ರೀಮಂತರ ಒಕ್ಕೂಟ ಇದೀಗ ಲೋಕಸೇವಾ ಆಯೋಗಕ್ಕೂ ಲಗ್ಗೆ ಇಟ್ಟು ತಮಗೆ ಬೇಕಾದವರನ್ನು ನಿರ್ಧರಿಸಿ ಅವರ ಆಯ್ಕೆಗೆ ಬೇಕಾದ ಲಾಬಿ ಮಾಡುವ ಕಾಲವೂ ದೂರವಿಲ್ಲ ಅನ್ನಿಸುತ್ತದೆ. ಹಾಗಾಗಿ ಮೊದಲನೆಯದಾಗಿ ನಾಗರಿಕ ಸೇವೆಯ ಕನಸು ಕಾಣುವ ಯುವ ಸಮುದಾಯ ಈ ಬಗ್ಗೆ ಎಚ್ಚರಗೊಳ್ಳಬೇಕಿದೆ.
ಈ ನಡೆಯ ಅಪಾಯವನ್ನು ಪಕ್ಷಾತೀತವಾಗಿ ವಿರೋಧಿಸುವಿಕೆ ಕಂಡುಬರುತ್ತಿದೆ. ಅಂತಹ ಕೆಲವು ಚರ್ಚೆಗಳನ್ನು ಗಮನಿಸುವಾಗ ಬಿಹಾರದ ಆರ್‍ಜೆಡಿ ಮುಖಂಡ ತೇಜಸ್ವಿ ಯಾದವ್ ಟ್ವೀಟ್‍ನ್ನು ಗಮನಿಸಬಹುದು, `ಈ ಮನುವಾದಿ ಸರಕಾರ ಯುಪಿಎಸ್‍ಸಿ ವ್ಯವಸ್ಥೆಯನ್ನು ಬದಿಗೆ ಸರಿಸಿ, ಯಾವುದೇ ಪರೀಕ್ಷೆ ನಡೆಸದೆ ತನಗಿಷ್ಟ ಬಂದವರನ್ನು ಜಂಟಿ ಕಾರ್ಯದರ್ಶಿಗಳಂತಹ ಪ್ರಮುಖ ಹುದ್ದೆಗೆ ಆಯ್ಕೆ ಮಾಡಿಕೊಳ್ಳುವುದು ಸರಿಯೇ? ಇದು ಸಂವಿಧಾನದ ಮತ್ತು ಮೀಸಲಾತಿ ನಿಯಮದ ಉಲ್ಲಂಘನೆಯಾಗಿದೆ. ನಾಳೆ ಚುನಾವಣೆ ನಡೆಸದೆ ಪ್ರಧಾನಿಯನ್ನು ಮತ್ತು ಸಚಿವ ಸಂಪುಟವನ್ನೂ ಅವರು ನೇಮಿಸಬಹುದು. ಈ ಸರಕಾರ ಸಂವಿಧಾನವನ್ನು ಒಂದು ತಮಾಷೆಯ ವಿಷಯವನ್ನಾಗಿಸಿದೆ’ ಎನ್ನುತ್ತಾರೆ. ಅಂತೆಯೇ ಕಾಂಗ್ರೆಸ್ ಮುಖಂಡ ಪಿ.ಎಲ್.ಪುನಿಯಾ `ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಆರೆಸ್ಸೆಸ್ ಸಿದ್ಧಾಂತದ ಹಿನ್ನೆಲೆಯ ವ್ಯಕ್ತಿಗಳಿಗೆ ಅವಕಾಶ ಮಾಡಿಕೊಡಲು ಸರಕಾರ ರೂಪಿಸಿದ ಯೋಜನೆ ಇದಾಗಿದೆ. ಇಂತಹ ಪ್ರಮುಖ ಹುದ್ದೆಗಳಿಗೆ ಆರೆಸ್ಸೆಸ್ ಹಿನ್ನೆಲೆಯ ವ್ಯಕ್ತಿಗಳನ್ನು ನೇಮಿಸಿ ಅವರು ಸರಕಾರದ ನಿರ್ಧಾರದ ಮೇಲೆ ನೇರವಾಗಿ ಪ್ರಭಾವ ಬೀರುವ ಯೋಜನೆ ಇದಾಗಿದೆ’ ಎಂದು ಟೀಕಿಸಿದ್ದಾರೆ.
ಅಧಿಸೂಚನೆಯಲ್ಲಿ `ಪ್ರತಿಭಾವಂತ ಉತ್ಸಾಹಿ’ ಎನ್ನುವ ಪದವನ್ನು ಬಳಸಲಾಗಿದೆ. ಈ ಪದವೆ ಮೀಸಲಾತಿಯ ವಿರೋಧಿಯಾಗಿದೆ. ಪ್ರತಿಭಾವಂತರನ್ನು ಗುರುತಿಸುವ ಮಾನದಂಡಗಳೇನು? ನಿಸ್ಸಂಶಯವಾಗಿ ಇದು ಮೇಲುಜಾತಿಗಳ, ಕಾರ್ಪೋರೇಟ್ ಕಂಪನಿಗಳ ಸಿಇಓಗಳಂತವರನ್ನು ಪ್ರತಿಭಾವಂತರೆಂದು ಭಾವಿಸುವ ಸಾಧ್ಯತೆಯಿದೆ. ಅಂತೆಯೇ ಆರ್‍ಎಸ್‍ಎಸ್ ನಂತಹ ಸಂಸ್ಥೆಗಳಲ್ಲಿರುವವರು ನಿಸ್ಸಂಶಯವಾಗಿ ಈ ಹುದ್ದೆಗಳಿಗೆ ಆಯ್ಕೆಯಾಗುವ ಬಗ್ಗೆ ಈಗಾಗಲೆ ಹಲವಾರು ರಾಜಕೀಯ ನಾಯಕರು ಪ್ರತಿಕ್ರಿಯಿಸಿದ್ದಾರೆ.
ಈ ಹುದ್ದೆಗಳು ಕಾಂಟ್ರಾಕ್ಟ್ ಬೇಸ್ಡ್ ಎನ್ನುತ್ತಲೇ, ಮೂರರಿಂದ ಐದು ವರ್ಷದ ಅವಧಿಯ ಹುದ್ದೆಗಳು ಎಂದಾಗ, ಇವರುಗಳು ಸರಕಾರದ ಪೂರ್ಣಪ್ರಮಾಣದ ಯೋಜನೆಗಳನ್ನು ಜಾರಿ ಮಾಡುವ ಅಧಿಕಾರವನ್ನು ಹೇಗೆ ಪಡೆಯುತ್ತಾರೆ? ಯಾವುದೇ ಯೋಜನೆಗಳು ಜಾರಿಯಾದಾಗಲೂ ಅದಕ್ಕೆ ಅಧಿಕಾರಿ ವಲಯವೆ ಉತ್ತರದಾಯಿತ್ವವನ್ನು ಹೊಂದಿರುತ್ತದೆ. ಯಾವುದೇ ಮಂತ್ರಿ ಭ್ರಷ್ಟಾಚಾರ ಮಾಡಿದಾಗಲೂ ಆಯಾ ಮಂತ್ರಿಯ ಸಚಿವಾಲಯವೂ ಇದಕ್ಕೆ ಉತ್ತರದಾಯಿತ್ವದ ಜವಾಬ್ದಾರಿಯನ್ನು ಹೊರಬೇಕಾಗುತ್ತದೆ. ಹಾಗಾದರೆ ಯೋಜನೆಗಳನ್ನು ಜಾರಿಗೊಳಿಸಿ ಐದು ವರ್ಷದ ನಂತರ ಹುದ್ದೆಗಳನ್ನು ಬಿಟ್ಟುಹೋದರೆ ಈ ಯೋಜನೆಗಳ ಉತ್ತರದಾಯಿತ್ವದ ಹೊಣೆಗಾರಿಕೆ ಯಾರದು? ಎನ್ನುವ ಪ್ರಶ್ನೆಯಿದೆ. ಇದು ಭಾರತೀಯ ನಾಗರಿಕ ಸೇವಾ ಅಧಿಕಾರಿಗಳಿಗೆ ದೊಡ್ಡ ಗಂಡಾಂತರ ತಂದಿಡುತ್ತದೆ. ಕಾರಣ ಈ ಅರೆಕಾಲಿಕ ಜಾಯಿಂಟ್ ಸೆಕ್ರೆಟ್ರಿಗಳು ಮಾಡಿದ ಯಡವಟ್ಟುಗಳಿಗೆ ಈ ಐಎಎಸ್ ಅಧಿಕಾರಿಗಳು ಉತ್ತರ ಕೊಡಬೇಕಾಗುತ್ತದೆ. ಹಾಗಾಗಿ ಮೊದಲನೆಯದಾಗಿ ಐಎಎಸ್ ಅಧಿಕಾರಿಗಳ ಸಮೂಹ ಈ ಆಯ್ಕೆ ಕ್ರಮವನ್ನು ಗಟ್ಟಿಯಾಗಿ ಪ್ರತಿರೋಧಿಸಬೇಕಿದೆ.
ಈ ಮೇಲಿನ ಸಂಗತಿಗಳನ್ನು ಒಳಗೊಂಡಂತೆ ಸೂಕ್ಷ್ಮವಾಗಿ ಗಮನಿಸಿದರೆ, ಕೆಲವು ಗಂಭೀರ ಪ್ರಶ್ನೆಗಳು ಕಾಡುತ್ತವೆ. ಮೊದಲೆ ಹೇಳಿದಂತೆ, ಜನರು ಚುನಾವಣೆಯ ಮೂಲಕ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಶಾಸಕಾಂಗವನ್ನು ಬಂಡವಾಳಶಾಹಿ ಶಕ್ತಿಗಳು ನಿಯಂತ್ರಿಸುತ್ತಿವೆ. ಅಂತೆಯೇ ಈಚಿನ ನ್ಯಾಯಾಂಗದ ಕೆಲವು ತೀರ್ಮಾನಗಳನ್ನು ನೋಡಿದರೆ ಕಾರ್ಪೊರೇಟ್ ಶಕ್ತಿಗಳಿಗೆ ನ್ಯಾಯಾಂಗವೂ ಮಣಿಯುತ್ತಿರುವಂತಿದೆ. ಆಳ್ವಿಕೆಗೆ ಸಂಬಂಧಿಸಿದ ಶಾಸನಗಳನ್ನು ಶಾಸಕಾಂಗ ರಚಿಸಿದರೆ, ನ್ಯಾಯಾಂಗ ಅದನ್ನು ಅರ್ಥೈಸುತ್ತದೆ, ಅನ್ವಯಿಸುತ್ತದೆ. ಆದರೆ ಇದನ್ನು ಜಾರಿ ಮಾಡುವುದು, ಈ ಶಾಸನಗಳನ್ನು ಕಾರ್ಯಗತ ಮಾಡುವ ಪರಮ ಅಧಿಕಾರ ಕಾರ್ಯಾಂಗಕ್ಕಿದೆ. ಸಂವಿಧಾನಬದ್ಧವಾಗಿ ಕಾರ್ಯನಿರ್ವಹಿಸಬೇಕಿರುವ ಕಾರ್ಯಾಂಗ ಸಾಮಾನ್ಯವಾಗಿ ಸಂವಿಧಾನಿಕವಲ್ಲದ ನಡೆಗಳನ್ನು ಬೆಂಬಲಿಸುವುದಿಲ್ಲ. ಹಾಗಾಗಿ ಶಾಸಕಾಂಗ ಮತ್ತು ನ್ಯಾಯಾಂಗವನ್ನು ಕಾರ್ಪೊರೇಟ್ ಶಕ್ತಿಗಳು ಮಣಿಸಿದಂತೆ ಸುಲಭವಾಗಿ ಕಾರ್ಯಾಂಗವನ್ನು ಮಣಿಸುವುದು ಕಷ್ಟ. ಮೇಲಿನ ಜಂಟಿಕಾರ್ಯದರ್ಶಿಗಳ ನೇರ ಆಯ್ಕೆ, ನೇರವಾಗಿ ಕಾರ್ಯಾಂಗವನ್ನು ಕೈವಶಮಾಡಿಕೊಳ್ಳುವ ಹುನ್ನಾರವಾಗಿದೆ. ಹೀಗಾಗಿ ಈಗಿನ ಕಾರ್ಯಾಂಗದ ಭಾಗವಾಗಿರುವ ಸದಸ್ಯರು ಈ ಆಯ್ಕೆಯ ಬಗ್ಗೆ ಸಂವಿಧಾನಿಕ ವಿರೋಧಿ ನಡೆಯನ್ನು ಜನರೆದುರು ಬಯಲುಗೊಳಿಸಬೇಕಿದೆ.
ಇದನ್ನು ಗಮನಿಸಿದರೆ, ಈಗಾಗಲೆ ಇರುವ ಕಾರ್ಯಾಂಗವನ್ನು ಬದಿಗೆ ಸರಿಸಿ ತಮಗೆ ಬೇಕಾದ ಕಾರ್ಯಾಂಗವನ್ನು ಮರುಸೃಷ್ಟಿ ಮಾಡಿಕೊಳ್ಳುತ್ತಿದೆ. ಇದು ದೇಶದ ಸಂವಿಧಾನಕ್ಕೆ ಎದುರಾದ ಬಹುದೊಡ್ಡ ಗಂಡಾಂತರಗಳಲ್ಲಿ ಒಂದಾಗಿದೆ. ಈ ದೇಶದ ದಲಿತ ದಮನಿತ ಕೆಳಜಾತಿ ಅಲ್ಪಸಂಖ್ಯಾತರು ಈ ಆಯ್ಕೆ ಪ್ರಕ್ರಿಯೆಯ ವಿರುದ್ಧ ದೇಶವ್ಯಾಪಿ ಸಂವಿಧಾನಬದ್ಧ ಪ್ರಶ್ನೆಗಳನ್ನು ಕೇಳಬೇಕಾಗಿದೆ. ಕಾರಣ ಈ ನಡೆ ಪರೋಕ್ಷವಾಗಿ ಸಂವಿಧಾನವನ್ನು ಇಲ್ಲವಾಗಿಸುವ ಹುನ್ನಾರ. ಅಂತೆಯೇ ಈ ಬಗೆಯ ಚಟುವಟಿಕೆಗಳ ಮೂಲಕವೆ ಸಂವಿಧಾನವನ್ನು ನಿಧಾನಕ್ಕೆ ದುರ್ಬಲಗೊಳಿಸಲಾಗುತ್ತದೆ. ಅದರ ಜತೆಗೆ ಸಂವಿಧಾನ ಪರವಾದ ಹೋರಾಟ ಮತ್ತು ಚಳವಳಿಗಳನ್ನೂ ದಿಕ್ಕುತಪ್ಪಿಸುವ ಸಾಧ್ಯತೆಯಿದೆ.

– ಅರುಣ್ ಜೋಳದ ಕೂಡ್ಲಿಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...